ಕುಂದಗೋಳ:ಬೆಳೆಸಾಲ ವಸೂಲಿಗೆ ಕಿರುಕುಳ: ಕರ್ನಾಟಕ ಬ್ಯಾಂಕ್ ಎದುರು ರೈತರ ಆಕ್ರೋಶದ ಪ್ರತಿಭಟನೆ!

ಕುಂದಗೋಳ: ರೈತರಿಗೆ ನೀಡಿರುವ ಬೆಳೆಸಾಲದ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಿ, ಬಡ್ಡಿ ಸಮೇತ ಅಸಲು ತುಂಬಲು ಕೋರ್ಟ್‌ ಮೂಲಕ ನೋಟಿಸ್ ನೀಡಿ ಮಾನಸಿಕವಾಗಿ ಹಿಂಸಿಸಲಾಗುತ್ತಿದೆ ಎಂದು ಆಪಾದಿಸಿ, ರತ್ನಭಾರತ ರೈತ ಸಮಾಜ ಸಂಘಟನೆಯ ನೇತೃತ್ವದಲ್ಲಿ ರೈತರು ಇಲ್ಲಿನ ಕರ್ನಾಟಕ ಬ್ಯಾಂಕಿನ ಎದುರು ಸೋಮವಾರ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಾಲದ ಮೊತ್ತ 3 ಪಟ್ಟು ಏರಿಕೆ, ಕೋರ್ಟ್‌ ನೋಟಿಸ್!ಬೆಳಿಗ್ಗೆ ಗಾಳಿಮರೆಮ್ಮ ದೇವಸ್ಥಾನದಿಂದ ಆಗಮಿಸಿದ ರೈತರು, ಕರ್ನಾಟಕ ಬ್ಯಾಂಕ್‌ನ ರೈತ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದರು. ರೈತ…

Read More

ಕುಂದಗೋಳ ಕ್ಷೇತ್ರಕ್ಕೆ ಕೋಟ್ಯಂತರ ಅನುದಾನ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ; ಗುರುವಿನಹಳ್ಳಿ ನೂತನ ಗ್ರಾ.ಪಂ. ಕಟ್ಟಡ ಸೇರಿದಂತೆ ಹಲವು ಕಾಮಗಾರಿ ಉದ್ಘಾಟನೆ

*ಕುಂದಗೋಳ : (ಗುರುವಿನಹಳ್ಳಿ): ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕುಂದಗೋಳ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದ್ದು, ರಸ್ತೆ, ಕುಡಿಯುವ ನೀರು, ಶಿಕ್ಷಣ ಮತ್ತು ರೈಲ್ವೆ ಸೇರಿದಂತೆ ಮೂಲಸೌಕರ್ಯ ವಲಯಕ್ಕೆ ಸಾವಿರಾರು ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಅವರು ಸೋಮವಾರದಂದು ತಾಲ್ಲೂಕಿನ ಗುರುವಿನಹಳ್ಳಿ ಗ್ರಾಮದಲ್ಲಿ ಎಂಜಿಎನ್‌ಆರ್‌ಜಿ ಯೋಜನೆಯ ರಾಜೀವ ಗಾಂಧಿ ಸೇವಾಕೇಂದ್ರ, 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ನಿರ್ಮಿಸಲಾದ ಭೋಜನಾಲಯ, ಎನ್‌ಆರ್‌ಎನ್‌ಎಂ ಕಟ್ಟಡ,…

Read More

ರೇಬಿಸ್ ನಿಯಂತ್ರಣಕ್ಕೆ ಲಸಿಕೆಯೇ ಅಸ್ತ್ರ: ಸಾಕು ಪ್ರಾಣಿಗಳಿಗೆ ಒಂದು ತಿಂಗಳು ಉಚಿತ ಲಸಿಕೆ; ಧಾರವಾಡದಲ್ಲಿ ತಾಂತ್ರಿಕ ಕಾರ್ಯಾಗಾರ

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಸಮೀಕ್ಷೆಗೆ ಆ್ಯಪ್ ಬಳಿಸಿ; ಸಮೀಕ್ಷೆದಾರರಿಗೆ ಕಾಯದೆ, ಸ್ವಯಂ ಭಾಗವಹಿಸಿ, ಮಾಹಿತಿ ಭರ್ತಿ ಮಾಡಿ. ಧಾರವಾಡ ಸೆ.29: ಈಗಾಗಲೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಜಾರಿಯಲ್ಲಿದ್ದು, ಸಾರ್ವಜನಿಕರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆದಾರರನ್ನು ಕಾಯಬೇಕಾಗಿಲ್ಲ. ಆನ್‍ಲೈನ್‍ನಲ್ಲಿ ಸುಲಭ ವಿಧಾನದಲ್ಲಿ ಸ್ವತಃ ನಿಮ್ಮ ಮೊಬೈಲ್‍ನಲ್ಲಿ ಅರ್ಜಿ ಭರ್ತಿ ಮಾಡಬಹುದು.ಸಾರ್ವಜನಿಕರು https://kscbcselfdeclaratioin.karnataka.gov.in ವೆಬ್‍ಸೈಟಿಗೆ ಭೇಟಿ ನೀಡಿ, ನಾಗರಿಕ ಎಂದು ಆಯ್ಕೆ ಮಾಡಬೇಕು. ಮೊಬೈಲ್ ನಂಬರ್ ಹಾಕಿ ಓಟಿಪಿ ಪಡೆದು, ನಮೂದಿಸಬೇಕು. ತದನಂತರ ಹೊಸ…

Read More

ರೇಬಿಸ್ ನಿಯಂತ್ರಣಕ್ಕೆ ಲಸಿಕೆಯೇ ಅಸ್ತ್ರ: ಸಾಕು ಪ್ರಾಣಿಗಳಿಗೆ ಒಂದು ತಿಂಗಳು ಉಚಿತ ಲಸಿಕೆ; ಧಾರವಾಡದಲ್ಲಿ ತಾಂತ್ರಿಕ ಕಾರ್ಯಾಗಾರ

ಧಾರವಾಡ: ರೇಬಿಸ್ ಒಂದು ಗಂಭೀರ ಪ್ರಾಣಿಜನ್ಯ ರೋಗವಾಗಿದ್ದು, ಪ್ರಾಣಿ ಕಡಿತದ ನಂತರ ಲಸಿಕೆಯನ್ನು ಸರಿಯಾಗಿ ತೆಗೆದುಕೊಳ್ಳುವುದರಿಂದ ಮನುಷ್ಯರಲ್ಲಿ ಈ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ. ಎಸ್.ಎಂ. ಹೊನಕೇರಿ ತಿಳಿಸಿದರು. ವಿಶ್ವ ರೇಬಿಸ್ ದಿನಾಚರಣೆಯ ಪ್ರಯುಕ್ತ ಇಂದು (ಸೆ.29) ಧಾರವಾಡ ಪಶು ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಆರೋಗ್ಯಕ್ಕಾಗಿ ರೇಬಿಸ್ ನಿಯಂತ್ರಣ ಕುರಿತ ತಾಂತ್ರಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ರೋಗ ನಿಯಂತ್ರಣಕ್ಕಾಗಿ ಕಾರ್ಯಸಾಧಕ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು…

Read More

“ಆರೋಗ್ಯವೇ ಅಮೂಲ್ಯ ರತ್ನ; ಸ್ವಚ್ಛತೆಯೇ ಅದರ ಕವಚ”: ಸ್ವಚ್ಛತೆ ಕೊರತೆಯಿಂದ ಮಹಿಳೆಯರಲ್ಲಿ ಕ್ಯಾನ್ಸರ್; ಡಾ. ಜಮೀರಾ ಎಚ್ಚರಿಕೆ

ಧಾರವಾಡ: ಮಹಿಳೆಯರು ಆರೋಗ್ಯವಾಗಿರಲು ಸ್ವಚ್ಛತೆ ಅತಿ ಮುಖ್ಯ. ವಿಶೇಷವಾಗಿ ಮಾಸಿಕ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಜಾಗೃತಿ ಅನಿವಾರ್ಯವಾಗಿದ್ದು, ಅಶುದ್ಧತೆಯಿಂದಾಗಿ ಕ್ಯಾನ್ಸರ್‌ನಂತಹ ಗಂಭೀರ ರೋಗಗಳಿಗೆ ಬಲಿಯಾಗುವುದನ್ನು ತಡೆಯಬೇಕಿದೆ ಎಂದು ಸ್ತ್ರೀರೋಗ ತಜ್ಞೆ ಡಾ. ಜಮೀರಾ ಅವರು ಕಳವಳ ವ್ಯಕ್ತಪಡಿಸಿದರು. ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಮಹಿಳಾ ಸಬಲೀಕರಣ ಕೋಶ, ಎನ್ಎಸ್ಎಸ್ ಘಟಕ ಮತ್ತು ಟ್ರೂ ಲೈಫ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಆರೋಗ್ಯ ಮತ್ತು ಸ್ವಚ್ಛತೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಆರೋಗ್ಯವೇ ಅಮೂಲ್ಯ ರತ್ನ ಮತ್ತು ಸ್ವಚ್ಛತೆಯೇ…

Read More

ಹಫ್ತಾ ಕೊಡದ್ದಕ್ಕೆ ಮಾಜಿ ಸೈನಿಕನ ಮೇಲೆ ಪೊಲೀಸರ ದಾಳಿ: ಧಾರವಾಡದಲ್ಲಿ ಹಿಗ್ಗಾಮುಗ್ಗಾ ಥಳಿತ!

ಧಾರವಾಡ: ಹಫ್ತಾ (ಕಪ್ಪ) ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ನಿವೃತ್ತ ಯೋಧನೊಬ್ಬರ ಮೇಲೆ ಪೊಲೀಸರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಭಯಾನಕ ಘಟನೆ ಧಾರವಾಡದ ಸಪ್ತಾಪುರದಲ್ಲಿ ನಡೆದಿದೆ. ಸೈನಿಕ್ ಮೆಸ್‌ ನಡೆಸುತ್ತಿದ್ದ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಅವರ ಮೇಲೆ ಉಪನಗರ ಠಾಣೆಯ ಪೊಲೀಸರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡದ ಸಪ್ತಾಪುರದಲ್ಲಿ ವಾಸವಿರುವ ರಾಮಪ್ಪ ನಿಪ್ಪಾಣಿ ಅವರೇ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಮಾಜಿ ಸೈನಿಕರಾಗಿದ್ದಾರೆ. ಸೇನೆಯಿಂದ ನಿವೃತ್ತರಾದ…

Read More

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ವಿಶೇಷ ಕಾರ್ಯಾಗಾರ: ಧಾರವಾಡದಲ್ಲಿ 5 ಸಾವಿರ ವಿದ್ಯಾರ್ಥಿಗಳು ಭಾಗಿ

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಧಾರವಾಡದಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ನಗರದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ನಡೆದ ಈ ಮಹತ್ವದ ಸಂವಾದದಲ್ಲಿ ಸುಮಾರು 5,000ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಪಾಲ್ಗೊಂಡು ಮಾರ್ಗದರ್ಶನ ಪಡೆದರು. ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ವಿದ್ಯಾರ್ಥಿಗಳು ತಮ್ಮ ಮುಂದೆ ಒದಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. “ಪ್ರಾಮಾಣಿಕ ಮತ್ತು ನಿರಂತರ ಪರಿಶ್ರಮದಿಂದ ಯಾವುದೇ ಗುರಿಯನ್ನು ಸಾಧಿಸಲು…

Read More

ಭಕ್ತರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಡಿಪೋ ಮ್ಯಾನೇಜರ್‌ಗಳಿಗೆ ಮನವಿ: ಸತೀಶ್ ಕೊಬ್ಬಯ್ಯನವರ ಭರವಸೆ

ಕುಂದಗೋಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ನೂತನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಸತೀಶ್ ಕೊಬ್ಬಯ್ಯನವರ ಅವರು ಭಾನುವಾರ ತಾಲೂಕಿನ ಗುಡಗೇರಿ ಗ್ರಾಮದ ಶ್ರೀ ದ್ಯಾಮವ್ವ ದೇವಿಯ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ದೇವಿಯ ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಸತೀಶ್ ಕೊಬ್ಬಯ್ಯನವರ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದಿನನಿತ್ಯ ಲಕ್ಷಾಂತರ ಮಹಿಳೆಯರು ಇದರ…

Read More

ಬೆಂಬಲ ಬೆಲೆಗೆ ಹೆಸರು, ಉದ್ದು ಖರೀದಿಗೆ ಜಿಲ್ಲೆಯಲ್ಲಿ ಕೇಂದ್ರ ಆರಂಭ: ಡಿಸಿ ದಿವ್ಯ ಪ್ರಭು ಮನವಿ

ಧಾರವಾಡ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ (MSP) 2025-26ನೇ ಸಾಲಿನಲ್ಲಿ ಹೆಸರು ಕಾಳು ಮತ್ತು ಉದ್ದಿನ ಕಾಳು ಖರೀದಿಗೆ ಜಿಲ್ಲೆಯಾದ್ಯಂತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಧಾರವಾಡ ಜಿಲ್ಲೆಯ ರೈತರಿಗೆ ಮಾತ್ರ ಈ ಯೋಜನೆಯಡಿ ತಮ್ಮ ಎಫ್.ಎ.ಕ್ಯೂ. (FAQ) ಗುಣಮಟ್ಟದ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿದೆ. ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್‌ಗೆ ಬೆಂಬಲ ಬೆಲೆ ವಿವರಸರ್ಕಾರವು ಹೆಸರು…

Read More

ನವಲಗುಂದ: ಮಳೆಯ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿವು; ರೈತರಲ್ಲಿ ಆತಂಕ

ನವಲಗುಂದ: ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಣ್ಣಿಹಳ್ಳ, ತುಪ್ಪರಿಹಳ್ಳ, ಮತ್ತು ಗದ್ಯಾಳ ಹಳ್ಳಗಳು ತುಂಬಿ ಉಕ್ಕಿ ಹರಿಯುತ್ತಿವೆ. ಈ ಜಲಪ್ರಳಯದ ಪರಿಣಾಮವಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಶುಕ್ರವಾರ ಬೆಳಿಗ್ಗೆ ತಾಲ್ಲೂಕಿನ ಕೆಲ ಹಳ್ಳಿಗಳ ಸಂಪರ್ಕ ಕಡಿತಗೊಂಡಿತ್ತು ಎಂದು ವರದಿಯಾಗಿದೆ. ಸತತ ಮಳೆಯಿಂದಾಗಿ ಹಳ್ಳಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದು ರೈತರಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ರೈತರಿಗೆ ತಹಶೀಲ್ದಾರರಿಂದ ಎಚ್ಚರಿಕೆತುಂಬಿ ಹರಿಯುತ್ತಿರುವ ಹಳ್ಳಗಳ ಹಿನ್ನೆಲೆಯಲ್ಲಿ, ನವಲಗುಂದ ತಹಶೀಲ್ದಾರ ಸುಧೀರ ಸಾಹುಕಾರ ಅವರು…

Read More