ಐಕ್ಯತೆ ಒಡೆಯಬಾರದು: ತಪ್ಪು ಮಾಡಿದವರನ್ನು ಸಮಾಜದ ಮುಖಂಡರೇ ತಿದ್ದಬೇಕು – ವೀರೇಂದ್ರ ಸ್ವಾಮೀಜಿ

ನವಲಗುಂದ: ಸಾರ್ವಜನಿಕ ಸ್ಥಳದಲ್ಲಿ ನಾವೆಲ್ಲರೂ ಐಕ್ಯತೆ ಮತ್ತು ಕೋಮುಸೌಹಾರ್ದತೆಯಿಂದ ಬಾಳಬೇಕು. ಯಾರು ಏನೇ ಮಾಡಿದರೂ ಈ ಐಕ್ಯತೆಯನ್ನು ಒಡೆಯಬಾರದು. ಸಮಾಜದಲ್ಲಿ ಯಾರಾದರೂ ತಪ್ಪು ಮಾಡಿದರೆ, ಅವರನ್ನು ಆಯಾ ಸಮಾಜದ ಮುಖಂಡರೇ ತಿದ್ದುವ ಕೆಲಸ ಮಾಡಬೇಕಿದೆ ಎಂದು ಅಜಾತ ನಾಗಲಿಂಗಸ್ವಾಮಿ ಮಠದ ವೀರೇಂದ್ರ ಸ್ವಾಮೀಜಿ ನುಡಿದರು. ​ಅವರು ಭಾನುವಾರ ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಸೀರತ್ ಅಭಿಯಾನ 2025 ರ ಅಂಗವಾಗಿ ಆಯೋಜಿಸಿದ್ದ ಸೀರತ್ ಪ್ರವಚನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಪ್ರವಾದಿ ಮಹಮದ್ ಪೈಗಂಬರ್‌ರವರ ಧಾರ್ಮಿಕ ಸೌಹಾರ್ದ…

Read More

ನ. 3 ರಂದು ಹುಬ್ಬಳ್ಳಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣಮಹೋತ್ಸವ: ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ- ಭುವನೇಶ ಪಾಟೀಲ ಸೂಚನೆ

ಧಾರವಾಡ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಶಸ್ವಿಯಾಗಿ ೫೦ ವರ್ಷಗಳನ್ನು ಪೂರೈಸಿದ್ದು, ಮಂಡಳಿಯ ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ಸಾರ್ವಜನಿಕ ಜಾಗೃತಿ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ನವೆಂಬರ್ 3 ರಂದು ಆಚರಿಸಲು ನಿರ್ಧರಿಸಲಾಗಿದೆ. ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಮಾಡಿಕೊಳ್ಳಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಭುವನೇಶ ಪಾಟೀಲ ಅವರು ಸೂಚಿಸಿದರು. ​ಅವರು ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣಮಹೋತ್ಸವ ಸಮಾರಂಭ…

Read More

​ಪ್ರೊ. ಎಸ್.ಎ. ಹೊಸಮನಿ ದತ್ತಿ ಉಪನ್ಯಾಸ: ನಾಳೆ ಧಾರವಾಡದಲ್ಲಿ ‘ಸಾಂಪ್ರದಾಯಿಕ ತಳಿಗಳ ಆದ್ಯತೆ’ ಕುರಿತು ಗೋಷ್ಠಿ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು, ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿ ಪ್ರೊ. ಶಿವರಾಜ ಅಮೃತಪ್ಪ ಹೊಸಮನಿ (ಪ್ರೊ. ಎಸ್.ಎ. ಹೊಸಮನಿ) ಅವರ ದತ್ತಿಯ ಅಂಗವಾಗಿ ಇದೇ ಅಕ್ಟೋಬರ್ ೮, ೨೦೨೫ ರಂದು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ. ಸಂಘದ ಶ್ರೀ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಸಂಜೆ ೬ ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ​‘ಕೃಷಿಯಲ್ಲಿ ಸಾಂಪ್ರದಾಯಿಕ ತಳಿಗಳು : ಇಂದಿನ ಆದ್ಯತೆ’ ಎಂಬ ಮಹತ್ವದ ವಿಷಯದ ಕುರಿತು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಬಿ….

Read More

ಬಾಲ ಬಸವ ಪ್ರಶಸ್ತಿ 2025 ಪ್ರದಾನ: ಮಕ್ಕಳಲ್ಲಿ ಶರಣ ಸಂಸ್ಕೃತಿ ಬಿತ್ತುವ ಅಗತ್ಯ

ಧಾರವಾಡ: ದೇಶದ ಉಜ್ವಲ ಭವಿಷ್ಯವು ಮಕ್ಕಳ ಮೇಲೆ ಅವಲಂಬಿತವಾಗಿದೆ. ಮಕ್ಕಳೇ ಈ ದೇಶದ ನಿಜವಾದ ಸಂಪತ್ತು. ಬಸವಾದಿ ಶರಣರು ಮತ್ತು ಶರಣೆಯರ ಪ್ರತಿಯೊಂದು ವಚನಗಳಲ್ಲಿ ಜೀವನ ಮೌಲ್ಯಗಳ ತುಡಿತ ಅಡಗಿದೆ. ಆದ್ದರಿಂದ, ಪಾಲಕರು ಮಕ್ಕಳಿಗೆ ಶರಣರ ನಡೆ-ನುಡಿಗಳನ್ನು ಪರಿಪಾಲಿಸುವಂತೆ ಪ್ರೋತ್ಸಾಹಿಸಬೇಕು. ಆಗಲೇ ಮಕ್ಕಳಲ್ಲಿ ಸಂಸ್ಕಾರ ಬೆಳೆಯಲು ಸಾಧ್ಯ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರಾದ ಕೆ. ಎಚ್. ನಾಯಕ ಅಭಿಪ್ರಾಯಪಟ್ಟರು. ​ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ರಂಗ ಸಾಮ್ರಾಟ ಸಾಂಸ್ಕೃತಿಕ, ಶಿಕ್ಷಣ, ಕ್ರೀಡಾ ಸಂಶೋಧನಾ…

Read More

ಯರಗುಪ್ಪಿ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಹಾನಿಗೊಳಗಾದ ಹೋಟೆಲ್‌ಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಭೇಟಿ, ಪರಿಹಾರಕ್ಕೆ ಸೂಚನೆ

ಕುಂದಗೋಳ: ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ರವಿವಾರದಂದು ಸಂಭವಿಸಿದ ಘಟನೆಯಲ್ಲಿ, ಗ್ರಾಮದ ಸಂಜೀವರೆಡ್ಡಿ ತಹಶೀಲ್ದಾರ್ ಅವರಿಗೆ ಸೇರಿದ ಹೋಟೆಲ್‌ನಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಅಪಾರ ಹಾನಿ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಹೋಟೆಲ್‌ನ ಶಟರ್ ಸಂಪೂರ್ಣ ಮುರಿದು ಹೋಗಿದ್ದು, ಒಳಭಾಗದಲ್ಲಿದ್ದ ಎಲ್ಲ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.ಸೋಮವಾರದಂದು ಘಟನೆ ನಡೆದ ಸ್ಥಳಕ್ಕೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಹಾಗೂ ತಹಶೀಲ್ದಾರ್ ರಾಜು ಮಾವಕರ ಹಾಗೂ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮೀತಿ ಯೋಜನಾ ಅಧ್ಯಕ್ಷರಾದ ಸತೀಶ ಕೊಬ್ಬಯ್ಯನವರ…

Read More

ಕುಂದಗೋಳ: ಪವಾರ ಮೊಟರ್ಸ ಹಾಗೂ ವೆಂಕಟೇಶ ಮೋಟಾರ್ಸ್ ಎಂಬ ದ್ವಿಚಕ್ರ ವಾಹನ ಶೋರೂಂಗಳಿಂದ ‘ಕೋಟಿಗಟ್ಟಲೆ ವಂಚನೆ’; ತಹಸೀಲ್ದಾರ್‌ಗೆ ‘ಜಯ ಕರ್ನಾಟಕ’ ಮನವಿ

ಕುಂದಗೋಳ: ಪಟ್ಟಣದಲ್ಲಿರುವ ದ್ವಿಚಕ್ರ ವಾಹನ ಶೋರೂಂಗಳು ಸಾಲದ (ಫೈನಾನ್ಸ್‌) ಮೂಲಕ ವಾಹನ ಖರೀದಿಸುವ ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಎಸಗುತ್ತಿವೆ ಎಂದು ಆರೋಪಿಸಿ, ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್ ರಾಜು ಮಾವಕರ ಅವರಿಗೆ ಮನವಿ ಸಲ್ಲಿಸಲಾಯಿತು. ​ಮೊದಲಿಗೆ ಪಟ್ಟಣದ ವೆಂಕಟೇಶ ಮೋಟಾರ್ಸ್ ಹಾಗೂ ಪವಾರ ಮೋಟಾರ್ಸ್ ಶೋರೂಂಗಳ ಎದುರು ಜಮಾಯಿಸಿದ ಸಂಘಟನೆಯ ಕಾರ್ಯಕರ್ತರು,…

Read More

ಸಾಲಬಾಧೆ ತಾಳಲಾರದೆ ಯರೆಬೂದಿಹಾಳ ಗ್ರಾಮದ ರೈತ ಹಜರೆಸಾಬ ಬು ತಹಶಿಲ್ದಾರ ಆತ್ಮಹತ್ಯೆ:

ಕುಂದಗೋಳ: ಬೆಳೆ ಸಾಲದ ಭಾರವನ್ನು ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತಾಲ್ಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ ಸೆ: 05 ರಂದು ವರದಿಯಾಗಿದೆ. ಮೃತರನ್ನು ಹಜರೇಸಾಬ,ಬುಡ್ಡೆಸಾಬ ತಹಶೀಲ್ದಾರ (75) ಎಂದು ಗುರುತಿಸಲಾಗಿದೆ. ಸಾಲ ಮರುಪಾವತಿ ಚಿಂತೆಯಿಂದ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದು, ಈ ಕಾರಣಕ್ಕಾಗಿಯೇ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯರೇಬೂದಿಹಾಳ ಗ್ರಾಮದ ನಿವಾಸಿಯಾಗಿದ್ದ ಹಜರೇಸಾಬ ತಹಶೀಲ್ದಾರ ಅವರು ತಮ್ಮ 3 ಎಕರೆ 2 ಗುಂಟೆ ಜಮೀನಿನಲ್ಲಿ ಗೋವಿನ ಜೋಳ ಪೀಕನ್ನು ಬೆಳೆದಿದ್ದರು….

Read More

ದೇಶದ ಹಿತವೇ ಮುಖ್ಯ: ಶಿಕ್ಷಣದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ತಜ್ಞರ ಕರೆ

​ಧಾರವಾಡ: ಜಾತಿ ಮತ್ತು ಧರ್ಮಕ್ಕಿಂತಲೂ ದೇಶದ ಹಿತಾಸಕ್ತಿಯೇ ಮುಖ್ಯ. ಧರ್ಮ ಯಾವುದೇ ಇರಲಿ, ನಾವೆಲ್ಲರೂ ಭಾರತೀಯರು ಎಂಬ ಉದಾತ್ತ ಭಾವನೆಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಧಾರವಾಡದ ಸಾಯಿ ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಅಧ್ಯಕ್ಷೆ ಡಾ. ವೀಣಾ ಬಿರಾದಾರ ಅಭಿಪ್ರಾಯಪಟ್ಟರು. ​ಕರ್ನಾಟಕ ವಿದ್ಯಾವರ್ಧಕ ಸಂಘದ (ಕ.ವಿ.ವ. ಸಂಘ) “ಶಿಕ್ಷಣ ಮಂಟಪ”ವು, ಸಾಯಿ ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಶಿಕ್ಷಣದಲ್ಲಿ ರಾಷ್ಟ್ರೀಯ ಭಾವೈಕ್ಯತೆ’ ವಿಷಯ ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಏಳಿಗೆಯೇ ನಮ್ಮೆಲ್ಲರ ಧ್ಯೇಯವಾಗಬೇಕು. ಎಲ್ಲಾ ಮತ-ಪಂಥಗಳ…

Read More

ಎಸ್.ಎಲ್. ಭೈರಪ್ಪ ಕಾದಂಬರಿಗಳಿಗೆ ಎಂದೂ ಸಾವಿಲ್ಲ: ಕನ್ನಡ ಸಾಹಿತ್ಯ ಲೋಕದ ಅನರ್ಘ್ಯ ರತ್ನಕ್ಕೆ ನುಡಿನಮನ

ಧಾರವಾಡ: ಖ್ಯಾತ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ ಡಾ. ಎಸ್.ಎಲ್. ಭೈರಪ್ಪ ಅವರು ಕನ್ನಡ ಸಾಹಿತ್ಯ ಲೋಕದ ಅನರ್ಘ್ಯ ರತ್ನ. ತಮ್ಮ ಅಮೂಲ್ಯ ಕಾದಂಬರಿಗಳ ಮೂಲಕ ಅವರು ಓದುಗರ ದೊಡ್ಡ ಬಳಗವನ್ನೇ ಸೃಷ್ಟಿಸಿದವರು ಎಂದು ಕ.ವಿ.ವ. ಸಂಘದ ಗೌರವ ಉಪಾಧ್ಯಕ್ಷ ಶ್ರೀನಿವಾಸ ವಾಡಪ್ಪಿ ಹೇಳಿದರು. ​ಕರ್ನಾಟಕ ವಿದ್ಯಾವರ್ಧಕ ಸಂಘವು (ಕ.ವಿ.ವ. ಸಂಘ) ಆಯೋಜಿಸಿದ್ದ ಡಾ. ಎಸ್.ಎಲ್. ಭೈರಪ್ಪನವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ​ವಿಶ್ವ ಸಾಹಿತ್ಯ ಭೂಪಟದಲ್ಲಿ ಕನ್ನಡದ ಹೆಗ್ಗುರುತು: ​ಆಕಾಶವಾಣಿ ಧಾರವಾಡದ ನಿವೃತ್ತ ನಿರ್ದೇಶಕ ಬಸು…

Read More

ಯರಗುಪ್ಪಿಯಲ್ಲಿ ವಾಣಿಜ್ಯ ಸಿಲಿಂಡರ್ ಸ್ಪೋಟ: ಅಂದಾಜು 6 ಲಕ್ಷ ರೂ. ಮೌಲ್ಯದ ಹೋಟೆಲ್ ಸಾಮಗ್ರಿ ಸುಟ್ಟು ಭಸ್ಮ

ಕುಂದಗೋಳ: ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಮಧ್ಯರಾತ್ರಿ ವಾಣಿಜ್ಯ ಬಳಕೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ​ಯರಗುಪ್ಪಿ ಗ್ರಾಮದ ಸಂಜೀವರೆಡ್ಡಿ ತಹಶೀಲ್ದಾರ್ ಎಂಬುವವರಿಗೆ ಸೇರಿದ ಹೋಟೆಲ್‌ನಲ್ಲಿ ಈ ದುರ್ಘಟನೆ ನಡೆದಿದೆ. ಮಧ್ಯರಾತ್ರಿಯ ವೇಳೆಗೆ ಹೋಟೆಲ್‌ನ ಒಳಗಿದ್ದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಹೋಟೆಲ್‌ನ ಶೆಟರ್ ಮುರಿದು ಹೋಗಿದ್ದು, ಒಳಭಾಗದಲ್ಲಿದ್ದ ಎಲ್ಲ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ….

Read More