ನವಲಗುಂದದಲ್ಲಿ ಗಣೇಶ ಹಬ್ಬದ ಡಿಜೆ: ನಿಯಮ ಸಡಿಲಿಸದಿದ್ದರೆ ಬಿಜೆಪಿ ಯುವ ಮೋರ್ಚಾದಿಂದ ಉಗ್ರ ಪ್ರತಿಭಟನೆ ಎಚ್ಚರಿಕೆ, ಬಿಜೆಪಿ ನವಲಗುಂದ ಮಂಡಳದ ಯುವ ಮೊರ್ಚಾ ಅಧ್ಯಕ್ಷ ಅರುಣಕುಮಾರ ಮೆಣಸಿನಕಾಯಿ
ನವಲಗುಂದ: ಗಣೇಶ ಹಬ್ಬದ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಡಿಜೆ ಸೌಂಡ್ ಬಳಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತವು ಅವಕಾಶ ನೀಡಬೇಕು. ಇಲ್ಲವಾದಲ್ಲಿ, ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಯುವ ಮೋರ್ಚಾ ನವಲಗುಂದ ಮಂಡಲದ ಅಧ್ಯಕ್ಷ ಅರುಣಕುಮಾರ್ ಚ. ಮೆಣಸಿನಕಾಯಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, “ಗಣೇಶ ಹಬ್ಬವು ಹಿಂದೂಗಳ ಪಾಲಿಗೆ ಅತ್ಯಂತ ಪ್ರಮುಖ ಧಾರ್ಮಿಕ ಹಬ್ಬವಾಗಿದೆ. ಇದನ್ನು ಪ್ರತಿ ವರ್ಷವೂ ಅತ್ಯಂತ ಸಡಗರ ಮತ್ತು ವಿಜೃಂಭಣೆಯಿಂದ ಸಾರ್ವಜನಿಕವಾಗಿ ಆಚರಿಸಲಾಗುತ್ತದೆ. ಈ ಹಬ್ಬದ…

