ಕ.ವಿ.ವ. ಸಂಘದಲ್ಲಿ ಇಂದು ಕೃಷಿ ಮತ್ತು ಪರಿಸರ ಮಂಟಪದ ಉದ್ಘಾಟನೆ: ‘ಭವಿಷ್ಯದಲ್ಲಿ ಕೃಷಿ ಮತ್ತು ಪರಿಸರ ಮಹತ್ವ’ ಕುರಿತು ಉಪನ್ಯಾಸ
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ (ಕ.ವಿ.ವ. ಸಂಘ) ಕೃಷಿ ಮತ್ತು ಪರಿಸರ ಮಂಟಪವು ತನ್ನ ಪ್ರಸಕ್ತ 3ನೇ ವರ್ಷದ ತ್ರೈವಾರ್ಷಿಕ ಅವಧಿಯ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ‘ಭವಿಷ್ಯದಲ್ಲಿ ಕೃಷಿ ಮತ್ತು ಪರಿಸರ ಮಹತ್ವ’ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಇಂದು (ಅಕ್ಟೋಬರ್ 30, 2025), ಗುರುವಾರ ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ನಡೆಯಲಿದೆ. ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಶಶಿಕಾಂತ ಉಡಿಕೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಡೋಣಿ-ಗದಗ…

