ಕಬಡ್ಡಿ ಕ್ರೀಡಾಕೂಟ: ಧಾರವಾಡ ಜಿಲ್ಲಾ ಮಟ್ಟದ ಸ್ಪರ್ಧೆ – ಶಲವಡಿಯಲ್ಲಿ ವಿದ್ಯಾರ್ಥಿಗಳ ಜಿದ್ದಾಜಿದ್ದಿ

ಕಬಡ್ಡಿ ಕ್ರೀಡಾಕೂಟ: ಧಾರವಾಡ ಜಿಲ್ಲಾ ಮಟ್ಟದ ಸ್ಪರ್ಧೆ – ಶಲವಡಿಯಲ್ಲಿ ವಿದ್ಯಾರ್ಥಿಗಳ ಜಿದ್ದಾಜಿದ್ದಿ ನವಲಗುಂದ: ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕುಗಳ 14 ಹಾಗೂ 17 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಕ್ರೀಡಾಕೂಟವು ನವಲಗುಂದ ಸಮೀಪದ ಶಲವಡಿ ಗ್ರಾಮದ ಶ್ರೀ ಗುರುಶಾಂತೇಶ್ವರ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ತಮ್ಮ ಕೌಶಲ್ಯ ಪ್ರದರ್ಶಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷರಿಂದ ಉದ್ಘಾಟನೆಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾಜಬೇಗಂ ಎಚ್. ಯಾವಗಲ್ ಅವರು ವಿದ್ಯಾರ್ಥಿಗಳಿಂದ…

Read More

ನಿರುದ್ಯೋಗ ಗಂಭೀರ ಸಮಸ್ಯೆ, ಯುವಕರ ಆತ್ಮಹತ್ಯೆ ಗಮನಿಸಿ; ಆರ್.ಎಸ್.ಎಸ್. ನಿಷೇಧ ಸಂವಿಧಾನಕ್ಕೆ ವಿರುದ್ಧ: ನ್ಯಾ. ಸಂತೋಷ್ ಹೆಗಡೆ

ಧಾರವಾಡ: ನಿರುದ್ಯೋಗವು ಕೇವಲ ಕರ್ನಾಟಕಕ್ಕೆ ಸೀಮಿತವಾದ ಸಮಸ್ಯೆಯಲ್ಲ, ಇದು ಬಹಳ ದೊಡ್ಡ ಸಮಸ್ಯೆಯಾಗಿ ಬೆಳೆದಿದೆ. ಯುವಕರಿಗೆ ಸಿಗಬೇಕಾದ ಕೆಲಸಗಳು ಸಿಗುತ್ತಿಲ್ಲ. ಈ ವಿಷಯವನ್ನು ಅಧಿಕಾರದಲ್ಲಿ ಇರುವವರು ಗಮನಕ್ಕೆ ತೆಗೆದುಕೊಂಡು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಯುವಕರ ಪರಿಸ್ಥಿತಿಗೆ ಸ್ಪಂದಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಒತ್ತಾಯಿಸಿದರು. ಶುಕ್ರವಾರದಂದು ಧಾರವಾಡಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಮಸ್ಯೆ ಕುರಿತು ಹೋರಾಟ ಮಾಡುವ ಅವಶ್ಯಕತೆ ಇದೆ ಎಂಬ…

Read More

*ಕುಂದಗೋಳ: ತಾಲ್ಲೂಕಿನ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂತಿಮ ಹಂತಕ್ಕೆ: 5-6 ದಿನದಲ್ಲಿ ‌ಬೆಳೆ ಹಾನಿ ಶೀಘ್ರವಾಗಿ ರೈತರ ಖಾತೆಗೆ ಜಮೆ,

ಕುಂದಗೋಳ: ತಾಲ್ಲೂಕಿನಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯಿಂದ ಯಾರೂ ಹೊರಗುಳಿಯಬಾರದು ಎಂದು ತಹಶೀಲ್ದಾರ್ ರಾಜು ಮಾವರಕರ ಅವರು ಮನವಿ ಮಾಡಿದ್ದಾರೆ. ಸಮೀಕ್ಷೆಯಿಂದ ಬಿಟ್ಟುಹೋದವರು ತಮ್ಮ ಹೆಸರು ನೋಂದಾಯಿಸಲು ಅಕ್ಟೋಬರ್ 18, ಶನಿವಾರ ಕೊನೆಯ ದಿನವಾಗಿದೆ ಎಂದು ಅವರು ತಿಳಿಸಿದ್ದಾರೆ. ಶುಕ್ರವಾರ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ, ಬೆಳೆ ಹಾನಿ ಪರಿಹಾರ ವಿತರಣೆ ಹಾಗೂ ಗ್ರಾಮ ಸಹಾಯಕರ ನೇಮಕಾತಿ ಕುರಿತು ಮಾಹಿತಿ ನೀಡಿದರು. ಶೇ. 101 ಸಾಧನೆ…

Read More

ನವಲಗುಂದ: ರೈತ ಮಹಿಳೆಯರಿಗೆ ಉಚಿತ ದೇಶಿ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ

ನವಲಗುಂದ:2025-26ನೇ ಸಾಲಿನ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ, ಬೆಂಗಳೂರು ಇವರ ವತಿಯಿಂದ ನವಲಗುಂದ ತಾಲ್ಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ವಾರದ ದೇಶಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇಚ್ಛಿಸುವ ರೈತ ಮಹಿಳೆಯರು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳನ್ನು ಪಡೆಯಲು ತಮ್ಮ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಪಶು ಆಸ್ಪತ್ರೆ, ನವಲಗುಂದ ಇಲ್ಲಿಗೆ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 30, ಸಂಜೆ 4:00…

Read More

ನವಲಗುಂದ ಗ್ರಾಮ ಸಹಾಯಕರ ಸಂಘದ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ನವಲಗುಂದ: ತಾಲೂಕಿನ ಗ್ರಾಮ ಸಹಾಯಕರುಗಳ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಗುರುವಾರದಂದು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಧಾರವಾಡ ಜಿಲ್ಲಾಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳ ಪುನರ್ರಚನೆ ಪ್ರಕ್ರಿಯೆ ನಡೆಯಿತು. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧ್ಯಕ್ಷ ಶರಣಪ್ಪ ವಾಲಿಕರ ಅವರು, ನವಲಗುಂದ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಕೆ.ಎಂ. ಸೈಯದಅಲ್ಲಿ, ಅಧ್ಯಕ್ಷರಾಗಿ ಕೆ.ಎಚ್. ಮರಿನಾಯ್ಕರ, ಕಾರ್ಯದರ್ಶಿಯಾಗಿ ಎಂ.ಡಿ. ಲದ್ದಿಗಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅದೇ ರೀತಿ ಉಪಾಧ್ಯಕ್ಷರಾಗಿ ಎಂ.ವಿ. ಬೆಳ್ಳಿಕಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ…

Read More

ಕುಂದಗೋಳದ ತಾ: ಹಾನಿಗೊಳಗಾದ ರಸ್ತೆಗಳ ತಕ್ಷಣದ ದುರಸ್ತಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಕರವೇ ಮನವಿ

ಕುಂದಗೋಳ/ಧಾರವಾಡ: ಇತ್ತೀಚೆಗೆ ಸುರಿದ ಅತಿ ಹೆಚ್ಚು ಮಳೆ ಹಾಗೂ ಬೆಣ್ಣಿಹಳ್ಳದ ಪ್ರವಾಹದಿಂದ ಧಾರವಾಡ ಜಿಲ್ಲಾ ಕುಂದಗೋಳ ತಾಲ್ಲೂಕಿನಾದ್ಯಂತ ಗ್ರಾಮೀಣ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ತಕ್ಷಣವೇ ರಸ್ತೆಗಳ ದುರಸ್ತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) (ನಾರಾಯಣಗೌಡ್ರ ಬಣ)ದ ತಾಲೂಕು ಅಧ್ಯಕ್ಷ ಕಲ್ಲಪ್ಪ ಹರಕುಣಿ ಅವರು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಮನವಿ ಸಲ್ಲಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಕಲ್ಲಪ್ಪ ಅವರು, ಕುಂದಗೋಳ ತಾಲ್ಲೂಕಿನಾದ್ಯಂತ ಅತಿವೃಷ್ಟಿ ಮತ್ತು ಬೆಣ್ಣಿಹಳ್ಳದ ಪ್ರವಾಹದಿಂದ…

Read More

ವಿದ್ಯಾರ್ಥಿಗಳಿಂದಲೇ ಕನ್ನಡ ಭಾಷೆ, ಸಂಸ್ಕೃತಿ ವೃದ್ಧಿ: ಡಾ. ಲಿಂಗರಾಜ ಅಂಗಡಿ ಕರೆ

ಕಲಘಟಗಿ: ಕವನ ರಚನೆಯೊಂದಿಗೆ ಕವನ ವಾಚನ ಮಾಡುವ ಗುಣವನ್ನು ವಿದ್ಯಾರ್ಥಿಗಳು ರೂಢಿಸಿಕೊಂಡಾಗ ಮಾತ್ರ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅಭಿಪ್ರಾಯಪಟ್ಟರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಗುಡ್ ನ್ಯೂಸ್ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಕರ್ನಾಟಕ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಕವಿಗಳ ಕವಿತಾ ವಾಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯವನ್ನು ಜೀವಂತವಾಗಿರಿಸಲು ಇಂತಹ ಕಾರ್ಯಕ್ರಮಗಳು ಅತ್ಯಗತ್ಯ….

Read More

ಪಠ್ಯ ಮೀರಿದ ಜ್ಞಾನ ಬೋಧನೆ ಇಂದಿನ ಅಗತ್ಯ: ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಅಭಿಮತ

ಧಾರವಾಡ: ಶಿಕ್ಷಕರಿಗೆ ಕೇವಲ ಪಠ್ಯ ಪುಸ್ತಕವೇ ಸರ್ವಸ್ವವಾಗಬಾರದು. ಪಠ್ಯಪುಸ್ತಕ ಮೀರಿದ ಜ್ಞಾನವನ್ನು ವಿಷಯ ಬೋಧನೆಯ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸುವುದು ಇಂದಿನ ಶಿಕ್ಷಣದ ಅಗತ್ಯವಾಗಿದೆ ಎಂದು ಖ್ಯಾತ ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಅವರು ಅಭಿಪ್ರಾಯಪಟ್ಟರು. ಅವರು ಬುಧವಾರದಂದು ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘವು (ಕ.ವಿ.ವ. ಸಂಘ) ನಿಂಗಣ್ಣ ಕುಂಟಿ (ಇಟಗಿ) ದತ್ತಿ ಅಂಗವಾಗಿ ಆಯೋಜಿಸಿದ್ದ ಉಪನ್ಯಾಸ ಮತ್ತು ‘ನಿವೃತ್ತರಾಗಿಯೂ ಕ್ರಿಯಾಶೀಲರಾಗಿರುವ ಶಿಕ್ಷಕರಿಗೆ ಸನ್ಮಾನ’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಪ್ರಾಥಮಿಕ ಶಿಕ್ಷಣವೇ ಶಿಕ್ಷಣದ ಬುನಾದಿ. ಈ ಬುನಾದಿ ಗಟ್ಟಿಯಾಗಬೇಕಾದರೆ…

Read More

ಧಾರವಾಡ ಜಿಲ್ಲಾ ಚುಟುಕು ಕವಿಗಳಿಗೆ ಸುವರ್ಣಾವಕಾಶ: ಕುಂದಗೋಳ ತಾಲೂಕು ಕ.ಚು.ಸಾ.ಪ.ದಿಂದ ಕವನ ಸ್ಪರ್ಧೆ, ನ. 1ರೊಳಗೆ ಕೃತಿ ಕಳುಹಿಸಲು ಆಹ್ವಾನ

ಕುಂದಗೋಳ: ಪ್ರತಿಭಾವಂತ ಚುಟುಕು ಕವಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಕುಂದಗೋಳ ತಾಲ್ಲೂಕು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ಕ.ಚು.ಸಾ.ಪ.) ವತಿಯಿಂದ ಧಾರವಾಡ ಜಿಲ್ಲಾ ಮಟ್ಟದ ಚುಟುಕು ಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಆಸಕ್ತ ಕವಿಗಳು ತಮ್ಮ ಅಪ್ರಕಟಿತ ಹಾಗೂ ಸ್ವ-ರಚಿತ ಚುಟುಕುಗಳನ್ನು ಕಳುಹಿಸಿಕೊಡುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಲು ಪರಿಷತ್ತು ವಿನಂತಿಸಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಕವಿಗಳು ಎಲ್ಲಿಯೂ ಪ್ರಕಟವಾಗದ ತಮ್ಮದೇ ಸ್ವರಚಿತ 5 ಚುಟುಕುಗಳನ್ನು ಕಳುಹಿಸುವುದು ಕಡ್ಡಾಯವಾಗಿದೆ. ಕವನಗಳ ಜೊತೆಗೆ ಕವಿಯ ಭಾವಚಿತ್ರ ಹಾಗೂ ಸಂಪೂರ್ಣ ಸ್ವ-ವಿವರಗಳನ್ನು (ಬಯೋಡೇಟಾ) ಕಡ್ಡಾಯವಾಗಿ ಲಗತ್ತಿಸಬೇಕು….

Read More

ಚಿಕ್ಕನೇರ್ತಿ: 60 ಎಕರೆ ಆಸ್ತಿ ವಿವಾದ ಬಲಿ? ಅಟ್ಟದಲ್ಲಿ ಶವವಾದ ಯುವಕ: 8 ಜನರ ವಿರುದ್ಧ ‘ಕಿರುಕುಳ’ ಆರೋಪದಡಿ ಎಫ್‌ಐಆರ್

ಕುಂದಗೋಳ: ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಕೆಲವರಿಂದ ತೀವ್ರ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದ ಕುಂದಗೋಳ ತಾಲ್ಲೂಕು ಚಿಕ್ಕನೇರ್ತಿ ಗ್ರಾಮದ ಯುವಕನೋರ್ವ ಮನೆಯ ಅಟ್ಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಗೆ ಕಿರುಕುಳವೇ ಕಾರಣ ಎಂದು ಮೃತನ ಕುಟುಂಬಸ್ಥರು ದೂರು ನೀಡಿದ್ದು, ಪೊಲೀಸರು ಒಟ್ಟು ಎಂಟು ಮಂದಿ ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಗಂಭೀರ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತರನ್ನು ಚಿಕ್ಕನೇರ್ತಿ ಗ್ರಾಮದ ನಿವಾಸಿ, 23 ವರ್ಷದ ಫಕ್ಕೀರೇಶ…

Read More