ಗಣೇಶ ವಿಸರ್ಜನೆ ಲಾಠಿ ಚಾರ್ಜ್: ಇಬ್ಬರು ಪೊಲೀಸ್ ಪೇದೆಗಳ ಅಮಾನತು

ಧಾರವಾಡ: ತಾಲ್ಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ನರೇಂದ್ರ ಗ್ರಾಮದಲ್ಲಿ ನಡೆದ ಘಟನೆ ರಾಜಕೀಯ ತಿರುವು ಪಡೆದುಕೊಂಡಿತ್ತು. ಸಿಪಿಐ ಕಮತಗಿ ಹಾಗೂ ಪೊಲೀಸ್ ಪೇದೆ ಸೈಯದ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು….

Read More

ಕುಂದಗೋಳದಲ್ಲಿ ಹಿಂದೀ ದಿನಾಚರಣೆ: ಉದ್ಯೋಗಾವಕಾಶಕ್ಕೆ ಹಿಂದಿ ಸಹಕಾರಿ! ಎಫ್ ಕೆ ಬಾಳಿಹಳ್ಳಿಮಠ

ಕುಂದಗೋಳ: ಹಿಂದೀ ಭಾಷೆಯನ್ನು ಕಲಿಯುವುದರಿಂದ ದೇಶ ಮತ್ತು ವಿದೇಶಗಳಲ್ಲಿ ಸುಲಭವಾಗಿ ಉದ್ಯೋಗ ಪಡೆಯಬಹುದು. ಕೇಂದ್ರ ಸರ್ಕಾರ ಮತ್ತು ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ವ್ಯವಹಾರ ನಡೆಸಲು ಹಿಂದೀ ಭಾಷೆ ಸಹಕಾರಿಯಾಗುತ್ತದೆ. ಆದ್ದರಿಂದ ಜ್ಞಾನಾರ್ಜನೆಗಾಗಿಯಾದರೂ ಹಿಂದಿ ಭಾಷೆ ಕಲಿಯುವುದು ಸೂಕ್ತ ಎಂದು ಗಾಂಧಿ ಹಿಂದೀ ವಿದ್ಯಾಪೀಠದ ಶ್ರೀ ಎಫ್.ಕೆ. ಬಾಳಿಹಳ್ಳಿಮಠ ಹೇಳಿದರು. ಪಟ್ಟಣದ ಗಾಂಧಿ ಹಿಂದೀ ವಿದ್ಯಾಪೀಠದ ಆವರಣದಲ್ಲಿ ಹಿಂದೀ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ…

Read More

ಬಮ್ಮಸಮುದ್ರದಲ್ಲಿ “ಕ್ಷೀರ ಸಂಜೀವಿನಿ” ಯೋಜನೆಗೆ ಚಾಲನೆ ಶಾಸಕ ಎಂ.ಆರ್. ಪಾಟೀಲ ಅವರಿಂದ ಹೈನುಗಾರಿಕೆಗೆ ಉತ್ತೇಜನ; ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ಶಾಸಕರು

ಹುಬ್ಬಳ್ಳಿ: ತಾಲ್ಲೂಕಿನ ಬಮ್ಮಸಮ್ಮುದ್ರ ಗ್ರಾಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್), ಧಾರವಾಡ, ಗದಗ, ಉತ್ತರಕನ್ನಡ ಜಿಲ್ಲಾ ಹಾಲು ಒಕ್ಕೂಟ ಹಾಗೂ ಬಮ್ಮಸಮುದ್ರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಯೋಗದಲ್ಲಿ “ಕ್ಷೀರ ಸಂಜೀವಿನಿ ಹಂತ-5” ಅರಿವು ಕಾರ್ಯಕ್ರಮಕ್ಕೆ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಶಾಸಕ ಎಂ.ಆರ್. ಪಾಟೀಲ ಅವರು ಗ್ರಾಮಸ್ಥರ ಪ್ರೀತಿಯ ಸ್ವಾಗತದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಹಾಲು ಸಂಗ್ರಹಣೆಯಲ್ಲಿ ಗಣನೀಯ ಸಾಧನೆಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ಬಮ್ಮಸಮುದ್ರ ಹಾಲು ಉತ್ಪಾದಕರ ಮಹಿಳಾ ಸಹಕಾರ…

Read More

ಸೆ-19 ರಂದು ಹುಬ್ಬಳ್ಳಿ ನೆಹರು ಮೈದಾನದಲ್ಲಿ ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ: ತಾಲೂಕು ಅಧ್ಯಕ್ಷ ಉಮೇಶ ಹೆಬಸೂರ

ಕುಂದಗೋಳ: ಸೆಪ್ಟೆಂಬರ್ 19ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ಹೆಬಸೂರ ಹೇಳಿದರು. ಪಟ್ಟಣದ ಕಲ್ಯಾಣಪುರ ಮಠದಲ್ಲಿ ಮಂಗಳವಾರ ಏಕತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ನಾಡಿನ ಪಂಚಪೀಠ ಶ್ರೀಗಳು, ವಿರಕ್ತ ಮಠಗಳ ಶ್ರೀಗಳು ಹಾಗೂ ಜಗದ್ಗುರುಗಳು ಈ ಸಮಾವೇಶದಲ್ಲಿ ಭಾಗವಹಿಸಿ ಸಮಾಜಕ್ಕೆ ಮಾರ್ಗದರ್ಶನ ನೀಡಲಿದ್ದಾರೆ. ಶಿರಹಟ್ಟಿಯ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ…

Read More

ಧಾರವಾಡ | ಸೈಬರ್ ವಂಚನೆ ಜಾಲಕ್ಕೆ ಸಿಲುಕದಿರಿ: ಪ್ರಸನ್ನ ಕುಲಕರ್ಣಿ

ಧಾರವಾಡ: ಮಾನವ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯಿಂದಾಗಿ ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೈಬರ್ ಜಗತ್ತನ್ನು ಋಣಾತ್ಮಕವಾಗಿ ಬಳಸುತ್ತಿರುವುದರಿಂದ ಅನೇಕರು ಆನ್‌ಲೈನ್ ವಂಚಕರ ಜಾಲಕ್ಕೆ ಬಲಿಯಾಗುತ್ತಿದ್ದಾರೆ ಎಂದು ಪ್ರಸನ್ನ ಕುಲಕರ್ಣಿ ತಿಳಿಸಿದ್ದಾರೆ. ನಗರದ ಅಂಜುಮನ್ ಕಾಲೇಜಿನಲ್ಲಿ ಆಯೋಜಿಸಿದ್ದ “ಆನ್‌ಲೈನ್ ವಂಚನೆ ಮತ್ತು ಆರ್ಥಿಕ ಸಾಕ್ಷರತೆ” ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾರೂ ಕೂಡ ಆನ್‌ಲೈನ್‌ನಲ್ಲಿ ತಮ್ಮ ಬ್ಯಾಂಕಿಂಗ್ ಖಾತೆಗಳ ಸಂಪೂರ್ಣ ವಿವರವನ್ನು ಹಂಚಿಕೊಳ್ಳಬಾರದು. “ಅತಿಯಾದರೆ ಅಮೃತವೂ ವಿಷ” ಎಂಬಂತೆ ಕೃತಕ ಬುದ್ಧಿಮತ್ತೆಯನ್ನು ಕೂಡ ಹಿತವಾಗಿ…

Read More

ಕುಂದಗೋಳದ ‘ಸಂಗೀತ ಕಾಶಿ’ಯಲ್ಲಿ ದಿ. ಸವಾಯಿ ಗಂಧರ್ವರ 73ನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಸಂಗೀತೋತ್ಸವದ ವೈಭವ

ಕುಂದಗೋಳ: ‘ಸಂಗೀತ ಕಾಶಿ’ ಎಂದೇ ಖ್ಯಾತಿ ಪಡೆದಿರುವ ಕುಂದಗೋಳದಲ್ಲಿ, ದಿ. ಸವಾಯಿ ಗಂಧರ್ವರ 73ನೇ ಪುಣ್ಯತಿಥಿಯ ನಿಮಿತ್ತ ಆಯೋಜಿಸಲಾದ ಅಹೋರಾತ್ರಿ ಸಂಗೀತ ಮಹೋತ್ಸವವು ವೈಭವಯುತವಾಗಿ ಆರಂಭಗೊಂಡಿತು. ಪಟ್ಟಣದ ದಿ:ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಿ. ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮಕ್ಕೆ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳು ಚಾಲನೆ ನೀಡಿ, ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸ್ವಾಮೀಜಿಗಳು ತಮ್ಮ ವಿಶಿಷ್ಟ…

Read More

ಶಿಕ್ಷಣ, ಯುವಕರ ಜಾಗೃತಿಯೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿ: ಸಚಿವ ಸಂತೋಷ ಲಾಡ್

ಧಾರವಾಡ: ಪ್ರಜೆಗಳೇ ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಯುವ ಸಮುದಾಯ ಜಾಗೃತವಾದರೆ ಮಾತ್ರ ಪ್ರಜಾಪ್ರಭುತ್ವ ಸದೃಢವಾಗಿ ಉಳಿಯಲು ಸಾಧ್ಯ ಎಂದು ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಅಭಿಪ್ರಾಯಪಟ್ಟಿದ್ದಾರೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೂಲ ಆಶಯ ಸಮಾಜದ ಎಲ್ಲ ವರ್ಗದ ಜನರಿಗೆ ಸಮಾನತೆ ಒದಗಿಸುವುದು ಎಂದು ತಿಳಿಸಿದರು. ಮೀಸಲಾತಿಯು ಸಮಾನತೆಯ ಸಾಧನಸಮಾಜದ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆ ಮತ್ತು…

Read More

ಹೆಚ್ಚುತ್ತಿರುವ ಜನಸಂಖ್ಯೆ, ಕುಸಿಯುತ್ತಿರುವ ಆಹಾರ ಉತ್ಪಾದನೆ; ಕೃಷಿ ವಿವಿಗಳು ಪರಿಹಾರ ಹುಡುಕಲಿ: ಸಿಎಂ ಸಿದ್ದರಾಮಯ್ಯ

ಧಾರವಾಡ ಕೃಷಿ ಮೇಳಕ್ಕೆ ಸಿಎಂ ಚಾಲನೆ: ಕೃಷಿ ವಿವಿಗಳು ‘ಲ್ಯಾಂಡ್ ಟು ಲ್ಯಾಬ್’ ಮಾದರಿ ಅನುಸರಿಸಲಿ ಧಾರವಾಡ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಹಸಿರು ಕ್ರಾಂತಿಯ ವೇಗ ಈಗ ಕುಂಠಿತಗೊಂಡಿದ್ದು, ಈ ಬಗ್ಗೆ ಕೃಷಿ ವಿಶ್ವವಿದ್ಯಾಲಯಗಳು ಗಂಭೀರ ಅಧ್ಯಯನ ನಡೆಸಿ, ರೈತಸ್ನೇಹಿ ಪರಿಹಾರಗಳನ್ನು ಕಂಡುಕೊಳ್ಳಬೇಕು. ವಿವಿಗಳು ಕೇವಲ ‘ಲ್ಯಾಬ್ ಟು ಲ್ಯಾಂಡ್’ಗೆ ಸೀಮಿತವಾಗದೆ, ‘ಲ್ಯಾಂಡ್ ಟು ಲ್ಯಾಬ್’ (ರೈತರ ಹೊಲದಿಂದ ಪ್ರಯೋಗಾಲಯಕ್ಕೆ) ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು….

Read More

ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ ಪ್ರಧಾನ ಸಮಾರಂಭ ಸೆ:26 ರಂದು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು, ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ ದತ್ತಿ ಅಂಗವಾಗಿ ಸೆಪ್ಟೆಂಬರ್ 26, ರಂದು ಸಂಜೆ ೬ ಗಂಟೆಗೆ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ‘ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ-2025’ ಪ್ರಧಾನ ಸಮಾರಂಭವನ್ನು ಆಯೋಜಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರವಾಡದ ಸೋನಿಯಾ ಎಜ್ಯುಕೇಶನ್ ಟ್ರಸ್ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಹನುಮಂತ ಡಂಬಳ ಅವರು ವಹಿಸಲಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಜ್ಯೋತಿ ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹುಬ್ಬಳ್ಳಿ-ಧಾರವಾಡ…

Read More

ಧಾರವಾಡ: ಕಲೆ ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವ ಮಾಧ್ಯಮ: ಪ್ರಭು ಹರಸೂರ

ಧಾರವಾಡ: ಕಲೆ ಮಾನವನ ಮನಸ್ಸಿಗೆ ಉಲ್ಲಾಸ ಹಾಗೂ ನೆಮ್ಮದಿ ನೀಡುವ ಶಕ್ತಿಯುಳ್ಳ ಮಾಧ್ಯಮ. ಚಿತ್ರಕಲೆಯಲ್ಲಿ ಸೌಂದರ್ಯಾನುಭೂತಿ ಮೂಡಿಸುವ ವಿಶೇಷ ಶಕ್ತಿ ಇದೆ ಎಂದು ಹಿರಿಯ ಚಿತ್ರಕಲಾವಿದ ಪ್ರಭು ಹರಸೂರ ಅಭಿಪ್ರಾಯಪಟ್ಟರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಭಾನುವಾರ ಬಿ. ಮಾರುತ್ತಿ ದತ್ತಿ ಅಂಗವಾಗಿ ಆಯೋಜಿಸಿದ್ದ ‘ಚಿತ್ತಾರ ಚೇತನ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಸಂಗೀತ, ಸಾಹಿತ್ಯ, ಚಿತ್ರಕಲೆಯಂತಹ ಯಾವುದೇ ಕ್ಷೇತ್ರವಿರಲಿ, ಅಲ್ಲಿ ನಂಬಿಕೆ, ವಿಶ್ವಾಸ ಹಾಗೂ ಬದ್ಧತೆ ಅತ್ಯಂತ ಮುಖ್ಯ. ಕಲೆಯನ್ನು…

Read More