​ಧಾರವಾಡ: ಲಂಚದ ಬೇಡಿಕೆಗೆ ಬಿ.ಎಸ್ಸಿ ವಿದ್ಯಾರ್ಥಿ ಬಲಿ; ಮೂವರು ಪೊಲೀಸರ ಅಮಾನತು

ಧಾರವಾಡ: ನಗರದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿ.ಎಸ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ​ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಸೋಮವಾರ ರಾತ್ರಿ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತನ ತಾಯಿ ಕವಿತಾ ಅವರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಗಾಂಜಾ ಪ್ರಕರಣವೊಂದರಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಆದಿತ್ಯನಿಗೆ ಪೊಲೀಸರು ಮಾನಸಿಕ ಕಿರುಕುಳ…

Read More

​ಧಾರವಾಡ: ಮರ್ಯಾದೆಗೆ ಅಂಜಿ ಬಿಎಸ್‌ಸಿ ವಿದ್ಯಾರ್ಥಿ ನೇಣಿಗೆ ಶರಣು; ವಿದ್ಯಾಗಿರಿ ಪೊಲೀಸರ ವಿರುದ್ಧ ಸುಲಿಗೆಯ ಗಂಭೀರ ಆರೋಪ.

​ಧಾರವಾಡ: ಪೊಲೀಸರ ಕಿರುಕುಳ ಹಾಗೂ ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಬೆದರಿಕೆಯಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಮನಕಲುಕುವ ಘಟನೆ ಜಿಲ್ಲೆಯ ಗಿರಿನಗರದಲ್ಲಿ ನಡೆದಿದೆ. ನಗರದ ಕಿಟಲ್ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಆದಿತ್ಯ ಮ್ಯಾಗೇರಿ ಎಂಬಾತನೇ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡ ದುರ್ದೈವಿ. ​ಕಳೆದ ಶನಿವಾರ ವಿದ್ಯಾಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಆದಿತ್ಯ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಯುವಕರನ್ನು ಗಾಂಜಾ ಸೇವನೆಯ ಶಂಕೆಯ ಮೇಲೆ ವಶಕ್ಕೆ ಪಡೆದಿದ್ದರು. ಈ ವೇಳೆ ಆದಿತ್ಯನಿಗೆ…

Read More

ಅಮ್ಮಿನಬಾವಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ರಾಜ್ಯ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಚಾಲನೆ

ಧಾರವಾಡ  ಏ.27: ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಉನ್ನತೀಕರಿಸುವ ಬೇಡಿಕೆ ಇತ್ತು. ಈಗ ಕಾರ್ಯರೂಪಕ್ಕೆ ಬರುತ್ತಿದೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಹೇಳಿದರು. ​ಅವರು ಸೋಮವಾರದಂದು (ಏ. 27) ಮಧ್ಯಾಹ್ನ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿನ ಸರ್ಕಾರಿ ಆರೋಗ್ಯ ಕೇಂದ್ರದ ಆವರಣದಲ್ಲಿರುವ ಅಮ್ಮಿನಬಾವಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ, ಮಾತನಾಡಿದರು. ​ಕೇವಲ…

Read More

ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾವಹಿಸಿ: ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ

ಧಾರವಾಡ .27: ಬೇಸಿಗೆ ಕಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಯಾವುದೇ ಗ್ರಾಮ ಹಾಗೂ ಪಟ್ಟಣಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ತಹಶೀಲ್ದಾರರು ಮತ್ತು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ನಿರಂತರವಾಗಿ ನಿಗಾವಹಿಸಬೇಕು. ಈಗಾಗಲೇ ಜಿಲ್ಲೆಯ ವಿವಿಧ ತಾಲೂಕುಗಳ 15 ಗ್ರಾಮಗಳಲ್ಲಿ 17 ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಜಿಲ್ಲಾಡಳಿತ ಮೇಲಸ್ತುವಾರಿಯಲ್ಲಿ ಕ್ರಮವಹಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ…

Read More

ಮಾಹಿತಿ ನೀಡದೆ ಸತಾಯಿಸುತ್ತಿರುವ ಅಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು:

ನವಲಗುಂದ: ಮಾಹಿತಿ ಹಕ್ಕು ಕಾಯ್ದೆಯಡಿ ನಿಯಮಬದ್ಧವಾಗಿ ಸಾವಿರಾರು ರೂಪಾಯಿ ಶುಲ್ಕ ಪಾವತಿಸಿದರೂ ಮಾಹಿತಿ ನೀಡದೆ ಸತಾಯಿಸುತ್ತಿರುವ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿಯ ವಿರುದ್ಧ ಇದೀಗ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕರ್ತವ್ಯಲೋಪದ ಆರೋಪದಡಿ ಆರ್.ಟಿ.ಐ ಕಾರ್ಯಕರ್ತ ಮಾಬುಸಾಬ ಯರಗುಪ್ಪಿ ಅವರು ಈ ದೂರು ದಾಖಲಿಸಿದ್ದು, ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ​ಪ್ರಕರಣದ ಹಿನ್ನೆಲೆ: ಮಾಬುಸಾಬ ಯರಗುಪ್ಪಿ ಅವರು ದಿನಾಂಕ 13-10-2025 ರಂದು ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಧಾರವಾಡ ಜಿಲ್ಲಾ…

Read More

ಏ. 27 ರಂದು ಧಾರವಾಡ ಜಿಲ್ಲೆ ಹಾಗೂ ಕುಂದಗೋಳ ತಾ ಇಂಗಳಗಿ ಗ್ರಾಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ: ವಿವಿಧ ಆರೋಗ್ಯ ಕೇಂದ್ರಗಳ ಉದ್ಘಾಟನೆ

ಧಾರವಾಡ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವಿವಿಧೆಡೆ ನೂತನ ಆರೋಗ್ಯ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ​ಸಚಿವರ ಅಂದಿನ ಪ್ರವಾಸವು ಬೆಳಿಗ್ಗೆ 10 ಗಂಟೆಗೆ ಧಾರವಾಡದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಲಸಿಕಾ ಕೇಂದ್ರವನ್ನು ಉದ್ಘಾಟಿಸುವ ಮೂಲಕ ಆರಂಭವಾಗಲಿದೆ. ತದನಂತರ 10:30 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ…

Read More

ಹಿರೇ​ಮಠದ ಆಸ್ತಿ ವಂಶಪಾರಂಪರ್ಯ; ಸಾರ್ವಜನಿಕರ ದೂರಿಗೆ ಕಿವಿಗೊಡಬೇಡಿ: ಶ್ರೀ ಶಿತಿಕಂಠೇಶ್ವರ ಸ್ವಾಮೀಜಿ ಸ್ಪಷ್ಟನೆ

​ಕುಂದಗೋಳ: ಪಟ್ಟಣದ ಐತಿಹಾಸಿಕ ಪಂಚಗ್ರಹ ಹಿರೇಮಠವು 1517ರಲ್ಲಿ ಸ್ಥಾಪಿತವಾದ ಪುತ್ರವರ್ಗ ಮಠವಾಗಿದ್ದು, ಇದರ ಚರಾಸ್ತಿ ಮತ್ತು ಸ್ಥಿರಾಸ್ತಿಗಳ ಮೇಲೆ ಮಠದ ಪರಂಪರೆಯ ಜಂಗಮ ವಂಶಸ್ಥರಿಗೆ ಮಾತ್ರ ಸಂಪೂರ್ಣ ಹಕ್ಕಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ಸಲ್ಲಿಸಿರುವ ಮನವಿಯನ್ನು ಜಿಲ್ಲಾಧಿಕಾರಿಗಳು ಪುರಸ್ಕರಿಸಬಾರದು ಎಂದು ಪಂಚಗ್ರಹ ಹಿರೇಮಠದ ಶ್ರೀ ಶಿತಿಕಂಠೇಶ್ವರ ಸ್ವಾಮೀಜಿ ಆಗ್ರಹಿಸಿದರು. ​ಶುಕ್ರವಾರ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಸಮೇತ ಮಾತನಾಡಿದ ಅವರು, ಮಠದ ಆಸ್ತಿಯನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದರು. ಏಪ್ರಿಲ್ 22 ರಂದು…

Read More

ನವಲಗುಂದ:ದಾಖಲೆ ನೀಡುವ ‘ದಣಿ’ಗೇ ಇಲ್ಲ ದಾಖಲೆ: ಪುರಸಭೆ ಅತಿಕ್ರಮಣ ಬಯಲು, ಲೋಕಾಯುಕ್ತ ಮೆಟ್ಟಿಲೇರಿದ ಪ್ರಕರಣ

ನವಲಗುಂದ: ಸಾರ್ವಜನಿಕರ ಮನೆಗಳಿಗೆ ಸಣ್ಣ ದಾಖಲೆ ತಪ್ಪಾದರೂ ಅದು ಅಕ್ರಮ ಎಂದು ದಂಡ ವಿಧಿಸಿ ಜಪ್ತಿ ಮಾಡುವ ನವಲಗುಂದ ಪುರಸಭೆಯು, ತಾನು ಕಾರ್ಯಾಲಯ ನಡೆಸುತ್ತಿರುವ ಜಾಗಕ್ಕೆ ಯಾವುದೇ ಅಧಿಕೃತ ದಾಖಲೆ ಹೊಂದಿಲ್ಲ ಎಂಬ ಆಘಾತಕಾರಿ ಅಂಶ ಇದೀಗ ಬಯಲಾಗಿದೆ. ಈ ಸಂಬಂಧ ಪುರಸಭೆಯ ಆಡಳಿತಾತ್ಮಕ ವೈಫಲ್ಯ ಮತ್ತು ಅಧಿಕಾರ ದುರ್ಬಳಕೆಯನ್ನು ಖಂಡಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಮಾಬುಸಾಬ ಯರಗುಪ್ಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ​ಸಾರ್ವಜನಿಕರಿಗೆ ಆಸ್ತಿಗಳ ಇ-ಸ್ವತ್ತು ಉತಾರ ನೀಡುವ ಕೇಂದ್ರವೇ…

Read More

ಹಿರೇನರ್ತಿ ಗ್ರಾಮದಲ್ಲಿ ಜಾಗದ ಕಿರಿಕ್: ಕರಿಯಪ್ಪನ ಮೇಲೆ ಭೀಕರ ಹಲ್ಲೆ

ಕುಂದಗೋಳ: ತಾಲ್ಲೂಕಿನ ಹಿರೇನರ್ತಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ತಲೆದೋರಿದ ಹಳೆಯ ದ್ವೇಷವೊಂದು ವಿಕೋಪಕ್ಕೆ ತಿರುಗಿದ್ದು, ಒಂದೇ ಮನೆತನದವರ ನಡುವಿನ ಜಗಳದಲ್ಲಿ ಮುಂದುವರೆದು ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಭೀಕರ ಗಲಾಟೆಯಲ್ಲಿ ಕರಿಯಪ್ಪಗೌಡ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನದ ವೇಳೆಗೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ. ಜಾಗದ ವಿಷಯವಾಗಿ ಮಾತಿಗೆ ಮಾತು ಬೆಳೆದು, ಒಂದೇ ಮನೆತನದ ಅಣ್ಣತಮ್ಮಂದಿರಾದ ಪ್ರಜ್ವಲ್ ಗೌಡ , ಸಿದ್ದನಗೌಡ ಹಾಗೂ ಶಿವನಗೌಡ…

Read More

ಗುಡಿಸಾಗರ್ ಶಾಲೆಯಲ್ಲಿ ನಾಲ್ಕು ದಿನಗಳ ಬೇಸಿಗೆ ಶಿಬಿರದ ಯಶಸ್ವಿ ಸಮಾರೋಪ

ನವಲಗುಂದ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಸಾಗರ್ ಹಾಗೂ ಧಾರವಾಡದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಬೇಸಿಗೆ ಶಿಬಿರವು ಶುಕ್ರವಾರದಂದು ಸಂಭ್ರಮದ ಸಮಾಪ್ತಿ ಕಂಡಿತು. ​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಈರಣ್ಣ ಗುಳೆದ್ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯು ಶಾಲೆಯಲ್ಲಿ ನಿರಂತರವಾಗಿ ಇಂತಹ ಸೃಜನಶೀಲ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಮಕ್ಕಳು ಶಿಬಿರದಲ್ಲಿ ಪಡೆದ ಜ್ಞಾನವನ್ನು ಕೇವಲ ನಾಲ್ಕು ದಿನಕ್ಕೆ ಸೀಮಿತಗೊಳಿಸದೆ, ಅದನ್ನು…

Read More