ನ್ಯಾಯದಾನದಲ್ಲಿ ಮಧ್ಯಸ್ಥಿಕೆ ಪ್ರಮುಖ ಪಾತ್ರ: ಜಿಲ್ಲಾ ನ್ಯಾಯಾಧೀಶೆ ಬಿ.ಎಸ್. ಭಾರತಿ

ಧಾರವಾಡ: ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದ ಕಾನೂನು ಸೇವಾ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಧಾರವಾಡ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಧಾರವಾಡ ಮತ್ತು ಗದಗ ಜಿಲ್ಲೆಯ ಮಧ್ಯಸ್ಥಿಕೆಗಾರರಿಗಾಗಿ 02 ದಿನಗಳ ಪುನಶ್ಚೇತನ ಕಾರ್ಯಾಗಾರವನ್ನು ಸೆಪ್ಟೆಂಬರ್ 27, 2025 ರಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಾಗಾರ ಉದ್ಘಾಟನೆ:ಕಾರ್ಯಾಗಾರದ ಉದ್ಘಾಟನೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು…

Read More

ಕ.ವಿ.ವ. ಸಂಘದಿಂದ 124ನೇ ಸರ್ವಸದಸ್ಯರ ವಾರ್ಷಿಕ ಸಭೆ ಕರೆ

ಧಾರವಾಡ:ಇಲ್ಲಿನ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘವು (ಕ.ವಿ.ವ. ಸಂಘ) ತನ್ನ ೧೨೪ನೇ ಸರ್ವಸದಸ್ಯರ ವಾರ್ಷಿಕ ಸಭೆಯನ್ನು ಆಯೋಜಿಸಿದೆ. ಸಭೆಯನ್ನು ನಾಳೆ ಸೆ 28 ರಂದು, ಭಾನುವಾರ, ಮುಂಜಾನೆ 11:00 ಗಂಟೆಗೆ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಕರೆಯಲಾಗಿದೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶಂಕರ ಹಲಗತ್ತಿ ಅವರು, ಸಂಘದ ಎಲ್ಲಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಿ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಸಂಶಿ ಕೆಎಲ್‌ಇ ಕಾಲೇಜಿನ ಯೋಗ ಪ್ರತಿಭೆಗಳು ರಾಜ್ಯ ಮಟ್ಟಕ್ಕೆ: ಗುರಯ್ಯ, ಪ್ರಜ್ವಲ್‌ಗೆ ಪ್ರಥಮ ಸ್ಥಾನ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಗುರಯ್ಯ ಹಿರೇಮಠ ಮತ್ತು ಪ್ರಜ್ವಲ್ ಸೂರಣಗಿ ಅವರು ತಾಳಾತ್ಮಕ ಯೋಗಾಸನ ಜೋಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅದೇ ರೀತಿ, ಗುರಯ್ಯ ಹಿರೇಮಠ ಅವರು ಕಲಾತ್ಮಕ ಯೋಗಾಸನ ವೈಯಕ್ತಿಕ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಪಡೆದು, ವೈಯಕ್ತಿಕ ವೀರಾಗ್ರಣಿ…

Read More

ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ವಯಸ್ಕರ ಸಾಕ್ಷರತಾ ಕಾರ್ಯಕ್ರಮಕ್ಕೆ ಗಣ್ಯರಿಂದ ಶ್ಲಾಘನೆ

ಕುಂದಗೋಳ: ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 5 ವರ್ಷಗಳ ಅವಧಿಯ 15 ವರ್ಷ ಮೇಲ್ಪಟ್ಟ ವಯಸ್ಕರಿಗೆ ರಾಜ್ಯ ಸರ್ಕಾರವು ಶಿಕ್ಷಣ ಕಲಿಕೆಗೆ ದಿಟ್ಟ ಹೆಜ್ಜೆ ಇಟ್ಟು ಸಾಕ್ಷರತೆಗೊಳಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಸಂಶಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಗಿರೀಶಗೌಡ್ರ ಪಾಟೀಲ ಅವರು ಅಭಿಪ್ರಾಯಪಟ್ಟರು. ಅವರು ಶನಿವಾರದಂದು ತಾಲೂಕಿನ ಸಂಶಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಂಶಿ ಗ್ರಾ.ಪಂ. ಜಂಟಿ ಆಶ್ರಯದಲ್ಲಿ ನಡೆದ “ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ, ಸಾಕ್ಷರತಾ ಸಪ್ತಾಹ”…

Read More

ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರ: ಡಿಸಿ ದಿವ್ಯ ಪ್ರಭು

ಧಾರವಾಡ: ಪರಿಶಿಷ್ಟ ಜಾತಿ ಉಪಯೋಜನೆ (SCSP) ಮತ್ತು ಬುಡಕಟ್ಟು ಉಪಯೋಜನೆ (TSP) ಅಡಿಯಲ್ಲಿ ಬಿಡುಗಡೆಯಾಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು ಶೇ. 100ರಷ್ಟು ಗುರಿ ಸಾಧಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾಗಿರುವ ಅನುದಾನ ಲ್ಯಾಪ್ಸ್‌ ಆಗದಂತೆ ಎಲ್ಲ ಇಲಾಖಾ ಮುಖ್ಯಸ್ಥರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ನಿನ್ನೆ (ಸೆ. 25) ಸಂಜೆ 2025-26ನೇ ಸಾಲಿನ ಆಗಸ್ಟ್ ಮಾಹೆಯ ಅಂತ್ಯದವರೆಗಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ…

Read More

ಜಾತಿಗಣತಿ ನಿರ್ಲಕ್ಷ್ಯಿಸಿದರೆ ಶಿಸ್ತುಕ್ರಮ: ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ

ಧಾರವಾಡ: ಸಾರ್ವಜನಿಕ ಅಭಿವೃದ್ಧಿ ಹಿತಾಸಕ್ತಿಯಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ಕಾರ್ಯಕ್ಕೆ ನಿಯೋಜಿತರಾಗಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು. ನಿರ್ಲಕ್ಷ್ಯ, ನೆಪ ಅಥವಾ ಉದಾಸೀನತೆ ತೋರುವವರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಜಿಲ್ಲಾಧಿಕಾರಿ (ಡಿಸಿ) ಮತ್ತು ಸಮೀಕ್ಷೆಯ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷೆ ದಿವ್ಯ ಪ್ರಭು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು (ಸೆ. 26) ಮಧ್ಯಾಹ್ನ…

Read More

ಧಾರವಾಡ ಗರಗ ಬೈಪಾಸ್‌ ರಸ್ತೆಯಲ್ಲಿ ಭೀಕರ ಅಪಘಾತ: ಎರಡು ಲಾರಿ ಡಿಕ್ಕಿ, ನಾಲ್ವರಿಗೆ ಗಾಯ

ಧಾರವಾಡ :ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿದ್ದಾರೆ. ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಲಾರಿಗೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಲಾರಿ ತೀವ್ರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಲಾರಿಗಳ ಮುಂಭಾಗ ನುಜ್ಜುಗುಜ್ಜಾಗಿದ್ದು, ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಒಂದು ಲಾರಿಯ ಚಾಲಕ ತೀವ್ರವಾಗಿ ಜಖಂಗೊಂಡಿರುವ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ. ಸ್ಥಳೀಯರ ಮತ್ತು ಪೊಲೀಸರ ಸಹಕಾರದಿಂದ ಆತನನ್ನು ಹೊರತೆಗೆದು, ಉಳಿದ ಗಾಯಾಳುಗಳೊಂದಿಗೆ…

Read More

ಕೆಪಿಸಿಸಿಗೆ ನಿವೇಶನ ದಾನ: ಕುಂದಗೋಳದಲ್ಲಿ ಚಂದ್ರಶೇಖರ ಜುಟ್ಟಲರಿಂದ ಶ್ಲಾಘನೀಯ ಕಾರ್ಯ

ಕುಂದಗೋಳ: ಇಂದಿನ ದಿನಮಾನದಲ್ಲಿ ಒಂದು ರೂಪಾಯಿ ಖರ್ಚು ಮಾಡುವ ಮುನ್ನ ಹಿಂದೆ ಮುಂದೆ ನೋಡುವ ಸನ್ನಿವೇಶದಲ್ಲಿ, ಮಾಜಿ ಶಾಸಕ ದಿ. ಗೋವಿಂದಪ್ಪ ಜುಟ್ಟಲ ಅವರ ಪುತ್ರ ಹಾಗೂ ಕೆಪಿಸಿಸಿ ಸದಸ್ಯ ಚಂದ್ರಶೇಖರ ಜುಟ್ಟಲ ಅವರು ಪಕ್ಷದ ನಿಷ್ಠೆ ಮತ್ತು ನಾಯಕರ ಮೇಲಿನ ಗೌರವವನ್ನು ಅನಾವರಣಗೊಳಿಸಿದ್ದಾರೆ. ತಮ್ಮ ತಂದೆಯವರ ಸ್ಮರಣಾರ್ಥ ಪಟ್ಟಣದಲ್ಲಿರುವ, ಲಕ್ಷಾಂತರ ರೂ. ಬೆಲೆ ಬಾಳುವ ಎರಡು ಗುಂಟೆ ನಿವೇಶನವನ್ನು ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ದಾನವಾಗಿ ನೀಡಿದ್ದಾರೆ. ಈ ಮೂಲಕ ಪಕ್ಷಕ್ಕಾಗಿ ಆಸ್ತಿ…

Read More

“ಅನ್ಯ ಸಮುದಾಯ ದವರನ್ನು ಎಸ್ ಟಿ ಸಮುದಾಯಕ್ಕೆ ಸೇರಿದರೆ ರಾಜನಹಳ್ಳಿ ಗುರುಗಳ ಸಮ್ಮುಖದಲ್ಲಿ ಹೊರಾಟ ಶತಸಿದ್ದ. ಎಸ್ ಟಿ ಸಮಾಜದ ತಾ ಅಧ್ಯಕ್ಷ ರಾಜು ದೊಡ್ಡಶಂಕರ

ಕುಂದಗೋಳ/ಧಾರವಾಡ: ಪರಿಶಿಷ್ಟ ಪಂಗಡದ (ST) ಪಟ್ಟಿಗೆ ಕುರುಬ ಹಾಗೂ ಇತರೆ ಸಮಾಜವನ್ನು ಸೇರಿಸಲು ಹುನ್ನಾರ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರ ಮತ್ತು ನಕಲಿ ಜಾತಿ ಪ್ರಮಾಣ ಪತ್ರವನ್ನು ನೀಡುತ್ತಿರುವದನ್ನು ಖಂಡಿಸಿ ಅಖೀಲ, ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಮತ್ತು ವಾಲ್ಮೀಕಿ ಸಮಾಜದ ಮುಖಂಡರು ಗುರುವಾರ ಕುಂದಗೋಳದಲ್ಲಿ ಪ್ರಬಲ ಪ್ರತಿಭಟನೆ ನಡೆಸಿದರು. ಪಟ್ಟಣದ ಗಾಳಿ ಮರೇಮ್ಮ ದೇವಸ್ಥಾನದಿಂದ ತಹಶಿಲ್ದಾರ್ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಇತರೆ ಸಮುದಾಯಗಳ ಸೇರ್ಪಡೆಯಿಂದ ಮೂಲ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗುತ್ತದೆ ಎಂದು ದೂರಿದರು. ನಂತರ…

Read More

ಉದ್ಯೋಗಕ್ಕಾಗಿ ಧಾರವಾಡ ಸ್ತಬ್ಧ: ಭರ್ತಿ ವಿಳಂಬದ ವಿರುದ್ಧ ಆಕಾಂಕ್ಷಿಗಳ ಆಕ್ರೋಶ!

ಧಾರವಾಡ:ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿ, ನೂರಾರು ಉದ್ಯೋಗಾಕಾಂಕ್ಷಿಗಳು ಗುರುವಾರ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ‘ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ’ದ (All Karnataka State Students Association) ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಿಂದಾಗಿ ನಗರದ ಜನಜೀವನ ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತ್ತು. ನಾಲ್ಕು ಗಂಟೆ ಸಂಚಾರಕ್ಕೆ ತಡೆ, ಸಾರ್ವಜನಿಕರ ಪರದಾಟಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಶ್ರೀನಗರದಿಂದ ಪಾದಯಾತ್ರೆ ಆರಂಭಿಸಿ, ಕಾಲೇಜು ರಸ್ತೆ ಮೂಲಕ…

Read More