ಆನಂದ ಪಾಟೀಲರು ನಾಡಿನ ಸೃಜನಶೀಲ ಮಕ್ಕಳ ಸಾಹಿತಿ: ಸ.ರಾ. ಸುಳಕೂಡೆ
ಧಾರವಾಡ: ಮಕ್ಕಳಿಗಾಗಿ ವಿಶೇಷವಾಗಿ ಸಾಹಿತ್ಯ ಕೃಷಿ ಮಾಡಿರುವ ಹಿರಿಯ ಸಾಹಿತಿ ಆನಂದ ಪಾಟೀಲ ಅವರು ನಾಡಿನ ಸೃಜನಶೀಲ ಮಕ್ಕಳ ಸಾಹಿತಿ ಎಂದು ‘ಹೊಂಬೆಳಕು ಸಾಂಸ್ಕೃತಿಕ ಸಂಘ’ದ ಅಧ್ಯಕ್ಷ ಸ.ರಾ. ಸುಳಕೂಡೆ ಅವರು ಪ್ರಶಂಸಿಸಿದರು. ಬೆಂಗಳೂರಿನ ಭಾರತೀಯ ವಿದ್ಯಾ ಭವನ ಮತ್ತು ವಿನಾಯಕ ಗೋಕಾಕ ವಾಙ್ಮಯ ಟ್ರಸ್ಟ್ನಿಂದ 2025ನೇ ಸಾಲಿನ ಪ್ರತಿಷ್ಠಿತ ವಿ.ಕೃ. ಗೋಕಾಕ್ ಪ್ರಶಸ್ತಿ ಪುರಸ್ಕೃತರಾಗಿರುವ ಆನಂದ ಪಾಟೀಲ ಅವರನ್ನು ನಗರದ ಆಝಾದ ಉಪವನದ ಗಾಂಧೀಜಿ ಪ್ರತಿಮೆ ಆವರಣದಲ್ಲಿ ಸನ್ಮಾನಿಸಿ ಮಾತನಾಡಿದ ಸುಳಕೂಡೆ, “ಪಾಟೀಲರು ತಮ್ಮ ಮುಗ್ಧತೆ,…

