ಧಾರವಾಡ:ಸಮೀಕ್ಷೆಗೆ ಸಹಕರಿಸಲು ಡಿಸಿ ಮನವಿ: ಸೆ.22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ
ಧಾರವಾಡ: ಜಿಲ್ಲೆಯಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಎಲ್ಲ ಕುಟುಂಬಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ ಮಾಡಿದ್ದಾರೆ. ಪ್ರತಿ ಮನೆಯೂ ಈ ಮಹತ್ವದ ಸಮೀಕ್ಷೆಯಲ್ಲಿ ಭಾಗವಹಿಸಿ, ಅಗತ್ಯ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ, ಸಮೀಕ್ಷೆ ನಡೆಸಲಿರುವವರಿಗೆ ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆಗಾಗಿ ಗುರುತಿಸಲಾದ ಮನೆಗಳಿಗೆ ಸ್ಟಿಕ್ಕರ್ಗಳನ್ನು ಸಹ ಅಂಟಿಸಲಾಗಿದೆ….

