ಕುಂದಗೋಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಮೇಶ ಶಿ. ಇಂಗಳಹಳ್ಳಿ, ಉಪಾಧ್ಯಕ್ಷರಾಗಿ ಹೊಳಲಪ್ಪ ವೆಂಕಪ್ಪ ಬೋವಿ ಆಯ್ಕೆ.

ಕುಂದಗೋಳ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರದಂದು ಚುನಾವಣೆ ಜರುಗಿತು. ಒಟ್ಟು 13 ಸದಸ್ಯ ಬಲ ಹೊಂದಿರುವ ಈ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಮೇಶ ಶಿ. ಇಂಗಳಹಳ್ಳಿ ಮತ್ತು ಸಿದ್ದಪ್ಪ ನಿ. ಅರಳಿಕಟ್ಟಿ ನಾಮಪತ್ರ ಸಲ್ಲಿಸಿದ್ದರು. ರಮೇಶ ಶಿ. ಇಂಗಳಹಳ್ಳಿ 9 ಮತಗಳನ್ನು ಪಡೆದು ಜಯಶಾಲಿಯಾದರು, ಸಿದ್ದಪ್ಪ ನಿ. ಅರಳಿಕಟ್ಟಿ 4 ಮತಗಳನ್ನು ಪಡೆದು ಪರಾಭವಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಹೊಳಲಪ್ಪ ವೆಂಕಪ್ಪ ಬೋವಿ ಮತ್ತು ದಾದಾಪೀರ…

Read More

ಕುಂದಗೋಳ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಗೆ ಸತೀಶ ಚ ಕೊಬ್ಬಯ್ಯನವರ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಸೋಮಲಿಂಗಪ್ಪ ಶಂ ಹೊಸಮನಿ ನೇಮಕ

ಧಾರವಾಡ: ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಕುಂದಗೋಳ ತಾಲೂಕು ಮಟ್ಟದ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ಸ್ಥಾನಗಳಿಗೆ ನೂತನವಾಗಿ ನೇಮಕಾತಿ ಮಾಡಿ ಧಾರವಾಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಸಮಿತಿಯ ಹಿಂದಿನ ಅಧ್ಯಕ್ಷರಾಗಿದ್ದ ಶ್ರೀ ಶಿವಾನಂದ ಬೆಂತೂರ ಅವರ ಸ್ಥಾನಕ್ಕೆ ಹಿರೇಹರಕುಣಿ ಗ್ರಾಮದ ಸತೀಶ್ ಚನ್ನಬಸಯ್ಯ ಕೊಬ್ಬಯ್ಯನವರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ, ಸಮಿತಿಯ ಸದಸ್ಯರಾಗಿದ್ದ ಹನುಮಂತಪ್ಪ ಯಲ್ಲಪ್ಪ ಹಗೇರಿ ಅವರ ನಿಧನದಿಂದ…

Read More

ಪ್ರೊ. ಸದಾನಂದ ಕನವಳ್ಳಿ ಸ್ಮರಣಾರ್ಥ ಉಪನ್ಯಾಸ: ನಾಳೆ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಕಾರ್ಯಕ್ರಮ

ಧಾರವಾಡ: ಸಾಹಿತ್ಯ, ಸಂಗೀತ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ದಿವಂಗತ ಪ್ರೊ. ಸದಾನಂದ ಕನವಳ್ಳಿ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದೆ. ಈ ಕಾರ್ಯಕ್ರಮವು ಸೆ:ರಂದು ಸಂಜೆ ೬ ಗಂಟೆಗೆ ಸಂಘದ ಶ್ರೀ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ‘ಆದರ್ಶಗಳ ಕಣಜವಾಗಿದ್ದ ಸದಾನಂದ ಕನವಳ್ಳಿ’ ವಿಷಯ ಕುರಿತು ಧಾರವಾಡದ ಹಿರಿಯ ಛಾಯಾಗ್ರಾಹಕ ಶಶಿ ಸಾಲಿ ಅತಿಥಿ ಉಪನ್ಯಾಸ ನೀಡಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಧಾರವಾಡ ಹಿರೇಮಲ್ಲೂರ ಈಶ್ವರನ್ ಪದವಿ…

Read More

ನಾರಿಯರು ಶಕ್ತರಾದಾಗ ಸಮಾಜವೂ ಶಕ್ತಿಯುತವಾಗುತ್ತದೆ: ಗ್ರಾ ಪಂ ಅಧ್ಯಕ್ಷ ಗಿರೀಶಗೌಡ ಪಾಟೀಲ

ಕುಂದಗೋಲ: (ಸಂಶಿ): ಇಂದಿನ ದಿನಮಾನಗಳಲ್ಲಿ ಜನರಲ್ಲಿ ಪೌಷ್ಟಿಕತೆ ಮತ್ತು ಆರೋಗ್ಯದ ಕುರಿತು ಕಾಳಜಿ ಕಡಿಮೆಯಾಗುತ್ತಿದೆ. ಮಹಿಳೆಯರಿಗೆ ಸರ್ಕಾರದ ವಿವಿಧ ಸೌಲಭ್ಯಗಳಿದ್ದರೂ ಯುವತಿಯರು ಆರೋಗ್ಯವಾಗಿರಲು ಸಾಧ್ಯವಾಗುತ್ತಿಲ್ಲ. ನಾರಿಯರು ಶಕ್ತರಾದರೆ ನಮ್ಮ ಪರಿವಾರ ಮತ್ತು ಸಮಾಜ ಶಕ್ತಿಯುತವಾಗುತ್ತದೆ ಎಂದು ಸಂಶಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶಗೌಡ ಪಾಟೀಲ ಅಭಿಪ್ರಾಯಪಟ್ಟರು.ತಾಲ್ಲೂಕಿನ ಸಂಶಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ನಡೆದ ‘ಸ್ವಸ್ಥ ನಾರಿ ಶಕ್ತ ಪರಿವಾರ’ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಮೂಲಭೂತ ಸೌಲಭ್ಯಗಳನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು…

Read More

ಜಾನಪದ ಸಾಹಿತ್ಯಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಮೇಯರ್ ಜ್ಯೋತಿ ಪಾಟೀಲ್

ಧಾರವಾಡ: ಜಾನಪದ ಸಾಹಿತ್ಯದಲ್ಲಿ ಮಹಿಳೆಯರ ಪಾತ್ರವೇ ಪ್ರಧಾನವಾಗಿದ್ದು, ಅವರ ಜೀವನಾನುಭವಗಳೇ ಜಾನಪದ ಹಾಡುಗಳಾಗಿ ರೂಪುಗೊಂಡಿವೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಜ್ಯೋತಿ ಪಾಟೀಲ್ ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಜಯಶ್ರೀ ಗುತ್ತಲ ದತ್ತಿ ಕಾರ್ಯಕ್ರಮದಲ್ಲಿ ‘ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ-೨೦೨೫’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಗ್ರಾಮೀಣ ಬದುಕಿನ ಒಳನೋಟಗಳೇ ಜಾನಪದ ಸಾಹಿತ್ಯದಲ್ಲಿವೆ. ತಮ್ಮ ಬದುಕಿನ ನೋವು-ನಲಿವುಗಳನ್ನು ಹಾಡಿನ ಮೂಲಕ ಹೊರಹಾಕಿ ಮಹಿಳೆಯರು ಜಾನಪದ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕುಟುಂಬ ನಿರ್ವಹಣೆಯ ಜೊತೆಗೆ ಮಹಿಳೆಯರು…

Read More

ಗ್ರಾಮೀಣ ಜನಪದ ಹಾಡುಗಳ ಸ್ಪರ್ಧೆಯಲ್ಲಿ ವಾಗ್ದೇವಿ ಮಹಿಳಾ ಮಂಡಳಕ್ಕೆ ಪ್ರಥಮ

ಧಾರವಾಡ: ಜಾನಪದ ಹಾಡುಗಳು ಗ್ರಾಮೀಣ ಬದುಕಿನ ನೋವು-ನಲಿವುಗಳ ಸಮಗ್ರ ಚಿತ್ರಣ ನೀಡುತ್ತವೆ. ನಮ್ಮ ಪೂರ್ವಜರ ಈ ಸಂಪ್ರದಾಯಿಕ ಕಲೆಗಳು ಮನಸ್ಸನ್ನು ಉಲ್ಲಸಿತಗೊಳಿಸುವುದರ ಜೊತೆಗೆ ಸಂಸ್ಕೃತಿಯನ್ನು ಉಳಿಸುತ್ತವೆ ಎಂದು ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು ಜಯಶ್ರೀ ಗುತ್ತಲ ದತ್ತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ-೨೦೨೫’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯ ಜೊತೆಗೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು….

Read More

ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಮಹರ್ಷಿ ಶ್ರೀ ಅರವಿಂದರ ಕುರಿತು ಉಪನ್ಯಾಸ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಸೆಪ್ಟೆಂಬರ್ ೧೯, ಶುಕ್ರವಾರದಂದು ಸಂಜೆ ೬ ಗಂಟೆಗೆ ‘ಮಹರ್ಷಿ ಶ್ರೀ ಅರವಿಂದರ ತತ್ವದರ್ಶನ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಸಂಘದ ಶ್ರೀ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ನಡೆಯಲಿದೆ. ಶ್ರೀ ಗುರಪ್ಪನವರು ಶ್ರೀಮತಿ ಗೌರಮ್ಮ ಬೆಲ್ಲದ ದತ್ತಿ ನಿಮಿತ್ತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗೋವಾದ ಇಂಡೋ-ಪೋರ್ಚುಗೀಸ್ ಸಾಹಿತ್ಯ ಪ್ರತಿಷ್ಠಾನದ ನಿರ್ದೇಶಕ ಡಾ. ಅರವಿಂದ ಯಾಳಗಿ ಅವರು ಅತಿಥಿ ಉಪನ್ಯಾಸಕರಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ…

Read More

ಮಹಿಳೆಯರ ರುದ್ರ ಪಠಣದಿಂದ ಸಕಾರಾತ್ಮಕ ಶಕ್ತಿ ವೃದ್ಧಿ: ಮಂಗಳಾ ಮಠದ

ಧಾರವಾಡ: ಮಹಿಳೆಯರು ದಿನನಿತ್ಯ ರುದ್ರ ಪಠಣ ಮಾಡುವುದರಿಂದ 32 ಕಿ.ಮೀ ದೂರದಷ್ಟು ಸಕಾರಾತ್ಮಕ ಶಕ್ತಿ ಪಸರಿಸುತ್ತದೆ. ರುದ್ರ ಪಠಣದ ಮಹತ್ವವು ಅಗಾಧವಾಗಿದ್ದು, ಪ್ರತಿಯೊಬ್ಬರೂ ಇದರ ಲಾಭ ಪಡೆಯಬೇಕು ಎಂದು ಮಂಗಳಾ ಮಠದ ಅವರು ಅಭಿಪ್ರಾಯಪಟ್ಟರು. ಇಲ್ಲಿನ ರೆವಿನ್ಯೂ ಕಾಲನಿಯ ಶ್ರೀ ಸಿದ್ಧಾರೂಢ ಮಠದ ಸಭಾಭವನದಲ್ಲಿ ತರಂಗಿಣಿ ಮಹಿಳಾ ಮಂಡಳಿ ಆಯೋಜಿಸಿದ್ದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಆಧುನಿಕ ಕಾಲದಲ್ಲಿ ಮಹಿಳೆಯರು ಹೆಚ್ಚು ಜಾಗರೂಕತೆಯಿಂದ ಇರಬೇಕು. ನಿರಂತರವಾಗಿ ಧಾರ್ಮಿಕ ಅಧ್ಯಯನ ಮಾಡುವುದರಿಂದ ದೈವಿಕ ಶಕ್ತಿ ಹೆಚ್ಚುತ್ತದೆ ಎಂದು…

Read More

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಧಾರವಾಡದಿಂದ ವಿಧಾನಸೌಧದವರೆಗೆ ಬೈಕ್ ಜಾಥಾ

ಧಾರವಾಡ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ, ವಿಜೇತಕುಮಾರ ಹೊಸಮಠ ನೇತೃತ್ವದಲ್ಲಿ 10 ಬೈಕ್ ರೈಡರ್‌ಗಳ ತಂಡ ಧಾರವಾಡದಿಂದ ವಿಧಾನಸೌಧದವರೆಗೆ ಬೈಕ್ ಜಾಥಾ ನಡೆಸಿ ಗಮನ ಸೆಳೆದಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೆಪ್ಟೆಂಬರ್ 14, 2025ರಂದು ಈ ಜಾಥಾ ಆಯೋಜಿಸಲಾಗಿತ್ತು. ಸಿಇಒ ಭುವನೇಶ ಪಾಟೀಲರಿಂದ ಚಾಲನೆಕರ್ನಾಟಕ ಕಾಲೇಜು ಮೈದಾನದಿಂದ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಯುವಕರು ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ…

Read More

ಸಂಶಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಅವಿರೋಧ ಆಯ್ಕೆ

ಕುಂದಗೋಳ: ತಾಲ್ಲೂಕಿನ ಸಂಶಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತಕ್ಕೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ. ಶ್ರೀ ಗುರುಶಿದ್ದಪ್ಪ ಹ. ನಾಯ್ಕರ ಅವರು ಅಧ್ಯಕ್ಷರಾಗಿ ಮತ್ತು ಶ್ರೀ ಖಾದರಸಾಬ ಚಾಂದಖಾನವರ ಅವರು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಬುದುವಾರದಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ….

Read More