ಧಾರವಾಡ:ಸಮೀಕ್ಷೆಗೆ ಸಹಕರಿಸಲು ಡಿಸಿ ಮನವಿ: ಸೆ.22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ

ಧಾರವಾಡ: ಜಿಲ್ಲೆಯಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಎಲ್ಲ ಕುಟುಂಬಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ ಮಾಡಿದ್ದಾರೆ. ಪ್ರತಿ ಮನೆಯೂ ಈ ಮಹತ್ವದ ಸಮೀಕ್ಷೆಯಲ್ಲಿ ಭಾಗವಹಿಸಿ, ಅಗತ್ಯ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ, ಸಮೀಕ್ಷೆ ನಡೆಸಲಿರುವವರಿಗೆ ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆಗಾಗಿ ಗುರುತಿಸಲಾದ ಮನೆಗಳಿಗೆ ಸ್ಟಿಕ್ಕರ್‌ಗಳನ್ನು ಸಹ ಅಂಟಿಸಲಾಗಿದೆ….

Read More

ಶಿರೂರ ಗ್ರಾಮದಲ್ಲಿ ಅದ್ದೂರಿ ‘ಶರನ್ನವರಾತ್ರಿ’ ಆಯೋಜನೆ: ಸೆ. 22 ರಿಂದ ಅಕ್ಟೋಬರ್ 2ರವರೆಗೆ ದೇವಿಯ ಪುರಾಣ ಪ್ರವಚನ

ಕುಂದಗೋಳ: ತಾಲ್ಲೂಕಿನ ಶಿರೂರ ಗ್ರಾಮದಲ್ಲಿ ಶ್ರೀ ಮರಿಯಮ್ಮದೇವಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ “ಶರನ್ನವರಾತ್ರಿ” ಅಂಗವಾಗಿ ಅದ್ದೂರಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 22, ಸೋಮವಾರದಿಂದ (ಘಟಸ್ಥಾಪನೆ) ಆರಂಭವಾಗುವ ಈ ಕಾರ್ಯಕ್ರಮಗಳು ವಿಜಯದಶಮಿಯ ದಿನವಾದ ಅಕ್ಟೋಬರ್ 2, ಗುರುವಾರದವರೆಗೆ ನಡೆಯಲಿವೆ. ಈ ಹನ್ನೊಂದು ದಿನಗಳ ಕಾಲ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.ಈ ಕಾರ್ಯಕ್ರಮದ ಮುಖ್ಯ ಭಾಗವಾಗಿ ಪ್ರತಿದಿನ ಸಂಜೆ 7 ರಿಂದ ರಾತ್ರಿ 9 ಗಂಟೆಯವರೆಗೆ “ಶ್ರೀ ದೇವಿ ಮಹಾತ್ಮಯ” ಪುರಾಣ…

Read More

ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ದೂರು: ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆ ವಿವಾಹದ ಆರೋಪ

ಧಾರವಾಡ (ಸೆ.19): ಉತ್ತರ ಕರ್ನಾಟಕದ ಜನಪ್ರಿಯ ಯೂಟ್ಯೂಬರ್ ಹಾಗೂ ಶಾರ್ಟ್ ವಿಡಿಯೋ ಸ್ಟಾರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ವಿರುದ್ಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾನೆ ಮತ್ತು ತನ್ನ ವೀಡಿಯೊಗಳಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಿದ್ದಾನೆ ಎಂದು ಬಜರಂಗದಳದ ಕಾರ್ಯಕರ್ತರು ಗಂಭೀರ ಆರೋಪ ಮಾಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ವಿವಾಹ ಆರೋಪಬಜರಂಗದಳ ಕಾರ್ಯಕರ್ತರು ನೀಡಿದ ದೂರಿನ ಪ್ರಕಾರ, ಮುಕಳೆಪ್ಪ ಜೂನ್ 5, 2025 ರಂದು ಉತ್ತರ ಕನ್ನಡ…

Read More

ಮೈಸೂರು ದಸರಾ ಯುವ ಸಂಭ್ರಮದಲ್ಲಿ ಧಾರವಾಡ ಗ್ರಾಮೀಣ ಮಕ್ಕಳ ಮಲ್ಲಗಂಬ ಪ್ರದರ್ಶನಕ್ಕೆ ಮೆಚ್ಚುಗೆ

ಧಾರವಾಡ: ಮೈಸೂರಿನಲ್ಲಿ ಗುರುವಾರದಂದು ನಡೆದ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಯುವ ಸಂಭ್ರಮ-2025 ಕಾರ್ಯಕ್ರಮದಲ್ಲಿ, ಧಾರವಾಡ ಜಿಲ್ಲಾ ಗ್ರಾಮೀಣ ಭಾಗದ ಮಕ್ಕಳ ಸಾಂಸ್ಕೃತಿಕ ಕಲಾ ತಂಡವು ಭಾಗವಹಿಸಿ ಗಮನ ಸೆಳೆದಿದೆ. ಸಂಶಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಧಾರವಾಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಈ ತಂಡ, ತಮ್ಮ ಅದ್ಭುತ ಮಲ್ಲಗಂಬ ಪ್ರದರ್ಶನದ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರದರ್ಶಿಸಿದ ಕೌಶಲ್ಯಪೂರ್ಣ ಮಲ್ಲಗಂಬ ಪ್ರದರ್ಶನವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಶಿಕ್ಷಕರಾದ ಮಾರುತಿ…

Read More

ಪ್ರಧಾನಿ ಮೋದಿ, ಗುಣಧರನಂದಿ ಮಹಾರಾಜರ ಜನ್ಮದಿನ: ನಾಳೆ ಬೃಹತ್ ರಕ್ತದಾನ ಶಿಬಿರ

ಹುಬ್ಬಳ್ಳಿ-ವರೂರ: ವಿಶ್ವನಾಯಕ ಹಾಗೂ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನ ಹಾಗೂ ರಾಷ್ಟ್ರಸಂತ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜರ 52ನೇ ಜನ್ಮ ಜಯಂತಿಯ ಶುಭ ಸಂದರ್ಭದಲ್ಲಿ ‘ರಾಷ್ಟ್ರಕ್ಕಾಗಿ ರಕ್ತದಾನ’ ಎಂಬ ಘೋಷವಾಕ್ಯದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 20, 2025, ಶನಿವಾರಸಮಯ: ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆಸ್ಥಳ: ಎ.ಜಿ.ಎಂ ಮಹಾವಿದ್ಯಾಲಯ, ನವಗ್ರಹ ತೀರ್ಥ ಸುಕ್ಷೇತ್ರ, ವರೂರನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಶಾಸಕ ಎಂ.ಆರ್….

Read More

ಕುಂದಗೋಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಮೇಶ ಶಿ. ಇಂಗಳಹಳ್ಳಿ, ಉಪಾಧ್ಯಕ್ಷರಾಗಿ ಹೊಳಲಪ್ಪ ವೆಂಕಪ್ಪ ಬೋವಿ ಆಯ್ಕೆ.

ಕುಂದಗೋಳ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರದಂದು ಚುನಾವಣೆ ಜರುಗಿತು. ಒಟ್ಟು 13 ಸದಸ್ಯ ಬಲ ಹೊಂದಿರುವ ಈ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಮೇಶ ಶಿ. ಇಂಗಳಹಳ್ಳಿ ಮತ್ತು ಸಿದ್ದಪ್ಪ ನಿ. ಅರಳಿಕಟ್ಟಿ ನಾಮಪತ್ರ ಸಲ್ಲಿಸಿದ್ದರು. ರಮೇಶ ಶಿ. ಇಂಗಳಹಳ್ಳಿ 9 ಮತಗಳನ್ನು ಪಡೆದು ಜಯಶಾಲಿಯಾದರು, ಸಿದ್ದಪ್ಪ ನಿ. ಅರಳಿಕಟ್ಟಿ 4 ಮತಗಳನ್ನು ಪಡೆದು ಪರಾಭವಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಹೊಳಲಪ್ಪ ವೆಂಕಪ್ಪ ಬೋವಿ ಮತ್ತು ದಾದಾಪೀರ…

Read More

ಕುಂದಗೋಳ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಗೆ ಸತೀಶ ಚ ಕೊಬ್ಬಯ್ಯನವರ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಸೋಮಲಿಂಗಪ್ಪ ಶಂ ಹೊಸಮನಿ ನೇಮಕ

ಧಾರವಾಡ: ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಕುಂದಗೋಳ ತಾಲೂಕು ಮಟ್ಟದ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ಸ್ಥಾನಗಳಿಗೆ ನೂತನವಾಗಿ ನೇಮಕಾತಿ ಮಾಡಿ ಧಾರವಾಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಸಮಿತಿಯ ಹಿಂದಿನ ಅಧ್ಯಕ್ಷರಾಗಿದ್ದ ಶ್ರೀ ಶಿವಾನಂದ ಬೆಂತೂರ ಅವರ ಸ್ಥಾನಕ್ಕೆ ಹಿರೇಹರಕುಣಿ ಗ್ರಾಮದ ಸತೀಶ್ ಚನ್ನಬಸಯ್ಯ ಕೊಬ್ಬಯ್ಯನವರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ, ಸಮಿತಿಯ ಸದಸ್ಯರಾಗಿದ್ದ ಹನುಮಂತಪ್ಪ ಯಲ್ಲಪ್ಪ ಹಗೇರಿ ಅವರ ನಿಧನದಿಂದ…

Read More

ಪ್ರೊ. ಸದಾನಂದ ಕನವಳ್ಳಿ ಸ್ಮರಣಾರ್ಥ ಉಪನ್ಯಾಸ: ನಾಳೆ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಕಾರ್ಯಕ್ರಮ

ಧಾರವಾಡ: ಸಾಹಿತ್ಯ, ಸಂಗೀತ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ದಿವಂಗತ ಪ್ರೊ. ಸದಾನಂದ ಕನವಳ್ಳಿ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದೆ. ಈ ಕಾರ್ಯಕ್ರಮವು ಸೆ:ರಂದು ಸಂಜೆ ೬ ಗಂಟೆಗೆ ಸಂಘದ ಶ್ರೀ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ‘ಆದರ್ಶಗಳ ಕಣಜವಾಗಿದ್ದ ಸದಾನಂದ ಕನವಳ್ಳಿ’ ವಿಷಯ ಕುರಿತು ಧಾರವಾಡದ ಹಿರಿಯ ಛಾಯಾಗ್ರಾಹಕ ಶಶಿ ಸಾಲಿ ಅತಿಥಿ ಉಪನ್ಯಾಸ ನೀಡಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಧಾರವಾಡ ಹಿರೇಮಲ್ಲೂರ ಈಶ್ವರನ್ ಪದವಿ…

Read More

ನಾರಿಯರು ಶಕ್ತರಾದಾಗ ಸಮಾಜವೂ ಶಕ್ತಿಯುತವಾಗುತ್ತದೆ: ಗ್ರಾ ಪಂ ಅಧ್ಯಕ್ಷ ಗಿರೀಶಗೌಡ ಪಾಟೀಲ

ಕುಂದಗೋಲ: (ಸಂಶಿ): ಇಂದಿನ ದಿನಮಾನಗಳಲ್ಲಿ ಜನರಲ್ಲಿ ಪೌಷ್ಟಿಕತೆ ಮತ್ತು ಆರೋಗ್ಯದ ಕುರಿತು ಕಾಳಜಿ ಕಡಿಮೆಯಾಗುತ್ತಿದೆ. ಮಹಿಳೆಯರಿಗೆ ಸರ್ಕಾರದ ವಿವಿಧ ಸೌಲಭ್ಯಗಳಿದ್ದರೂ ಯುವತಿಯರು ಆರೋಗ್ಯವಾಗಿರಲು ಸಾಧ್ಯವಾಗುತ್ತಿಲ್ಲ. ನಾರಿಯರು ಶಕ್ತರಾದರೆ ನಮ್ಮ ಪರಿವಾರ ಮತ್ತು ಸಮಾಜ ಶಕ್ತಿಯುತವಾಗುತ್ತದೆ ಎಂದು ಸಂಶಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶಗೌಡ ಪಾಟೀಲ ಅಭಿಪ್ರಾಯಪಟ್ಟರು.ತಾಲ್ಲೂಕಿನ ಸಂಶಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ನಡೆದ ‘ಸ್ವಸ್ಥ ನಾರಿ ಶಕ್ತ ಪರಿವಾರ’ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಮೂಲಭೂತ ಸೌಲಭ್ಯಗಳನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು…

Read More

ಜಾನಪದ ಸಾಹಿತ್ಯಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಮೇಯರ್ ಜ್ಯೋತಿ ಪಾಟೀಲ್

ಧಾರವಾಡ: ಜಾನಪದ ಸಾಹಿತ್ಯದಲ್ಲಿ ಮಹಿಳೆಯರ ಪಾತ್ರವೇ ಪ್ರಧಾನವಾಗಿದ್ದು, ಅವರ ಜೀವನಾನುಭವಗಳೇ ಜಾನಪದ ಹಾಡುಗಳಾಗಿ ರೂಪುಗೊಂಡಿವೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಜ್ಯೋತಿ ಪಾಟೀಲ್ ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಜಯಶ್ರೀ ಗುತ್ತಲ ದತ್ತಿ ಕಾರ್ಯಕ್ರಮದಲ್ಲಿ ‘ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ-೨೦೨೫’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಗ್ರಾಮೀಣ ಬದುಕಿನ ಒಳನೋಟಗಳೇ ಜಾನಪದ ಸಾಹಿತ್ಯದಲ್ಲಿವೆ. ತಮ್ಮ ಬದುಕಿನ ನೋವು-ನಲಿವುಗಳನ್ನು ಹಾಡಿನ ಮೂಲಕ ಹೊರಹಾಕಿ ಮಹಿಳೆಯರು ಜಾನಪದ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕುಟುಂಬ ನಿರ್ವಹಣೆಯ ಜೊತೆಗೆ ಮಹಿಳೆಯರು…

Read More