ಕುಂದಗೋಳ: ಪವಾರ ಮೊಟರ್ಸ ಹಾಗೂ ವೆಂಕಟೇಶ ಮೋಟಾರ್ಸ್ ಎಂಬ ದ್ವಿಚಕ್ರ ವಾಹನ ಶೋರೂಂಗಳಿಂದ ‘ಕೋಟಿಗಟ್ಟಲೆ ವಂಚನೆ’; ತಹಸೀಲ್ದಾರ್ಗೆ ‘ಜಯ ಕರ್ನಾಟಕ’ ಮನವಿ
ಕುಂದಗೋಳ: ಪಟ್ಟಣದಲ್ಲಿರುವ ದ್ವಿಚಕ್ರ ವಾಹನ ಶೋರೂಂಗಳು ಸಾಲದ (ಫೈನಾನ್ಸ್) ಮೂಲಕ ವಾಹನ ಖರೀದಿಸುವ ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಎಸಗುತ್ತಿವೆ ಎಂದು ಆರೋಪಿಸಿ, ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್ ರಾಜು ಮಾವಕರ ಅವರಿಗೆ ಮನವಿ ಸಲ್ಲಿಸಲಾಯಿತು. ಮೊದಲಿಗೆ ಪಟ್ಟಣದ ವೆಂಕಟೇಶ ಮೋಟಾರ್ಸ್ ಹಾಗೂ ಪವಾರ ಮೋಟಾರ್ಸ್ ಶೋರೂಂಗಳ ಎದುರು ಜಮಾಯಿಸಿದ ಸಂಘಟನೆಯ ಕಾರ್ಯಕರ್ತರು,…

