ಕುಂದಗೋಳದ ತಾ: ಹಾನಿಗೊಳಗಾದ ರಸ್ತೆಗಳ ತಕ್ಷಣದ ದುರಸ್ತಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಕರವೇ ಮನವಿ
ಕುಂದಗೋಳ/ಧಾರವಾಡ: ಇತ್ತೀಚೆಗೆ ಸುರಿದ ಅತಿ ಹೆಚ್ಚು ಮಳೆ ಹಾಗೂ ಬೆಣ್ಣಿಹಳ್ಳದ ಪ್ರವಾಹದಿಂದ ಧಾರವಾಡ ಜಿಲ್ಲಾ ಕುಂದಗೋಳ ತಾಲ್ಲೂಕಿನಾದ್ಯಂತ ಗ್ರಾಮೀಣ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ತಕ್ಷಣವೇ ರಸ್ತೆಗಳ ದುರಸ್ತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) (ನಾರಾಯಣಗೌಡ್ರ ಬಣ)ದ ತಾಲೂಕು ಅಧ್ಯಕ್ಷ ಕಲ್ಲಪ್ಪ ಹರಕುಣಿ ಅವರು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಮನವಿ ಸಲ್ಲಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಕಲ್ಲಪ್ಪ ಅವರು, ಕುಂದಗೋಳ ತಾಲ್ಲೂಕಿನಾದ್ಯಂತ ಅತಿವೃಷ್ಟಿ ಮತ್ತು ಬೆಣ್ಣಿಹಳ್ಳದ ಪ್ರವಾಹದಿಂದ…

