ಸುಸ್ಥಿರ ಅಭಿವೃದ್ಧಿಗಾಗಿ ಕೆಳಮಟ್ಟದ ಬೇಡಿಕೆಗಳಿಗೆ ಆದ್ಯತೆ ನೀಡಿ: ವಾರ್ಷಿಕ ಯೋಜನೆ ತಯಾರಿಕೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ
ಧಾರವಾಡ (ಅ. 31): ಜಿಲ್ಲೆಯ ಭವಿಷ್ಯದ ಬೆಳವಣಿಗೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಸುಸ್ಥಿರ ಅಭಿವೃದ್ಧಿಗಾಗಿ ಗ್ರಾಮ ಮತ್ತು ಕ್ಷೇತ್ರ ಮಟ್ಟದ ಮೂಲ ಬೇಡಿಕೆಗಳಿಗೆ ಆದ್ಯತೆ ನೀಡಿ ಜಿಲ್ಲಾ ವಾರ್ಷಿಕ ಅಭಿವೃದ್ಧಿ ಯೋಜನೆಯನ್ನು (2026-27) ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂದು (ಅ. 31) ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿಸುವ ಕುರಿತ ಪುನರ್ ಮನನ…

