ಹಫ್ತಾ ಕೊಡದ್ದಕ್ಕೆ ಮಾಜಿ ಸೈನಿಕನ ಮೇಲೆ ಪೊಲೀಸರ ದಾಳಿ: ಧಾರವಾಡದಲ್ಲಿ ಹಿಗ್ಗಾಮುಗ್ಗಾ ಥಳಿತ!

ಧಾರವಾಡ: ಹಫ್ತಾ (ಕಪ್ಪ) ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ನಿವೃತ್ತ ಯೋಧನೊಬ್ಬರ ಮೇಲೆ ಪೊಲೀಸರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಭಯಾನಕ ಘಟನೆ ಧಾರವಾಡದ ಸಪ್ತಾಪುರದಲ್ಲಿ ನಡೆದಿದೆ. ಸೈನಿಕ್ ಮೆಸ್‌ ನಡೆಸುತ್ತಿದ್ದ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಅವರ ಮೇಲೆ ಉಪನಗರ ಠಾಣೆಯ ಪೊಲೀಸರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡದ ಸಪ್ತಾಪುರದಲ್ಲಿ ವಾಸವಿರುವ ರಾಮಪ್ಪ ನಿಪ್ಪಾಣಿ ಅವರೇ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಮಾಜಿ ಸೈನಿಕರಾಗಿದ್ದಾರೆ. ಸೇನೆಯಿಂದ ನಿವೃತ್ತರಾದ…

Read More

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ವಿಶೇಷ ಕಾರ್ಯಾಗಾರ: ಧಾರವಾಡದಲ್ಲಿ 5 ಸಾವಿರ ವಿದ್ಯಾರ್ಥಿಗಳು ಭಾಗಿ

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಧಾರವಾಡದಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ನಗರದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ನಡೆದ ಈ ಮಹತ್ವದ ಸಂವಾದದಲ್ಲಿ ಸುಮಾರು 5,000ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಪಾಲ್ಗೊಂಡು ಮಾರ್ಗದರ್ಶನ ಪಡೆದರು. ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ವಿದ್ಯಾರ್ಥಿಗಳು ತಮ್ಮ ಮುಂದೆ ಒದಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. “ಪ್ರಾಮಾಣಿಕ ಮತ್ತು ನಿರಂತರ ಪರಿಶ್ರಮದಿಂದ ಯಾವುದೇ ಗುರಿಯನ್ನು ಸಾಧಿಸಲು…

Read More

ಭಕ್ತರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಡಿಪೋ ಮ್ಯಾನೇಜರ್‌ಗಳಿಗೆ ಮನವಿ: ಸತೀಶ್ ಕೊಬ್ಬಯ್ಯನವರ ಭರವಸೆ

ಕುಂದಗೋಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ನೂತನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಸತೀಶ್ ಕೊಬ್ಬಯ್ಯನವರ ಅವರು ಭಾನುವಾರ ತಾಲೂಕಿನ ಗುಡಗೇರಿ ಗ್ರಾಮದ ಶ್ರೀ ದ್ಯಾಮವ್ವ ದೇವಿಯ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ದೇವಿಯ ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಸತೀಶ್ ಕೊಬ್ಬಯ್ಯನವರ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದಿನನಿತ್ಯ ಲಕ್ಷಾಂತರ ಮಹಿಳೆಯರು ಇದರ…

Read More

ಬೆಂಬಲ ಬೆಲೆಗೆ ಹೆಸರು, ಉದ್ದು ಖರೀದಿಗೆ ಜಿಲ್ಲೆಯಲ್ಲಿ ಕೇಂದ್ರ ಆರಂಭ: ಡಿಸಿ ದಿವ್ಯ ಪ್ರಭು ಮನವಿ

ಧಾರವಾಡ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ (MSP) 2025-26ನೇ ಸಾಲಿನಲ್ಲಿ ಹೆಸರು ಕಾಳು ಮತ್ತು ಉದ್ದಿನ ಕಾಳು ಖರೀದಿಗೆ ಜಿಲ್ಲೆಯಾದ್ಯಂತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಧಾರವಾಡ ಜಿಲ್ಲೆಯ ರೈತರಿಗೆ ಮಾತ್ರ ಈ ಯೋಜನೆಯಡಿ ತಮ್ಮ ಎಫ್.ಎ.ಕ್ಯೂ. (FAQ) ಗುಣಮಟ್ಟದ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿದೆ. ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್‌ಗೆ ಬೆಂಬಲ ಬೆಲೆ ವಿವರಸರ್ಕಾರವು ಹೆಸರು…

Read More

ನವಲಗುಂದ: ಮಳೆಯ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿವು; ರೈತರಲ್ಲಿ ಆತಂಕ

ನವಲಗುಂದ: ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಣ್ಣಿಹಳ್ಳ, ತುಪ್ಪರಿಹಳ್ಳ, ಮತ್ತು ಗದ್ಯಾಳ ಹಳ್ಳಗಳು ತುಂಬಿ ಉಕ್ಕಿ ಹರಿಯುತ್ತಿವೆ. ಈ ಜಲಪ್ರಳಯದ ಪರಿಣಾಮವಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಶುಕ್ರವಾರ ಬೆಳಿಗ್ಗೆ ತಾಲ್ಲೂಕಿನ ಕೆಲ ಹಳ್ಳಿಗಳ ಸಂಪರ್ಕ ಕಡಿತಗೊಂಡಿತ್ತು ಎಂದು ವರದಿಯಾಗಿದೆ. ಸತತ ಮಳೆಯಿಂದಾಗಿ ಹಳ್ಳಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದು ರೈತರಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ರೈತರಿಗೆ ತಹಶೀಲ್ದಾರರಿಂದ ಎಚ್ಚರಿಕೆತುಂಬಿ ಹರಿಯುತ್ತಿರುವ ಹಳ್ಳಗಳ ಹಿನ್ನೆಲೆಯಲ್ಲಿ, ನವಲಗುಂದ ತಹಶೀಲ್ದಾರ ಸುಧೀರ ಸಾಹುಕಾರ ಅವರು…

Read More

50 ವರ್ಷಗಳ ಪಕ್ಷದ ಸೇವೆ, ಜೈನ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಕಾಂಗ್ರೆಸ್ ಮುಂಖಡ ವಿಜಯಗೌಡ ಪಾಟೀಲ ಅವರಿಂದ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನವಲಗುಂದ: ಕಾಂಗ್ರೆಸ್ ಪಕ್ಷದಲ್ಲಿ ಕಳೆದ 50 ವರ್ಷಗಳಿಂದ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸುತ್ತಾ, ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಮುಖಂಡ ವಿಜಯಗೌಡ ಪಾಟೀಲ ಅವರಿಗೆ ಸರ್ಕಾರವು ನೇಮಕ ಮಾಡುವ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ, ನವಲಗುಂದಕ್ಕೆ ಭೇಟಿ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರಿಗೆ ಇಂದು ಆಗ್ರಹಿಸಲಾಯಿತು. ನಿರಂತರ ಸೇವೆಯನ್ನು ಗುರುತಿಸಲು ಮನವಿ:ವಿಜಯಗೌಡ ಪಾಟೀಲ ಅವರು 1972 ರಲ್ಲಿಯೇ ತಾಲ್ಲೂಕಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ…

Read More

ಕೆರೆ ನೀರು ಕಲುಷಿತ: ಗ್ರಾಮ ಪಂಚಾಯತಿ ಮುಂಭಾಗ ಹೆಬ್ಬಾಳ ಗ್ರಾಮಸ್ಥರ ಪ್ರತಿಭಟನೆ ಶುದ್ಧ ನೀರು ಪೂರೈಕೆಗೆ ಆಗ್ರಹಿಸಿ ಕೆರೆಯಲ್ಲಿ ಇಳಿದು ಆಕ್ರೋಶ

ನವಲಗುಂದ: ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೆರೆಯಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಗುರುವಾರ ಕೆರೆಯಲ್ಲಿ ಇಳಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಕಲುಷಿತ ನೀರನ್ನು ಕೂಡಲೇ ಹೊರಹಾಕಿ, ಕೆರೆಗೆ ಹೊಸದಾಗಿ ಶುದ್ಧ ನೀರು ತುಂಬಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂಬಾಗ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದ ಕೆರೆಗೆ ಈ ಹಿಂದೆ ಮಲಪ್ರಭಾ ಕಾಲುವೆಯಿಂದ ನೀರು ತುಂಬಿಸುವ ಸಂದರ್ಭದಲ್ಲಿ, ಕೆರೆಯಲ್ಲಿ ಮೊದಲೇ ಇದ್ದ ಕಲುಷಿತ ನೀರನ್ನು ಹೊರಹಾಕದ ಕಾರಣ, ಪ್ರಸ್ತುತ ಕೆರೆಯ…

Read More

ಸಿರಸಂಗಿ ಲಿಂಗರಾಜರ ಸಮಾಧಿ, ವಾಡೆ ಅಭಿವೃದ್ಧಿಗೆ ಸಚಿವ ಎಂ.ಬಿ. ಪಾಟೀಲ್‌ ಭರವಸೆ

ನವಲಗುಂದ: ತಮ್ಮ ಇಡೀ ಜೀವನವನ್ನೇ ಸಮಾಜಕ್ಕಾಗಿ ಮುಡುಪಾಗಿಟ್ಟು, ತಮ್ಮ ಆಸ್ತಿಗಳನ್ನೆಲ್ಲ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಮೀಸಲಿಟ್ಟ ತ್ಯಾಗವೀರ ಸಿರಸಂಗಿ ಲಿಂಗರಾಜರ ಸಮಾಧಿ ಸ್ಥಳ ಹಾಗೂ ಅವರು ವಾಸಿಸುತ್ತಿದ್ದ ವಾಡೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್‌ ಅವರು ಘೋಷಿಸಿದರು. ಪಟ್ಟಣದ ಥಡಿಮಠದಲ್ಲಿರುವ ತ್ಯಾಗವೀರ ಲಿಂಗರಾಜರ ಸಮಾಧಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಸಮಾಜ ಬಾಂಧವರನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದ ರಾಜಕಾರಣದಲ್ಲಿ ನೈತಿಕತೆಯಿಂದ ಬದುಕಿದ ಮಾಜಿ ಮುಖ್ಯಮಂತ್ರಿ ಎಸ್.ಆರ್….

Read More

ವಿದ್ಯೆ ವ್ಯಕ್ತಿತ್ವ ರೂಪಿಸಬೇಕು, ಸ್ವಾವಲಂಬಿ ಬದುಕಿಗೆ ದಾರಿಯಾಗಬೇಕು: ಲೀಲಾವತಿ ಆರ್. ಪ್ರಸಾದ

ಧಾರವಾಡ: ವಿದ್ಯೆಯು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಪ್ರಬಲ ಸಾಧನವಾಗಬೇಕು ಹಾಗೂ ಸ್ವಾವಲಂಬಿ ಬದುಕಿಗೆ ದಾರಿದೀಪವಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಸಚಿವೆ ಲೀಲಾವತಿ ಆರ್. ಪ್ರಸಾದ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ವಿದ್ಯಾವರ್ಧಕ ಸಂಘವು (ಕ.ವಿ.ವ. ಸಂಘ) ಆಯೋಜಿಸಿದ್ದ ಶ್ರೀಮತಿ ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ ದತ್ತಿ ಸಮಾರಂಭದಲ್ಲಿ ‘ಶಾಂತಲಾ ಪಾಟೀಲ ಸಾಹಿತ್ಯ ಪುರಸ್ಕಾರ-೨೦೨೫’ ಪ್ರದಾನ ಮಾಡಿ ಮಾತನಾಡಿದರು. ಮಹಿಳೆಯರಿಗೆ ರಕ್ಷಣೆ ಇಲ್ಲದಿರುವುದು ನಾಗರಿಕ ಸಮಾಜಕ್ಕೆ ಕಪ್ಪು ಚುಕ್ಕೆಇಂದಿನ ಸಂಧಿಗ್ದ ಪರಿಸ್ಥಿತಿಯಲ್ಲಿ ಮಹಿಳೆಯರಿಗೆ ಶಿಕ್ಷಣದ ಜೊತೆಗೆ…

Read More

ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಉದ್ಯೋಗ: ಅಕ್ಟೋಬರ್ 9 ರಂದು ಸಂದರ್ಶನ

ಧಾರವಾಡ: ಕೃಷಿ ಪದವಿ ಪಡೆದವರಿಗೆ ಇಲ್ಲಿದೆ ಸುವರ್ಣಾವಕಾಶ. ಧಾರವಾಡದ ಕೃಷಿ ಮಹಾವಿದ್ಯಾಲಯದ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ಖಾಲಿ ಇರುವ ವಿವಿಧ ತಾತ್ಕಾಲಿಕ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗಾಗಿ ಅಕ್ಟೋಬರ್ 09, 2025 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಂದು ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಆಸಕ್ತರು ತಮ್ಮ ಅರ್ಜಿ…

Read More