ಗ್ರಾಮೀಣ ಜನಪದ ಹಾಡುಗಳ ಸ್ಪರ್ಧೆಯಲ್ಲಿ ವಾಗ್ದೇವಿ ಮಹಿಳಾ ಮಂಡಳಕ್ಕೆ ಪ್ರಥಮ

ಧಾರವಾಡ: ಜಾನಪದ ಹಾಡುಗಳು ಗ್ರಾಮೀಣ ಬದುಕಿನ ನೋವು-ನಲಿವುಗಳ ಸಮಗ್ರ ಚಿತ್ರಣ ನೀಡುತ್ತವೆ. ನಮ್ಮ ಪೂರ್ವಜರ ಈ ಸಂಪ್ರದಾಯಿಕ ಕಲೆಗಳು ಮನಸ್ಸನ್ನು ಉಲ್ಲಸಿತಗೊಳಿಸುವುದರ ಜೊತೆಗೆ ಸಂಸ್ಕೃತಿಯನ್ನು ಉಳಿಸುತ್ತವೆ ಎಂದು ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು ಜಯಶ್ರೀ ಗುತ್ತಲ ದತ್ತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ-೨೦೨೫’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯ ಜೊತೆಗೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು….

Read More

ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಮಹರ್ಷಿ ಶ್ರೀ ಅರವಿಂದರ ಕುರಿತು ಉಪನ್ಯಾಸ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಸೆಪ್ಟೆಂಬರ್ ೧೯, ಶುಕ್ರವಾರದಂದು ಸಂಜೆ ೬ ಗಂಟೆಗೆ ‘ಮಹರ್ಷಿ ಶ್ರೀ ಅರವಿಂದರ ತತ್ವದರ್ಶನ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಸಂಘದ ಶ್ರೀ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ನಡೆಯಲಿದೆ. ಶ್ರೀ ಗುರಪ್ಪನವರು ಶ್ರೀಮತಿ ಗೌರಮ್ಮ ಬೆಲ್ಲದ ದತ್ತಿ ನಿಮಿತ್ತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗೋವಾದ ಇಂಡೋ-ಪೋರ್ಚುಗೀಸ್ ಸಾಹಿತ್ಯ ಪ್ರತಿಷ್ಠಾನದ ನಿರ್ದೇಶಕ ಡಾ. ಅರವಿಂದ ಯಾಳಗಿ ಅವರು ಅತಿಥಿ ಉಪನ್ಯಾಸಕರಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ…

Read More

ಮಹಿಳೆಯರ ರುದ್ರ ಪಠಣದಿಂದ ಸಕಾರಾತ್ಮಕ ಶಕ್ತಿ ವೃದ್ಧಿ: ಮಂಗಳಾ ಮಠದ

ಧಾರವಾಡ: ಮಹಿಳೆಯರು ದಿನನಿತ್ಯ ರುದ್ರ ಪಠಣ ಮಾಡುವುದರಿಂದ 32 ಕಿ.ಮೀ ದೂರದಷ್ಟು ಸಕಾರಾತ್ಮಕ ಶಕ್ತಿ ಪಸರಿಸುತ್ತದೆ. ರುದ್ರ ಪಠಣದ ಮಹತ್ವವು ಅಗಾಧವಾಗಿದ್ದು, ಪ್ರತಿಯೊಬ್ಬರೂ ಇದರ ಲಾಭ ಪಡೆಯಬೇಕು ಎಂದು ಮಂಗಳಾ ಮಠದ ಅವರು ಅಭಿಪ್ರಾಯಪಟ್ಟರು. ಇಲ್ಲಿನ ರೆವಿನ್ಯೂ ಕಾಲನಿಯ ಶ್ರೀ ಸಿದ್ಧಾರೂಢ ಮಠದ ಸಭಾಭವನದಲ್ಲಿ ತರಂಗಿಣಿ ಮಹಿಳಾ ಮಂಡಳಿ ಆಯೋಜಿಸಿದ್ದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಆಧುನಿಕ ಕಾಲದಲ್ಲಿ ಮಹಿಳೆಯರು ಹೆಚ್ಚು ಜಾಗರೂಕತೆಯಿಂದ ಇರಬೇಕು. ನಿರಂತರವಾಗಿ ಧಾರ್ಮಿಕ ಅಧ್ಯಯನ ಮಾಡುವುದರಿಂದ ದೈವಿಕ ಶಕ್ತಿ ಹೆಚ್ಚುತ್ತದೆ ಎಂದು…

Read More

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಧಾರವಾಡದಿಂದ ವಿಧಾನಸೌಧದವರೆಗೆ ಬೈಕ್ ಜಾಥಾ

ಧಾರವಾಡ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ, ವಿಜೇತಕುಮಾರ ಹೊಸಮಠ ನೇತೃತ್ವದಲ್ಲಿ 10 ಬೈಕ್ ರೈಡರ್‌ಗಳ ತಂಡ ಧಾರವಾಡದಿಂದ ವಿಧಾನಸೌಧದವರೆಗೆ ಬೈಕ್ ಜಾಥಾ ನಡೆಸಿ ಗಮನ ಸೆಳೆದಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೆಪ್ಟೆಂಬರ್ 14, 2025ರಂದು ಈ ಜಾಥಾ ಆಯೋಜಿಸಲಾಗಿತ್ತು. ಸಿಇಒ ಭುವನೇಶ ಪಾಟೀಲರಿಂದ ಚಾಲನೆಕರ್ನಾಟಕ ಕಾಲೇಜು ಮೈದಾನದಿಂದ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಯುವಕರು ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ…

Read More

ಸಂಶಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಅವಿರೋಧ ಆಯ್ಕೆ

ಕುಂದಗೋಳ: ತಾಲ್ಲೂಕಿನ ಸಂಶಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತಕ್ಕೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ. ಶ್ರೀ ಗುರುಶಿದ್ದಪ್ಪ ಹ. ನಾಯ್ಕರ ಅವರು ಅಧ್ಯಕ್ಷರಾಗಿ ಮತ್ತು ಶ್ರೀ ಖಾದರಸಾಬ ಚಾಂದಖಾನವರ ಅವರು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬುದುವಾರದಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ….

Read More

ಗಾಂಧಿ ಜಯಂತಿಯವರೆಗೆ ‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಚಾಲನೆ

ಧಾರವಾಡ: ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆಯ ಪ್ರಯುಕ್ತ ‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಚಾಲನೆ ನೀಡಿದರು. ಸೆಪ್ಟೆಂಬರ್ 17ರಂದು ಆರಂಭವಾಗಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಮುಕ್ತಾಯಗೊಳ್ಳುವ ಈ 15 ದಿನಗಳ ಅಭಿಯಾನವು ಜಿಲ್ಲಾದ್ಯಂತ ಬೃಹತ್ ಪ್ರಮಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ತೊದಲಬಾಗಿ ಅವರು, ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ‘ಸ್ವಚ್ಛತಾ ಹಿ ಸೇವಾ’…

Read More

ಕುಂದಗೋಳ ಪಟ್ಟಣದ ತಹಶಿಲ್ದಾರ ಕಚೇರಿ ಆವರಣದಲ್ಲಿ ಭೋವಿ ಸಮಾಜದಿಂದ ಪ್ರತಿಭಟನೆ: ತಹಶಿಲ್ದಾರಗೆ ಮನವಿ

ಕುಂದಗೋಳ: ಭೋವಿ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ, ಗುರುವಾರ ತಹಶೀಲ್ದಾರ ಕಚೇರಿ ಆವರಣದಲ್ಲಿ ಭೋವಿ ಸಮಾಜದವರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು ಸಲ್ಲಿಸಿದ ಮನವಿಯಲ್ಲಿ, “ಭೋವಿ ಸಮಾಜವನ್ನು ಸರಕಾರವೇ 1950ರಲ್ಲಿಯೇ ಪರಿಶಿಷ್ಟ ಜಾತಿಗೆ ಸೇರಿಸಿ ಆದೇಶ ಹೊರಡಿಸಿದೆ. ಹಲವಾರು ಬಾರಿ ಸರ್ಕಾರಿ ಸುತ್ತೊಲೆಗಳು ಹೊರಬಿದ್ದಿದ್ದರೂ, ಪ್ರಸ್ತುತ ತಹಶೀಲ್ದಾರರು ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಅನ್ಯಾಯಕ್ಕೆ ಗುರಿಯಾಗುತ್ತಿದ್ದಾರೆ. ಹಿಂದಿನ ತಹಶೀಲ್ದಾರರು ನಾಗರಿಕ ಹಕ್ಕು ಜಾರಿ…

Read More

ಶಿಕ್ಷಣವು ಮಹಿಳಾ ಸಬಲೀಕರಣಕ್ಕೆ ಪ್ರಬಲ ಅಸ್ತ್ರ: ಡಾ. ಪ್ರಜ್ಞಾ ಮತ್ತಿಹಳ್ಳಿ

ಧಾರವಾಡ: ವ್ಯಕ್ತಿಯ ಜೀವನದಲ್ಲಿ ಶಿಕ್ಷಣವು ಒಂದು ಪ್ರಮುಖ ಶಕ್ತಿ. ಅದರಲ್ಲೂ ಮಹಿಳೆಯರು ಅಜ್ಞಾನ ಮತ್ತು ಶೋಷಣೆಯಿಂದ ಮುಕ್ತರಾಗಲು ಸಾಕ್ಷರತೆ ಪ್ರಮುಖ ಸಾಧನವಾಗಿದೆ ಎಂದು ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅಭಿಪ್ರಾಯಪಟ್ಟರು. ನಗರದ ಶ್ರೀ ಸತ್ಯಸಾಯಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ‘ಶಿಕ್ಷಣ ಮಂಟಪ’ ಹಾಗೂ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸಾಕ್ಷರತಾ ದಿನಾಚರಣೆಯ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಅಕ್ಷರ ಕಲಿತು ತಮ್ಮ ಮೇಲಾಗುತ್ತಿರುವ…

Read More

ಧಾರವಾಡ | ಓಜೋನ್ ಪದರ; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

ಧಾರವಾಡ:ಓಝೋನ್ ಪದರವು ಮನುಕುಲದ ಜೀವ ರಕ್ಷಕವಾಗಿದ್ದು, ಅದರ ಸಂರಕ್ಷಣೆಯು ಹೆಚ್ಚು ಅಗತ್ಯವಾಗಿದೆ. ಈ ಪದರವು ಭೂಮಿಯ ಮೇಲಿನ ಜೀವನವನ್ನು ಬೆಂಬಲಿಸುವಲ್ಲಿ ಮತ್ತು ಎಲ್ಲಾ ಜೀವಿಗಳಿಗೆ ಸುರಕ್ಷಿತ ಪರಿಸರವನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಡಾ. ಎನ್.ಬಿ.ನಾಲತವಾಡ ಧಾರವಾಡದ ಅಂಜುಮನ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಐ.ಎ.ಮುಲ್ಲಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಓಝೋನ್ ಪದರವು ಸೂರ್ಯನ ಹಾನಿಕಾರಕ ನೇರಳಾತೀತ ವಿಕಿರಣವನ್ನು ಹೀರಿಕೊಂಡು ಭೂಮಿಯ ಮೇಲೆ ಜೀವ ಸಂಕುಲಗಳನ್ನು…

Read More

ಕ.ವಿ.ವ. ಸಂಘದ ಗೌರವ ಉಪಾಧ್ಯಕ್ಷರಾಗಿ ಐದು ಜನರ ನೇಮಕ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮೂರು ವರ್ಷಗಳ ಅವಧಿಗೆ ಐವರು ಗಣ್ಯರನ್ನು ಗೌರವ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ 12, 2025ರಂದು ನಡೆದ ಕಾರ್ಯಕಾರಿ ಸಮಿತಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರ ಅನುಮೋದನೆಯ ನಂತರ ನೇಮಕಾತಿ ಅಂತಿಮಗೊಂಡಿದೆ. ಸಂಘದ ನಿಯಮಗಳು ಮತ್ತು ಸಾಮಾಜಿಕ ನ್ಯಾಯದ ಆಧಾರದ ಮೇಲೆ ಈ ನೇಮಕಗಳನ್ನು ಮಾಡಲಾಗಿದೆ. ಗೌರವ ಉಪಾಧ್ಯಕ್ಷರಾಗಿ ಆಯ್ಕೆಯಾದವರು: ಈ…

Read More