ಗ್ರಾಮಸಭೆ, ವಾರ್ಡ್ ಸಭೆ ನಡೆಸದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ: ತಾ.ಪಂ. ಎದುರು ಏಕಾಂಗಿ ಧರಣಿ600-700 ಶೌಚಾಲಯ ಹಗರಣ ಮುಚ್ಚಿಹಾಕಿದ ಆರೋಪ; ತೀವ್ರ ಭ್ರಷ್ಟಾಚಾರದ ವಿರುದ್ಧ ಹೋರಾಟ
ಕುಂದಗೋಳ: ಕಳೆದ ಮೂರು ವರ್ಷಗಳಿಂದ ಒಂದೇ ಒಂದು ಗ್ರಾಮಸಭೆ ಅಥವಾ ವಾರ್ಡ್ ಸಭೆ ನಡೆಸದೆ, ಭೂ ತರ್ಲಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿರುವ ಪಿಡಿಒ ಹಾಗೂ ಪಂಚಾಯಿತಿ ಆಡಳಿತ ಮಂಡಳಿಯ ವಿರುದ್ಧ ತಕ್ಷಣ ದಂಡನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಗ್ರಾಮದ ನಿವಾಸಿ ಮಂಜುನಾಥ ಮೊರಬದ ಅವರು ಶುಕ್ರವಾರ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಏಕಾಂಗಿ ಧರಣಿ ಸತ್ಯಾಗ್ರಹ ನಡೆಸಿ ಆಡಳಿತ ವ್ಯವಸ್ಥೆಯ ನಿದ್ದೆಗೆ ಭಂಗ ತಂದಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಈ ಕುರಿತು ನಿರಂತರವಾಗಿ…

