ಚಿನ್ನಾಭರಣ, ನಗದು ಕಳ್ಳತನ ಪ್ರಕರಣ: ಇಬ್ಬರು ಖದೀಮರ ಬಂಧನ, ಪೊಲೀಸರಿಗೆ ಸಾರ್ವಜನಿಕರ ಮೆಚ್ಚುಗೆ

ನವಲಗುಂದ: ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಚಿನ್ನಾಭರಣ ಹಾಗೂ ನಗದು ಕಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ನವಲಗುಂದ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹5.20 ಲಕ್ಷ ಮೌಲ್ಯದ 65 ಗ್ರಾಂ ಚಿನ್ನಾಭರಣ ಮತ್ತು ₹50 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಪಿಐ ರವಿಕುಮಾರ ಕಪ್ಪತ್ತನವರ ತಿಳಿಸಿದ್ದಾರೆ. ತನಿಖಾ ಕಾರ್ಯಾಚರಣೆ ಮತ್ತು ಹಿನ್ನೆಲೆಮಾರ್ಚ್ 4, 2025 ರಂದು ಗದಗ ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಆಭರಣ ಕಳವಾಗಿರುವ ಬಗ್ಗೆ ದೂರು ನೀಡಿದ್ದರು. ದೂರಿನ ಆಧಾರದ…

Read More

ಸಾರ್ವಜನಿಕ ಸೇವೆಗೆ ಸದಾ ಬದ್ಧ: ಸಚಿವ ಸಂತೋಷ ಲಾಡ್

ಕಲಘಟಗಿ: ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಕಲಘಟಗಿ ಪಟ್ಟಣದ ಹೊರವಲಯದ ಮಡಕಿಹೊನ್ನಳ್ಳಿ ಅಮೃತ ನಿವಾಸದಲ್ಲಿ ಇತ್ತಿಚ್ಚಿಗೆ ಹಮ್ಮಿಕೊಂಡಿದ್ದ ಉಚಿತ ಶ್ರವಣದೋಷ ಚಿಕಿತ್ಸಾ ಶಿಬಿರದಲ್ಲಿ ಫಲಾನುಭವಿಗಳಿಗೆ ಶ್ರವಣ ಸಾಧಕಗಳನ್ನು ವಿತರಿಸಿದ ಸಚಿವ ಸಂತೋಷ ಲಾಡ್ ಅವರು, ಸಾರ್ವಜನಿಕ ಸೇವೆಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.“ನಾನು ನಿಮ್ಮಂತ ಸಣ್ಣ ಕುಟುಂಬದಲ್ಲಿ ಬೆಳೆದಿದ್ದೇನೆ. ಬಡವರ ಕಷ್ಟ, ನೋವುಗಳ ಅರಿವು ನನಗಿದೆ. ಕಾರ್ಮಿಕ ಸಚಿವನಾಗಿ ರಾಜ್ಯಾದ್ಯಂತ ಪ್ರವಾಸ ಮಾಡಬೇಕಾದ ಕಾರಣ ಕ್ಷೇತ್ರಕ್ಕೆ ಹೆಚ್ಚು ಭೇಟಿ ನೀಡಲು ಆಗಿಲ್ಲ. ಆದರೂ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ…

Read More

ಕುಂದಗೋಳ ಮತಕ್ಷೇತ್ರದಲ್ಲಿ ಶಾಸಕ ಎಂ.ಆರ್.ಪಾಟೀಲ್ ಅವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

ಕುಂದಗೋಳ: ರವಿವಾರದಂದು ಕುಂದಗೋಳ ಮತಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಎಂ.ಆರ್. ಪಾಟೀಲ್ ಅವರು ಹೊಸ ಕಾಮಗಾರಿಗಳ ಆರಂಭ ಮತ್ತು ನೂತನ ಕಟ್ಟಡಗಳ ಉದ್ಘಾಟನೆಯಲ್ಲಿ ಭಾಗವಹಿಸಿ, ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದರು. ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ರಸ್ತೆ ಕಾಮಗಾರಿಗೆ ಚಾಲನೆರಾಯನಾಳ ಗ್ರಾಮದ ಕಲಗನಮಡ್ಡಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ NTPC CSR ಯೋಜನೆಯಡಿ ನಿರ್ಮಿಸಲಾದ 31.40 ಲಕ್ಷ ರೂಪಾಯಿ ವೆಚ್ಚದ ಎರಡು ಹೊಸ ಶಾಲಾ ಕೊಠಡಿಗಳನ್ನು ಉದ್ಘಾಟಿಸಲಾಯಿತು. ಇದರ…

Read More

ಧಾರವಾಡ | ಕಾಮಗಾರಿ, ಕಾರ್ಯಕ್ರಮಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಕಾಪಾಡಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಧಾರವಾಡ:ಕೇಂದ್ರ ಸರ್ಕಾರವು ವಿವಿಧ ಮಂತ್ರಾಲಯಗಳ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿ ಮತ್ತು ಕಾರ್ಯಕ್ರಮಗಳ ಸಮಪರ್ಕ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ ಮಾಡುತ್ತದೆ. ಇದರಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟವನ್ನು ಕಾಪಾಡಬೇಕು. ಅನುದಾನ ಸದ್ಬಳಕೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ-ದಿಶಾ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಾ, ಕೇಂದ್ರ ಪುರಸ್ಕೃತ ಯೋಜನೆಗಳಡಿ ನಿರ್ಮಾಣವಾಗಿರುವ ಕಾಮಗಾರಿ, ಕಟ್ಟಡಗಳನ್ನು ಉದ್ಘಾಟಿಸುವಾಗ ಕಡ್ಡಾಯವಾಗಿ ತಮಗೆ ಮಾಹಿತಿ…

Read More

ಧಾರವಾಡ ಕೃಷಿ ಮೇಳ: ಎರಡನೇ ದಿನ 7.74 ಲಕ್ಷ ಜನ ಭೇಟಿ, ಇಂದು ಸಿಎಂ ಸಿದ್ದರಾಮಯ್ಯ ಭೇಟಿ(ನಿರೀಕ್ಷೆ)

ಧಾರವಾಡ: ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ದಿನದಿಂದ ದಿನಕ್ಕೆ ಜನಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಎರಡನೇ ದಿನವಾದ ಭಾನುವಾರ ದಾಖಲೆ ಸಂಖ್ಯೆಯ ಜನ ಮೇಳಕ್ಕೆ ಭೇಟಿ ನೀಡಿರುವುದು ಕಂಡುಬಂದಿದೆ. ಮೊದಲ ದಿನ 3.65 ಲಕ್ಷ ಜನ ಬಂದಿದ್ದರೆ, ಎರಡನೇ ದಿನ ಭಾನುವಾರ ಬರೋಬ್ಬರಿ 7.74 ಲಕ್ಷ ಜನ ಭೇಟಿ ನೀಡುವ ಮೂಲಕ ಭರ್ಜರಿ ಸ್ಪಂದನೆ ದೊರಕಿದೆ. ಕಳೆದ ವರ್ಷದ ಎರಡನೇ ದಿನ 7.28 ಲಕ್ಷ ಜನ ಭೇಟಿ ನೀಡಿದ್ದರು, ಆದರೆ ಈ ಬಾರಿ ಆ ದಾಖಲೆಯನ್ನು ಸರಿಗಟ್ಟಲಾಗಿದೆ….

Read More

ಆಹಾರ ಭದ್ರತೆಗೆ ಬೀಜೋತ್ಪಾದನೆ ಅಗತ್ಯ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಭವ್ಯ ಕೃಷಿ ಮೇಳಕ್ಕೆ ಭಾನುವಾರ ರಾಜ್ಯಪಾಲ ಥಾವರಚಂದ್ ಗೆಲ್ಲೋಟ್ ಅವರು ಭೇಟಿ ನೀಡಿ ಮೇಳಕ್ಕೆ ಹೊಸ ಮೆರುಗು ತಂದರು. ಈ ಸಮಯದಲ್ಲಿ ಅವರು “ಉತ್ಕೃಷ್ಟ ಗುಣಮಟ್ಟದ ಬೀಜಗಳು ದೇಶದ ಆಹಾರ ಭದ್ರತೆಗೆ ಅತ್ಯಗತ್ಯ. ಅನ್ನದಾತರ ಶ್ರಮ ಮತ್ತು ಆಧುನಿಕ ತಂತ್ರಜ್ಞಾನಗಳು ಒಟ್ಟಾಗಿ ದೇಶವನ್ನು ಆಹಾರ ಸ್ವಾವಲಂಬನೆಯತ್ತ ಕೊಂಡೊಯ್ಯಲು ಸಹಕಾರಿ” ಎಂದು ಹೇಳಿದರು. ಬೀಜೋತ್ಪಾದನೆಗೆ ಹೆಚ್ಚಿನ ಒತ್ತು ಅಗತ್ಯ: ರಾಜ್ಯಪಾಲರ ಕರೆಬೀಜ ಮೇಳವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲರು, ಪ್ರಧಾನಿ ನರೇಂದ್ರ…

Read More

ಧಾರವಾಡ ಕೃಷಿ ಮೇಳದ ಮೊದಲ ದಿನವೇ 3.65 ಲಕ್ಷಗಳ ಜನಸಾಗರ:

ಧಾರವಾಡ,: ಕೃಷಿ ಕ್ಷೇತ್ರದ ತಾಜಾ ಆವಿಷ್ಕಾರಗಳು, ತಂತ್ರಜ್ಞಾನ, ಹೊಸ ತಳಿಯ ಬೀಜ ಹಾಗೂ ಯಂತ್ರೋಪಕರಣಗಳ ಪ್ರದರ್ಶನಕ್ಕೆ ಸಾಕ್ಷಿಯಾದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಆರಂಭವಾದ ನಾಲ್ಕು ದಿನಗಳ ಕೃಷಿ ಮೇಳದ ಮೊದಲ ದಿನವೇ ಜನಸಾಗರ ಉಕ್ಕಿಬಂದಿತು. ಬರೋಬ್ಬರಿ 3.65 ಲಕ್ಷ ಮಂದಿ ಭೇಟಿ ನೀಡಿ ಇತಿಹಾಸ ನಿರ್ಮಿಸಿದೆ. ಮಳೆಯ ಆತಂಕ, ಗಾಳಿ-ಚಳಿ ತುಂಬಿದ ವಾತಾವರಣವಿದ್ದರೂ ಸಹ ಜನರು ಉತ್ಸಾಹಭರಿತವಾಗಿ ಮೇಳದತ್ತ ಹರಿದು ಬಂದರು. ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಸಂಶೋಧಕರು, ವ್ಯಾಪಾರಿಗಳು, ಸಾಮಾನ್ಯ ನಾಗರಿಕರು ಎಂದು ಎಲ್ಲ…

Read More

ಲಾಠಿ ಪ್ರಹಾರ ಪ್ರಕರಣ: ನರೇಂದ್ರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ‌ಜೋಶಿ ರೋಷಾವೇಷ

ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಲಾಠಿ ಪ್ರಹಾರ ಘಟನೆಗೆ ಸಂಬಂಧಿಸಿದಂತೆ ಸ್ವತಃ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗ್ರಾಮಕ್ಕೆ ಭೇಟಿ ನೀಡಿದ್ದು, ಈ ಸಮಯದಲ್ಲಿ ಪೊಲೀಸರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ನರೇಂದ್ರ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದ ಹಿರಿಯರೊಂದಿಗೆ ಮಾತುಕತೆ ನಡೆಸುತ್ತಿದ್ದಾಗ, ಅಲ್ಲಿ ಹಾಜರಿದ್ದ ಸಾಮಾನ್ಯ ಉಡುಪಿನಲ್ಲಿದ್ದ (ಬೀನ್ ಡ್ರೆಸ್) ಓರ್ವ ಪೊಲೀಸ್ ಸಿಬ್ಬಂದಿ ಜೋಶಿ ಅವರ ಮಾತುಗಳನ್ನು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ. ಇದನ್ನು ಗಮನಿಸಿದ ಜೋಶಿ…

Read More

ಧಾರವಾಡ ಕೃಷಿ ಮೇಳದಲ್ಲಿ ದುರಂತ: ಮಿನಿ ಟ್ರ್ಯಾಕ್ಟರ್‌ಗೆ ಸಿಲುಕಿ ಯುವಕನ ದುರ್ಮರಣ; ₹5 ಲಕ್ಷ ಪರಿಹಾರ

ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ನಾಲ್ಕು ದಿನಗಳ ಕೃಷಿ ಮೇಳದಲ್ಲಿ ದುರಂತವೊಂದು ಸಂಭವಿಸಿದೆ. ಮೇಳದಲ್ಲಿ ಪ್ರದರ್ಶನಕ್ಕೆ ತಂದಿದ್ದ ಮಿನಿ ಟ್ರ್ಯಾಕ್ಟರ್‌ವೊಂದು ಕೆಳಗಿಳಿಸುವ ವೇಳೆ ಪಲ್ಟಿಯಾಗಿ, ತುಮಕೂರು ಮೂಲದ ಪರಶುರಾಮ ಆರ್. (32) ಎಂಬ ಯುವಕನ ಮೇಲೆ ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಯಾಂಟರ್ ವಾಹನದಿಂದ ಮಿನಿ ಟ್ರ್ಯಾಕ್ಟರ್‌ನ್ನು ಕೆಳಗಿಳಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ರಸ್ತೆಯ ಅವ್ಯವಸ್ಥೆಯೇ ದುರಂತಕ್ಕೆ ಕಾರಣ?ಕೃಷಿ ಮೇಳದ ಟ್ರ್ಯಾಕ್ಟರ್ ಪ್ರದರ್ಶನ…

Read More

ರಾಮನಕೊಪ್ಪದಲ್ಲಿ ನೂತನ ಶಾಲಾ ಕೊಠಡಿ ಉದ್ಘಾಟನೆ: ಶಿಕ್ಷಣದಿಂದ ಮಾತ್ರ ಸಮೃದ್ಧಿ ಸಾಧ್ಯ- ಶಾಸಕ ಎಂ.ಆರ್. ಪಾಟೀಲ್

ಕುಂದಗೋಳ: ಶಿಕ್ಷಣವು ಪ್ರತಿಯೊಬ್ಬರ ಜೀವನದ ಭದ್ರ ಬುನಾದಿಯಾಗಿದೆ. ಗ್ರಾಮದ ಮಕ್ಕಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಕುಂದಗೋಳ ಕ್ಷೇತ್ರದ ಶಾಸಕ ಎಂ.ಆರ್. ಪಾಟೀಲ್ ಹೇಳಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ವಿಶೇಷ ಅನುದಾನದಡಿ ತಾಲ್ಲೂಕಿನ ರಾಮನಕೊಪ್ಪ ಗ್ರಾಮದಲ್ಲಿ 27.80 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಮೂಲಸೌಕರ್ಯವು ಕಲಿಕಾ ವಾತಾವರಣವನ್ನು ಸುಧಾರಿಸುತ್ತದೆ. ಈ ಕೊಠಡಿಗಳು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು…

Read More