ಹೆದ್ದಾರಿಯಲ್ಲೇ ಅಡುಗೆ, ಟ್ರ್ಯಾಕ್ಟರ್ ನಿಲ್ಲಿಸಿ ರೈತರ ಬೃಹತ್ ಪ್ರತಿಭಟನೆ: 300 ಕೋಟಿ ಅನುದಾನಕ್ಕೆ ಕುಂದಗೋಳ ರೈತರ ಪಟ್ಟು
ಕುಂದಗೋಳ: ತಾಲ್ಲೂಕಿನ ಜಿಗಳೂರು ಕ್ರಾಸ್ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲೇ ರೈತರು ತಮ್ಮ ಎತ್ತು, ಚಕ್ಕಡಿ, ಟ್ರ್ಯಾಕ್ಟರ್ ಹಾಗೂ ನೀರಿನ ಟ್ಯಾಂಕರ್ಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರೈತರು ಹೆದ್ದಾರಿಯಲ್ಲೇ ಅಡುಗೆ ಪಾತ್ರೆಗಳನ್ನಿಟ್ಟು ಅಡುಗೆ ಮಾಡುವ ಮೂಲಕ ತಮ್ಮ ಹೋರಾಟದ ತೀವ್ರತೆಯನ್ನು ಪ್ರದರ್ಶಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಹೊಸೂರಿನಿಂದ ಉದ್ಭವವಾಗುವ ಹಳ್ಳದಿಂದ ಕುಂದಗೋಳ ಹಾಗೂ ನವಲಗುಂದ ತಾಲ್ಲೂಕಿನ ಅಕ್ಕಪಕ್ಕದ ಸಾವಿರಾರು ಎಕರೆ ಜಮೀನುಗಳು ಮಳೆಯಾದಾಗ ಜಲಾವೃತಗೊಂಡು ಸಂಪೂರ್ಣ ಹಾಳಾಗುತ್ತಿವೆ….

