ಗಾಂಧೀಜಿ, ಶಾಸ್ತ್ರೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ: ಬಸವಪ್ರಭು ಹೊಸಕೇರಿ
ಕವಿಸಂನಲ್ಲಿ ರಾಷ್ಟ್ರಪಿತ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ ಧಾರವಾಡ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಮಹಾನ್ ಮಾನವತಾವಾದಿಗಳು. ಅವರ ಸ್ಮರಣೆ ಪುಣ್ಯದ ಕಾರ್ಯ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ (ಕವಿಸಂ) ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಹೇಳಿದರು. ಕವಿಸಂನಲ್ಲಿ ಗುರುವಾರ (ಅ.೨) ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಾಂಧೀಜಿಯವರ ಚಿಂತನೆಗಳನ್ನು ಯುವಜನತೆಯಲ್ಲಿ ಬಿಂಬಿಸಲು ಕವಿಸಂ ವತಿಯಿಂದ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಭವಿಷ್ಯದಲ್ಲಿ…

