ಕೃಷಿ ಮೇಳ ಸಿದ್ಧತೆ ಪರಿಶೀಲಿಸಿದ ಸಚಿವ ಸಂತೋಷ ಲಾಡ್

ಧಾರವಾಡ: ಸೆಪ್ಟೆಂಬರ್ 13 ರಿಂದ 16 ರವರೆಗೆ ನಡೆಯಲಿರುವ ಧಾರವಾಡ ಕೃಷಿ ಮೇಳದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಂಗಳವಾರ ವೀಕ್ಷಿಸಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಮೇಳದ ಸಿದ್ಧತೆಗಳ ಬಗ್ಗೆ ಅವರು ವಿಶ್ವವಿದ್ಯಾಲಯದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಸ್ಟಾಲ್‌ಗಳ ಅಳವಡಿಕೆ, ಜಾನುವಾರು ಮತ್ತು ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮಳಿಗೆಗಳು, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮುಖ್ಯ ವೇದಿಕೆಯ ಸಿದ್ಧತೆಗಳ ಕುರಿತು ಸಚಿವರು ಪರಿಶೀಲನೆ ನಡೆಸಿ ಸೂಕ್ತ ಸಲಹೆಗಳನ್ನು ನೀಡಿದರು. ಕೃಷಿ ವಿಶ್ವವಿದ್ಯಾಲಯದ…

Read More

ಮಳೆಹಾನಿ: ಕುಂದಗೋಳದಲ್ಲಿ ಹೆಸರು, ಉದ್ದು,ಸೇರಿದಂತೆ ವಿವಿಧ ಬೆಳೆ ನಾಶ, ಪರಿಶೀಲನೆ ನಡೆಸಿದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಂಡ

ಕುಂದಗೋಳ: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಹೆಸರು ಮತ್ತು ಉದ್ದು ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯಮಟ್ಟದ ಅಧಿಕಾರಿಗಳ ತಂಡ ಸೋಮವಾರದಂದು ತಾಲ್ಲೂಕಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿತು. ಪ್ರಾಧಿಕಾರದ ಅಧಿಕಾರಿ ಮಂಜುಳಮ್ಮ ನೇತೃತ್ವದ ತಂಡವು ಕುಂದಗೋಳ, ಶಿರೂರ, ಬಸಾಪೂರ, ಹಿರೇನೇರ್ತಿ, ಮುಳ್ಳೋಳ್ಳಿ, ಯರಿನಾರಾಯಣಪುರ ಮತ್ತು ಬೆನಕನಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ…

Read More

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಅಧ್ಯಕ್ಷ ಶಿವಾನಂದ ಬೆಂತೂರ ಸೂಚನೆ; ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟದ ಬಗ್ಗೆ ಸದಸ್ಯರಿಂದ ಆರೋಪ

ಕುಂದಗೋಳ: ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಾನಂದ ಬೆಂತೂರ ಅವರು ನಿರ್ದೇಶನ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ತಮ್ಮ ವರದಿಗಳನ್ನು ಮಂಡಿಸಿದರು.  ನಂತರ ಸಭೆಯ ಅಧ್ಯಕ್ಷತೆ ವಹಿಸಿ ಅಧ್ಯಕ್ಷ ಶಿವಾನಂದ ಬೆಂತೂರ ಮಾತನಾಡಿ, ಅನ್ನ ಭಾಗ್ಯ ಯೋಜನೆಯಡಿ ಪಡಿತರ ವಿತರಿಸುವ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ದರ ಫಲಕ, ಸ್ವಚ್ಛತೆ ಮತ್ತು ನಿಗದಿತ ಸಮಯಕ್ಕೆ ಪಡಿತರ…

Read More

ಪಬ್ಲಿಕ್ ಸಮಾಚಾರದ ವರದಿ ಪರಿಣಾಮ: ಸಾರ್ವಜನಿಕರ ಆಕ್ರೋಶಕ್ಕೆ ಸ್ಪಂದಿಸಿದ ಸಂಶಿ ಪಂಚಾಯತಿ, ಗಣೇಶ ವಿಸರ್ಜನಾ ಸ್ಥಳಕ್ಕೆ ಹೊಸ ಕಳೆ

ಸಂಶಿ: (ಧಾರವಾಡ) ಗ್ರಾಮದ ಗಣಪತಿ ವಿಸರ್ಜನಾ ಸ್ಥಳದಲ್ಲಿ ಸೂಕ್ತ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ಗ್ರಾಮಸ್ಥರು ವ್ಯಕ್ತಪಡಿಸಿದ್ದ ಆಕ್ರೋಶಕ್ಕೆ ಸಂಶಿ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಪಂದಿಸಿದ್ದು, ವೆಬ್ ನ್ಯೂಸ್ ಚಾನೆಲ್‌ನಲ್ಲಿ ಬಿತ್ತರವಾಗಿದ್ದ ವರದಿಯ ಪರಿಣಾಮವಾಗಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. ರವಿವಾರದಂದು ‘ಪಬ್ಲಿಕ್ ಸಮಾಚಾರ’ (ವೆಬ್) ನ್ಯೂಸ್ ಚಾನೆಲ್‌ನಲ್ಲಿ ವರದಿ ಬಿತ್ತರಗೊಂಡ ನಂತರ ಎಚ್ಚೆತ್ತ ಗ್ರಾಮ ಪಂಚಾಯತಿ ಸಿಬ್ಬಂದಿ ಸೋಮವಾರಂದು ಗಣೇಶ ಮೂರ್ತಿ ವಿಸರ್ಜನೆ ಮಾಡುವ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ವಿಸರ್ಜನಾ ಸ್ಥಳದ…

Read More

ಗಣಪತಿ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಇಲ್ಲ: ಸಂಶಿ ಗ್ರಾಮಸ್ಥರಿಂದ ಪಂಚಾಯತಿ ವಿರುದ್ಧ ಆಕ್ರೋಶ

ಸಂಶಿ: (ಧಾರವಾಡ) ಗಣೇಶ ಹಬ್ಬದ ವಿಸರ್ಜನಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಸೂಕ್ತ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಿ, ತಾಲ್ಲೂಕಿನ ಸಂಶಿ ಗ್ರಾಮ ಪಂಚಾಯತಿ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಗಣಪತಿ ವಿಸರ್ಜನೆಗೆಂದು ಸಂಶಿ ಕೆರೆ ಬಳಿ ಬಂದಿದ್ದ ಭಕ್ತರು, ಪಂಚಾಯತಿಯ ನಿರ್ಲಕ್ಷ್ಯದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಘಟನೆಯ ಬಗ್ಗೆ ಮಾತನಾಡಿದ ಗ್ರಾಮಸ್ಥರೊಬ್ಬರು, “ಗಣಪತಿ ವಿಸರ್ಜನೆಗೆ ಬಂದಾಗ ಕೆರೆಗೆ ಹೋಗುವ ರಸ್ತೆಯಲ್ಲಿ ಸರಿಯಾದ ವ್ಯವಸ್ಥೆ ಮಾಡಿಲ್ಲ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಭಕ್ತರ…

Read More

ಮಳೆಹಾನಿ ಸಮೀಕ್ಷೆ ತ್ವರಿತವಾಗಿ ಪೂರ್ಣಗೊಳಿಸಿ: ಸರ್ಕಾರ ನಿಯಮಾನುಸಾರ ಪರಿಹಾರ ನೀಡಲಿದೆ: ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ತಾಕೀತು

ಧಾರವಾಡ: ಜಿಲ್ಲೆಯಲ್ಲಿ ಆಗಸ್ಟ್ ಮಾಹೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉಂಟಾಗಿರುವ ಬೆಳೆ ಹಾಗೂ ಮನೆ ಹಾನಿ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಭವನದಲ್ಲಿ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರವು ನಿಯಮಾನುಸಾರ ಪರಿಹಾರ ನೀಡಲಿದೆ. ಪರಿಹಾರ ಕಾರ್ಯಗಳಲ್ಲಿ…

Read More

ಧಾರವಾಡ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿಗೆ ಅತಿಥಿ ಉಪನ್ಯಾಸಕರ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಘಟಕ ಕಾಲೇಜುಗಳಿಗೆ 2025-26ನೇ ಸಾಲಿನ ಸ್ನಾತಕ ಕೋರ್ಸ್‌ಗಳಿಗಾಗಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಇತಿಹಾಸ ಮತ್ತು ಭೌತಶಾಸ್ತ್ರ ವಿಷಯಗಳಿಗೆ ಅಗತ್ಯತೆಗನುಗುಣವಾಗಿ ಪೂರ್ಣಾವಧಿ ಹಾಗೂ ಅಲ್ಪಾವಧಿ ಆಧಾರದ ಮೇಲೆ ಬೋಧನೆ ಮಾಡಲು ಈ ನೇಮಕಾತಿ ನಡೆಯುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 4, 2025ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಮಹಾವಿದ್ಯಾಲಯಗಳ ಪ್ರಾಚಾರ್ಯರನ್ನು ಸಂಪರ್ಕಿಸಬಹುದು ಅಥವಾ ಕರ್ನಾಟಕ ವಿಶ್ವವಿದ್ಯಾಲಯದ ಅಧಿಕೃತ…

Read More

ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಎಚ್ಚೆತ್ತುಕೊಳ್ಳುವುದೇ? ಸ್ಮಶಾನಕ್ಕೆ ರಸ್ತೆ ಇಲ್ಲವೆಂದು ಸೊಟಕನಾಳ ಗ್ರಾಮದಲ್ಲಿ ಶವ ಇಟ್ಟು ಪ್ರತಿಭಟನೆ!

ನವಲಗುಂದ: ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಸೂಕ್ತ ರಸ್ತೆ ಇಲ್ಲದೆ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು, ಅಂತಿಮವಾಗಿ ವೃದ್ಧೆಯ ಶವವನ್ನೇ ಗ್ರಾಮದ ಬಸ್ ನಿಲ್ದಾಣದ ಬಳಿ ಇಟ್ಟು ಪ್ರತಿಭಟನೆ ನಡೆಸಿದ ಹೃದಯವಿದ್ರಾವಕ ಘಟನೆ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಶನಿವಾರ ಜರುಗಿದೆ. ಇದು ಸ್ಥಳೀಯ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ನಿರಂತರ ನಿರ್ಲಕ್ಷ್ಯದ ಪರಾಕಾಷ್ಠೆಯಾಗಿದೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಸೊಟಕನಾಳ ಗ್ರಾಮಸ್ಥರು ಸ್ಮಶಾನಕ್ಕೆ ಹೋಗುವ ರಸ್ತೆ ನಿರ್ಮಿಸುವಂತೆ ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ, ಯಾವುದೇ…

Read More

ಧಾರವಾಡ ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮೀತಿ ಅಧ್ಯಕ್ಷ: ಚಂದ್ರಶೇಖರ ಜುಟ್ಟಲ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ

ಕುಂದಗೋಳ: ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಶ್ರೀ ಗೋವಿಂದಪ್ಪ.ಹ. ಜುಟ್ಟಲ್ ಪ್ರತಿಷ್ಠಾನದ ಸಂಸ್ಥಾಪಕರಾದ ಚಂದ್ರಶೇಖರ ಜುಟ್ಟಲ್ ಅವರ ಹುಟ್ಟುಹಬ್ಬವನ್ನು ಸಮಾಜ ಸೇವಾ ಕಾರ್ಯಗಳ ಮೂಲಕ ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀ ಗೋವಿಂದಪ್ಪ.ಹ. ಜುಟ್ಟಲ್ ಪ್ರತಿಷ್ಠಾನ ಹಾಗೂ ಸೇವಾ ಸಮಿತಿ, ಕಮಡೊಳ್ಳಿ ವತಿಯಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಲಾಯಿತು. ಈ ಮೂಲಕ ರೋಗಿಗಳ ಮುಖದಲ್ಲಿ ಸಂತೋಷ ಮೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ ಬೆಟದೂರ ಗ್ರಾ.ಪಂ….

Read More

ಸಾಲ ಭಾಧೆ ತಾಳಲಾರದೆ ಅಮರಗೋಳದ ರೈತ ಆತ್ಮಹತ್ಯೆ

ನವಲಗುಂದ: ತಾಲ್ಲೂಕಿನ ಅಮರಗೋಳ ಗ್ರಾಮದ ಯುವ ರೈತ ಕಾಂತೇಶ ಯಲ್ಲಪ್ಪ ದೊಡ್ಡಮನಿ (28) ಅವರು ಬೆಳೆ ನಷ್ಟ ಮತ್ತು ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತ ಘಟನೆಯು ತೀವ್ರ ಸಂಕಟವನ್ನುಂಟು ಮಾಡಿದೆ ಎಂದು ನವಲಗುಂದ ಮತಕ್ಷೇತ್ರದ ಮಾಜಿ ಸಚಿವರಾದ ಶಂಕರಪಾಟೀಲ ಮುನೇನಕೊಪ್ಪ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ಘಟನೆಯ ವಿವರ:ರೈತ ಕಾಂತೇಶ ದೊಡ್ಡಮನಿ ಅವರು ಕೆವಿಜಿಬಿ ಬ್ಯಾಂಕ್‌ನಲ್ಲಿ ₹4 ಲಕ್ಷ ಮತ್ತು ವಿವಿಧ ಸಂಘಗಳಿಂದ ₹1.5 ಲಕ್ಷ ಸೇರಿ ಅಂದಾಜು ₹5.5 ಲಕ್ಷ ಸಾಲ…

Read More