ಪೊಲೀಸ ಹುತಾತ್ಮರ ದಿನಾಚರಣೆ: ತ್ಯಾಗ, ಬಲಿದಾನ ಸ್ಮರಿಸಲು ಕರೆ
ಧಾರವಾಡ: ಸಮಾಜ ಮತ್ತು ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ ವ್ಯವಸ್ಥೆಯ ಪಾತ್ರ ಮಹತ್ವದ್ದಾಗಿದೆ. ಪೊಲೀಸ ಅಧಿಕಾರಿ ಮತ್ತು ಸಿಬ್ಬಂದಿಗಳ ತ್ಯಾಗ ಹಾಗೂ ಬಲಿದಾನವನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಭುವನೇಶ ಪಾಟೀಲ ಅವರು ಹೇಳಿದರು. ಅವರು ಮಂಗಳವಾರದಂದು ಬೆಳಿಗ್ಗೆ ಪೊಲೀಸ್ ಹೆಡ್ಕ್ವಾಟರ್ಸ್ನಲ್ಲಿ ಧಾರವಾಡ ಜಿಲ್ಲಾ ಪೊಲೀಸ ಇಲಾಖೆ ಆಯೋಜಿಸಿದ್ದ ಪೊಲೀಸ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಹುತಾತ್ಮರಾದ ಪೊಲೀಸ ಸಿಬ್ಬಂದಿಗಳ ಕುಟುಂಬಗಳಿಗೆ…

