ಮಹಿಳಾ ಸಬಲೀಕರಣಕ್ಕೆ ಸಾಕ್ಷರತೆಯೇ ಪ್ರಬಲ ಅಸ್ತ್ರ: ಡಾ. ಪ್ರಜ್ಞಾ ಮತ್ತಿಹಳ್ಳಿ

ಧಾರವಾಡ: ವ್ಯಕ್ತಿಯ ಜೀವನದಲ್ಲಿ ಶಿಕ್ಷಣವು ಒಂದು ಮಹಾನ್ ಶಕ್ತಿ. ಅದರಲ್ಲೂ ಮಹಿಳೆಯರು ಅಜ್ಞಾನ ಮತ್ತು ಶೋಷಣೆಯಿಂದ ಹೊರಬರಲು ಸಾಕ್ಷರತೆಯು ಒಂದು ಪರಿಣಾಮಕಾರಿ ಸಾಧನವಾಗಿದೆ ಎಂದು ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯಾವರ್ಧಕ ಸಂಘದ (ಕ.ವಿ.ವ.ಸಂ.) “ಶಿಕ್ಷಣ ಮಂಟಪ”ವು, ನಗರದ ಶ್ರೀ ಸತ್ಯಸಾಯಿ ಮಹಿಳಾ ಪದವಿ ಮಹಾವಿದ್ಯಾಲಯದ ಸಹಯೋಗದೊಂದಿಗೆ ವಿಶ್ವ ಸಾಕ್ಷರತಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ‘ಸಾಕ್ಷರತೆ ಮತ್ತು ಮಹಿಳಾ ಸಬಲೀಕರಣ’ ಕುರಿತ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ…

Read More

ನವಲಗುಂದದಲ್ಲಿ ಪುಣ್ಯಸ್ಮರಣೆ ಅಂಗವಾಗಿ ಉಚಿತ ನೇತ್ರ ತಪಾಸಣೆ ಶಿಬಿರ.

ನವಲಗುಂದ : ಪಟ್ಟಣದ ತಾಲ್ಲೂಕ ಸರ್ಕಾರಿ ಆಸ್ಪತ್ರೆಯಲ್ಲಿಮಾಜಿ ಶಾಸಕರು, ಹಿರಿಯ ಸಹಕಾರಿ ಧುರಿಣರಾದ ದಿ. ಶಂಕರಗೌಡರು ವಿ. ಪಾಟೀಲ, ದಿ. ಶ್ರೀಮತಿ ಲಕ್ಷ್ಮೀಬಾಯಿ ಶಂಕರಗೌಡರು ಪಾಟೀಲ ಮತ್ತು ದಿ. ದೇಸಾಯಿಗೌಡರ ಶಂಕರಗೌಡ ಪಾಟೀಲ ಅವರುಗಳ 34 ನೇ ಪುಣ್ಯಸ್ಮರಣೆಯ ಅಂಗವಾಗಿ ಹಮ್ಮಿಕೊಂಡದ್ದ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಕೆ ಸಿ ಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಬಾಪೂಗೌಡ ಡಿ ಪಾಟೀಲ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ‘ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ…

Read More

ಕುಂದಗೋಳದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪಿಸಿಯೋಥೆರಪಿ ಉಚಿತ ಶಿಬಿರ

ಕುಂದಗೋಳ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಲ್‌ಇ ಕಾಲೇಜ್ ಆಫ್ ಫಿಸಿಯೋಥೆರಪಿ ವತಿಯಿಂದ ಮೂರು ದಿನಗಳ ಉಚಿತ ಫಿಸಿಯೋಥೆರಪಿ ಶಿಬಿರಕ್ಕೆ ಚಾಲನೆ ನೀಡಲಾಗಿದೆ. ಫಿಸಿಯೋಥೆರಪಿ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನಾ ಘಟಕ-16 ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಮುಕ್ಕಣ್ಣವರ ಅವರು ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘಟನಾಕಾರರಾದ ಡಾ. ನವಮಿ ಮಹಾವೀರ, ಡಾ. ಆರತಿ ಪ್ರಯಾಗ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಸುಮಾ ಪಾಟೀಲ್ ಹಾಗೂ ಸಂಯೋಜನಾಧಿಕಾರಿ ಡಾ. ಶ್ರೀಮತಿ…

Read More

ತಂಬುರ ಗ್ರಾ ಪಂ: ಹಣ ದುರುಪಯೋಗ ಆರೋಪ, ಪಿಡಿಒ ಅಮಾನತ್ತು

ಕಲಘಟಗಿ: ಕರ್ತವ್ಯ ಲೋಪ ಹಾಗೂ ಹಣಕಾಸಿನ ದುರುಪಯೋಗದ ಗಂಭೀರ ಆರೋಪದ ಮೇಲೆ ಕಲಘಟಗಿ ತಾಲೂಕಿನ ತಂಬೂರು ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಏನಿದು ಪ್ರಕರಣ?ಪಿಡಿಒ ನಾಗರಾಜಕುಮಾರ ಅವರು, ತಂಬೂರು ಮತ್ತು ಮುಕ್ಕಲ ಗ್ರಾಮ ಪಂಚಾಯತ್‌ಗಳ ಎಸ್ಕೋ ಬ್ಯಾಂಕ್ ಖಾತೆಯಿಂದ ಖಾಸಗಿ ವ್ಯಕ್ತಿಗಳಿಗೆ ಹಣ ಪಾವತಿಸಿರುವುದು ಕಂಡುಬಂದಿದೆ. ಸರ್ಕಾರದ ನಿಯಮ ಮತ್ತು…

Read More

ಹುಬ್ಬಳ್ಳಿ: ಕ್ಷುಲ್ಲಕ ಜಗಳಕ್ಕೆ ನಾಲ್ವರ ಬಂಧನ.

ಹುಬ್ಬಳ್ಳಿ: ನಗರದ ಕೊಪ್ಪಿಕರ ರಸ್ತೆಯ ಮೇದಾರ ಓಣಿಯ ಬಳಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಹುಬ್ಬಳ್ಳಿ ಶಹರ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 6ರ ರಾತ್ರಿ ಈ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದವು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎನ್ನಲಾಗಿದೆ.ಕಾಲ್ತುಳಿತದಿಂದ ಶುರುವಾದ ಜಗಳ: ತನಿಖೆಯ ವೇಳೆ ಪೊಲೀಸರಿಗೆ ದೊರೆತ ಮಾಹಿತಿ ಪ್ರಕಾರ, ರಾತ್ರಿ ಕೊಪ್ಪಿಕರ ರಸ್ತೆ ಬಳಿ ಇದ್ದ ಯುವಕರ ತಂಡದ ನಡುವೆ ಸಣ್ಣ ಕಾಲ್ತುಳಿತವೊಂದು ಗಂಭೀರ ಸ್ವರೂಪ ಪಡೆದುಕೊಂಡಿದೆ. ವಾಗ್ವಾದ…

Read More

ಸಪ್ತಾಪುರ ಹಾಸ್ಟೆಲ್‌ಗೆ ಮೂಲ ಸೌಕರ್ಯ: ಎಐಡಿಎಸ್‌ಓ ಪ್ರತಿಭಟನೆ

ಧಾರವಾಡ,: ನಗರದ ಸಪ್ತಾಪುರದಲ್ಲಿರುವ ಪರಿಶಿಷ್ಟ ಪಂಗಡದ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರದಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, “ವಿದ್ಯಾಕಾಶಿ ಎಂದು ಹೆಸರು ಪಡೆದ ಧಾರವಾಡದಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ಆದರೆ, ಅವರಿಗೆ ವಸತಿ ಸೌಲಭ್ಯ ದೊರೆಯುತ್ತಿಲ್ಲ. ವಸತಿ ದೊರೆತರೂ ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ…

Read More

ಧಾರವಾಡದಲ್ಲಿ ಅತಿವೃಷ್ಟಿ: 93 ಸಾವಿರ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ; ತಕ್ಷಣ ಪರಿಹಾರ ಬಿಡುಗಡೆಗೆ ಸಿಎಂಗೆ ಸಚಿವ ಸಂತೋಷ ಲಾಡ್ ಮನವಿ

ಧಾರವಾಡ: ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಸೇರಿ ಸುಮಾರು 93,496.98 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಈ ಕುರಿತು ಜಂಟಿ ಸಮೀಕ್ಷೆ ಮಾಡಿ ಸಿದ್ಧಪಡಿಸಿದ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ದತ್ತಾಂಶಗಳನ್ನು ದಾಖಲಿಸಲು ವೆಬ್‌ಸೈಟ್ ತೆರೆಯಿಸಿ, ರೈತರಿಗೆ ತಕ್ಷಣ ಪರಿಹಾರ ಬಿಡುಗಡೆಗೆ ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮುಖ್ಯಮಂತ್ರಿಗಳನ್ನು ವಿನಂತಿಸಿದರು. ಸೋಮವಾರದಂದು ಮಧ್ಯಾಹ್ನ ಮುಖ್ಯಮಂತ್ರಿಗಳೊಂದಿಗೆ ಧಾರವಾಡ ಜಿಲ್ಲಾಡಳಿತವು ಭಾಗವಹಿಸಿದ್ದ…

Read More

ಸುಳ್ಳು ಜಾತಿ ಪ್ರಮಾಣಪತ್ರ ತನಿಖೆಗೆ ಆಗ್ರಹ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಚಂದ್ರಕಾತ ಕಾದ್ರೋಳ್ಳಿ ಬಣ)

ಕುಂದಗೋಳ: ತಾಲೂಕಿನ ಗುರುವಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರಗಳ ಮೂಲಕ ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ ಚಂದ್ರಕಾತ ಕಾದ್ರೋಳ್ಳಿ ಬಣ ತೀವ್ರ ಆಗ್ರಹ ವ್ಯಕ್ತಪಡಿಸಿದೆ. ಜಿಲ್ಲಾಧ್ಯಕ್ಷ ಬಸವರಾಜ ಲಗಮ್ಮನವರ,ಹಾಗೂ ತಾಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಕೋಟೆಪ್ಪ ತಳಗೇರಿ ಅವರ ನೇತೃತ್ವದಲ್ಲಿ ಕಾರ್ಯಕರ್ತರು ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ, ನಂತರ ಉಪ ತಹಶೀಲ್ದಾರ ರೇಣುಕಾ ದಾನಣ್ಣವರ ಅವರಿಗೆ ಮನವಿ…

Read More

ಶಿಕ್ಷಕರು ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಶಿಲ್ಪಿಗಳು: ಶಾಸಕ ಎಂ ಆರ್ ಪಾಟೀಲ

ಕುಂದಗೋಳ: ಶಿಕ್ಷಕರು ಕೇವಲ ಪಾಠ ಹೇಳುವ ಯಂತ್ರಗಳಲ್ಲ, ಬದಲಾಗಿ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಶಿಸ್ತು ಮತ್ತು ಗೌರವವನ್ನು ತುಂಬುವ ಶಿಲ್ಪಿಗಳು ಎಂದು ಶಾಸಕ ಎಂ.ಆರ್. ಪಾಟೀಲ್ ಹೇಳಿದರು. ಪಟ್ಟಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಗುರುಗಳ ಪಾತ್ರವನ್ನು ಸ್ಮರಿಸಿದರು. ಅವರು ಪಟ್ಟಣದಲ್ಲಿ ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಧಾರವಾಡ ಹಾಗೂ ಶಿಕ್ಷಕ ದಿನೋತ್ಸವ ಸಮೀತಿ ಕುಂದಗೋಳ ಇವರ ಸಂಯುಕ್ತ ಆಶ್ರಯದೊಂದಿಗೆ ಶ್ರೀ ಗುರುದೇವ ಪ್ರೌಡ ಶಾಲೆ ಆವರಣದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್…

Read More

ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಗುಡಗೇರಿ ಗ್ರಾ ಪಂ ಲಸಿಕೆ ಅಭಿಯಾನ ನಡೆಯಿತು.

ಕುಂದಗೋಳ: ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಮತ್ತು ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಇತ್ತೀಚೆಗೆ ತಾಲೂಕಿನ ಗುಡಗೇರಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಹುಬ್ಬಳ್ಳಿಯ ‘ಬ್ಲಿಂಗ್‌ಡೆ ಇನ್ನರ್ ವೀಲ್ ಕ್ಲಬ್’ ಮತ್ತು ‘ರೇಡಾನ್ ಕ್ಯಾನ್ಸರ್ ಫೌಂಡೇಶನ್’ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮದ ವಿವಿಧ ಶಾಲೆಗಳ 9 ರಿಂದ 14 ವರ್ಷದೊಳಗಿನ 68 ಬಾಲಕಿಯರಿಗೆ ಉಚಿತವಾಗಿ ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆ ನೀಡಲಾಯಿತು. ಈ ಲಸಿಕೆಯು ಆರಂಭಿಕ ಹಂತದಲ್ಲೇ ಸೋಂಕು…

Read More