ಗ್ರಾಮೀಣ ಜನಪದ ಹಾಡುಗಳ ಸ್ಪರ್ಧೆಯಲ್ಲಿ ವಾಗ್ದೇವಿ ಮಹಿಳಾ ಮಂಡಳಕ್ಕೆ ಪ್ರಥಮ
ಧಾರವಾಡ: ಜಾನಪದ ಹಾಡುಗಳು ಗ್ರಾಮೀಣ ಬದುಕಿನ ನೋವು-ನಲಿವುಗಳ ಸಮಗ್ರ ಚಿತ್ರಣ ನೀಡುತ್ತವೆ. ನಮ್ಮ ಪೂರ್ವಜರ ಈ ಸಂಪ್ರದಾಯಿಕ ಕಲೆಗಳು ಮನಸ್ಸನ್ನು ಉಲ್ಲಸಿತಗೊಳಿಸುವುದರ ಜೊತೆಗೆ ಸಂಸ್ಕೃತಿಯನ್ನು ಉಳಿಸುತ್ತವೆ ಎಂದು ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು ಜಯಶ್ರೀ ಗುತ್ತಲ ದತ್ತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ-೨೦೨೫’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯ ಜೊತೆಗೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು….

