50 ವರ್ಷಗಳ ಪಕ್ಷದ ಸೇವೆ, ಜೈನ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಕಾಂಗ್ರೆಸ್ ಮುಂಖಡ ವಿಜಯಗೌಡ ಪಾಟೀಲ ಅವರಿಂದ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನವಲಗುಂದ: ಕಾಂಗ್ರೆಸ್ ಪಕ್ಷದಲ್ಲಿ ಕಳೆದ 50 ವರ್ಷಗಳಿಂದ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸುತ್ತಾ, ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಮುಖಂಡ ವಿಜಯಗೌಡ ಪಾಟೀಲ ಅವರಿಗೆ ಸರ್ಕಾರವು ನೇಮಕ ಮಾಡುವ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ, ನವಲಗುಂದಕ್ಕೆ ಭೇಟಿ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರಿಗೆ ಇಂದು ಆಗ್ರಹಿಸಲಾಯಿತು. ನಿರಂತರ ಸೇವೆಯನ್ನು ಗುರುತಿಸಲು ಮನವಿ:ವಿಜಯಗೌಡ ಪಾಟೀಲ ಅವರು 1972 ರಲ್ಲಿಯೇ ತಾಲ್ಲೂಕಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ…

Read More

ಕೆರೆ ನೀರು ಕಲುಷಿತ: ಗ್ರಾಮ ಪಂಚಾಯತಿ ಮುಂಭಾಗ ಹೆಬ್ಬಾಳ ಗ್ರಾಮಸ್ಥರ ಪ್ರತಿಭಟನೆ ಶುದ್ಧ ನೀರು ಪೂರೈಕೆಗೆ ಆಗ್ರಹಿಸಿ ಕೆರೆಯಲ್ಲಿ ಇಳಿದು ಆಕ್ರೋಶ

ನವಲಗುಂದ: ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೆರೆಯಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಗುರುವಾರ ಕೆರೆಯಲ್ಲಿ ಇಳಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಕಲುಷಿತ ನೀರನ್ನು ಕೂಡಲೇ ಹೊರಹಾಕಿ, ಕೆರೆಗೆ ಹೊಸದಾಗಿ ಶುದ್ಧ ನೀರು ತುಂಬಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂಬಾಗ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದ ಕೆರೆಗೆ ಈ ಹಿಂದೆ ಮಲಪ್ರಭಾ ಕಾಲುವೆಯಿಂದ ನೀರು ತುಂಬಿಸುವ ಸಂದರ್ಭದಲ್ಲಿ, ಕೆರೆಯಲ್ಲಿ ಮೊದಲೇ ಇದ್ದ ಕಲುಷಿತ ನೀರನ್ನು ಹೊರಹಾಕದ ಕಾರಣ, ಪ್ರಸ್ತುತ ಕೆರೆಯ…

Read More

ಸಿರಸಂಗಿ ಲಿಂಗರಾಜರ ಸಮಾಧಿ, ವಾಡೆ ಅಭಿವೃದ್ಧಿಗೆ ಸಚಿವ ಎಂ.ಬಿ. ಪಾಟೀಲ್‌ ಭರವಸೆ

ನವಲಗುಂದ: ತಮ್ಮ ಇಡೀ ಜೀವನವನ್ನೇ ಸಮಾಜಕ್ಕಾಗಿ ಮುಡುಪಾಗಿಟ್ಟು, ತಮ್ಮ ಆಸ್ತಿಗಳನ್ನೆಲ್ಲ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಮೀಸಲಿಟ್ಟ ತ್ಯಾಗವೀರ ಸಿರಸಂಗಿ ಲಿಂಗರಾಜರ ಸಮಾಧಿ ಸ್ಥಳ ಹಾಗೂ ಅವರು ವಾಸಿಸುತ್ತಿದ್ದ ವಾಡೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್‌ ಅವರು ಘೋಷಿಸಿದರು. ಪಟ್ಟಣದ ಥಡಿಮಠದಲ್ಲಿರುವ ತ್ಯಾಗವೀರ ಲಿಂಗರಾಜರ ಸಮಾಧಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಸಮಾಜ ಬಾಂಧವರನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದ ರಾಜಕಾರಣದಲ್ಲಿ ನೈತಿಕತೆಯಿಂದ ಬದುಕಿದ ಮಾಜಿ ಮುಖ್ಯಮಂತ್ರಿ ಎಸ್.ಆರ್….

Read More

ವಿದ್ಯೆ ವ್ಯಕ್ತಿತ್ವ ರೂಪಿಸಬೇಕು, ಸ್ವಾವಲಂಬಿ ಬದುಕಿಗೆ ದಾರಿಯಾಗಬೇಕು: ಲೀಲಾವತಿ ಆರ್. ಪ್ರಸಾದ

ಧಾರವಾಡ: ವಿದ್ಯೆಯು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಪ್ರಬಲ ಸಾಧನವಾಗಬೇಕು ಹಾಗೂ ಸ್ವಾವಲಂಬಿ ಬದುಕಿಗೆ ದಾರಿದೀಪವಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಸಚಿವೆ ಲೀಲಾವತಿ ಆರ್. ಪ್ರಸಾದ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ವಿದ್ಯಾವರ್ಧಕ ಸಂಘವು (ಕ.ವಿ.ವ. ಸಂಘ) ಆಯೋಜಿಸಿದ್ದ ಶ್ರೀಮತಿ ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ ದತ್ತಿ ಸಮಾರಂಭದಲ್ಲಿ ‘ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ-೨೦೨೫’ ಪ್ರದಾನ ಮಾಡಿ ಮಾತನಾಡಿದರು. ಮಹಿಳೆಯರಿಗೆ ರಕ್ಷಣೆ ಇಲ್ಲದಿರುವುದು ನಾಗರಿಕ ಸಮಾಜಕ್ಕೆ ಕಪ್ಪು ಚುಕ್ಕೆಇಂದಿನ ಸಂಧಿಗ್ದ ಪರಿಸ್ಥಿತಿಯಲ್ಲಿ ಮಹಿಳೆಯರಿಗೆ ಶಿಕ್ಷಣದ ಜೊತೆಗೆ…

Read More

ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಉದ್ಯೋಗ: ಅಕ್ಟೋಬರ್ 9 ರಂದು ಸಂದರ್ಶನ

ಧಾರವಾಡ: ಕೃಷಿ ಪದವಿ ಪಡೆದವರಿಗೆ ಇಲ್ಲಿದೆ ಸುವರ್ಣಾವಕಾಶ. ಧಾರವಾಡದ ಕೃಷಿ ಮಹಾವಿದ್ಯಾಲಯದ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ಖಾಲಿ ಇರುವ ವಿವಿಧ ತಾತ್ಕಾಲಿಕ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗಾಗಿ ಅಕ್ಟೋಬರ್ 09, 2025 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಂದು ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಆಸಕ್ತರು ತಮ್ಮ ಅರ್ಜಿ…

Read More

ನ್ಯಾಯದಾನದಲ್ಲಿ ಮಧ್ಯಸ್ಥಿಕೆ ಪ್ರಮುಖ ಪಾತ್ರ: ಜಿಲ್ಲಾ ನ್ಯಾಯಾಧೀಶೆ ಬಿ.ಎಸ್. ಭಾರತಿ

ಧಾರವಾಡ: ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದ ಕಾನೂನು ಸೇವಾ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಧಾರವಾಡ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಧಾರವಾಡ ಮತ್ತು ಗದಗ ಜಿಲ್ಲೆಯ ಮಧ್ಯಸ್ಥಿಕೆಗಾರರಿಗಾಗಿ 02 ದಿನಗಳ ಪುನಶ್ಚೇತನ ಕಾರ್ಯಾಗಾರವನ್ನು ಸೆಪ್ಟೆಂಬರ್ 27, 2025 ರಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಾಗಾರ ಉದ್ಘಾಟನೆ:ಕಾರ್ಯಾಗಾರದ ಉದ್ಘಾಟನೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು…

Read More

ಕ.ವಿ.ವ. ಸಂಘದಿಂದ 124ನೇ ಸರ್ವಸದಸ್ಯರ ವಾರ್ಷಿಕ ಸಭೆ ಕರೆ

ಧಾರವಾಡ:ಇಲ್ಲಿನ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘವು (ಕ.ವಿ.ವ. ಸಂಘ) ತನ್ನ ೧೨೪ನೇ ಸರ್ವಸದಸ್ಯರ ವಾರ್ಷಿಕ ಸಭೆಯನ್ನು ಆಯೋಜಿಸಿದೆ. ಸಭೆಯನ್ನು ನಾಳೆ ಸೆ 28 ರಂದು, ಭಾನುವಾರ, ಮುಂಜಾನೆ 11:00 ಗಂಟೆಗೆ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಕರೆಯಲಾಗಿದೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶಂಕರ ಹಲಗತ್ತಿ ಅವರು, ಸಂಘದ ಎಲ್ಲಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಿ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಸಂಶಿ ಕೆಎಲ್‌ಇ ಕಾಲೇಜಿನ ಯೋಗ ಪ್ರತಿಭೆಗಳು ರಾಜ್ಯ ಮಟ್ಟಕ್ಕೆ: ಗುರಯ್ಯ, ಪ್ರಜ್ವಲ್‌ಗೆ ಪ್ರಥಮ ಸ್ಥಾನ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಗುರಯ್ಯ ಹಿರೇಮಠ ಮತ್ತು ಪ್ರಜ್ವಲ್ ಸೂರಣಗಿ ಅವರು ತಾಳಾತ್ಮಕ ಯೋಗಾಸನ ಜೋಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅದೇ ರೀತಿ, ಗುರಯ್ಯ ಹಿರೇಮಠ ಅವರು ಕಲಾತ್ಮಕ ಯೋಗಾಸನ ವೈಯಕ್ತಿಕ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಪಡೆದು, ವೈಯಕ್ತಿಕ ವೀರಾಗ್ರಣಿ…

Read More

ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ವಯಸ್ಕರ ಸಾಕ್ಷರತಾ ಕಾರ್ಯಕ್ರಮಕ್ಕೆ ಗಣ್ಯರಿಂದ ಶ್ಲಾಘನೆ

ಕುಂದಗೋಳ: ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 5 ವರ್ಷಗಳ ಅವಧಿಯ 15 ವರ್ಷ ಮೇಲ್ಪಟ್ಟ ವಯಸ್ಕರಿಗೆ ರಾಜ್ಯ ಸರ್ಕಾರವು ಶಿಕ್ಷಣ ಕಲಿಕೆಗೆ ದಿಟ್ಟ ಹೆಜ್ಜೆ ಇಟ್ಟು ಸಾಕ್ಷರತೆಗೊಳಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಸಂಶಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಗಿರೀಶಗೌಡ್ರ ಪಾಟೀಲ ಅವರು ಅಭಿಪ್ರಾಯಪಟ್ಟರು. ಅವರು ಶನಿವಾರದಂದು ತಾಲೂಕಿನ ಸಂಶಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಂಶಿ ಗ್ರಾ.ಪಂ. ಜಂಟಿ ಆಶ್ರಯದಲ್ಲಿ ನಡೆದ “ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ, ಸಾಕ್ಷರತಾ ಸಪ್ತಾಹ”…

Read More

ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರ: ಡಿಸಿ ದಿವ್ಯ ಪ್ರಭು

ಧಾರವಾಡ: ಪರಿಶಿಷ್ಟ ಜಾತಿ ಉಪಯೋಜನೆ (SCSP) ಮತ್ತು ಬುಡಕಟ್ಟು ಉಪಯೋಜನೆ (TSP) ಅಡಿಯಲ್ಲಿ ಬಿಡುಗಡೆಯಾಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು ಶೇ. 100ರಷ್ಟು ಗುರಿ ಸಾಧಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾಗಿರುವ ಅನುದಾನ ಲ್ಯಾಪ್ಸ್‌ ಆಗದಂತೆ ಎಲ್ಲ ಇಲಾಖಾ ಮುಖ್ಯಸ್ಥರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ನಿನ್ನೆ (ಸೆ. 25) ಸಂಜೆ 2025-26ನೇ ಸಾಲಿನ ಆಗಸ್ಟ್ ಮಾಹೆಯ ಅಂತ್ಯದವರೆಗಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ…

Read More