ಜಾತಿಗಣತಿ ನಿರ್ಲಕ್ಷ್ಯಿಸಿದರೆ ಶಿಸ್ತುಕ್ರಮ: ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ

ಧಾರವಾಡ: ಸಾರ್ವಜನಿಕ ಅಭಿವೃದ್ಧಿ ಹಿತಾಸಕ್ತಿಯಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ಕಾರ್ಯಕ್ಕೆ ನಿಯೋಜಿತರಾಗಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು. ನಿರ್ಲಕ್ಷ್ಯ, ನೆಪ ಅಥವಾ ಉದಾಸೀನತೆ ತೋರುವವರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಜಿಲ್ಲಾಧಿಕಾರಿ (ಡಿಸಿ) ಮತ್ತು ಸಮೀಕ್ಷೆಯ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷೆ ದಿವ್ಯ ಪ್ರಭು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು (ಸೆ. 26) ಮಧ್ಯಾಹ್ನ…

Read More

ಧಾರವಾಡ ಗರಗ ಬೈಪಾಸ್‌ ರಸ್ತೆಯಲ್ಲಿ ಭೀಕರ ಅಪಘಾತ: ಎರಡು ಲಾರಿ ಡಿಕ್ಕಿ, ನಾಲ್ವರಿಗೆ ಗಾಯ

ಧಾರವಾಡ :ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿದ್ದಾರೆ. ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಲಾರಿಗೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಲಾರಿ ತೀವ್ರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಲಾರಿಗಳ ಮುಂಭಾಗ ನುಜ್ಜುಗುಜ್ಜಾಗಿದ್ದು, ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಒಂದು ಲಾರಿಯ ಚಾಲಕ ತೀವ್ರವಾಗಿ ಜಖಂಗೊಂಡಿರುವ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ. ಸ್ಥಳೀಯರ ಮತ್ತು ಪೊಲೀಸರ ಸಹಕಾರದಿಂದ ಆತನನ್ನು ಹೊರತೆಗೆದು, ಉಳಿದ ಗಾಯಾಳುಗಳೊಂದಿಗೆ…

Read More

ಕೆಪಿಸಿಸಿಗೆ ನಿವೇಶನ ದಾನ: ಕುಂದಗೋಳದಲ್ಲಿ ಚಂದ್ರಶೇಖರ ಜುಟ್ಟಲರಿಂದ ಶ್ಲಾಘನೀಯ ಕಾರ್ಯ

ಕುಂದಗೋಳ: ಇಂದಿನ ದಿನಮಾನದಲ್ಲಿ ಒಂದು ರೂಪಾಯಿ ಖರ್ಚು ಮಾಡುವ ಮುನ್ನ ಹಿಂದೆ ಮುಂದೆ ನೋಡುವ ಸನ್ನಿವೇಶದಲ್ಲಿ, ಮಾಜಿ ಶಾಸಕ ದಿ. ಗೋವಿಂದಪ್ಪ ಜುಟ್ಟಲ ಅವರ ಪುತ್ರ ಹಾಗೂ ಕೆಪಿಸಿಸಿ ಸದಸ್ಯ ಚಂದ್ರಶೇಖರ ಜುಟ್ಟಲ ಅವರು ಪಕ್ಷದ ನಿಷ್ಠೆ ಮತ್ತು ನಾಯಕರ ಮೇಲಿನ ಗೌರವವನ್ನು ಅನಾವರಣಗೊಳಿಸಿದ್ದಾರೆ. ತಮ್ಮ ತಂದೆಯವರ ಸ್ಮರಣಾರ್ಥ ಪಟ್ಟಣದಲ್ಲಿರುವ, ಲಕ್ಷಾಂತರ ರೂ. ಬೆಲೆ ಬಾಳುವ ಎರಡು ಗುಂಟೆ ನಿವೇಶನವನ್ನು ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ದಾನವಾಗಿ ನೀಡಿದ್ದಾರೆ. ಈ ಮೂಲಕ ಪಕ್ಷಕ್ಕಾಗಿ ಆಸ್ತಿ…

Read More

“ಅನ್ಯ ಸಮುದಾಯ ದವರನ್ನು ಎಸ್ ಟಿ ಸಮುದಾಯಕ್ಕೆ ಸೇರಿದರೆ ರಾಜನಹಳ್ಳಿ ಗುರುಗಳ ಸಮ್ಮುಖದಲ್ಲಿ ಹೊರಾಟ ಶತಸಿದ್ದ. ಎಸ್ ಟಿ ಸಮಾಜದ ತಾ ಅಧ್ಯಕ್ಷ ರಾಜು ದೊಡ್ಡಶಂಕರ

ಕುಂದಗೋಳ/ಧಾರವಾಡ: ಪರಿಶಿಷ್ಟ ಪಂಗಡದ (ST) ಪಟ್ಟಿಗೆ ಕುರುಬ ಹಾಗೂ ಇತರೆ ಸಮಾಜವನ್ನು ಸೇರಿಸಲು ಹುನ್ನಾರ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರ ಮತ್ತು ನಕಲಿ ಜಾತಿ ಪ್ರಮಾಣ ಪತ್ರವನ್ನು ನೀಡುತ್ತಿರುವದನ್ನು ಖಂಡಿಸಿ ಅಖೀಲ, ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಮತ್ತು ವಾಲ್ಮೀಕಿ ಸಮಾಜದ ಮುಖಂಡರು ಗುರುವಾರ ಕುಂದಗೋಳದಲ್ಲಿ ಪ್ರಬಲ ಪ್ರತಿಭಟನೆ ನಡೆಸಿದರು. ಪಟ್ಟಣದ ಗಾಳಿ ಮರೇಮ್ಮ ದೇವಸ್ಥಾನದಿಂದ ತಹಶಿಲ್ದಾರ್ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಇತರೆ ಸಮುದಾಯಗಳ ಸೇರ್ಪಡೆಯಿಂದ ಮೂಲ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗುತ್ತದೆ ಎಂದು ದೂರಿದರು. ನಂತರ…

Read More

ಉದ್ಯೋಗಕ್ಕಾಗಿ ಧಾರವಾಡ ಸ್ತಬ್ಧ: ಭರ್ತಿ ವಿಳಂಬದ ವಿರುದ್ಧ ಆಕಾಂಕ್ಷಿಗಳ ಆಕ್ರೋಶ!

ಧಾರವಾಡ:ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿ, ನೂರಾರು ಉದ್ಯೋಗಾಕಾಂಕ್ಷಿಗಳು ಗುರುವಾರ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ‘ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ’ದ (All Karnataka State Students Association) ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಿಂದಾಗಿ ನಗರದ ಜನಜೀವನ ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತ್ತು. ನಾಲ್ಕು ಗಂಟೆ ಸಂಚಾರಕ್ಕೆ ತಡೆ, ಸಾರ್ವಜನಿಕರ ಪರದಾಟಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಶ್ರೀನಗರದಿಂದ ಪಾದಯಾತ್ರೆ ಆರಂಭಿಸಿ, ಕಾಲೇಜು ರಸ್ತೆ ಮೂಲಕ…

Read More

ಆನಂದ ಪಾಟೀಲರು ನಾಡಿನ ಸೃಜನಶೀಲ ಮಕ್ಕಳ ಸಾಹಿತಿ: ಸ.ರಾ. ಸುಳಕೂಡೆ

ಧಾರವಾಡ: ಮಕ್ಕಳಿಗಾಗಿ ವಿಶೇಷವಾಗಿ ಸಾಹಿತ್ಯ ಕೃಷಿ ಮಾಡಿರುವ ಹಿರಿಯ ಸಾಹಿತಿ ಆನಂದ ಪಾಟೀಲ ಅವರು ನಾಡಿನ ಸೃಜನಶೀಲ ಮಕ್ಕಳ ಸಾಹಿತಿ ಎಂದು ‘ಹೊಂಬೆಳಕು ಸಾಂಸ್ಕೃತಿಕ ಸಂಘ’ದ ಅಧ್ಯಕ್ಷ ಸ.ರಾ. ಸುಳಕೂಡೆ ಅವರು ಪ್ರಶಂಸಿಸಿದರು. ಬೆಂಗಳೂರಿನ ಭಾರತೀಯ ವಿದ್ಯಾ ಭವನ ಮತ್ತು ವಿನಾಯಕ ಗೋಕಾಕ ವಾಙ್ಮಯ ಟ್ರಸ್ಟ್‌ನಿಂದ 2025ನೇ ಸಾಲಿನ ಪ್ರತಿಷ್ಠಿತ ವಿ.ಕೃ. ಗೋಕಾಕ್ ಪ್ರಶಸ್ತಿ ಪುರಸ್ಕೃತರಾಗಿರುವ ಆನಂದ ಪಾಟೀಲ ಅವರನ್ನು ನಗರದ ಆಝಾದ ಉಪವನದ ಗಾಂಧೀಜಿ ಪ್ರತಿಮೆ ಆವರಣದಲ್ಲಿ ಸನ್ಮಾನಿಸಿ ಮಾತನಾಡಿದ ಸುಳಕೂಡೆ, “ಪಾಟೀಲರು ತಮ್ಮ ಮುಗ್ಧತೆ,…

Read More

ಡಾ. ಎಸ್.ಎಲ್. ಭೈರಪ್ಪ ನಿಧನಕ್ಕೆ ಕ.ವಿ.ವ. ಸಂಘದಿಂದ ತೀವ್ರ ಸಂತಾಪ

ಧಾರವಾಡ: ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಕಾದಂಬರಿಕಾರ ಹಾಗೂ ತತ್ವಜ್ಞಾನಿ ಡಾ. ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘವು ತೀವ್ರ ಸಂತಾಪ ಸೂಚಿಸಿದೆ. ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಭೈರಪ್ಪನವರು ಇಂದು ಮಧ್ಯಾಹ್ನ ನಿಧನರಾದ ಸುದ್ದಿ ತಿಳಿದು ಕನ್ನಡ ಸಾರಸ್ವತ ಲೋಕ ಕಂಬನಿ ಮಿಡಿದಿದೆ. ತಮ್ಮ ಅನನ್ಯ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಡಾ. ಭೈರಪ್ಪ ಅವರು ಅಪಾರ ಓದುಗರನ್ನು ಸೃಷ್ಟಿಸಿದ್ದರು. ‘ವಂಶವೃಕ್ಷ’, ‘ಪರ್ವ’, ‘ಆವರಣ’, ‘ಯಾನ’,…

Read More

ಕುಂದಗೋಳ: ಲಿಂಗಾಯತ ಪಂಚಮಸಾಲಿ ಸಮಾಜದಲ್ಲಿ ಕಾಶಪ್ಪನವರ್ ನಿರ್ಧಾರಕ್ಕೆ ತೀವ್ರ ವಿರೋಧ

ಕುಂದಗೋಳ: ಜಾತಿ ಗಣತಿ ಸಮೀಕ್ಷೆಯವರು ಮನೆಗೆ ಬಂದಾಗ ಧರ್ಮದ ಕಾಲಂನಲ್ಲಿ ‘ಹಿಂದೂ’ ಎಂದು ಮತ್ತು ಜಾತಿಯ ಕಾಲಂನಲ್ಲಿ ‘ಲಿಂಗಾಯತ ಪಂಚಮಸಾಲಿ’ (ಕೋಡ್: 0868) ಎಂದು ನಮೂದಿಸುವಂತೆ ಸಮಾಜದ ಬಾಂಧವರಲ್ಲಿ ಮನವಿ ಮಾಡುವುದಾಗಿ ಲಿಂಗಾಯತ ಪಂಚಮಸಾಲಿ ತಾಲ್ಲೂಕು ಸಮಾಜದ ಅಧ್ಯಕ್ಷ ನಾಗರಾಜ ದೇಶಪಾಂಡೆ ತಿಳಿಸಿದರು. ಈ ಮಾಹಿತಿಯನ್ನು ಸಮಾಜದ ಇತರರಿಗೂ ತಲುಪಿಸುವಂತೆ ಅವರು ವಿನಂತಿಸಿಕೊಂಡರು. ಪಟ್ಟಣದ ಕಲ್ಯಾಣಪುರದ ಶ್ರೀ ಬಸವಣ್ಣಜ್ಜನವರ ಮಠದ ಆವರಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಬಸವ ಮೃತ್ಯುಂಜಯ ಸ್ವಾಮೀಜಿಗಳನ್ನು ಪೀಠದಿಂದ ಉಚ್ಛಾಟನೆ ಮಾಡುವ ಯಾವುದೇ…

Read More

ಗುಡಗೇರಿಯಲ್ಲಿ ಸಿಲಿಂಡರ್ ಸ್ಪೋಟ ಮನೆಯಲ್ಲಿದ್ದ ಹಣ ಹಾಗೂ ಕೆಲ ವಸ್ತುಗಳು ಸುಟ್ಟು ಭಷ್ಮ

ಕುಂದಗೋಳ: ಒಂದು ಸಣ್ಣ ಘಟನೆ ಬದುಕು ಕಟ್ಟಿ ಬೆಳೆಸಿದ ಒಂದು ಕುಟುಂಬದ ಅಸ್ತಿತ್ವವನ್ನೇ ಪ್ರಶ್ನಿಸಿದೆ. ಗೃಹಪಯೋಗಿ ಗ್ಯಾಸ್‌ ಸಿಲಿಂಡರ್‌ ಸೋರಿಕೆಯಾಗಿ ಇಡೀ ಮನೆ ಹೊತ್ತಿ ಉರಿದಿದ್ದು, ಕಿಮ್ಮತ್ತಿನ ವಸ್ತುಗಳು ಸುಟ್ಟು ಭಸ್ಮವಾಗಿವೆ. ಈ ದುರಂತ ಘಟನೆ ಕುಂದಗೋಳ ತಾಲ್ಲೂಕಿನ ಗುಡಗೇರಿ ಗ್ರಾಮದಲ್ಲಿ ನಡೆದಿದೆ. ಏನಾಯಿತು?ಗುಡಗೇರಿ ಗ್ರಾಮದ ಮಾಬುಲಿ ಹಜರೇಸಾಬ್ ಕಣವಿ ಎಂಬುವವರ ಮನೆ, ಸೋಮವಾರ ಬೆಳಿಗ್ಗೆ ಸಂಭವಿಸಿದ ದುರಂತಕ್ಕೆ ಸಾಕ್ಷಿಯಾಗಿದೆ. ಅಡುಗೆ ಮನೆಯಲ್ಲಿ ಗೃಹಪಯೋಗಿ ಗ್ಯಾಸ್‌ ಸಿಲಿಂಡರ್‌ ಸೋರಿಕೆಯಾದ ಪರಿಣಾಮ ಭೀಕರ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿಯ…

Read More

ಕುಂದಗೋಳದಲ್ಲಿ ಪೌರಕಾರ್ಮಿಕರ ದಿನಾಚರಣೆ: ಪೌರಕಾರ್ಮಿಕರಿಂದ ರೋಗಿಗಳಿಗೆ ಹಣ್ಣು ವಿತರಣೆ

ಕುಂದಗೋಳ: ಪಟ್ಟಣ ಪಂಚಾಯತಿಯ ಪೌರಕಾರ್ಮಿಕರು ತಮ್ಮ ದಿನಾಚರಣೆಯ ಪ್ರಯುಕ್ತ ಮಂಗಳವಾರ ತಾಲ್ಲೂಕು ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಮಾನವೀಯತೆ ಮೆರೆದರು. ಪೌರಕಾರ್ಮಿಕರು ತಾವು ಕೇವಲ ಪಟ್ಟಣದ ಸ್ವಚ್ಛತೆ ಕಾಪಾಡುವವರು ಮಾತ್ರವಲ್ಲದೆ, ಸಮಾಜದ ಬಗ್ಗೆಯೂ ಕಾಳಜಿ ಹೊಂದಿದ್ದೇವೆ ಎಂಬುದನ್ನು ಈ ಮೂಲಕ ತೋರಿಸಿಕೊಟ್ಟರು. ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿ, ಹಣ್ಣು-ಹಂಪಲುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ, ಇತರ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು. ಪೌರಕಾರ್ಮಿಕರ…

Read More