ಆತ್ಮನಿರ್ಭರ ಯೋಜನೆಯಡಿ 540 ಘಟಕಗಳಿಗೆ ಸಾಲ ಮಂಜೂರು: ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾಹಿತಿ

ಧಾರವಾಡ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕಗಳ ಯೋಜನೆ (PMFME) ಜಿಲ್ಲೆಯ ರೈತರು ಹಾಗೂ ಉದ್ಯಮ ಆಕಾಂಕ್ಷಿಗಳ ಸಶಕ್ತೀಕರಣಕ್ಕೆ ವರದಾನವಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 540 ಘಟಕಗಳಿಗೆ ಸಾಲ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದರು. ​ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜರುಗಿದ ಆತ್ಮನಿರ್ಭರ ಭಾರತ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2020-21 ರಿಂದ ಜಾರಿಯಲ್ಲಿರುವ ಈ ಯೋಜನೆಯು ಸ್ವಯಂ ಉದ್ಯೋಗ ಮಾಡುವವರಿಗೆ ಅತ್ಯಂತ ಉಪಯುಕ್ತವಾಗಿದ್ದು,…

Read More

ಧಾರವಾಡ: ಕೃಷಿ ಸಮಸ್ಯೆಗಳ ಕುರಿತು ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಸಭೆ – ರಸಗೊಬ್ಬರಕ್ಕೆ ಎಫ್‌ಐಡಿ ಕಡ್ಡಾಯ

ಧಾರವಾಡ: ಜಿಲ್ಲೆಯ ರೈತರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರೈತ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು. ​ರೈತರ ಅಹವಾಲುಗಳು: ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ರೈತ ಸಂಘಟನೆಗಳ ಮುಖಂಡರು ಕಡಲೆ, ಗೋವಿನಜೋಳ, ಸೂರ್ಯಕಾಂತಿ ಹಾಗೂ ಕುಸಬೆ ಖರೀದಿ ಕೇಂದ್ರಗಳ ಆರಂಭ, ಸಕ್ಕರೆ ಕಾರ್ಖಾನೆಗಳ ಕಾರ್ಯಚಟುವಟಿಕೆ, ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಗುಣಮಟ್ಟದ ಬೀಜ-ರಸಗೊಬ್ಬರ…

Read More

​ಕೋಲ್ಕತ್ತಾದಲ್ಲಿ ಶಿರೂರ ಬಿಎಸ್‌ಎಫ್ ಯೋಧ ನಿಧನ: ನಾಳೆ ಸಂಜೆ ಶಿರೂರ ಗ್ರಾಮಕ್ಕೆ ಪಾರ್ಥಿವ ಶರೀರ ಆಗಮನದ ನಿರೀಕ್ಷೆ

​ಕುಂದಗೋಳ: ತಾಲ್ಲೂಕಿನ ಶಿರೂರ ಗ್ರಾಮದ ಹೆಮ್ಮೆಯ ಪುತ್ರ, ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧ ಸಂತೋಷ ರಾಮಪ್ಪ ಹೊನ್ನಪ್ಪನವರ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಕರ್ತವ್ಯದಲ್ಲಿದ್ದಾಗ ಬುಧವಾರ ರಾತ್ರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ​ಕಳೆದ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂತೋಷ ಅವರು, ದೇಶದ ವಿವಿಧ ಗಡಿ ಭಾಗಗಳಲ್ಲಿ ಅತ್ಯಂತ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ್ದರು. ಸದ್ಯ ಕೋಲ್ಕತ್ತಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂಬ ಸುದ್ದಿ ತಿಳಿದು ಗ್ರಾಮಸ್ಥರು ಹಾಗೂ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ. ​ಕುಟುಂಬದ…

Read More

ಕುಂದಗೋಳ : ಪಟ್ಟಣ ಪಂಚಾಯತ ಸರ್ಕಾರಿ ಕಡತ ಖಾಸಗಿ ಕೈಗೆ ! ಕುರ್ಚಿ ಟೇಬಲ್ ಮೇಲೆ ದರ್ಬಾರ್

ಕುಂದಗೋಳ : ಸರ್ಕಾರಿ ಕಚೇರಿಯಲ್ಲಿ ಯಾರ್‍ಯಾರು ಬಂದು ಅಧಿಕಾರಿಗಳಂತೆ ಜಬರ್ದಸ್ತ್ ಟೇಬಲ್ ಮೇಲೆ ಕುಳಿತು ಕೆಲಸ ಮಾಡುತ್ತಲಿದ್ದರೂ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಮತ್ತು ಮುಖ್ಯಾಧಿಕಾರಿ ಗಪ್ ಚುಪ್ ಇದ್ದಾರೆ. ಎಸ್..! ವೀಕ್ಷಕರೇ ಕುಂದಗೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೀಗೆ ಟೇಬಲ್ ಮೇಲೆ ಕುಳಿತು ಪೈಲ್ ಮೆಂಟೈನ್ ಮಾಡ್ತಾ ಇರೋ ಈ ಯುವತಿ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಹೋಗಬೇಕಾದವರು. ಇಂತಹ ವಿದ್ಯಾವಂತ ಯುವತಿಯನ್ನು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹೊರಗುತ್ತಿಗೆ ನೇಮಕವೂ ಅಲ್ಲಾ, ಯಾವುದೇ ಆದೇಶವೂ ಇಲ್ಲದೆ ಸರ್ಕಾರಿ ಕಚೇರಿ…

Read More

ಗುಡಿಸಾಗರ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಬೇಸಿಗೆ ಶಿಬಿರಕ್ಕೆ ಚಾಲನೆ

ನವಲಗುಂದ: ತಾಲ್ಲೂಕಿನ ಗುಡಿಸಾಗರದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಧಾರವಾಡದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ (SVYM) ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಲಾಯಿತು. ​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಫಕ್ಕೀರೇಶ ಪಡೆಸೂರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿದ್ದು, ಇಂತಹ ಶಿಬಿರಗಳಲ್ಲಿ ಆಯೋಜಿಸುವ ಚಟುವಟಿಕೆಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು. ಎಸ್‌ವಿವೈಎಂ ಸಂಸ್ಥೆಯು ನಮ್ಮ ಶಾಲೆಗೆ…

Read More

ಧಾರವಾಡದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಮೆರವಣಿಗೆ: ಸಚಿವ ಸಂತೋಷ ಲಾಡ್ ಚಾಲನೆ

​ಧಾರವಾಡ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಚಾಲನೆ ನೀಡಿದರು. ಮೆರವಣಿಗೆಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರೊಂದಿಗೆ ಚಾಲನೆ ನೀಡಿದ ಸಚಿವರು, ಮಹಾನ್ ಮಾನವತಾವಾದಿಯ ಸ್ಮರಣೆ ಮಾಡಿದರು. ​ವಿವಿಧ ಜಾನಪದ ಕಲಾತಂಡಗಳೊಂದಿಗೆ…

Read More

​ಧಾರವಾಡದಲ್ಲಿ ಬರ್ಬರ ಹತ್ಯೆ: ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಮನೆಗೆ ನುಗ್ಗಿ ಚಾಕು ಇರಿತ

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಭೀಕರ ರಕ್ತಪಾತ ನಡೆದಿದ್ದು, ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅತಿ ಅಮಾನುಷವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ಜಿಲ್ಲೆಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಭೀತಿ ಆವರಿಸಿದೆ. ​ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆಯು ಫೈರೋಜ್ ಪಠಾಣ್ ಅವರ ನಿವಾಸದಲ್ಲೇ ನಡೆದಿದೆ. ರಾತ್ರಿ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಫೈರೋಜ್ ಅವರ ಮೇಲೆ ಏಕಾಏಕಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ದಾಳಿ…

Read More

ಧಾರವಾಡ: ಏಪ್ರಿಲ್ 23 ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಕಾಲುಬಾಯಿ ಲಸಿಕಾ ಅಭಿಯಾನ

ಧಾರವಾಡ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ದನ ಹಾಗೂ ಎಮ್ಮೆಗಳಿಗೆ ಏಪ್ರಿಲ್ 23 ರಿಂದ ಮೇ 22 ರವರೆಗೆ ಒಂಬತ್ತನೇ ಸುತ್ತಿನ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ​ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ರೈತರ ಮನೆ ಬಾಗಿಲಿಗೆ ಬಂದು ಉಚಿತವಾಗಿ ಲಸಿಕೆ ಹಾಕಲಿದ್ದು, ಜಿಲ್ಲೆಯ…

Read More

​ಧಾರವಾಡ: ಮಿಲಿಟರಿ ಬಾಲಕಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಧಾರವಾಡ: ನಗರದ ಸಪ್ತಾಪೂರ ರಸ್ತೆಯಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕೆ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಯುದ್ಧದಲ್ಲಿ ಮಡಿದ ಯೋಧರ ಹಾಗೂ ಮಾಜಿ ಸೈನಿಕರ ಪುತ್ರಿಯರಿಂದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ​ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿನಿಯರು ಹಾಗೂ ರಾಜ್ಯದ ಇತರ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. 5ನೇ ತರಗತಿಯಿಂದ ಪಿಯುಸಿ ದ್ವಿತೀಯ…

Read More

ಧಾರವಾಡ: ಎಲ್‍ಪಿಜಿ, ಸಿಎನ್‍ಜಿ ಬಂಕ್‌ಗಳಲ್ಲಿ ದರ–ದಾಸ್ತಾನು ಮಾಹಿತಿ ಫಲಕ ಕಡ್ಡಾಯ; ಪಾರದರ್ಶಕತೆ, ಸಹಕಾರದಿಂದ ಸಮಸ್ಯೆ ಪರಿಹಾರ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ: ಏ.10: ಅನಿರೀಕ್ಷಿತ ಬೆಳವಣಿಗೆ ಹಾಗೂ ಪಾಶ್ಚಿಮಾತ್ಯ ದೇಶಗಳ ಯುದ್ಧಭೀತಿಯಿಂದ ಎಲ್‍ಪಿಜಿ, ಸಿಎನ್‍ಜಿ ಗ್ಯಾಸ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಿ, ಗ್ಯಾಸ್ ಬಳಕೆದಾರರಿಗೆ ಮತ್ತು ಬಂಕ್ ಮಾಲೀಕರಿಗೆ ಅಲ್ಪ ಮಟ್ಟಿಗೆ ತೊಂದರೆ ಕಂಡು ಬಂದಿದ್ದು, ಆಟೋ ಚಾಲಕರು ಚಿಂತಿಸದೆ, ಸಮಾಧಾನವಾಗಿ ನಿರ್ವಹಿಸಬೇಕು. ಧಾರವಾಡ ಜಿಲ್ಲೆಯಲ್ಲಿ 21 ಆಟೋ ಎಲ್‍ಪಿಜಿ ಹಾಗೂ 11 ಸಿಎನ್‍ಜಿ ಬಂಕ್‍ಗಳಿವೆ. ಹಂತ ಹಂತವಾಗಿ ದಾಸ್ತಾನು ಲಭ್ಯವಾಗುತ್ತಿದ್ದು, ವಿತರಣೆಯಲ್ಲಿ ವಿಳಂಬವಾಗುತ್ತಿದೆ. ಸ್ವಲ್ಪ ದಿನಗಳಲ್ಲಿ ಸಮಸ್ಯೆ ಪರಿಹಾರವಾಗಲಿದ್ದು, ಆಟೋ ಚಾಲಕರು ಸಾರ್ವಜನಿಕರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ನೇಹಾಲ್…

Read More