ಗಿಗ್ ಕಾರ್ಮಿಕರ ಪಾಲಿಗೆ ಅಭಯದಾತ: ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕ ಇಲಾಖೆಯಲ್ಲಿ ಮಹತ್ವದ ಕ್ರಾಂತಿ ಮಾಡಲು ಹೊರಟಿದ್ದಾರೆ. ಶ್ರಮಿಕ ವರ್ಗದ ಕಾರ್ಮಿಕರ ಕಷ್ಟ-ಕಾರ್ಪಣ್ಯಗಳನ್ನು ನೀಗಿಸಲು ಹಾಗೂ ಅವರ ಕುಟುಂಬಗಳಿಗೆ ಭದ್ರತೆ ಒದಗಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅದರಲ್ಲೂ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿ ಮಾಡುವ ಮೂಲಕ ಒಂದು ಮಹತ್ವದ ಕಾರ್ಯ ಮಾಡಿದ್ದಾರೆ.ರಾಜ್ಯ ಕಾರ್ಮಿಕ ಇಲಾಖೆ ಜಾರಿಗೊಳಿಸಿದ ಮಹತ್ವದ ಯೋಜನೆಗಳಲ್ಲಿ ಗಿಗ್ ಕಾರ್ಮಿಕರ ವಿಮಾ ಯೋಜನೆಯೂ ಒಂದು. ಇಂದಿನ ದಿನಮಾನಗಳಲ್ಲಿ ಮನೆ, ಕಚೇರಿ,…

Read More

ಯುವ ಶಕ್ತಿಯ ಸದ್ಬಳಕೆ ದೇಶದ ಋಣ ತೀರಿಸಿದಂತೆ: ಹಿರಿಯ ವಿಜ್ಞಾನಿ ಡಾ. ಎಸ್ ಎಂ ಶಿವಪ್ರಸಾದ್

ಧಾರವಾಡ: ಯುವಜನತೆಯಲ್ಲಿ ಅಡಗಿರುವ ಅಪಾರ ಶಕ್ತಿಯನ್ನು ಸರಿಯಾಗಿ ಬಳಸಿಕೊಂಡು ಉನ್ನತ ಸಾಧನೆ ಮಾಡಿದರೆ ಅದು ತಂದೆ-ತಾಯಿ, ಗುರು, ಸಮಾಜ ಹಾಗೂ ದೇಶದ ಋಣ ತೀರಿಸಿದಂತೆ ಎಂದು ಧಾರವಾಡ ಐಐಟಿ ನಿರ್ದೇಶಕ ಹಾಗೂ ಹಿರಿಯ ವಿಜ್ಞಾನಿ ಡಾ. ಎಸ್.ಎಂ.ಶಿವಪ್ರಸಾದ್ ಹೇಳಿದರು. ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಭವನದಲ್ಲಿ ಮಂಗಳವಾರ ನಡೆದ ಯುವಜನ ಮತ್ತು ಕ್ರೀಡಾ ಮಂಟಪದ ಪ್ರಸಕ್ತ ತ್ರೈವಾರ್ಷಿಕ ಅವಧಿಯ ಕಾರ್ಯಚಟುವಟಿಕೆಗಳ ಉದ್ಘಾಟನೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವ ಮೂಲಕ ಚಾಲನೆ…

Read More

ಸಾರ್ವಜನಿಕರ ಸಹಕಾರದಿಂದ ಸಮಸ್ಯೆ ಪರಿಹಾರ ಸಾಧ್ಯ: ಜಿಲ್ಲಾಧಿಕಾರಿ ದಿವ್ಯಾ ಪ್ರಭು

ಧಾರವಾಡ: ಸಾರ್ವಜನಿಕರ ಸಹಕಾರ ಸಿಕ್ಕಿದಲ್ಲಿ ಯಾವುದೇ ಸಮಸ್ಯೆಯನ್ನಾದರೂ ಬಗೆಹರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶ್ರೀಮತಿ ದಿವ್ಯಾಪ್ರಭು ಅವರು ಅಭಿಪ್ರಾಯಪಟ್ಟರು. ನಗರದಲ್ಲಿ ಹುಬ್ಬಳ್ಳಿ ಧಾರವಾಡ ನಾಗರಿಕ ಪರಿಸರ ಸಮಿತಿ ಆಯೋಜಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಹಬ್ಬಗಳು, ಸಂಸ್ಕೃತಿ ಮತ್ತು ಸಂಪ್ರದಾಯಗಳು ಸಮಾಜದ ನಾಗರಿಕತೆಯ ಹೆಚ್ಚಳಕ್ಕೆ ಕಾರಣವಾಗುತ್ತವೆ. ಅವುಗಳ ಆಚರಣೆ ಮಾಡುವಾಗ ಪರಿಸರಕ್ಕೆ ಹಾನಿಯಾಗದಂತೆ ಎಲ್ಲರೂ ಕಾಳಜಿ ವಹಿಸಬೇಕು. ಸಾರ್ವಜನಿಕರ ಸಹಕಾರದಿಂದಲೇ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ಹಬ್ಬ ಆಚರಿಸಲು ಸಾಧ್ಯವಾಯಿತು. ಈ…

Read More

ಸಂಶಿ ಅರ್ಬನ್ ಕೋ ಆಪರೇಟಿವ್ ಸೊಸೈಟಿಯಿಂದ ಜಿಲ್ಲಾ ಸಹಕಾರಿ ಯೂನಿಯನ್‌ಗೆ ಶಿಕ್ಷಣ ನಿಧಿ ಚೆಕ್ ಹಸ್ತಾಂತರ

ಸಂಶಿ: ರೈತರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ ಆರ್ಥಿಕವಾಗಿ ಬೆಂಬಲ ನೀಡುತ್ತಿರುವ ಸಂಶಿ ಅರ್ಬನ್ ಕೋ ಆಪರೇಟಿವ್ ಸೊಸೈಟಿಯು ಸಹಕಾರಿ ಶಿಕ್ಷಣ ಕ್ಷೇತ್ರಕ್ಕೂ ನೆರವು ನೀಡಿದೆ. ಜಿಲ್ಲಾ ಸಹಕಾರಿ ಯೂನಿಯನ್‌ಗೆ ಶಿಕ್ಷಣ ನಿಧಿಯಾಗಿ 1,75,180 ರೂಪಾಯಿ ಮೊತ್ತದ ಚೆಕ್ ಹಸ್ತಾಂತರ ಮಾಡುವ ಮೂಲಕ ಸಂಘವು ತನ್ನ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದೆ. ಸಂಶಿ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎ.ಬಿ. ಉಪ್ಪಿನ್ ಅವರು, ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಾಹಕ…

Read More

ರೈತರ ಹೆಸರಿನ ಬ್ಯಾಂಕ್ ರೈತರಿಗೇ ನಿರ್ಲಕ್ಷ್ಯ ಮರಣ ಹೊಂದಿದವರ ಹೆಸರಿನಲ್ಲಿ ನೋಟೀಸ್, ಪಿಎಲ್‌ಡಿ ಬ್ಯಾಂಕ್ ಸಾಮಾನ್ಯ ಸಭೆ ಮುಗಿಯುತ್ತಿದ್ದಂತೆ ರೈತರ ಆಕ್ರೋಶ ಸಿಡಿತ

ಕುಂದಗೋಳ,: ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆ ಮುಗಿಯುತ್ತಿದ್ದಂತೆ ರೈತರ ಅಸಮಾಧಾನ ಮತ್ತು ಆಕ್ರೋಶದ ಅಖಾಡವಾಯಿತು. “ರೈತರ ಹೆಸರಿನಲ್ಲಿ ನಡೆಯುವ ಬ್ಯಾಂಕ್‌ನಲ್ಲಿ ರೈತರಿಗೆ ಮಾತ್ರವೇ ನಿರ್ಲಕ್ಷ್ಯ” ಎಂದು ಸಭೆಯ ಮುಗಿಯುತ್ತಿದ್ದಂತೆ ಅನೇಕ ರೈತರು ಧ್ವನಿ ಎತ್ತಿದರು. ಸಭೆಗೆ ಭಾಗವಹಿಸಿದ ಅನೇಕ ರೈತರು “ನಮಗೆ ಸಭೆಯ ಕುರಿತು ನೋಟಿಸ್ ಬಂದಿಲ್ಲ, ಬ್ಯಾಂಕಿನ ಸೌಲತ್ತುಗಳು ತಲುಪುತ್ತಿಲ್ಲ, ಸತ್ತವರ ಹೆಸರಿನ ಮೇಲೆಯೇ ನೋಟಿಸ್ ಕಳುಹಿಸಲಾಗಿದೆ, ರೈತರನ್ನು ಯಾವೊಬ್ಬರನ್ನೂ ಗೌರವಿಸುವುದಿಲ್ಲ. ಒಟ್ಟಾರೆ ರೈತರ ಹಿತದೃಷ್ಟಿ ಮರೆತು ಮನಬಂದಂತೆ ಆಡಳಿತ…

Read More

ಸಾಲಬಾಧೆ ತಾಳಲಾರದೆ ತರ್ಲಘಟ್ಟ ಗ್ರಾಮದ ರೈತ ಆತ್ಮಹತ್ಯೆ

ಕುಂದಗೋಳ: ಅತಿಯಾದ ಮಳೆ ಮತ್ತು ಸಾಲಬಾಧೆ ತಾಳಲಾರದೆ ತಾಲೂಕಿನ ತರ್ಲಘಟ್ಟ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತರನ್ನು ರುದ್ರಗೌಡ ಹುತ್ತನಗೌಡ ರಾಮನಗೌಡ್ರ (50) ಎಂದು ಗುರುತಿಸಲಾಗಿದೆ. ಮೃತ ರೈತರು ತರ್ಲಘಟ್ಟ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಕೆರೆಗೆ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಈ ಗ್ರಾಮದಲ್ಲಿ ಜರುಗಿದೆ. ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಾಶರುದ್ರಗೌಡ ರಾಮನಗೌಡ್ರ (50) ಅವರು ಹೊಂದಿದ್ದು, ಈ ವರ್ಷ ಅತೀವೃಷ್ಟಿ ಮಳೆಯಿಂದಾಗಿ ಗೋವಿನ ಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು….

Read More

ಗುಡಿಸಾಗರ ಜನರ ಜೀವದ ಜೊತೆ ಚೆಲ್ಲಾಟಕ್ಕೆ ಬ್ರೇಕ್! ಕಲುಷಿತ ನೀರು ಪ್ರಕರಣ:ಎಚ್ಚತ್ತು ದೌಡಾಯಿಸಿದ ಜಿಲ್ಲಾಡಳಿತ?

ನವಲಗುಂದ: ನಿನ್ನೆ ರಾತ್ರಿ, ‘ಪಬ್ಲಿಕ್ ಸಮಾಚಾರ’ ವರದಿ ಪ್ರಕಟಿಸಿದ್ದ ಗುಡಿಸಾಗರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಮುಂಜಾನೆ ಗ್ರಾಮಕ್ಕೆ ಭೇಟಿ ನೀಡಿ, ಅಧಿಕಾರಿಗಳು ಪರಿಸ್ಥಿತಿಯ ಗಂಭೀರತೆಯನ್ನು ಪರಿಶೀಲಿಸಿದರು. ಪಬ್ಲಿಕ್ ಸಮಾಚಾರ’ ವರದಿಗೆ ಎಚ್ಚೆತ್ತ ಆಡಳಿತನಿನ್ನೆ ರಾತ್ರಿ “ಗುಡಿಸಾಗರ ಜನರ ಜೀವದ ಜೊತೆ ಚೆಲ್ಲಾಟ” ಎಂಬ ಶೀರ್ಷಿಕೆಯಡಿ ವರದಿ ಪ್ರಸಾರವಾದ ಬೆನ್ನಲ್ಲೇ, ಜಿಲ್ಲಾಡಳಿತ ಕೂಡಲೇ ಕಾರ್ಯಪ್ರವೃತ್ತವಾಯಿತು. ಮಂಗಳವಾರ ಸಂಜೆ ಗ್ರಾಮದಲ್ಲಿ 16ಕ್ಕೂ ಹೆಚ್ಚು ಜನ ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದು, ಅವರನ್ನು…

Read More

ಮಡಕಿಹೊನ್ನಳ್ಳಿ ಗ್ರಾಮದಲ್ಲಿ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಉಚಿತ ಶ್ರವಣ ದೋಷ ಚಿಕಿತ್ಸಾ ಶಿಬಿರ

ಕಲಘಟಗಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರ ನೇತೃತ್ವದಲ್ಲಿ, ತಾಲ್ಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ಮೊದಲ ಬಾರಿಗೆ “ಸಂತೋಷ ಲಾಡ್ ಫೌಂಡೇಶನ್” ವತಿಯಿಂದ “ಉಚಿತ ಶ್ರವಣ ದೋಷ ಚಿಕಿತ್ಸಾ ಶಿಬಿರ”ವನ್ನು ಆಯೋಜಿಸಲಾಗಿತ್ತು. “ಶ್ರೀನಿವಾಸ್ ಹೆಲ್ತ್ ಕೇರ್, ಬೆಂಗಳೂರು” ಸಹಯೋಗದೊಂದಿಗೆ ನಡೆದ ಈ ಶಿಬಿರವು ಸಾವಿರಾರು ಜನರಿಗೆ ಉಪಕಾರಿಯಾಯಿತು. ಕಲಘಟಗಿ ತಾಲೂಕಿನ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ, ಸಚಿವರ ಮಡಿಕೀಹೊನ್ನಳ್ಳಿ ಅಮೃತ ನಿವಾಸದಲ್ಲಿ ಈ ವಿಶೇಷ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ನೂರಾರು ಜನರು…

Read More

ಯಲಿವಾಳದ ಶಾಲೆಯಲ್ಲಿ ಪೋಕ್ಸೋ ಕಾಯ್ದೆ ಜಾಗೃತಿ ಕಾರ್ಯಕ್ರಮ

ಕುಂದಗೋಳ: ತಾಲ್ಲೂಕಿನ ಯಲಿವಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಾಗೂ ಕುಂದಗೋಳದ ಕರ್ಮಣಿ ಮಹಿಳಾ ಸಾಂತ್ವನ ಕೇಂದ್ರದ ಸಹಯೋಗದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರದಂದು ಪೋಕ್ಸೋ ಕಾಯ್ದೆ-2012 ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ, ಕರ್ಮಣಿ ಮಹಿಳಾ ಸಾಂತ್ವನ ಕೇಂದ್ರದ ನಿರ್ದೇಶಕರಾದ ಶ್ರೀ ಎನ್.ಬಿ. ಹೊಸಮನಿ ಅವರು ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಮಹತ್ವ, ಅದರ ಜಾರಿ ಮತ್ತು ನೀತಿ-ನಿಯಮಗಳ ಕುರಿತು ತಿಳುವಳಿಕೆ ನೀಡಿದರು. ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಸಹಾಯವಾಣಿಗಳ ಬಗ್ಗೆಯೂ ಅವರು ಮಾಹಿತಿ…

Read More

ಗುಡಿಸಾಗರ ಜನರ ಜೀವದ ಜೊತೆ ಚೆಲ್ಲಾಟ, ಕಲುಷಿತ ಕೆರೆ ನೀರು ಕುಡಿದು16 ಕ್ಕು ಹೆಚ್ಚು ಗ್ರಾಮಸ್ಥರು ಅಸ್ಥವ್ಯಸ್ತ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಕಲುಷಿತಗೊಂಡ ಕೆರೆ ನೀರು ಕುಡಿದು ಮಕ್ಕಳು, ವೃದ್ಧರು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಮಂಗಳವಾರ ಸಂಜೆ ನಡೆದ ಈ ಘಟನೆ, ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸ್ಥಳೀಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಬಡ ಮತ್ತು ಅಮಾಯಕ ಜನರ ಜೀವದೊಂದಿಗೆ ಚೆಲ್ಲಾಟವಾಡಿದ ಈ ಅಮಾನವೀಯ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ಬೇಜವಾಬ್ದಾರಿಯೇ ದುರಂತಕ್ಕೆ ಕಾರಣವಾಯೀತೆ:ಗುಡಿಸಾಗರ ಕೆರೆಯ ನೀರು ಕುಡಿಯಲು ಯೋಗ್ಯವಲ್ಲ…

Read More