ಗಾಂಧೀಜಿ, ಶಾಸ್ತ್ರೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ: ಬಸವಪ್ರಭು ಹೊಸಕೇರಿ

ಕವಿಸಂನಲ್ಲಿ ರಾಷ್ಟ್ರಪಿತ ಹಾಗೂ ಲಾಲ್‌ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ ​ಧಾರವಾಡ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಮಹಾನ್ ಮಾನವತಾವಾದಿಗಳು. ಅವರ ಸ್ಮರಣೆ ಪುಣ್ಯದ ಕಾರ್ಯ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ (ಕವಿಸಂ) ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಹೇಳಿದರು. ​ಕವಿಸಂನಲ್ಲಿ ಗುರುವಾರ (ಅ.೨) ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ​ಗಾಂಧೀಜಿಯವರ ಚಿಂತನೆಗಳನ್ನು ಯುವಜನತೆಯಲ್ಲಿ ಬಿಂಬಿಸಲು ಕವಿಸಂ ವತಿಯಿಂದ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಭವಿಷ್ಯದಲ್ಲಿ…

Read More

ಕೃಷಿ ತಜ್ಞ ಪ್ರೊ. ಎಸ್.ಎ. ಹೊಸಮನಿ ಸ್ಮರಣಾರ್ಥ ದತ್ತಿ ಕಾರ್ಯಕ್ರಮ ಅ. 8ಕ್ಕೆ

ಧಾರವಾಡ:ಕರ್ನಾಟಕದ ಶ್ರೇಷ್ಠ ಕೃಷಿ ವಿಜ್ಞಾನಿ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ (UAS) ಭದ್ರ ಬುನಾದಿ ಹಾಕಿದ ಪ್ರೊ. ಶಿವರಾಜ ಅಮೃತಪ್ಪ ಹೊಸಮನಿ (ಪ್ರೊ. ಎಸ್.ಎ. ಹೊಸಮನಿ) ಅವರ ಸ್ಮರಣಾರ್ಥ ದತ್ತಿ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 8 ರಂದು ಧಾರವಾಡದಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರೊ. ಹೊಸಮನಿ ಅವರ ಸಾಧನೆಪ್ರೊ. ಹೊಸಮನಿ ಅವರು ಹಲವಾರು ಸುಧಾರಿತ…

Read More

ಕುಂದಗೋಳ ಪ ಪಂ ನಲ್ಲಿ ಆಶ್ರಯ ನಿವೇಶನ ಜನಪ್ರತಿನಿಧಿಗಳ ಪತ್ನಿಯರಿಗೆ ಹಂಚಿಕೆ, ತನಿಖೆಗೆ ಆಗ್ರಹ

ಕುಂದಗೋಳ: ಪಟ್ಟಣ ಪಂಚಾಯಿತಿ ಆಶ್ರಯ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಕಾನೂನುಬಾಹಿರವಾಗಿ ನಡೆದಿರುವ ಬಗ್ಗೆ ಪಪಂ ಸಾಮಾನ್ಯ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು. ಹಾಲಿ ಉಪಾಧ್ಯಕ್ಷರು ಮತ್ತು ಸದಸ್ಯರ ಪತ್ನಿಯರಿಗೆ ನಿವೇಶನ ನೀಡಲಾಗಿದೆ ಎಂಬ ಆರೋಪ ಸದಸ್ಯರಿಂದ ಕೇಳಿಬಂದಿದ್ದು, ಈ ಕುರಿತು ತಕ್ಷಣ ತನಿಖೆ ನಡೆಸಬೇಕೆಂದು ಆಗ್ರಹಿಸಲಾಯಿತು. ನಿಯಮ ಮೀರಿ ನಿವೇಶನ ಹಂಚಿಕೆ ಆರೋಪ ವಿಷಯ ಪ್ರಸ್ತಾಪಿಸಿದ ಸದಸ್ಯ ಗಣೇಶ ಕೋಕಾಟೆ ಅವರು, “ಬಡವರಿಗೆ ಮೀಸಲಾದ ಆಶ್ರಯ ಯೋಜನೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಮನೆ ಇಲ್ಲದ ಕಡುಬಡವರು ಹಾಗೂ…

Read More

ನಾಯಕನೂರ ಬಳಿ ಟ್ರ್ಯಾಕ್ಟರ್ ಪಲ್ಟಿ: ಚಾಲಕನ ನಿರ್ಲಕ್ಷ್ಯಕ್ಕೆ ಮೂವರು ಮಹಿಳೆಯರಿಗೆ ಗಂಭೀರ ಗಾಯ

ನವಲಗುಂದ: ತಾಲೂಕಿನ ನಾಯಕನೂರ ಗ್ರಾಮದ ಬಳಿ ಸಾಯಂಕಾಲದ ವೇಳೆ ಟ್ರ್ಯಾಕ್ಟರ್ ಅತಿವೇಗ ಮತ್ತು ನಿಷ್ಕಾಳಜಿ ಚಾಲನೆಯಿಂದಾಗಿ ರಸ್ತೆ ಪಕ್ಕದಲ್ಲಿ ಪಲ್ಟಿ ಹೊಡೆದಿದ್ದು, ಟ್ರೇಲರ್‌ನಲ್ಲಿದ್ದ ಮೂವರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೊನ್ನೆ ಸಾಯಂಕಾಲ 7:30 ಗಂಟೆ ಸುಮಾರಿಗೆ ನಾಯಕನೂರ-ತಡಹಾಳ ರಸ್ತೆಯ ಮೇಲೆ, ಅಕ್ಕಿಯವರ ಹಳ್ಳದ ಸಮೀಪ ಈ ದುರಂತ ಸಂಭವಿಸಿದೆ. ರಾಮದುರ್ಗ ತಾಲೂಕಿನ ಉಗಾಳಾಪೂರ ನಿವಾಸಿ, ಆರೋಪಿತ ಚಾಲಕ ಚೇತನ ನೀಲನ (ವಯಾ 24 ವರ್ಷ) ಇತನು ತಾನು ಚಲಾಯಿಸುತ್ತಿದ್ದ…

Read More

ನವಲಗುಂದ ಬಳಿ ಭೀಕರ ಅಪಘಾತ: ಬಸ್‌-ಲಾರಿ ಡಿಕ್ಕಿ, ಓರ್ವ ಪ್ರಯಾಣಿಕ ಸಾವು

ನವಲಗುಂದ: ಸಮೀಪದ ಹುಬ್ಬಳ್ಳಿ-ಸೊಲಾಪುರ ರಸ್ತೆಯಲ್ಲಿರುವ ಶೆಟ್ಟರ ಕೆರೆಯ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಭೀಕರ ದುರಂತಕ್ಕೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಂಪೂರ್ಣ ನಿಷ್ಕಾಳಜಿಯಿಂದ ಚಾಲನೆಸೆ 29 ರಂದು ರಾತ್ರಿ 10:30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಂಗಳೂರು ನಿವಾಸಿ ರಂಜನ ಕುಮಾರ ಎಂಬ ಚಾಲಕನು ಗಣೇಶ ಟ್ರಾವೆಲ್ಸ್‌ಗೆ ಸೇರಿದ ಬಸ್ (KA-51/B-2462) ಅನ್ನು ನವಲಗುಂದ…

Read More

ತಡಹಾಳ ಸೇತುವೆ ಕುಸಿತ: ಸಂಚಾರ ನಿಷೇಧ:ಸಾರ್ವಜನಿಕರಿಗೆ ಬದಲಿ ಮಾರ್ಗ ಘೋಷಣೆ

ಧಾರವಾಡ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದ ಪರಿಣಾಮವಾಗಿ ನರಗುಂದ-ನವಲಗುಂದ ರಾಷ್ಟ್ರೀಯ ಹೆದ್ದಾರಿ-218ಕ್ಕೆ ಸಂಪರ್ಕ ಕಲ್ಪಿಸುವ, ನವಲಗುಂದ ತಾಲೂಕಿನ ಅರಭಾವಿ-ಚಳ್ಳಿಕೇರಿ ರಾಜ್ಯ ಹೆದ್ದಾರಿ-45ರಲ್ಲಿನ ತಡಹಾಳ ಗ್ರಾಮದ ಬಳಿಯ ಸೇತುವೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಹೆಚ್ಚಿನ ಅನಾಹುತಗಳಾಗದಂತೆ ತಡೆಯಲು, ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ, ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಸಂಚಾರಕ್ಕೆ ಬದಲಿ ವ್ಯವಸ್ಥೆಸೇತುವೆ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗದಂತೆ, ಜಿಲ್ಲಾಡಳಿತವು ಬದಲಿ…

Read More

ಮೈಸೂರು ದಸರಾ ಕ್ರೀಡಾಕೂಟ: ಪದಕ ಬೇಟೆ, ಗೆದ್ದ ಧಾರವಾಡ ತಂಡಕ್ಕೆ ಜಿಲ್ಲಾಧಿಕಾರಿ ಅಭಿನಂದನೆ

ಧಾರವಾಡ: ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ನಡೆದ ಪ್ರತಿಷ್ಠಿತ ರಾಜ್ಯಮಟ್ಟದ ಸಿ.ಎಂ ಕಪ್ ದಸರಾ ಕ್ರೀಡಾಕೂಟದಲ್ಲಿ ಧಾರವಾಡ ಜಿಲ್ಲೆಯ ಕ್ರೀಡಾಪಟುಗಳು ಅಕ್ಷರಶಃ ಪದಕಗಳ ಬೇಟೆಯಾಡಿದ್ದಾರೆ. ವಿವಿಧ ವಿಭಾಗಗಳಲ್ಲಿ ಒಟ್ಟು 111 ಪದಕಗಳನ್ನು ಮುಡಿಗೇರಿಸಿಕೊಂಡ ಧಾರವಾಡ ತಂಡಕ್ಕೆ, ಜಿಲ್ಲಾಡಳಿತದಿಂದ ಮಂಗಳವಾರದಂದು ಆತ್ಮೀಯ ಅಭಿನಂದನೆ ಸಲ್ಲಿಸಲಾಯಿತು. ಅಟ್ಲೆಟಿಕ್ಸ್, ಹಾಕಿ, ವ್ಹಾಲಿಬಾಲ್, ಜಿಮ್ನಾಸ್ಟಿಕ್, ಟೇಕ್ವಾಂಡೋ ಮತ್ತು ಕುಸ್ತಿ ಸೇರಿದಂತೆ ಹಲವು ವಿಭಾಗಗಳಲ್ಲಿ ಧಾರವಾಡದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಒಟ್ಟು 111 ಪದಕಗಳ ಜೊತೆಗೆ, ಮೂರು ವಿಭಾಗಗಳ ಗುಂಪು ಸ್ಪರ್ಧೆಯಲ್ಲಿ (ಟ್ರೋಫಿ)…

Read More

ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು: ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ!

ಧಾರವಾಡ: ರಾಜ್ಯದ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ನೀತಿಯನ್ನು ಖಂಡಿಸಿ, ವಿದ್ಯಾರ್ಥಿ ಹಕ್ಕುಗಳಿಗಾಗಿ ಎಐಡಿಎಸ್ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ಜಯ ಲಭಿಸಿದ್ದು, ಅಂತಿಮವಾಗಿ ಪ್ರತಿಭಟನಾ ಕರ್ನಾಟಕ ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಾತಿಗೆ ಒಪ್ಪಿಗೆ ನೀಡಿದೆ. ರಾಜ್ಯಾದ್ಯಂತ ಕಳೆದ ಎರಡು ತಿಂಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆ ಹಾಗೂ ಸೆಪ್ಟೆಂಬರ್ 27ರ ರಾಜ್ಯವ್ಯಾಪಿ ತರಗತಿ ಬಹಿಷ್ಕಾರದ ನಂತರ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಎರಡು ತಿಂಗಳ ಹಿನ್ನಡೆ: ಪರೀಕ್ಷೆಗೆ…

Read More

ಧಾರವಾಡ:ಕುಶಲಕರ್ಮಿಗಳಿಗೆ ವಿದ್ಯುತ್‌ಚಾಲಿತ ಹೊಲಿಗೆ ಯಂತ್ರ ಸೇರಿ ಸುಧಾರಿತ ಉಪಕರಣ; ಅರ್ಜಿ ಆಹ್ವಾನ

ಧಾರವಾಡ: ಜಿಲ್ಲಾ ಪಂಚಾಯತ್‌ನ ಕೈಗಾರಿಕಾ ವಿಭಾಗವು 2025-26ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಉಚಿತವಾಗಿ ವಿವಿಧ ಸುಧಾರಿತ ಉಪಕರಣ ಸೌಲಭ್ಯಗಳನ್ನು ಒದಗಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಗ್ರಾಮೀಣ ಭಾಗದ ಕುಶಲಕರ್ಮಿಗಳ ಜೀವನ ಮಟ್ಟ ಸುಧಾರಣೆಗಾಗಿ ಈ ಯೋಜನೆ ರೂಪಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್‌ಚಾಲಿತ ಹೊಲಿಗೆ ಯಂತ್ರ, ಬಡಗಿತನ, ಗೌಂಡಿ, ಕಮ್ಮಾರಿಕೆ, ಕ್ಷೌರಿಕ ಮತ್ತು ಧೋಬಿ (ಅಗಸ) ಸುಧಾರಿತ ಉಪಕರಣಗಳನ್ನು ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ಮುಖ್ಯ ಅರ್ಹತೆಗಳು: ಹೆಚ್ಚಿನ ಮಾಹಿತಿ ಹಾಗೂ ಸ್ಪಷ್ಟನೆಗಾಗಿ ಜಿಲ್ಲಾ…

Read More

ಮಾಜಿ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಧಾರವಾಡ: ಸಪ್ತಾಪುರ ವಿವೇಕಾನಂದ ಸರ್ಕಲ್ ಬಳಿ ಇರುವ ಸೈನಿಕ ಮೆಸ್ ಮಾಲೀಕ, ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಎಎಸ್‌ಐ, ಕಾನ್‌ಸ್ಟೆಬಲ್ ಅಮಾನತುಹಲ್ಲೆ ನಡೆಸಿದ್ದ ಆರೋಪಕ್ಕೆ ಗುರಿಯಾಗಿರುವ ಎಎಸ್‌ಐ ವಿದ್ಯಾನಂದ ಸುಬೇದಾರ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ರಾಜಪ್ಪ ಕಣಬೂರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಪೊಲೀಸ್ ಆಯುಕ್ತರ ಈ ನಿರ್ಧಾರಕ್ಕೆ ಸಾರ್ವಜನಿಕ…

Read More