ಕುಂದಗೋಳ: 10 ನೇ ತರಗತಿ ವಿದ್ಯಾರ್ಥಿಯ ಶಂಕಾಸ್ಪದ ಸಾವು; ಕೊಲೆ ಶಂಕೆ?

ಕುಂದಗೋಳ: ಪಟ್ಟಣದ ಕರೋಗಲ ಓಣಿಯ ೧೬ ವರ್ಷದ ೧೦ನೇ ತರಗತಿ ವಿದ್ಯಾರ್ಥಿಯೋರ್ವ ಶಂಕಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ​ಮೃತನನ್ನು ನಿಂಗರಾಜ ಮಲ್ಲಿಕಾರ್ಜುನ ಅವಾರಿ (೧೬) ಎಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ ಪಕ್ಕದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಶವ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು. ​ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಧಾರವಾಡ ಜಿಲ್ಲಾ ಎಸ್ಪಿ ಹಾಗೂ ಕುಂದಗೋಳ ಪೊಲೀಸರು…

Read More

ಕುಂದಗೋಳ: ಅಂದಾಜು17 ವರ್ಷದ ಬಾಲಕನ ಶಂಕಾಸ್ಪದ ಸಾವು, ಕೊಲೆ ಶಂಕೆ?

ಕುಂದಗೋಳ: ಪಟ್ಟಣದ ಪೂಜಾರ ಓಣಿಯ ಅಂದಾಜು 17 ವರ್ಷದ ಬಾಲಕನೊಬ್ಬ ಶಂಕಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ​ಮೃತನನ್ನು ಲಿಂಗರಾಜ ಅವಾರಿ ಅಂದಾಜು (17) ಎಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ ಪಕ್ಕದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಶವ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು. ​ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಕುಂದಗೋಳ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಸಾವಿನ ಸುತ್ತ…

Read More

ಕಾದಂಬರಿಗಳ ಮೂಲಕ ಭಾಷಾ ಜಾಗೃತಿ ಮೂಡಿಸಿದ ಕೀರ್ತಿ ಗಳಗನಾಥರಿಗೆ ಸಲ್ಲುತ್ತದೆ: ಸಿ. ಆರ್. ಜೋಶಿ

ಧಾರವಾಡ: ಗಳಗನಾಥರು ಆಧುನಿಕ ಕನ್ನಡ ಸಾಹಿತ್ಯದ ಮೊದಲ ಕಾದಂಬರಿಕಾರರು. ಮರಾಠಿ ಪ್ರಾಬಲ್ಯವಿದ್ದ ಕಾಲಘಟ್ಟದಲ್ಲಿ ತಮ್ಮ ಕಾದಂಬರಿಗಳ ಮೂಲಕ ನಾಡಿನಾದ್ಯಂತ ಸಾಹಿತ್ಯ ಪ್ರಸಾರ ಮಾಡಿ, ಕನ್ನಡಿಗರಲ್ಲಿ ಭಾಷಾ ಜಾಗೃತಿ ಮೂಡಿಸಿದರು ಎಂದು ನಿವೃತ್ತ ಉಪನ್ಯಾಸಕ ಸಿ. ಆರ್. ಜೋಶಿ ಅಭಿಪ್ರಾಯಪಟ್ಟರು. ​ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಕನ್ನಡ ಕಾದಂಬರಿ ಪಿತಾಮಹ ಗಳಗನಾಥರು ಹಾಗೂ ಸಂಶೋಧಕ ಶ್ರೀ ನಾ. ಶ್ರೀ. ರಾಜಪುರೋಹಿತರ ಸ್ಮರಣಾರ್ಥ ದತ್ತಿ ಉಪನ್ಯಾಸ’ ಕಾರ್ಯಕ್ರಮದಲ್ಲಿ ‘ಬದುಕು-ಬರಹ’ ವಿಷಯದ ಕುರಿತು ಅವರು ಮಾತನಾಡಿದರು. ​ಮರಾಠಿ ಪ್ರಭಾವವಿದ್ದ…

Read More

ಬಾಲ್ಯವಿವಾಹ ತಡೆಗೆ ಧಾರ್ಮಿಕ ಮುಖಂಡರ ಸಹಕಾರ ಅತ್ಯಗತ್ಯ; ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ: ನ್ಯಾಯಾಧೀಶ ಪರಶುರಾಮ ದೊಡ್ಡಮನಿ

ಧಾರವಾಡ: ಬಾಲ್ಯವಿವಾಹ ಎಂಬುದು ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ನಿರ್ಮೂಲನೆ ಮಾಡುವಲ್ಲಿ ಧಾರ್ಮಿಕ ಮುಖಂಡರ ಪಾತ್ರ ಮಹತ್ವದ್ದಾಗಿದೆ. ವಿವಾಹ ನಿಶ್ಚಯಿಸುವ ಸಂದರ್ಭದಲ್ಲಿ ವಯಸ್ಸಿನ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ತಪ್ಪಿದಲ್ಲಿ ಅದರಲ್ಲಿ ಭಾಗಿಯಾಗುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಎಚ್ಚರಿಕೆ ನೀಡಿದರು. ​‘ಬಾಲ್ಯವಿವಾಹ ಮುಕ್ತ ಭಾರತ-100 ದಿನಗಳ ಅಭಿಯಾನ’ದ ಅಂಗವಾಗಿ ಜಿಲ್ಲಾ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು…

Read More

ಜ. 23ರಂದು ಪಿಂಚಣಿ ಅದಾಲತ್ ಹಾಗೂ ಜಿಪಿಎಫ್ ಅಹವಾಲು ಸ್ವೀಕಾರ: ನಿವೃತ್ತ ನೌಕರರ ಸಮಸ್ಯೆ ಪರಿಹಾರಕ್ಕೆ ವೇದಿಕೆ

ಧಾರವಾಡ: ಜಿಲ್ಲೆಯ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮಹಾಲೇಖಪಾಲರ ಕಚೇರಿ ಹಾಗೂ ಜಿಲ್ಲಾ ಖಜಾನೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜನವರಿ 23, 2026 ರಂದು ಬೆಳಿಗ್ಗೆ 11 ಗಂಟೆಗೆ ‘ಪಿಂಚಣಿ ಅದಾಲತ್ ಮತ್ತು ಜಿ.ಪಿ.ಎಫ್ ಚಂದಾದಾರರ ಅಹವಾಲು ನಿವಾರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ​ಜಿಲ್ಲಾಧಿಕಾರಿಗಳ ಕಾರ್ಯಾಲಯದ ವಿ.ಸಿ ಸಭಾಂಗಣದಲ್ಲಿ ವೆಬೆಕ್ಸ್ (Webex) ತಂತ್ರಜ್ಞಾನದ ಮೂಲಕ ಈ ಸಭೆ ಜರುಗಲಿದೆ. ಪಿಂಚಣಿದಾರರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ…

Read More

ಗಣರಾಜ್ಯೋತ್ಸವ: ಕ್ರೀಡಾ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ; ಅರ್ಜಿ ಆಹ್ವಾನ

​ಧಾರವಾಡ: ಮುಂಬರುವ ಜನವರಿ 26, 2026 ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ, ಕ್ರೀಡೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಸನ್ಮಾನಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಜಿ ಆಹ್ವಾನಿಸಿದೆ. ​2025 ನೇ ಸಾಲಿನಲ್ಲಿ (ದಿನಾಂಕ: 01-01-2025 ರಿಂದ 31-12-2025 ರ ವರೆಗೆ) ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತರಾದವರು ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರು ಈ ಸನ್ಮಾನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ….

Read More

ಹಿರೇಮಠದ ವಿರುದ್ಧ ಅಪಪ್ರಚಾರ ಖಂಡಿಸಿ ನವಲಗುಂದದಲ್ಲಿ ಬೃಹತ್ ಪ್ರತಿಭಟನೆ: ತಪ್ಪಿತಸ್ಥರ ಗಡಿಪಾರಿಗೆ ಆಗ್ರಹ

ನವಲಗುಂದ: ಪಟ್ಟಣದ ಐತಿಹಾಸಿಕ ಪಂಚಗ್ರಹ ಹಿರೇಮಠ ಹಾಗೂ ಮಠದ ಶ್ರೀಗಳ ವಿರುದ್ಧ ಕೆಲವರು ನಡೆಸುತ್ತಿರುವ ಅಪಪ್ರಚಾರವನ್ನು ಖಂಡಿಸಿ ತಾಲೂಕಿನ ಸಾವಿರಾರು ಮಠದ ಭಕ್ತರು ಮಂಗಳವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ​ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಹಿರಿಯರಾದ ಅಂದಾನಯ್ಯ ಹಿರೇಮಠ, ಅಣ್ಣಪ್ಪ ಬಾಗಿ, ವಿರೇಶ ಸೊಬರದಮಠ, ಶ್ರೀಶೈಲ ಮೂಲಿಮನಿ, ಉಸ್ಮಾನ ಬಬರ್ಚಿ ಹಾಗೂ ವಿ.ಟಿ. ಕರಿಸಕ್ರಣ್ಣವರ ಅವರು, ಪಂಚಗ್ರಹ ಹಿರೇಮಠವು ಕಳೆದ ಹಲವಾರು ವರ್ಷಗಳಿಂದ ಅನ್ನ…

Read More

​ಮಹದಾಯಿ ಯೋಜನೆ ಜಾರಿಯಲ್ಲಿ ಯಾವುದೇ ನಿರ್ಲಕ್ಷ್ಯವಿಲ್ಲ; ಸಿಬಿಲ್ ಸ್ಕೋರ್ ನೋಡಿ ಸಾಲ ನಿರಾಕರಿಸಿದರೆ ಶಿಸ್ತುಕ್ರಮ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ನವಲಗುಂದ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಕಾಮಗಾರಿ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು. ಪಟ್ಟಣದ ಮಾಡೆಲ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಸದರ ಕ್ರೀಡಾ ಮಹೋತ್ಸವಕ್ಕೆ ಆಗಮಿಸಿದ್ದ ವೇಳೆ ರೈತಭವನಕ್ಕೆ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು. ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಪರಿಸರ ಇಲಾಖೆಯ ಅನುಮತಿ ಮತ್ತು ಗೆಜೆಟ್ ನೋಟಿಫಿಕೇಶನ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಆದರೆ, ಅರಣ್ಯ ಇಲಾಖೆಗೆ ಸಂಬಂಧಿಸಿದ ಗಿಡಗಳನ್ನು ತೆರವುಗೊಳಿಸಿದಾಗ ಪರ್ಯಾಯವಾಗಿ…

Read More

ಮತದಾರರ ಪಟ್ಟಿ ಪರಿಷ್ಕರಣೆ ಇಲ್ಲ; ಕೇವಲ ‘ಮ್ಯಾಪಿಂಗ್‌’ ಕಾರ್ಯ ಜಾರಿ: ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ಪಷ್ಟನೆ

ಧಾರವಾಡ: ಜಿಲ್ಲೆಯಲ್ಲಿ ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕಾರ್ಯ ನಡೆಯುತ್ತಿಲ್ಲ. ಹೀಗಾಗಿ, ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ತೆಗೆದುಹಾಕುವ ಅಥವಾ ಹೊಸದಾಗಿ ಸೇರ್ಪಡೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿಲ್ಲ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ಪಷ್ಟಪಡಿಸಿದ್ದಾರೆ. ​ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಭಾನುವಾರ (ಜ.12) ಸಂಜೆ ಮತದಾರರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ​ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ, ಮುಂಬರುವ…

Read More

ಹಿರೇಮಠದ ಶ್ರೀಗಳ ವಿರುದ್ಧ ಅಪಪ್ರಚಾರ ಖಂಡಿಸಿ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ

ನವಲಗುಂದ: ಪಟ್ಟಣದ ಇತಿಹಾಸ ಪ್ರಸಿದ್ಧ ಪಂಚಗ್ರಹ ಹಿರೇಮಠದ ಪೀಠಾಧ್ಯಕ್ಷರಾದ ಚ.ಬ್ರ.ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಡೆಸುತ್ತಿರುವ ಅಪಪ್ರಚಾರ ಹಾಗೂ ತೇಜೋವಧೆಯನ್ನು ಖಂಡಿಸಿ, ಮಂಗಳವಾರ (ಜ.13) ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಸದ್ಭಕ್ತ ಮಂಡಳಿ ತಿಳಿಸಿದೆ. ​ಕೆಲವು ವ್ಯಕ್ತಿಗಳು ಶ್ರೀ ಮಠದ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದ್ದು, ಇದರಿಂದ ತಾಲೂಕಿನ ಭಕ್ತ ಸಮೂಹಕ್ಕೆ ಮಾನಸಿಕವಾಗಿ ನೋವುಂಟಾಗಿದೆ. ಈ ಹಿನ್ನೆಲೆಯಲ್ಲಿ ಜ.10ರಂದು ನಡೆದ ಭಕ್ತರ ಸಭೆಯಲ್ಲಿ…

Read More