ಕುಂದಗೋಳ ಲೋಕ ಅದಾಲತ್: 13 ವರ್ಷದ ಆಸ್ತಿ ವಿವಾದ ಇತ್ಯರ್ಥ; ವಿಚ್ಛೇದನ ಪ್ರಕರಣಗಳಲ್ಲೂ ರಾಜೀ

ಕುಂದಗೋಳ: ನ್ಯಾಯಾಲಯಗಳಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹಲವು ಮಹತ್ವದ ಪ್ರಕರಣಗಳು ಇತ್ಯರ್ಥಗೊಂಡವು. ಇಲ್ಲಿ ನ್ಯಾಯಾಧೀಶರ ಮಾನವೀಯ ಸ್ಪರ್ಶ ಮತ್ತು ಮಾರ್ಗದರ್ಶನದಿಂದಾಗಿ, ಹದಿಮೂರು ವರ್ಷಗಳ ಹಳೆಯ ಆಸ್ತಿ ವಿವಾದವೊಂದು ಸುಖಾಂತ್ಯ ಕಂಡಿದ್ದು, ವಿಚ್ಛೇದನ ಕೋರಿದ್ದ ಮೂರು ದಂಪತಿಗಳು ಮತ್ತೆ ಒಂದಾದರು. ನ್ಯಾಯಾಂಗ ಇತಿಹಾಸದಲ್ಲಿ ಇದೊಂದು ಉತ್ತಮ ಬೆಳವಣಿಗೆಯಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ವಿಚ್ಛೇದನಕ್ಕಿದ್ದ ಮೂರು ಜೋಡಿಗಳು ಮತ್ತೆ ಒಂದಾದವುಹಿರಿಯ ಸಿವಿಲ್ ನ್ಯಾಯಾಧೀಶರಾದ ಅಬ್ದುಲ್ ಖಾದರ್ ಅವರ ಸಲಹೆಯ…

Read More

ಕುಂದಗೋಳ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಲ್‌ಇಯಿಂದ ಉಚಿತ ಫಿಸಿಯೋಥೆರಪಿ ಸೇವೆ

ಕುಂದಗೋಳ: ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಹುಬ್ಬಳ್ಳಿಯ ಗಬ್ಬೂರಿನ ಕೆಎಲ್‌ಇ ಫಿಸಿಯೋಥೆರಪಿ ಕಾಲೇಜು ವತಿಯಿಂದ ಬಡ ರೋಗಿಗಳ ಅನುಕೂಲಕ್ಕಾಗಿ ವಾರದಲ್ಲಿ ಮೂರು ದಿನ ಉಚಿತ ಫಿಸಿಯೋಥೆರಪಿ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ವಿಶ್ವ ಫಿಸಿಯೋಥೆರಪಿ ದಿನಾಚರಣೆ ಅಂಗವಾಗಿ ಈ ಶಿಬಿರಕ್ಕೆ ಚಾಲನೆ ನೀಡಲಾಯಿತು. ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕ್ರಪ್ಪ ಎಸ್. ತುಕ್ಕಣ್ಣವರ, ಬಡ ರೋಗಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಸೇವೆ ನೀಡಲು ಮುಂದಾಗಿರುವ ಕೆಎಲ್‌ಇ ಸಂಸ್ಥೆಯ ಗಬ್ಬೂರ…

Read More

ಡಾ. ಜೆ. ಎಂ. ನಾಗಯ್ಯ ಸಾಹಿತ್ಯ ಕುರಿತು ವಿಚಾರ ಸಂಕಿರಣ; ನಾಲ್ಕು ಗ್ರಂಥಗಳ ಲೋಕಾರ್ಪಣೆ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ, ಡಾ. ಜೆ. ಎಂ. ನಾಗಯ್ಯ ಟ್ರಸ್ಟ್ ಹಾಗೂ ಡಾ. ಬಸವರಾಜ ಮಲಶೆಟ್ಟಿ ಬಯಲಾಟ ಕಾಲೇಜು, ಹೂವಿನಹಡಗಲಿ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 14, 2025ರಂದು ಜೆ. ಎಂ. ನಾಗಯ್ಯನವರ ಸಾಹಿತ್ಯ ಕುರಿತು ವಿಚಾರ ಸಂಕಿರಣ’ ಮತ್ತು ಗ್ರಂಥಗಳ ಲೋಕಾರ್ಪಣೆ ಸಮಾರಂಭ’ವನ್ನು ಹಮ್ಮಿಕೊಳ್ಳಲಾಗಿದೆ. ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಬೆಳಿಗ್ಗೆ 10:30ಕ್ಕೆ ನಡೆಯುವ ಸಮಾರಂಭಕ್ಕೆ ಬಂಡಿವಾಡ ಗಿರೀಶ ಆಶ್ರಮದ ಶ್ರೀ ಸ.ಸ. ಡಾ. ಎ.ಸಿ. ವಾಲಿ ಮಹಾರಾಜರು ಸಾನ್ನಿಧ್ಯ ವಹಿಸುವರು….

Read More

ಸಂಗೀತ ಸಾಮ್ರಾಟ್ ಪಂಡಿತ್ ಸವಾಯಿ ಗಂಧರ್ವರ ಸಂಗೀತ ಮಹೋತ್ಸವ ಸೆ. 15 ಹಾಗೂ 16 ರಂದು: ಸಂಗೀತ ಗಾರ್ತಿ ಅಶ್ವಿನಿ ಭಿಡೆ ದೇಶಪಾಂಡೆ ಅವರಿಗೆ ರಾಷ್ಟ್ರೀಯ ಪುರಸ್ಕಾರ

ಕುಂದಗೋಳ: ಸಂಗೀತ ಸಾಮ್ರಾಟ್ ಪಂಡಿತ್ ಸವಾಯಿ ಗಂಧರ್ವರ 73ನೇ ಪುಣ್ಯತಿಥಿಯ ನಿಮಿತ್ತ ಕುಂದಗೋಳದಲ್ಲಿ ಎರಡು ದಿನಗಳ ಸಂಗೀತ ಮಹೋತ್ಸವವನ್ನು ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಿ. ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆಯ ಸಹಯೋಗದಲ್ಲಿ ಸೆಪ್ಟೆಂಬರ್ 15 ಮತ್ತು 16 ರಂದು ಈ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಮುಂಬಯಿಯ ಖ್ಯಾತ ಸಂಗೀತಗಾರ್ತಿ ಪದ್ಮಶ್ರೀ ಶ್ರೀಮತಿ ಅಶ್ವಿನಿ ಭಿಡೆ ದೇಶಪಾಂಡೆ ಅವರಿಗೆ ‘ಸವಾಯಿ ಗಂಧರ್ವರ ರಾಷ್ಟ್ರೀಯ ಸಂಗೀತ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಸೆಪ್ಟೆಂಬರ್ 15ರಂದು…

Read More

‘ಬಡತನದಲ್ಲಿ ಹುಟ್ಟಿ, ಸಾಮಾಜಿಕ ನ್ಯಾಯದ ಹರಿಕಾರರಾದ ಸಿದ್ಧಪ್ಪ ಕಂಬಳಿ’: ಡಾ. ಈರಣ್ಣ ಇಂಜಗನೇರಿ

ಧಾರವಾಡ: ಬಡತನದಲ್ಲಿ ಹುಟ್ಟಿ, ಸ್ವಂತ ಪ್ರಯತ್ನದಿಂದ ಉನ್ನತ ಸ್ಥಾನಕ್ಕೇರಿ ಸಮಾಜದ ಉದ್ಧಾರಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಸರ್. ಸಿದ್ಧಪ್ಪ ಕಂಬಳಿ ಅವರು ಮರೆಯಲಾಗದ ಮಹಾನುಭಾವರು ಎಂದು ಅಧ್ಯಾಪಕರಾದ ಡಾ. ಈರಣ್ಣ ಇಂಜಗನೇರಿ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು ಸರ್. ಸಿದ್ಧಪ್ಪ ಕಂಬಳಿ ಪ್ರತಿಷ್ಠಾನ ದತ್ತಿ ಅಂಗವಾಗಿ ಆಯೋಜಿಸಿದ್ದ ‘ಸರ್. ಸಿದ್ಧಪ್ಪ ಕಂಬಳಿ ಅವರ ಸಾಮಾಜಿಕ ನ್ಯಾಯ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಂಬಳಿ ಅವರು ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ ಅಸಾಮಾನ್ಯರಾಗಿ ಬೆಳೆದವರು. ಆಗಿನ ಮುಂಬೈ ಸರ್ಕಾರದಲ್ಲಿ…

Read More

ಯುವ ಕಲಾವಿದ ಬಸವರಾಜ ತಳವಾರಗೆ ‘ಚಿತ್ತಾರ ಚೇತನ’ ಪ್ರಶಸ್ತಿ

ಧಾರವಾಡ: ಕಲಾವಿದ ಶ್ರೀ ಬಿ. ಮಾರುತಿ ದತ್ತಿ ಅಂಗವಾಗಿ ಕರ್ನಾಟಕ ವಿದ್ಯಾವರ್ಧಕ ಸಂಘವು, ‘ಚಿತ್ತಾರ ಚೇತನ’ ಪ್ರಶಸ್ತಿ ಪ್ರದಾನ ಹಾಗೂ ಮೂರು ದಿನಗಳ ಚಿತ್ರಕಲಾ ಪ್ರದರ್ಶನವನ್ನು ಸೆಪ್ಟೆಂಬರ್ ೧೩ರಂದು ಸಂಜೆ ೬ ಗಂಟೆಗೆ ಸಂಘದ ಚಿತ್ರಕಲಾ ಪ್ರದರ್ಶನ ಸಭಾಭವನದಲ್ಲಿ ಹಮ್ಮಿಕೊಂಡಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ವಿ.ವ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ವಹಿಸುವರು. ತುಮಕೂರಿನ ಹಿರಿಯ ಕಲಾವಿದಪ್ರಭು ಹರಸೂರು ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅತಿಥಿಗಳಾಗಿ ಧಾರವಾಡ ಆಕಾಶವಾಣಿ ನಿವೃತ್ತ ನಿರ್ದೇಶಕ ಸಿ. ಯು. ಬೆಳ್ಳಕ್ಕಿ ಹಾಗೂ ಮೈಸೂರಿನ ಹಿರಿಯ…

Read More

ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ; ಕೆಡಿಪಿ ಫೌಂಡೇಶನ್‌ನ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ: ಎಸ್ ಡಿ ಎಂ ಸಿ ಅಧ್ಯಕ್ಷ ರಾಜು ಪುಟ್ಟಣ್ಣನವರ

ಕುಂದಗೋಳ :ಸಂಶಿ: ಬೆಂಗಳೂರಿನ ಕೆಡಿಪಿ ಫೌಂಡೇಶನ್ ವಿದೇಶದಲ್ಲಿ ವ್ಯಾಸಂಗ ಮಾಡಿದರೂ ನಮ್ಮ ದೇಶದ ಶಾಲೆಗಳಿಗೆ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದು ಸಂಶಿ ಗ್ರಾಮದ ಕನ್ನಡ ಗಂಡುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಜು ಪುಟ್ಟಣ್ಣವರ ಅವರು ಹೇಳಿದರು. ಗ್ರಾಮದ ಕನ್ನಡ ಗಂಡುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕೆಜಿಎಸ್ ನಂ.1 ಶಾಲೆಯಲ್ಲಿ ಕೆಡಿಪಿ ಫೌಂಡೇಶನ್ ಬೆಂಗಳೂರು ಮತ್ತು ಪರೋಪಕಾರಿ.ಕಾಂ ಸಹಯೋಗದಲ್ಲಿ ಆಯೋಜಿಸಲಾದ ನೋಟ್‌ಬುಕ್‌ ಮತ್ತು ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ….

Read More

ಕುಂದಗೋಳ ತಹಶೀಲ್ದಾರ್ ಕಚೇರಿಯಲ್ಲಿ ಏಜೆಂಟರ ಹಾವಳಿ; ಅಧಿಕೃತ ದಸ್ತಾವೇಜು ಬರಹಗಾರರಿಂದ ದೂರು

ಕುಂದಗೋಳ: ಅಧಿಕೃತ ಪರವಾನಗಿ ಇಲ್ಲದ ಏಜೆಂಟರು ತಾಲೂಕಿನ ಉಪನೊಂದಣಿ ಕಚೇರಿಗಳಲ್ಲಿ ರೈತರನ್ನು ಮತ್ತು ಸಾರ್ವಜನಿಕರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಕುಂದಗೋಳ ತಾಲೂಕಾ ದಸ್ತಾವೇಜು ಬರಹಗಾರರ ಸಂಘದ ಸದಸ್ಯರು ತಹಶೀಲ್ದಾರ್‌ ರಾಜು ಮಾವರಕರವರಿಗೆ ಶುಕ್ರವಾರದಂದು ಮನವಿ ಸಲ್ಲಿಸಿದ್ದಾರೆ. ಅಧಿಕೃತ ದಸ್ತಾವೇಜು ಬರಹಗಾರರು ಸಲ್ಲಿಸಿದ ಮನವಿಯಲ್ಲಿ, ‘ಕಾವೇರಿ-2’ ಯೋಜನೆ ಜಾರಿಯಾದ ನಂತರ ಸಾರ್ವಜನಿಕರಿಗೆ ಅನುಕೂಲವಾಗಿದ್ದರೂ, ಕುಂದಗೋಳ ತಹಶೀಲ್ದಾರ್ ಕಚೇರಿಯಲ್ಲಿ ಕಿಯೋಸ್ಕ್ ಆಪರೇಟರ್ ಶರಣಪ್ಪ ಶಿವಜಾತಪ್ಪನವರ ಎಂಬ ವ್ಯಕ್ತಿ ಅನಧಿಕೃತವಾಗಿ ನೊಂದಣಿ ಸಂಬಂಧಿತ ಪತ್ರಗಳನ್ನು ತಯಾರಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ….

Read More

ಸಹಕಾರಿ ರಂಗದಲ್ಲಿ ಅನೇಕ ಉದ್ಯೋಗ ಅವಕಾಶ: ಎಂ.ಬಿ. ದಾನಪ್ಪಗೌಡರ

ಕುಂದಗೋಳ: ಸಹಕಾರಿ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಹಲವು ಉದ್ಯೋಗಾವಕಾಶಗಳಿವೆ ಎಂದು ಧಾರವಾಡ ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಬಿ. ದಾನಪ್ಪಗೌಡರ ಹೇಳಿದರು. ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಂಡಳಿ ನಿಯಮಿತ, ಬೆಂಗಳೂರು, ಧಾರವಾಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಕೆಎಲ್‌ಇ ಕಾಲೇಜಿನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕ್ಲಸ್ಟರ್ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಸಹಕಾರಿ ರಂಗ ಬೆಳೆದು ಬಂದ ಇತಿಹಾಸದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಮಹನಿಯರಾದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ನಿವೇಶನ ನೀಡುವಂತೆ ಒತ್ತಾಯ

ಕುಂದಗೋಳ: ಮಹರ್ಷಿ ವಾಲ್ಮೀಕಿ ಜಯಂತಿಯೊಳಗೆ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸಬೇಕು ಎಂದು ಸಮಾಜದ ಮುಖಂಡರು ತಹಶೀಲ್ದಾರ್‌ಗೆ ಮನವಿ‌ ಮಾಡಿಕೊಂಡರು. ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಸಮಾಜದ ಮುಖಂಡರು ಈ ಬೇಡಿಕೆಯನ್ನು ಮಂಡಿಸಿದರು. ಹಲವು ವರ್ಷಗಳಿಂದ ಸಮುದಾಯ ಭವನದ ಬೇಡಿಕೆ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಕ್ಟೋಬರ್ 7 ರಂದು ನಡೆಯುವ ಜಯಂತಿಯೊಳಗೆ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಜಯಂತಿ ದಿನದಂದು ಪ್ರತಿ ಅಂಗನವಾಡಿ ಹಾಗೂ…

Read More