ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಸಂಘದ ಶತಮಾನೋತ್ಸವ ಸಮಾರಂಭ

ನವಲಗುಂದ : ಪಟ್ಟಣದಲ್ಲಿರುವ ನವಲಗುಂದ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಸಹಕಾರಿ ಪತ್ತಿನ ಸಂಘದ ಶತಮಾನೋತ್ಸವ ಸಮಾರಂಭ 101 ನೇ ವಾರ್ಷಿಕ ಸರ್ವಸಾಧಾರಣ ಸಭೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಸೆ 20 ಶನಿವಾರದಂದು ಬೆಳಿಗ್ಗೆ ತಾಲೂಕ ಪಂಚಾಯತ್ ಹತ್ತಿರ ವಿರುವ ಶಿಕ್ಷಕರ ಸಹಕಾರ ಕಲ್ಯಾಣ ಕೇಂದ್ರದಲ್ಲಿ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಗಣೇಶ ಜಿ ಹೊಳೆಯನ್ನವರ ತಿಳಿಸಿದ್ದಾರೆ ಶಿರಹಟ್ಟಿಯ ಜಗದ್ಗುರುಫಕ್ಕೀರ ದಿಂಗಾಲೇಶ್ವರ ಮಹಾಸ್ವಾಮೀಜಿಗಳು ಪಾವನ ಸಾನಿಧ್ಯ ಹಾಗೂ ಸುಳ್ಳ-ಹುಲಿಯ ಸಂಸ್ಥಾನ ಪಂಚಗ್ರಹ ಹಿರೇಮಠದ ಶಿವಸಿದ್ಧರಾಮೇಶ್ವರ…

Read More

ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮರು ಆಧಾರ ಸ್ತಂಭ: ಮಹಾಪೌರ ಜ್ಯೋತಿ ಪಾಟೀಲ

ಧಾರವಾಡ: ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಜ್ಯೋತಿ ಪಾಟೀಲ ಹೇಳಿದರು. ಅವರು ಪರಿಶ್ರಮ ಮತ್ತು ಕೌಶಲ್ಯದಿಂದಾಗಿ ಹಲವು ಅದ್ಭುತ ಕಲಾಕೃತಿಗಳು, ವಾಸ್ತುಶಿಲ್ಪಗಳು ರೂಪುಗೊಂಡಿವೆ ಎಂದು ಅವರು ತಿಳಿಸಿದರು.ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿಯೂ ವಿಶ್ವಕರ್ಮ ಸಮುದಾಯವು ತಮ್ಮ…

Read More

ಸ್ವಸ್ಥ ನಾರಿ, ಸಶಕ್ತ ಪರಿವಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: “ಮಹಿಳೆ ಆರೋಗ್ಯವಂತಳಾಗಿದ್ದರೆ ಇಡೀ ಕುಟುಂಬವೇ ಸಶಕ್ತವಾಗಿರುತ್ತದೆ,” ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದೇಶಾದ್ಯಂತ ‘ಸೇವಾ ಪಾಕ್ಷಿಕ’ ಆಚರಿಸಲಾಗುತ್ತಿದ್ದು, ಅದರ ಭಾಗವಾಗಿ ನಗರದಲ್ಲಿ ಆಯೋಜಿಸಿದ್ದ ‘ಸ್ವಸ್ಥ ನಾರಿ, ಸಶಕ್ತ ಪರಿವಾರ’ ರಾಷ್ಟ್ರವ್ಯಾಪಿ ಆರೋಗ್ಯ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.15 ದಿನಗಳ ಕಾಲ ವಿಶೇಷ ಆರೋಗ್ಯ ಅಭಿಯಾನಪ್ರಧಾನಿ ಮೋದಿ ಮಧ್ಯಪ್ರದೇಶದ ಧಾರದಿಂದ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಮುಂದಿನ…

Read More

ದಿ:ಸವಾಯಿ ಗಂಧರ್ವರ ಪುಣ್ಯತಿಯ ನಿಮಿತ್ತ ನಡೆದ ಸಂಗೀತ ಆಲಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕುಂದಗೋಳ: ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ನಡೆದ ಅಹೋರಾತ್ರಿ ಸಂಗೀತ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಂಸದ ಐ.ಜಿ. ಸನದಿ ಆಗಮಿಸಿ ಸಂಗೀತ ಆಲಿಸಿದರು. ಈ ವೇಳೆ, ಸುಪ್ರಸಿದ್ಧ ಸಂಗೀತ ಗಾಯಕ ಪದ್ಮಶ್ರೀ ಎಮ್ ವೆಂಕಟೇಶ ಕುಮಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ, ಸಚಿವರು ಮತ್ತು ಇತರ ಗಣ್ಯರು ಸ್ವಲ್ಪ ಸಮಯ ಸಂಗೀತದ ರಸದೌತಣವನ್ನು ಸವಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ಶ್ಯಾಮಸುಂದರ ದೇಸಾಯಿ, ದಿ ಸವಾಯಿ ಗಂಧರ್ವ ವಿಶ್ವಸ್ಥ…

Read More

ಯಾವುದೇ ಶುಭಕಾರ್ಯ ವಿಶ್ವಕರ್ಮ ಸಮಾಜದಿಂದ ಪ್ರಾರಂಭ: ಶಾಸಕ ಎಂ.ಆರ್.ಪಾಟೀಲ

ಕುಂದಗೋಳ: ಯಾವುದೇ ಶುಭ ಕಾರ್ಯಗಳು ವಿಶ್ವಕರ್ಮ ಸಮುದಾಯದಿಂದಲೇ ಪ್ರಾರಂಭವಾಗುತ್ತವೆ ಎಂದು ಶಾಸಕ ಎಂ.ಆರ್. ಪಾಟೀಲ ಅವರು ಹೇಳಿದರು. ಅವರು ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಡೆದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿಶ್ವಕರ್ಮ ಸಮುದಾಯದವರು ಶ್ರಮಜೀವಿಗಳು ಮತ್ತು ‘ಕಾಯಕವೇ ಕೈಲಾಸ’ ತತ್ವಕ್ಕೆ ಬದ್ಧರಾಗಿದ್ದಾರೆ. ಅವರು ತಮ್ಮ ಕಾಯಕದಿಂದಲೇ ಜೀವನ ಕಂಡುಕೊಂಡವರು ಎಂದು ಶಾಸಕರು ಶ್ಲಾಘಿಸಿದರು. ನಂತರ ತಹಶೀಲ್ದಾರ್ ರಾಜು ಮಾವರಕರ್ ಮಾತನಾಡಿ, ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ…

Read More

ಪ್ರಧಾನಿ ಮೋದಿ ಜನ್ಮದಿನ: ಆಸ್ಪತ್ರೆ ಸ್ವಚ್ಛತಾ ಕಾರ್ಯ ಹಾಗೂ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಎಂ.ಆರ್.ಪಾಟೀಲ ಚಾಲನೆ

ಕುಂದಗೋಳ: ವಿಶ್ವನಾಯಕ ಹಾಗೂ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ ನಿಮಿತ್ತ ಬಿಜೆಪಿ ಕುಂದಗೋಳ ಮಂಡಲ ವತಿಯಿಂದ ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಶಾಸಕ ಎಂ.ಆರ್. ಪಾಟೀಲ ಅವರು ಚಾಲನೆ ನೀಡಿದರು. ಈ ಸಮಯದಲ್ಲಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು, ಬ್ರೆಡ್ ಹಾಗೂ ಬಿಸ್ಕತ್‌ಗಳನ್ನು ವಿತರಿಸಿದರು. ಸೆ. 17ರಿಂದ ಅ. 2ರವರೆಗೆ ಸೇವಾ ಕಾರ್ಯಕ್ರಮಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಸೆಪ್ಟೆಂಬರ್ 17ರಿಂದ ಗಾಂಧಿ ಜಯಂತಿಯಾದ ಅಕ್ಟೋಬರ್ 2ರವರೆಗೆ ವಿವಿಧ ಸೇವಾ ಕಾರ್ಯಕ್ರಮಗಳನ್ನು…

Read More

ಜನಪರ ಸೇವೆಗೆ ಮುಂದಾಗಿ: ನೂತನ ಪೇದೆಗಳಿಗೆ ಎಡಿಜಿಪಿ ಆಲೋಕ್ ಕುಮಾರ್ ಕರೆ

ಧಾರವಾಡ: ಸಾರ್ವಜನಿಕ ಸೇವೆಗೆ ಬದ್ಧರಾಗಿ, ಪ್ರತಿಯೊಬ್ಬ ಪೇದೆಯೂ ಜನಪರ ಮತ್ತು ಜನಸ್ನೇಹಿ ಪೊಲೀಸ್ ಆಗಿ ಕಾರ್ಯನಿರ್ವಹಿಸಬೇಕು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಲೋಕ್ ಕುಮಾರ್ ಕರೆ ನೀಡಿದರು. ನಿರ್ಲಕ್ಷ್ಯದ (ಕಳಪೆ) ತರಬೇತಿಯಿಂದ ಉತ್ತಮ ಕರ್ತವ್ಯ ನಿರೀಕ್ಷಿಸಲು ಸಾಧ್ಯವಿಲ್ಲ, ಹೀಗಾಗಿ ಇಲಾಖೆಯು ಪೇದೆಗಳ ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ಗಮನಹರಿಸಿದೆ ಎಂದು ಅವರು ತಿಳಿಸಿದರು. ಗಿರಿನಗರದಲ್ಲಿ ಪಥಸಂಚಲನ ಕಾರ್ಯಕ್ರಮಇಂದು ಬೆಳಿಗ್ಗೆ ಕಲಘಗಿ ರಸ್ತೆಯ ಗಿರಿನಗರದಲ್ಲಿರುವ ಪೊಲೀಸ್ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ನಡೆದ 2ನೇ ತಂಡದ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ಗಳ…

Read More

ಯೋಧರಿಗೆ ಕಾನೂನು ಸೇವೆ: ಧಾರವಾಡದಲ್ಲಿ ಉಚಿತ ಕ್ಲಿನಿಕ್ ಆರಂಭ

ಧಾರವಾಡ: ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡುವ ವೀರ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರು ಕಾನೂನಿನ ತೊಡಕುಗಳಲ್ಲಿ ಸಿಲುಕಿ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದ ಉಚಿತ ಕಾನೂನು ಸೇವೆಗಳ ಕ್ಲಿನಿಕ್‌ಗಳನ್ನು ಪ್ರಾರಂಭಿಸಲಾಗಿದೆ ಎಂದು ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಭಾರತಿ ಬಿ.ಎಸ್. ಹೇಳಿದರು. ಸೆಪ್ಟೆಂಬರ್ 15ರಂದು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ವೀರ…

Read More

ನಾಲ್ಕು ದಿನಗಳ ಕೃಷಿ ಮೇಳಕ್ಕೆ ದಾಖಲೆ ಜನಸಂದಣಿ: 23.74 ಲಕ್ಷ ಜನರಿಂದ ಭೇಟಿ

ಧಾರವಾಡ: ರೈತರಿಗೆ ಹೊಸ ತಂತ್ರಜ್ಞಾನ, ಸುಧಾರಿತ ತಳಿಗಳು ಹಾಗೂ ಕೃಷಿ ವರಮಾನ ಹೆಚ್ಚಿಸುವ ಕುರಿತು ಮಾಹಿತಿ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ 2025ನೇ ಸಾಲಿನ ಧಾರವಾಡ ಕೃಷಿ ಮೇಳ ಯಶಸ್ವಿಯಾಗಿ ಸಂಪನ್ನಗೊಂಡಿದೆ. ನಾಲ್ಕು ದಿನಗಳ ಈ ಮೇಳಕ್ಕೆ ದಾಖಲೆ ಸಂಖ್ಯೆಯಲ್ಲಿ ಅಂದರೆ, 23.74 ಲಕ್ಷ ಜನರು ಭೇಟಿ ನೀಡಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕೃಷಿಕರಿಗೆ ಪೂರಕ ಮಾಹಿತಿಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಂದ ಅಪಾರ ಸಂಖ್ಯೆಯ ರೈತರು ಮೇಳದಲ್ಲಿ ಭಾಗವಹಿಸಿದ್ದರು. ಕೃಷಿ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ಕುತೂಹಲದಿಂದ ಭೇಟಿ ನೀಡಿದ…

Read More

ಮಳಲಿ ಗ್ರಾಮ ಪಂಚಾಯತಿಗೆ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಅಧ್ಯಕ್ಷ

ಕುಂದಗೋಳ: ತಾಲ್ಲೂಕಿನ ಮಳಲಿ ಗ್ರಾಮ ಪಂಚಾಯತಿಗೆ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಬುದುವಾರದಂದು ಚುನಾವಣೆ ನಡೆಯಿತು. ಒಟ್ಟು 11 ಸದಸ್ಯ ಬಲ ಹೊಂದಿರುವ ಈ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಹಾಗೂ ಸುಮಿತ್ರಾಬಾಯಿ ಪ್ರಕಾಶ ಕದಂ ಎಂಬುವರು ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಅವರು 7 ಮತಗಳನ್ನು ಪಡೆದು ಜಯಶಾಲಿಯಾದರು, ಹಾಗೂ ಸುಮಿತ್ರಾಬಾಯಿ ಪ್ರಕಾಶ ಕದಂ ಅವರು 4 ಮತಗಳನ್ನು ಪಡೆದು ಪರಾಭವಗೊಂಡರು. ಇದರಿಂದ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ…

Read More