ಕಳಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸೆ 24 ರಂದು

ಕುಂದಗೋಳ : ತಾಲ್ಲೂಕಿನ ಕಳಸ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಇದರ 2024-25ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಬುಧವಾರ, ಸೆಪ್ಟೆಂಬರ್ 24, ರಂದು ಬೆಳಿಗ್ಗೆ 11:00 ಗಂಟೆಗೆ ಸಂಘದ ಕಚೇರಿಯಲ್ಲಿ ಕರೆಯಲಾಗಿದೆ. ಸಂಘದ ಅಧ್ಯಕ್ಷರಾದ ಶ್ರೀ ಸುರೇಶ ಮಹಾಂತಪ್ಪ ಕಳಸೂರ ಅವರ ಅಧ್ಯಕ್ಷತೆಯಲ್ಲಿ ಈ ಸಭೆಯು ನಡೆಯಲಿದೆ. ಸಭೆಯಲ್ಲಿ ಹಿಂದಿನ ವರ್ಷದ ಲೆಕ್ಕಪರಿಶೋಧನಾ ವರದಿ ಮತ್ತು ಮಂಡಳಿ ವರದಿಯನ್ನು ಪರಿಗಣಿಸುವುದು, ನಿವ್ವಳ ಲಾಭಗಳ ವಿಂಗಡಣೆ, ಆಯ-ವ್ಯಯಗಳಿಗೆ ಮಂಜೂರಾತಿ, ಹಾಗೂ 2025-26ನೇ…

Read More

ಗುಡಗೇರಿಯಲ್ಲಿ ವಿಜೃಂಭಣೆಯಿಂದ ನವರಾತ್ರಿ ಉತ್ಸವ

ಕುಂದಗೋಳ: ತಾಲ್ಲೂಕಿನ ಗುಡಗೇರಿ ಗ್ರಾಮದ ಪ್ರಸಿದ್ಧ ಶ್ರೀ ದ್ಯಾಮವ್ವಾ ದೇವಿಯ ನವರಾತ್ರಿ ಉತ್ಸವವು ನಾಳೆ (ಸೆಪ್ಟೆಂಬರ್ ೨೨) ದಿಂದ ಅಕ್ಟೋಬರ್ ೨ ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಇಂದು ಘಟಸ್ಥಾಪನೆಯೊಂದಿಗೆ ಆರಂಭವಾಗಲಿರುವ ನವರಾತ್ರಿ ಹಬ್ಬ, ಅಕ್ಟೋಬರ್ ೨ ರಂದು ವಿಜಯದಶಮಿ ಪ್ರಯುಕ್ತ ಬನ್ನಿ ಮುಡಿಯುವ ಮೂಲಕ ಸಂಪನ್ನಗೊಳ್ಳಲಿದೆ ಎಂದು ದೇವಸ್ಥಾನದ ಟ್ರಸ್ಟ್ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಕೋರಿದೆ.

Read More

ಮಹರ್ಷಿ ಅರವಿಂದರು ಪೂರ್ಣಯೋಗ ಮಾರ್ಗದ ಪ್ರವರ್ತಕ: ಡಾ. ಅರವಿಂದ ಯಾಳಗಿ

ಧಾರವಾಡ: ಮಹರ್ಷಿ ಶ್ರೀ ಅರವಿಂದರು ಜಗತ್ತಿಗೆ ಪೂರ್ಣಯೋಗ ಮಾರ್ಗವನ್ನು ಪರಿಚಯಿಸಿದ ಮಹಾಯೋಗಿಯಾಗಿದ್ದಾರೆ ಎಂದು ಗೋವಾದ ಇಂಡೋ-ಪೋರ್ಚುಗೀಸ್ ಸಾಹಿತ್ಯ ಪ್ರತಿಷ್ಠಾನದ ನಿರ್ದೇಶಕರಾದ ಡಾ. ಅರವಿಂದ ಯಾಳಗಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯಾವರ್ಧಕ ಸಂಘವು, ಶ್ರೀ ಗುರಪ್ಪನವರು ಮತ್ತು ಶ್ರೀಮತಿ ಗೌರಮ್ಮ ಬೆಲ್ಲದ ದತ್ತಿ ಅಂಗವಾಗಿ ಆಯೋಜಿಸಿದ್ದ ‘ಮಹರ್ಷಿ ಶ್ರೀ ಅರವಿಂದರ ತತ್ವದರ್ಶನ’ ಕುರಿತು ಉಪನ್ಯಾಸ ನೀಡಿದ ಅವರು, ಅರವಿಂದರು ಒಬ್ಬ ಮಹಾನ್ ತತ್ವಜ್ಞಾನಿ, ಶಿಕ್ಷಣ ತಜ್ಞ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಎಂದರು. ಏಳನೇ ವಯಸ್ಸಿಗೆ ಪಾಶ್ಚಾತ್ಯ ಸಂಸ್ಕೃತಿಯ ಅಧ್ಯಯನಕ್ಕಾಗಿ…

Read More

ಮಿತಸಮಯ ಮಹಿಳಾ ಕಥಾಸಂಚಯ: ಧಾರವಾಡದಲ್ಲಿ ವಿನೂತನ ಕಾರ್ಯಕ್ರಮ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಸೆ:22 ರಂದು ಸಂಜೆ 5:30ಕ್ಕೆ ಚೆನ್ನಬಸವ್ವ ಸಾದರ ಅವರ ಸ್ಮರಣಾರ್ಥವಾಗಿ ವಿಶೇಷ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ಈ ವಿನೂತನ ಕಾರ್ಯಕ್ರಮಕ್ಕೆ “ಮಿತಸಮಯ ಮಹಿಳಾ ಕಥಾಸಂಚಯ” ಎಂದು ಹೆಸರಿಡಲಾಗಿದ್ದು, ಹತ್ತು ಜನ ಪ್ರತಿಭಾವಂತ ಮಹಿಳಾ ಕಥೆಗಾರ್ತಿಯರು ತಾವು ಬರೆದ ಹತ್ತು ಹೊಸ ಕಥೆಗಳನ್ನು ತಲಾ ಹತ್ತು ನಿಮಿಷಗಳ ಅವಧಿಯಲ್ಲಿ ವಾಚನ ಮಾಡಲಿದ್ದಾರೆ. ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಮಲ್ಲಿಕಾ ಘಂಟಿ…

Read More

ಡಿಜೆ ಇಲ್ಲದೆ, ಗ್ರಾಮೀಣ ಸೊಗಡಿನಿಂದ ಗಣೇಶನಿಗೆ ಬೀಳ್ಕೊಟ್ಟ ಹಿರೇಹೊನ್ನಿಹಳ್ಳಿ ಗ್ರಾಮಸ್ಥರು

ಕಲಘಟಗಿ: ತಾಲೂಕಿನ ಹಿರೇಹೊನ್ನಿಹಳ್ಳಿ ಗ್ರಾಮದ ಜೈ ಶ್ರೀರಾಮ ಗರಡಿ ಮನೆ ಗೆಳೆಯರ ಬಳಗದ ವತಿಯಿಂದ ಸ್ಥಾಪಿಸಿದ್ದ ಗಣೇಶ ಮೂರ್ತಿಯನ್ನು 25 ದಿನಗಳ ವಿಶಿಷ್ಟ ಕಾರ್ಯಕ್ರಮಗಳ ನಂತರ ಭಕ್ತಿ ಮತ್ತು ಸಂಭ್ರಮದಿಂದ ವಿಸರ್ಜಿಸಲಾಯಿತು. ಯುವಕರು ಆಧುನಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಡಿಜೆ ಬಳಸದೆ, ಕೋಲಾಟದಂತಹ ಜನಪದ ಕಲೆಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಗಣೇಶೋತ್ಸವದ ಈ 25 ದಿನಗಳಲ್ಲಿ, ಗೆಳೆಯರ ಬಳಗವು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ವಿಶೇಷ ಸ್ಪರ್ಧೆಗಳನ್ನು ಆಯೋಜಿಸಿತ್ತು. ಪ್ರತೀ ವರ್ಷದಂತೆ ಈ ವರ್ಷವೂ…

Read More

ನಶಾ ಮುಕ್ತ ಭಾರತಕ್ಕೆ ಪಣ: ಕುಂದಗೋಳದಲ್ಲಿ ‘ನಮೋ ಯುವ ಓಟ’ಕ್ಕೆ ಶಾಸಕ ಎಂ.ಆರ್.ಪಾಟೀಲ್ ಚಾಲನೆ

ಕುಂದಗೋಳ: ಮಾದಕ ವ್ಯಸನಗಳಿಂದ ದೂರವಿರುವ ನಿಟ್ಟಿನಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ‘ನಶಾ ಮುಕ್ತ ಭಾರತ’ ಪರಿಕಲ್ಪನೆಯಡಿ ಆಯೋಜಿಸಿದ್ದ ‘ನಮೋ ಯುವ ಓಟ’ ಮ್ಯಾರಥಾನ್‌ಗೆ ಶಾಸಕ ಎಂ.ಆರ್.ಪಾಟೀಲ್ ಅವರು ಚಾಲನೆ ನೀಡಿದರು. ಶಿವಾನಂದ ವಿದ್ಯಾಪೀಠದಿಂದ ಆರಂಭವಾದ ಈ ಬೃಹತ್ ಓಟವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಆರ್.ಪಾಟೀಲ್, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಯಂತೆ ಸ್ವಸ್ಥ ಭಾರತ ನಿರ್ಮಾಣಕ್ಕೆ ಸದೃಢ ಸಮಾಜದ ಅವಶ್ಯಕತೆಯಿದೆ. ಮಾದಕ…

Read More

ಕಲಘಟಗಿ: ಕಬಡ್ಡಿಯಲ್ಲಿ ಗುಡ್ ನ್ಯೂಸ್ ಕಾಲೇಜ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಕಲಘಟಗಿ: ಉಪ ನಿರ್ದೇಶಕರ ಕಚೇರಿ (ಶಾಲಾ ಶಿಕ್ಷಣ ಮತ್ತು ಪದವಿ ಪೂರ್ವ ಇಲಾಖೆ), ಧಾರವಾಡ, ಹಾಗೂ ಗುಡ್ ನ್ಯೂಸ್ ಪದವಿಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆದ ಧಾರವಾಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯಲ್ಲಿ, ಗುಡ್ ನ್ಯೂಸ್ ಪದವಿಪೂರ್ವ ಮಹಾವಿದ್ಯಾಲಯದ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಶನಿವಾರ ನಡೆದ ಈ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಗುಡ್ ನ್ಯೂಸ್ ತಂಡವು ಪ್ರಶಸ್ತಿ ಗೆಲ್ಲುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದೆ. ವಿದ್ಯಾರ್ಥಿನಿಯರ ಈ…

Read More

ಯುಎಎಸ್‌ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ: ಸೆ.22ರಂದು ಧಾರವಾಡದ ಹಲವೆಡೆ ವಿದ್ಯುತ್ ವ್ಯತ್ಯಯ

ಧಾರವಾಡ: 110 ಕೆ.ವಿ. ಯುಎಎಸ್‌ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22ರ ಸೋಮವಾರದಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ (HESCOM) ಪ್ರಕಟಣೆ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:ಎತ್ತಿನಗುಡ್ಡ, ಅಗ್ರಿ ಯುನಿವರ್ಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪುರ, ಬೆಳಗಾವಿ ಮೇನ್‌ರೋಡ್, ನಾರಾಯಣಪುರ, ಸಿ.ಐ.ಟಿ.ಬಿ.,…

Read More

ಆಯುರ್ವೇದದ ವೈಭವ: ಸೆ. 23ರಂದು ಧಾರವಾಡದಲ್ಲಿ 10ನೇ ಆಯುರ್ವೇದ ದಿನಾಚರಣೆ

ಧಾರವಾಡ, ಸೆಪ್ಟೆಂಬರ್ 21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಸೆಪ್ಟೆಂಬರ್ 23ರ ಸೋಮವಾರದಂದು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಗಣ್ಯರ ಉಪಸ್ಥಿತಿಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ…

Read More

ಬ್ರಾಹ್ಮಣ ಸಮುದಾಯದವರ ಸ್ವ-ಉದ್ಯಮಕ್ಕೆ ₹2 ಲಕ್ಷದವರೆಗೆ ಸಾಲ: ಅರ್ಜಿ ಆಹ್ವಾನ

ಧಾರವಾಡ: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ನೇರ ಸಾಲಕ್ಕಾಗಿ ಅರ್ಜಿ ಆಹ್ವಾನಿಸಿದೆ. ‘ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ’ ಅಡಿ ಈ ನೆರವು ನೀಡಲಾಗುತ್ತಿದ್ದು, ಆಸಕ್ತರು ಅಕ್ಟೋಬರ್ 31, 2025ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿ, ಹಲವಾರು ವೃತ್ತಿ ಮತ್ತು ವ್ಯಾಪಾರಗಳಿಗೆ ಆರ್ಥಿಕ ನೆರವು ಲಭ್ಯವಿದೆ. ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಹಾಗೂ ಇತರೆ ವಹಿವಾಟುಗಳನ್ನು…

Read More