ತಡಹಾಳ ಸೇತುವೆ ಕುಸಿತ: ಸಂಚಾರ ನಿಷೇಧ:ಸಾರ್ವಜನಿಕರಿಗೆ ಬದಲಿ ಮಾರ್ಗ ಘೋಷಣೆ

ಧಾರವಾಡ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದ ಪರಿಣಾಮವಾಗಿ ನರಗುಂದ-ನವಲಗುಂದ ರಾಷ್ಟ್ರೀಯ ಹೆದ್ದಾರಿ-218ಕ್ಕೆ ಸಂಪರ್ಕ ಕಲ್ಪಿಸುವ, ನವಲಗುಂದ ತಾಲೂಕಿನ ಅರಭಾವಿ-ಚಳ್ಳಿಕೇರಿ ರಾಜ್ಯ ಹೆದ್ದಾರಿ-45ರಲ್ಲಿನ ತಡಹಾಳ ಗ್ರಾಮದ ಬಳಿಯ ಸೇತುವೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಹೆಚ್ಚಿನ ಅನಾಹುತಗಳಾಗದಂತೆ ತಡೆಯಲು, ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ, ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಸಂಚಾರಕ್ಕೆ ಬದಲಿ ವ್ಯವಸ್ಥೆಸೇತುವೆ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗದಂತೆ, ಜಿಲ್ಲಾಡಳಿತವು ಬದಲಿ…

Read More

ಮೈಸೂರು ದಸರಾ ಕ್ರೀಡಾಕೂಟ: ಪದಕ ಬೇಟೆ, ಗೆದ್ದ ಧಾರವಾಡ ತಂಡಕ್ಕೆ ಜಿಲ್ಲಾಧಿಕಾರಿ ಅಭಿನಂದನೆ

ಧಾರವಾಡ: ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ನಡೆದ ಪ್ರತಿಷ್ಠಿತ ರಾಜ್ಯಮಟ್ಟದ ಸಿ.ಎಂ ಕಪ್ ದಸರಾ ಕ್ರೀಡಾಕೂಟದಲ್ಲಿ ಧಾರವಾಡ ಜಿಲ್ಲೆಯ ಕ್ರೀಡಾಪಟುಗಳು ಅಕ್ಷರಶಃ ಪದಕಗಳ ಬೇಟೆಯಾಡಿದ್ದಾರೆ. ವಿವಿಧ ವಿಭಾಗಗಳಲ್ಲಿ ಒಟ್ಟು 111 ಪದಕಗಳನ್ನು ಮುಡಿಗೇರಿಸಿಕೊಂಡ ಧಾರವಾಡ ತಂಡಕ್ಕೆ, ಜಿಲ್ಲಾಡಳಿತದಿಂದ ಮಂಗಳವಾರದಂದು ಆತ್ಮೀಯ ಅಭಿನಂದನೆ ಸಲ್ಲಿಸಲಾಯಿತು. ಅಟ್ಲೆಟಿಕ್ಸ್, ಹಾಕಿ, ವ್ಹಾಲಿಬಾಲ್, ಜಿಮ್ನಾಸ್ಟಿಕ್, ಟೇಕ್ವಾಂಡೋ ಮತ್ತು ಕುಸ್ತಿ ಸೇರಿದಂತೆ ಹಲವು ವಿಭಾಗಗಳಲ್ಲಿ ಧಾರವಾಡದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಒಟ್ಟು 111 ಪದಕಗಳ ಜೊತೆಗೆ, ಮೂರು ವಿಭಾಗಗಳ ಗುಂಪು ಸ್ಪರ್ಧೆಯಲ್ಲಿ (ಟ್ರೋಫಿ)…

Read More

ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು: ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ!

ಧಾರವಾಡ: ರಾಜ್ಯದ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ನೀತಿಯನ್ನು ಖಂಡಿಸಿ, ವಿದ್ಯಾರ್ಥಿ ಹಕ್ಕುಗಳಿಗಾಗಿ ಎಐಡಿಎಸ್ಓ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ಜಯ ಲಭಿಸಿದ್ದು, ಅಂತಿಮವಾಗಿ ಪ್ರತಿಭಟನಾ ಕರ್ನಾಟಕ ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಾತಿಗೆ ಒಪ್ಪಿಗೆ ನೀಡಿದೆ. ರಾಜ್ಯಾದ್ಯಂತ ಕಳೆದ ಎರಡು ತಿಂಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆ ಹಾಗೂ ಸೆಪ್ಟೆಂಬರ್ 27ರ ರಾಜ್ಯವ್ಯಾಪಿ ತರಗತಿ ಬಹಿಷ್ಕಾರದ ನಂತರ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಎರಡು ತಿಂಗಳ ಹಿನ್ನಡೆ: ಪರೀಕ್ಷೆಗೆ…

Read More

ಧಾರವಾಡ:ಕುಶಲಕರ್ಮಿಗಳಿಗೆ ವಿದ್ಯುತ್‌ಚಾಲಿತ ಹೊಲಿಗೆ ಯಂತ್ರ ಸೇರಿ ಸುಧಾರಿತ ಉಪಕರಣ; ಅರ್ಜಿ ಆಹ್ವಾನ

ಧಾರವಾಡ: ಜಿಲ್ಲಾ ಪಂಚಾಯತ್‌ನ ಕೈಗಾರಿಕಾ ವಿಭಾಗವು 2025-26ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಉಚಿತವಾಗಿ ವಿವಿಧ ಸುಧಾರಿತ ಉಪಕರಣ ಸೌಲಭ್ಯಗಳನ್ನು ಒದಗಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಗ್ರಾಮೀಣ ಭಾಗದ ಕುಶಲಕರ್ಮಿಗಳ ಜೀವನ ಮಟ್ಟ ಸುಧಾರಣೆಗಾಗಿ ಈ ಯೋಜನೆ ರೂಪಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್‌ಚಾಲಿತ ಹೊಲಿಗೆ ಯಂತ್ರ, ಬಡಗಿತನ, ಗೌಂಡಿ, ಕಮ್ಮಾರಿಕೆ, ಕ್ಷೌರಿಕ ಮತ್ತು ಧೋಬಿ (ಅಗಸ) ಸುಧಾರಿತ ಉಪಕರಣಗಳನ್ನು ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ಮುಖ್ಯ ಅರ್ಹತೆಗಳು: ಹೆಚ್ಚಿನ ಮಾಹಿತಿ ಹಾಗೂ ಸ್ಪಷ್ಟನೆಗಾಗಿ ಜಿಲ್ಲಾ…

Read More

ಮಾಜಿ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಧಾರವಾಡ: ಸಪ್ತಾಪುರ ವಿವೇಕಾನಂದ ಸರ್ಕಲ್ ಬಳಿ ಇರುವ ಸೈನಿಕ ಮೆಸ್ ಮಾಲೀಕ, ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಎಎಸ್‌ಐ, ಕಾನ್‌ಸ್ಟೆಬಲ್ ಅಮಾನತುಹಲ್ಲೆ ನಡೆಸಿದ್ದ ಆರೋಪಕ್ಕೆ ಗುರಿಯಾಗಿರುವ ಎಎಸ್‌ಐ ವಿದ್ಯಾನಂದ ಸುಬೇದಾರ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ರಾಜಪ್ಪ ಕಣಬೂರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಪೊಲೀಸ್ ಆಯುಕ್ತರ ಈ ನಿರ್ಧಾರಕ್ಕೆ ಸಾರ್ವಜನಿಕ…

Read More

ಕುಂದಗೋಳ:ಬೆಳೆಸಾಲ ವಸೂಲಿಗೆ ಕಿರುಕುಳ: ಕರ್ನಾಟಕ ಬ್ಯಾಂಕ್ ಎದುರು ರೈತರ ಆಕ್ರೋಶದ ಪ್ರತಿಭಟನೆ!

ಕುಂದಗೋಳ: ರೈತರಿಗೆ ನೀಡಿರುವ ಬೆಳೆಸಾಲದ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಿ, ಬಡ್ಡಿ ಸಮೇತ ಅಸಲು ತುಂಬಲು ಕೋರ್ಟ್‌ ಮೂಲಕ ನೋಟಿಸ್ ನೀಡಿ ಮಾನಸಿಕವಾಗಿ ಹಿಂಸಿಸಲಾಗುತ್ತಿದೆ ಎಂದು ಆಪಾದಿಸಿ, ರತ್ನಭಾರತ ರೈತ ಸಮಾಜ ಸಂಘಟನೆಯ ನೇತೃತ್ವದಲ್ಲಿ ರೈತರು ಇಲ್ಲಿನ ಕರ್ನಾಟಕ ಬ್ಯಾಂಕಿನ ಎದುರು ಸೋಮವಾರ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಾಲದ ಮೊತ್ತ 3 ಪಟ್ಟು ಏರಿಕೆ, ಕೋರ್ಟ್‌ ನೋಟಿಸ್!ಬೆಳಿಗ್ಗೆ ಗಾಳಿಮರೆಮ್ಮ ದೇವಸ್ಥಾನದಿಂದ ಆಗಮಿಸಿದ ರೈತರು, ಕರ್ನಾಟಕ ಬ್ಯಾಂಕ್‌ನ ರೈತ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದರು. ರೈತ…

Read More

ಕುಂದಗೋಳ ಕ್ಷೇತ್ರಕ್ಕೆ ಕೋಟ್ಯಂತರ ಅನುದಾನ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ; ಗುರುವಿನಹಳ್ಳಿ ನೂತನ ಗ್ರಾ.ಪಂ. ಕಟ್ಟಡ ಸೇರಿದಂತೆ ಹಲವು ಕಾಮಗಾರಿ ಉದ್ಘಾಟನೆ

*ಕುಂದಗೋಳ : (ಗುರುವಿನಹಳ್ಳಿ): ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕುಂದಗೋಳ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದ್ದು, ರಸ್ತೆ, ಕುಡಿಯುವ ನೀರು, ಶಿಕ್ಷಣ ಮತ್ತು ರೈಲ್ವೆ ಸೇರಿದಂತೆ ಮೂಲಸೌಕರ್ಯ ವಲಯಕ್ಕೆ ಸಾವಿರಾರು ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಅವರು ಸೋಮವಾರದಂದು ತಾಲ್ಲೂಕಿನ ಗುರುವಿನಹಳ್ಳಿ ಗ್ರಾಮದಲ್ಲಿ ಎಂಜಿಎನ್‌ಆರ್‌ಜಿ ಯೋಜನೆಯ ರಾಜೀವ ಗಾಂಧಿ ಸೇವಾಕೇಂದ್ರ, 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ನಿರ್ಮಿಸಲಾದ ಭೋಜನಾಲಯ, ಎನ್‌ಆರ್‌ಎನ್‌ಎಂ ಕಟ್ಟಡ,…

Read More

ರೇಬಿಸ್ ನಿಯಂತ್ರಣಕ್ಕೆ ಲಸಿಕೆಯೇ ಅಸ್ತ್ರ: ಸಾಕು ಪ್ರಾಣಿಗಳಿಗೆ ಒಂದು ತಿಂಗಳು ಉಚಿತ ಲಸಿಕೆ; ಧಾರವಾಡದಲ್ಲಿ ತಾಂತ್ರಿಕ ಕಾರ್ಯಾಗಾರ

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಸಮೀಕ್ಷೆಗೆ ಆ್ಯಪ್ ಬಳಿಸಿ; ಸಮೀಕ್ಷೆದಾರರಿಗೆ ಕಾಯದೆ, ಸ್ವಯಂ ಭಾಗವಹಿಸಿ, ಮಾಹಿತಿ ಭರ್ತಿ ಮಾಡಿ. ಧಾರವಾಡ ಸೆ.29: ಈಗಾಗಲೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಜಾರಿಯಲ್ಲಿದ್ದು, ಸಾರ್ವಜನಿಕರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆದಾರರನ್ನು ಕಾಯಬೇಕಾಗಿಲ್ಲ. ಆನ್‍ಲೈನ್‍ನಲ್ಲಿ ಸುಲಭ ವಿಧಾನದಲ್ಲಿ ಸ್ವತಃ ನಿಮ್ಮ ಮೊಬೈಲ್‍ನಲ್ಲಿ ಅರ್ಜಿ ಭರ್ತಿ ಮಾಡಬಹುದು.ಸಾರ್ವಜನಿಕರು https://kscbcselfdeclaratioin.karnataka.gov.in ವೆಬ್‍ಸೈಟಿಗೆ ಭೇಟಿ ನೀಡಿ, ನಾಗರಿಕ ಎಂದು ಆಯ್ಕೆ ಮಾಡಬೇಕು. ಮೊಬೈಲ್ ನಂಬರ್ ಹಾಕಿ ಓಟಿಪಿ ಪಡೆದು, ನಮೂದಿಸಬೇಕು. ತದನಂತರ ಹೊಸ…

Read More

ರೇಬಿಸ್ ನಿಯಂತ್ರಣಕ್ಕೆ ಲಸಿಕೆಯೇ ಅಸ್ತ್ರ: ಸಾಕು ಪ್ರಾಣಿಗಳಿಗೆ ಒಂದು ತಿಂಗಳು ಉಚಿತ ಲಸಿಕೆ; ಧಾರವಾಡದಲ್ಲಿ ತಾಂತ್ರಿಕ ಕಾರ್ಯಾಗಾರ

ಧಾರವಾಡ: ರೇಬಿಸ್ ಒಂದು ಗಂಭೀರ ಪ್ರಾಣಿಜನ್ಯ ರೋಗವಾಗಿದ್ದು, ಪ್ರಾಣಿ ಕಡಿತದ ನಂತರ ಲಸಿಕೆಯನ್ನು ಸರಿಯಾಗಿ ತೆಗೆದುಕೊಳ್ಳುವುದರಿಂದ ಮನುಷ್ಯರಲ್ಲಿ ಈ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ. ಎಸ್.ಎಂ. ಹೊನಕೇರಿ ತಿಳಿಸಿದರು. ವಿಶ್ವ ರೇಬಿಸ್ ದಿನಾಚರಣೆಯ ಪ್ರಯುಕ್ತ ಇಂದು (ಸೆ.29) ಧಾರವಾಡ ಪಶು ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಆರೋಗ್ಯಕ್ಕಾಗಿ ರೇಬಿಸ್ ನಿಯಂತ್ರಣ ಕುರಿತ ತಾಂತ್ರಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ರೋಗ ನಿಯಂತ್ರಣಕ್ಕಾಗಿ ಕಾರ್ಯಸಾಧಕ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು…

Read More

“ಆರೋಗ್ಯವೇ ಅಮೂಲ್ಯ ರತ್ನ; ಸ್ವಚ್ಛತೆಯೇ ಅದರ ಕವಚ”: ಸ್ವಚ್ಛತೆ ಕೊರತೆಯಿಂದ ಮಹಿಳೆಯರಲ್ಲಿ ಕ್ಯಾನ್ಸರ್; ಡಾ. ಜಮೀರಾ ಎಚ್ಚರಿಕೆ

ಧಾರವಾಡ: ಮಹಿಳೆಯರು ಆರೋಗ್ಯವಾಗಿರಲು ಸ್ವಚ್ಛತೆ ಅತಿ ಮುಖ್ಯ. ವಿಶೇಷವಾಗಿ ಮಾಸಿಕ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಜಾಗೃತಿ ಅನಿವಾರ್ಯವಾಗಿದ್ದು, ಅಶುದ್ಧತೆಯಿಂದಾಗಿ ಕ್ಯಾನ್ಸರ್‌ನಂತಹ ಗಂಭೀರ ರೋಗಗಳಿಗೆ ಬಲಿಯಾಗುವುದನ್ನು ತಡೆಯಬೇಕಿದೆ ಎಂದು ಸ್ತ್ರೀರೋಗ ತಜ್ಞೆ ಡಾ. ಜಮೀರಾ ಅವರು ಕಳವಳ ವ್ಯಕ್ತಪಡಿಸಿದರು. ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಮಹಿಳಾ ಸಬಲೀಕರಣ ಕೋಶ, ಎನ್ಎಸ್ಎಸ್ ಘಟಕ ಮತ್ತು ಟ್ರೂ ಲೈಫ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಆರೋಗ್ಯ ಮತ್ತು ಸ್ವಚ್ಛತೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಆರೋಗ್ಯವೇ ಅಮೂಲ್ಯ ರತ್ನ ಮತ್ತು ಸ್ವಚ್ಛತೆಯೇ…

Read More