ಕುಂದಗೋಳದ ತಾ: ಹಾನಿಗೊಳಗಾದ ರಸ್ತೆಗಳ ತಕ್ಷಣದ ದುರಸ್ತಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಕರವೇ ಮನವಿ

ಕುಂದಗೋಳ/ಧಾರವಾಡ: ಇತ್ತೀಚೆಗೆ ಸುರಿದ ಅತಿ ಹೆಚ್ಚು ಮಳೆ ಹಾಗೂ ಬೆಣ್ಣಿಹಳ್ಳದ ಪ್ರವಾಹದಿಂದ ಧಾರವಾಡ ಜಿಲ್ಲಾ ಕುಂದಗೋಳ ತಾಲ್ಲೂಕಿನಾದ್ಯಂತ ಗ್ರಾಮೀಣ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ತಕ್ಷಣವೇ ರಸ್ತೆಗಳ ದುರಸ್ತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) (ನಾರಾಯಣಗೌಡ್ರ ಬಣ)ದ ತಾಲೂಕು ಅಧ್ಯಕ್ಷ ಕಲ್ಲಪ್ಪ ಹರಕುಣಿ ಅವರು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಮನವಿ ಸಲ್ಲಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಕಲ್ಲಪ್ಪ ಅವರು, ಕುಂದಗೋಳ ತಾಲ್ಲೂಕಿನಾದ್ಯಂತ ಅತಿವೃಷ್ಟಿ ಮತ್ತು ಬೆಣ್ಣಿಹಳ್ಳದ ಪ್ರವಾಹದಿಂದ…

Read More

ವಿದ್ಯಾರ್ಥಿಗಳಿಂದಲೇ ಕನ್ನಡ ಭಾಷೆ, ಸಂಸ್ಕೃತಿ ವೃದ್ಧಿ: ಡಾ. ಲಿಂಗರಾಜ ಅಂಗಡಿ ಕರೆ

ಕಲಘಟಗಿ: ಕವನ ರಚನೆಯೊಂದಿಗೆ ಕವನ ವಾಚನ ಮಾಡುವ ಗುಣವನ್ನು ವಿದ್ಯಾರ್ಥಿಗಳು ರೂಢಿಸಿಕೊಂಡಾಗ ಮಾತ್ರ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅಭಿಪ್ರಾಯಪಟ್ಟರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಗುಡ್ ನ್ಯೂಸ್ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಕರ್ನಾಟಕ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಕವಿಗಳ ಕವಿತಾ ವಾಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯವನ್ನು ಜೀವಂತವಾಗಿರಿಸಲು ಇಂತಹ ಕಾರ್ಯಕ್ರಮಗಳು ಅತ್ಯಗತ್ಯ….

Read More

ಪಠ್ಯ ಮೀರಿದ ಜ್ಞಾನ ಬೋಧನೆ ಇಂದಿನ ಅಗತ್ಯ: ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಅಭಿಮತ

ಧಾರವಾಡ: ಶಿಕ್ಷಕರಿಗೆ ಕೇವಲ ಪಠ್ಯ ಪುಸ್ತಕವೇ ಸರ್ವಸ್ವವಾಗಬಾರದು. ಪಠ್ಯಪುಸ್ತಕ ಮೀರಿದ ಜ್ಞಾನವನ್ನು ವಿಷಯ ಬೋಧನೆಯ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸುವುದು ಇಂದಿನ ಶಿಕ್ಷಣದ ಅಗತ್ಯವಾಗಿದೆ ಎಂದು ಖ್ಯಾತ ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಅವರು ಅಭಿಪ್ರಾಯಪಟ್ಟರು. ಅವರು ಬುಧವಾರದಂದು ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘವು (ಕ.ವಿ.ವ. ಸಂಘ) ನಿಂಗಣ್ಣ ಕುಂಟಿ (ಇಟಗಿ) ದತ್ತಿ ಅಂಗವಾಗಿ ಆಯೋಜಿಸಿದ್ದ ಉಪನ್ಯಾಸ ಮತ್ತು ‘ನಿವೃತ್ತರಾಗಿಯೂ ಕ್ರಿಯಾಶೀಲರಾಗಿರುವ ಶಿಕ್ಷಕರಿಗೆ ಸನ್ಮಾನ’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಪ್ರಾಥಮಿಕ ಶಿಕ್ಷಣವೇ ಶಿಕ್ಷಣದ ಬುನಾದಿ. ಈ ಬುನಾದಿ ಗಟ್ಟಿಯಾಗಬೇಕಾದರೆ…

Read More

ಧಾರವಾಡ ಜಿಲ್ಲಾ ಚುಟುಕು ಕವಿಗಳಿಗೆ ಸುವರ್ಣಾವಕಾಶ: ಕುಂದಗೋಳ ತಾಲೂಕು ಕ.ಚು.ಸಾ.ಪ.ದಿಂದ ಕವನ ಸ್ಪರ್ಧೆ, ನ. 1ರೊಳಗೆ ಕೃತಿ ಕಳುಹಿಸಲು ಆಹ್ವಾನ

ಕುಂದಗೋಳ: ಪ್ರತಿಭಾವಂತ ಚುಟುಕು ಕವಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಕುಂದಗೋಳ ತಾಲ್ಲೂಕು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ಕ.ಚು.ಸಾ.ಪ.) ವತಿಯಿಂದ ಧಾರವಾಡ ಜಿಲ್ಲಾ ಮಟ್ಟದ ಚುಟುಕು ಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಆಸಕ್ತ ಕವಿಗಳು ತಮ್ಮ ಅಪ್ರಕಟಿತ ಹಾಗೂ ಸ್ವ-ರಚಿತ ಚುಟುಕುಗಳನ್ನು ಕಳುಹಿಸಿಕೊಡುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಲು ಪರಿಷತ್ತು ವಿನಂತಿಸಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಕವಿಗಳು ಎಲ್ಲಿಯೂ ಪ್ರಕಟವಾಗದ ತಮ್ಮದೇ ಸ್ವರಚಿತ 5 ಚುಟುಕುಗಳನ್ನು ಕಳುಹಿಸುವುದು ಕಡ್ಡಾಯವಾಗಿದೆ. ಕವನಗಳ ಜೊತೆಗೆ ಕವಿಯ ಭಾವಚಿತ್ರ ಹಾಗೂ ಸಂಪೂರ್ಣ ಸ್ವ-ವಿವರಗಳನ್ನು (ಬಯೋಡೇಟಾ) ಕಡ್ಡಾಯವಾಗಿ ಲಗತ್ತಿಸಬೇಕು….

Read More

ಚಿಕ್ಕನೇರ್ತಿ: 60 ಎಕರೆ ಆಸ್ತಿ ವಿವಾದ ಬಲಿ? ಅಟ್ಟದಲ್ಲಿ ಶವವಾದ ಯುವಕ: 8 ಜನರ ವಿರುದ್ಧ ‘ಕಿರುಕುಳ’ ಆರೋಪದಡಿ ಎಫ್‌ಐಆರ್

ಕುಂದಗೋಳ: ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಕೆಲವರಿಂದ ತೀವ್ರ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದ ಕುಂದಗೋಳ ತಾಲ್ಲೂಕು ಚಿಕ್ಕನೇರ್ತಿ ಗ್ರಾಮದ ಯುವಕನೋರ್ವ ಮನೆಯ ಅಟ್ಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಗೆ ಕಿರುಕುಳವೇ ಕಾರಣ ಎಂದು ಮೃತನ ಕುಟುಂಬಸ್ಥರು ದೂರು ನೀಡಿದ್ದು, ಪೊಲೀಸರು ಒಟ್ಟು ಎಂಟು ಮಂದಿ ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಗಂಭೀರ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತರನ್ನು ಚಿಕ್ಕನೇರ್ತಿ ಗ್ರಾಮದ ನಿವಾಸಿ, 23 ವರ್ಷದ ಫಕ್ಕೀರೇಶ…

Read More

ಚಿಕ್ಕನೆರ್ತಿ ಗ್ರಾಮದ ಹೆಚ್ಚು ಆಸ್ತಿ ಹೊಂದಿದ ಯುವಕನ ಶವ ನೇಣು ಬೀಗಿದ ಸ್ಥತಿಯಲ್ಲಿ ಮನೆಯ ಅಟ್ಟದ ಕೋಣೆಯಲ್ಲಿ ಪತ್ತೆ, ನೇಣಿನ ಸ್ಥಿತಿಯಲ್ಲಿ… ಆತ್ಮಹತ್ಯೆಯೋ, ಕೋಲೋಯೋ ಎಂಬ ಸಂಶಯ?

ಕುಂದಗೋಳ: ತಾಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ತೀವ್ರ ಸಂಚಲನ ಮೂಡಿಸಿರುವ ಒಂದು ನಿಗೂಢ ಘಟನೆಯಲ್ಲಿ, ಸುಮಾರು 40 ಕ್ಕೂ ಹೆಚ್ಚು ಎಕರೆ ಆಸ್ತಿಯ ಒಡೆಯನಾಗಿದ್ದ ಯುವಕನೋರ್ವ ತನ್ನದೇ ಮನೆಯ ಮೇಲ್ಭಾಗದ ‘ಅಟ್ಟ’ದ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಕಂಡು ಬಂದಿದ್ದರೂ, ದೇಹದ ಕೆಲವು ಭಾಗಗಳಲ್ಲಿ ರಕ್ತದ ಕಲೆಗಳು ಕಂಡು ಬಂದಿರುವುದು ಈ ಪ್ರಕರಣವನ್ನು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ತೀವ್ರ ಸಂಶಯಕ್ಕೆ ದೂಡಿದೆ. ಸಂಶಾತ್ಮಕ ಸಾವಿನ ವಿವರ:ಮೃತರನ್ನು ಫಕ್ಕಿರೇಶ ಹನಮಂತಪ್ಪ ತಡಸದ ಎಂದು ಗುರುತಿಸಲಾಗಿದೆ….

Read More

ಕಾಯಿಲೆಗಳ ದುಷ್ಪರಿಣಾಮ ತಡೆಯಲು ಸಕಾಲದಲ್ಲಿ ಪರೀಕ್ಷೆ ಅಗತ್ಯ: ಡಾ. ರೂಪಾ ಕಿಣಗಿ ಸಲಹೆ

ನವಲಗುಂದ: ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಹಾಗೂ ಪಾರ್ಶ್ವವಾಯು (Stroke) ರೋಗಗಳ ಪರೀಕ್ಷೆಯನ್ನು ಸಕಾಲದಲ್ಲಿ ಮಾಡಿಸಿಕೊಂಡು, ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ತಡೆಯಲು ಸಾರ್ವಜನಿಕರು ಮುಂದಾಗಬೇಕು ಎಂದು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರೂಪಾ ಕಿಣಗಿ ಸಲಹೆ ನೀಡಿದರು. ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿತ ಹಾಗೂ ಪಾರ್ಶ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯ ಬದಲಾವಣೆಯಿಂದಾಗಿ…

Read More

ನ್ಯಾಯಮೂರ್ತಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ನವಲಗುಂದ: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲನ ವಿರುದ್ಧ ದೇಶದ್ರೋಹದ ದೂರು ದಾಖಲಿಸಿ, ಆತನನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್.) ತಾಲ್ಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಸಮಿತಿಯ ಸದಸ್ಯರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ ಕಚೇರಿಯ ಶಿರೇಸ್ತದಾರ ಗಣೇಶ ಚಳ್ಳಕೆರೆ ಹಾಗೂ ಪಿ.ಎಸ್.ಐ. ಜನಾರ್ಧನ ಭಟ್ರಳ್ಳಿ ಅವರ…

Read More

ಸಾಲಬಾಧೆಗೆ ನೊಂದ ಯುವಕ ಕೆರೆಗೆ ಬಿದ್ದು ಆತ್ಮಹತ್ಯೆ

ನವಲಗುಂದ: ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ಗ್ರಾಮದ ಕುಡಿಯುವ ನೀರಿನ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ತಾಲ್ಲೂಕಿನ ಹಾಲಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹಾಲಕುಸುಗಲ್ ಗ್ರಾಮದ ಮೌಲಾಸಾಬ್ ಮಕ್ತುಮಸಾಬ ಹೆಬಸೂರ (38) ಸಾವಿಗೆ ಶರಣಾದ ದುರ್ದೈವಿ. ಘಟನೆ ಹಿನ್ನೆಲೆ: ಮೃತ ಮೌಲಾಸಾಬ್ ಅವರು ಸುಮಾರು ನಾಲ್ಕು ತಿಂಗಳ ಹಿಂದೆ ಬಾಡಿಗೆಗೆ ಓಡಿಸಲು ಹುಬ್ಬಳ್ಳಿಯ ಐ.ಡಿ.ಎಫ್.ಸಿ. ಫಸ್ಟ್ ಬ್ಯಾಂಕ್‌ನಿಂದ ₹4,79,000 ಸಾಲ ಪಡೆದು, ಟಾಟಾ ಏಸ್ ಗೂಡ್ಸ್ ವಾಹನ (ಸಂಖ್ಯೆ: ಕೆ.ಎ.63.ಎ.5451) ಖರೀದಿಸಿದ್ದರು. ಆದರೆ, ವಾಹನಕ್ಕೆ ಸರಿಯಾದ…

Read More

ಹುಲ್ಲಂಬಿ ಗ್ರಾಮದಲ್ಲಿ ₹೨೦ ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಘಟಗಿ: ತಾಲ್ಲೂಕಿನ ಹುಲ್ಲಂಬಿ ಗ್ರಾಮದಲ್ಲಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ವಿಶೇಷ ಅನುದಾನದಡಿ ಮಂಜೂರಾದ ೨೦ ಲಕ್ಷ ರೂಪಾಯಿ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಲಾಯಿತು. ಬಸಪ್ಪ ನಾಯ್ಕರ ಅವರ ಮನೆಯಿಂದ ಈರಪ್ಪ ವಡ್ಕಪ್ಪನವರ ಮನೆಯವರೆಗಿನ ರಸ್ತೆ ನಿರ್ಮಾಣಕ್ಕೆ ಈ ಅನುದಾನವನ್ನು ಒದಗಿಸಲಾಗಿದೆ. ಸಚಿವರ ಆಪ್ತ ಸಹಾಯಕ ಶ್ರೀ ಸೋಮಶೇಖರ ಬೆನ್ನೂರ ಅವರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ…

Read More