ಕುಡಿಯುವ ನೀರು ಯೋಜನೆ ವಿಳಂಬ: ಎಲ್ ಆ್ಯಂಡ್ ಟಿ ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ ಸರ್ಕಾರಕ್ಕೆ ವರದಿ: ಸಚಿವ ಸಂತೋಷ್ ಲಾಡ್ ಎಚ್ಚರಿಕೆ
ಧಾರವಾಡ: ಜಿಲ್ಲೆಯ ಗ್ರಾಮೀಣ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಎಲ್ ಆ್ಯಂಡ್ ಟಿ (L&T) ಕಂಪನಿಯು ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು, ಸರ್ಕಾರಕ್ಕೂ ತೃಪ್ತಿ ಇಲ್ಲ. ಸಾಕಷ್ಟು ಬಾರಿ ಸಲಹೆ, ಸೂಚನೆ ನೀಡಿದ್ದರೂ ಸುಧಾರಿಸದ ಈ ಕಂಪನಿ ವಿರುದ್ಧ ಮೊಕದ್ದಮೆ ಹೂಡಿ ಕಾನೂನು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್…

