ಐದು ವರ್ಷದೊಳಗಿನ 2.07 ಲಕ್ಷ ಮಕ್ಕಳಿಗೆ ಲಸಿಕೆ ಗುರಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್

ಧಾರವಾಡ, ಮೇ 19: ಜಿಲ್ಲೆಯಾದ್ಯಂತ ಬರುವ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಮಗ್ರ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶೂನ್ಯದಿಂದ ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ್ಪಕ ಕಾರ್ಯಯೋಜನೆ ರೂಪಿಸಬೇಕು…

Read More

ಗುಡಗೇರಿಯಲ್ಲಿ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಬಲಿಯಾದ ಬಾಲಕ: 108 ಅಂಬುಲೆನ್ಸ್‌ ವಿರುದ್ಧ ಸಾರ್ವಜನಿಕರ ಆಕ್ರೋಶ

ಗುಡಗೇರಿಯಲ್ಲಿ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಬಲಿಯಾದ ಬಾಲಕ: 108 ಅಂಬುಲೆನ್ಸ್‌ ವಿರುದ್ಧ ಸಾರ್ವಜನಿಕರ ಆಕ್ರೋಶ ಕುಂದಗೋಳ: ತಾಲ್ಲೂಕಿನ ಗುಡಗೇರಿ: ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಹಾಗೂ ತುರ್ತು ಸೇವೆ ಒದಗಿಸಬೇಕಾದ 108 ಅಂಬುಲೆನ್ಸ್‌ನ ಬೇಜವಾಬ್ದಾರಿತನದಿಂದಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದ 12 ವರ್ಷದ ಬಾಲಕನೊಬ್ಬ ದಾರಿಮಧ್ಯೆಯೇ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ. ಗ್ರಾಮದ ಅಂಬೇಡ್ಕರ್ ನಗರದ ನಿವಾಸಿ ಕಾರ್ತಿಕ್ ಮಾಂತೇಶ ಪೂಜಾರ (12) ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. ಶನಿವಾರ ಕಾರ್ತಿಕ್‌ಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿದ್ದು, ತಕ್ಷಣವೇ…

Read More

ಖಾತೆ ಬದಲಾವಣೆಗೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ್ ಸುರೇಶ್ ಅರಕೇರಿ; ತಡರಾತ್ರಿಯವರೆಗೆ ಕಡತಗಳ ಪರಿಶೀಲನೆ

ಕುಂದಗೋಳ: ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿರಸ್ತೆದಾರ್ ಸುರೇಶ್ ಅರಕೇರಿ ಎಂಬುವವರು ಖಾತೆ ಬದಲಾವಣೆಗಾಗಿ ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿರುವುದು ಇಡೀ ಕಂದಾಯ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿನ ದುಂಡಸಿ ಗ್ರಾಮದ ನಿವಾಸಿಯಾದ ಹಜರತ್ ಅಲಿ ತಂದೆ ಇಮಾಮ್ ಸಾಬ್ ಅರಳಿಕಟ್ಟಿ ಎಂಬುವವರಿಂದ ಖಾತೆ ಬದಲಾವಣೆ ಮಾಡಿಕೊಡಲು ಸುರೇಶ್ ಅರಕೇರಿ ಅವರು ಭೂಮಿ ವಿಭಾಗದಲ್ಲಿ 2,000 ರೂಪಾಯಿಗಳ ಲಂಚದ ಹಣವನ್ನು ಪಡೆದಿದ್ದಾರೆ.ಮೊದಲಿಗೆ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಆರಂಭಿಸಿ, ನಂತರ ಕಂದಾಯ ನಿರೀಕ್ಷಕರಾಗಿ,…

Read More

ಕುಂದಗೋಳದಲ್ಲಿ ಲೋಕಾಯುಕ್ತ ದಿಢೀರ್ ಭೇಟಿ: ದಾಖಲೆಗಳ ಪರಿಶೀಲನೆ, ಸಿಬ್ಬಂದಿ ತಲ್ಲಣ ಕುಂದಗೋಳ: ಇಲ್ಲಿನ ತಹಶೀಲ್ದಾರ್ ಕಚೇರಿಯ ವಿವಿಧ ಇಲಾಖೆಗಳ ಮೇಲೆ ಧಾರವಾಡದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಈ ಹಠಾತ್ ಭೇಟಿಯಿಂದ ಕಚೇರಿಯ ಸಿಬ್ಬಂದಿ ತಲ್ಲಣಗೊಂಡಿದ್ದು, ದಾಳಿಯ ವೇಳೆ ಅಧಿಕಾರಿಗಳು ಕಚೇರಿಯ ಪ್ರಮುಖ ದಾಖಲಾತಿಗಳನ್ನು ಹಾಗೂ ವಿವಿಧ ವಿಭಾಗಗಳ ಅಧಿಕಾರಿಗಳ ಕೆಲಸದ ವೈಖರಿಯನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದ್ದಾರೆ. ಸಾರ್ವಜನಿಕರ ದೂರುಗಳು ಹಾಗೂ ಕಚೇರಿಯಲ್ಲಿ ನಡೆಯುತ್ತಿದ್ದ ಆಡಳಿತಾತ್ಮಕ ವ್ಯವಹಾರಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ…

Read More

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ: ಡಾ. ಸುರೇಶ್ ಕಮ್ಮಾರ

ಧಾರವಾಡ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಅವರಲ್ಲಿರುವ ಪ್ರತಿಭೆ ಹೊರಹಾಕಲು ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ. ಪಾಲಕರು ಮಕ್ಕಳಿಗೆ ನೃತ್ಯ, ಸಂಗೀತ, ಕರಾಟೆಯಂತಹ ಕಲೆಗಳಲ್ಲಿ ಭಾಗವಹಿಸಲು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಭಾರತದ ಮಾನವ ಹಕ್ಕುಗಳ ಸಮಿತಿ ಸದಸ್ಯ ಹಾಗೂ ಜಿಲ್ಲಾ ಸಂಪನ್ಮೂಲ ಅಧಿಕಾರಿ ಡಾ. ಸುರೇಶ್ ಕಮ್ಮಾರ ಹೇಳಿದರು. ​ನಗರದ ಯುವ ಡಾನ್ಸ್ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ‘ಯುವ ಉತ್ಸವ-೨೦೨೬’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವ ಡಾನ್ಸ್…

Read More

ಬೇಸಿಗೆ ಶಿಬಿರಗಳು ಮಕ್ಕಳಲ್ಲಿಯ ಸೃಜನಶೀಲತೆ ಹೆಚ್ಚಿಸುತ್ತವೆ: ಪ್ರೊ. ಲಲಿತಾ ನಾಯಕ ಅಭಿಮತ

ಧಾರವಾಡ: ಇಂದಿನ ಮಕ್ಕಳಲ್ಲಿ ಮೊಬೈಲ್ ವ್ಯಸನ ಹೆಚ್ಚಾಗಿರುವ ಆತಂಕಕಾರಿ ಸಂದರ್ಭದಲ್ಲಿ, ಬೇಸಿಗೆ ಶಿಬಿರಗಳು ಮಕ್ಕಳನ್ನು ಮೊಬೈಲ್‌ನಿಂದ ದೂರವಿಟ್ಟು ಅವರಲ್ಲಿ ಸುಪ್ತವಾಗಿರುವ ಸೃಜನಶೀಲತೆಯನ್ನು ಹೊರತರಲು ಸಹಕಾರಿಯಾಗಿವೆ ಎಂದು ಚಿತ್ರದುರ್ಗದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಪ್ರಾಧ್ಯಾಪಕಿ ಪ್ರೊ. ಲಲಿತಾ ನಾಯಕ ಅವರು ಅಭಿಪ್ರಾಯಪಟ್ಟರು. ​ನಗರದ ಲೇಕ್ ಸಿಟಿಯ ಸಾಂಸ್ಕೃತಿಕ ಭವನದಲ್ಲಿ ‘ರೈಜಿಂಗ್ ಸ್ಟಾರ್ಸ್ ಆರ್ಟ್ ಮತ್ತು ಕಲ್ಚರಲ್ ಅಕಾಡೆಮಿ’ ಹಾಗೂ ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ’ಯ ಸಹಯೋಗದಲ್ಲಿ ಆಯೋಜಿಸಿದ್ದ ‘ಮಕ್ಕಳ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…

Read More

ಗುಡಿಸಾಗರ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಸಡಗರ: ಸಾಮೂಹಿಕ ವಿವಾಹಕ್ಕೆ ಸಾಕ್ಷಿಯಾದ ಭಕ್ತಸಾಗರ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಭಕ್ತಿ ಮತ್ತು ಸೌಹಾರ್ದತೆಯ ಸಂಗಮದಂತಿದ್ದ ಈ ಜಾತ್ರಾ ಮಹೋತ್ಸವಕ್ಕೆ ನರಗುಂದ ಪತ್ರಿವನದ ಪೂಜ್ಯ ಅಜ್ಜರು ಆಗಮಿಸಿ, ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿದರು. ಮಂತ್ರಘೋಷಗಳ ನಡುವೆ ನೂತನ ವಧು-ವರರಿಗೆ ಅಕ್ಷತೆ ಹಾಕಿ ಹರಸಿದ ಪೂಜ್ಯರು, ದಾಂಪತ್ಯ ಜೀವನಕ್ಕೆ ಶುಭ ಹಾರೈಸಿದರು. ​ಜಾತ್ರೆಯ ಅಂಗವಾಗಿ ವಿವಿಧ ಊರುಗಳಿಂದ ಆಗಮಿಸಿದ್ದ ಶ್ರೀ ಬೀರಲಿಂಗೇಶ್ವರನ ಪಲ್ಲಕ್ಕಿಗಳು ಗ್ರಾಮದ…

Read More

ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್: ಮೇ 3 ರಂದು ಧಾರವಾಡದಲ್ಲಿ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ

ಧಾರವಾಡ: ಮಹಾರಾಷ್ಟ್ರದ ಸಾತಾರಾದಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಹಿಂದ್ ಕೇಸರಿ’ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಯನ್ನು ಮೇ 3 ರಂದು ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ (ಕೆ.ಸಿ.ಡಿ) ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಭಾರತೀಯ ಶೈಲಿ ಕುಸ್ತಿ ಸಂಘದ ಅಧ್ಯಕ್ಷ ರತನಕುಮಾರ ಮಠಪತಿ ತಿಳಿಸಿದರು. ​ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 14 ರಿಂದ 17 ರವರೆಗೆ ಸಾತಾರಾದಲ್ಲಿ 52ನೇ ಪುರುಷರ ಹಾಗೂ 4ನೇ ಮಹಿಳಾ ‘ಹಿಂದ್ ಕೇಸರಿ’ ಮತ್ತು…

Read More

ಕುಡಿಯುವ ನೀರಿಗಾಗಿ ಮಲಪ್ರಭಾ ಕಾಲುವೆಗೆ ನೀರು ಬಿಡುಗಡೆ: ಕೃಷಿ ಬಳಕೆಗೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ನಿಷೇಧ

ಧಾರವಾಡ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಹಾಗೂ ನರಗುಂದ ಶಾಖಾ ಕಾಲುವೆಗಳಿಗೆ ಮೇ 1 ರಿಂದ ಮೇ 10ರವರೆಗೆ ನೀರು ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಈ ನೀರನ್ನು ಕೇವಲ ಕೆರೆಗಳನ್ನು ತುಂಬಿಸಿಕೊಳ್ಳಲು ಮಾತ್ರ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ​ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕಿನ…

Read More

ಧಾರವಾಡ ತಾಲೂಕಿನ ಗೃಹಲಕ್ಷ್ಮಿಯರ ಖಾತೆಗೆ ತಲಾ 58 ಸಾವಿರ ರೂ. ಜಮೆ: ಅರವಿಂದ ಏಗನಗೌಡರ

ಧಾರವಾಡ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವುದೇ ಸಮಿತಿಯ ಪ್ರಮುಖ ಆದ್ಯತೆಯಾಗಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಯಡಿ ಧಾರವಾಡ ತಾಲೂಕಿನ ಪ್ರತಿ ಅರ್ಹ ಮಹಿಳೆಯ ಖಾತೆಗೆ ಇದುವರೆಗೆ ತಲಾ 58,000 ರೂ.ಗಳಷ್ಟು ಹಣ ನೇರವಾಗಿ ಜಮೆಯಾಗಿದೆ ಎಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ತಿಳಿಸಿದರು. ​ಬುಧವಾರ ಧಾರವಾಡ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತಿ ಮಟ್ಟದಲ್ಲಿ ನಿರಂತರ ಸಭೆಗಳನ್ನು…

Read More