ಪ್ರಧಾನಿ ಮೋದಿ ಜನ್ಮದಿನ: ಆಸ್ಪತ್ರೆ ಸ್ವಚ್ಛತಾ ಕಾರ್ಯ ಹಾಗೂ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಎಂ.ಆರ್.ಪಾಟೀಲ ಚಾಲನೆ

ಕುಂದಗೋಳ: ವಿಶ್ವನಾಯಕ ಹಾಗೂ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ ನಿಮಿತ್ತ ಬಿಜೆಪಿ ಕುಂದಗೋಳ ಮಂಡಲ ವತಿಯಿಂದ ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಶಾಸಕ ಎಂ.ಆರ್. ಪಾಟೀಲ ಅವರು ಚಾಲನೆ ನೀಡಿದರು. ಈ ಸಮಯದಲ್ಲಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು, ಬ್ರೆಡ್ ಹಾಗೂ ಬಿಸ್ಕತ್‌ಗಳನ್ನು ವಿತರಿಸಿದರು. ಸೆ. 17ರಿಂದ ಅ. 2ರವರೆಗೆ ಸೇವಾ ಕಾರ್ಯಕ್ರಮಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಸೆಪ್ಟೆಂಬರ್ 17ರಿಂದ ಗಾಂಧಿ ಜಯಂತಿಯಾದ ಅಕ್ಟೋಬರ್ 2ರವರೆಗೆ ವಿವಿಧ ಸೇವಾ ಕಾರ್ಯಕ್ರಮಗಳನ್ನು…

Read More

ಜನಪರ ಸೇವೆಗೆ ಮುಂದಾಗಿ: ನೂತನ ಪೇದೆಗಳಿಗೆ ಎಡಿಜಿಪಿ ಆಲೋಕ್ ಕುಮಾರ್ ಕರೆ

ಧಾರವಾಡ: ಸಾರ್ವಜನಿಕ ಸೇವೆಗೆ ಬದ್ಧರಾಗಿ, ಪ್ರತಿಯೊಬ್ಬ ಪೇದೆಯೂ ಜನಪರ ಮತ್ತು ಜನಸ್ನೇಹಿ ಪೊಲೀಸ್ ಆಗಿ ಕಾರ್ಯನಿರ್ವಹಿಸಬೇಕು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಲೋಕ್ ಕುಮಾರ್ ಕರೆ ನೀಡಿದರು. ನಿರ್ಲಕ್ಷ್ಯದ (ಕಳಪೆ) ತರಬೇತಿಯಿಂದ ಉತ್ತಮ ಕರ್ತವ್ಯ ನಿರೀಕ್ಷಿಸಲು ಸಾಧ್ಯವಿಲ್ಲ, ಹೀಗಾಗಿ ಇಲಾಖೆಯು ಪೇದೆಗಳ ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ಗಮನಹರಿಸಿದೆ ಎಂದು ಅವರು ತಿಳಿಸಿದರು. ಗಿರಿನಗರದಲ್ಲಿ ಪಥಸಂಚಲನ ಕಾರ್ಯಕ್ರಮಇಂದು ಬೆಳಿಗ್ಗೆ ಕಲಘಗಿ ರಸ್ತೆಯ ಗಿರಿನಗರದಲ್ಲಿರುವ ಪೊಲೀಸ್ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ನಡೆದ 2ನೇ ತಂಡದ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ಗಳ…

Read More

ಯೋಧರಿಗೆ ಕಾನೂನು ಸೇವೆ: ಧಾರವಾಡದಲ್ಲಿ ಉಚಿತ ಕ್ಲಿನಿಕ್ ಆರಂಭ

ಧಾರವಾಡ: ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡುವ ವೀರ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರು ಕಾನೂನಿನ ತೊಡಕುಗಳಲ್ಲಿ ಸಿಲುಕಿ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದ ಉಚಿತ ಕಾನೂನು ಸೇವೆಗಳ ಕ್ಲಿನಿಕ್‌ಗಳನ್ನು ಪ್ರಾರಂಭಿಸಲಾಗಿದೆ ಎಂದು ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಭಾರತಿ ಬಿ.ಎಸ್. ಹೇಳಿದರು. ಸೆಪ್ಟೆಂಬರ್ 15ರಂದು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ವೀರ…

Read More

ನಾಲ್ಕು ದಿನಗಳ ಕೃಷಿ ಮೇಳಕ್ಕೆ ದಾಖಲೆ ಜನಸಂದಣಿ: 23.74 ಲಕ್ಷ ಜನರಿಂದ ಭೇಟಿ

ಧಾರವಾಡ: ರೈತರಿಗೆ ಹೊಸ ತಂತ್ರಜ್ಞಾನ, ಸುಧಾರಿತ ತಳಿಗಳು ಹಾಗೂ ಕೃಷಿ ವರಮಾನ ಹೆಚ್ಚಿಸುವ ಕುರಿತು ಮಾಹಿತಿ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ 2025ನೇ ಸಾಲಿನ ಧಾರವಾಡ ಕೃಷಿ ಮೇಳ ಯಶಸ್ವಿಯಾಗಿ ಸಂಪನ್ನಗೊಂಡಿದೆ. ನಾಲ್ಕು ದಿನಗಳ ಈ ಮೇಳಕ್ಕೆ ದಾಖಲೆ ಸಂಖ್ಯೆಯಲ್ಲಿ ಅಂದರೆ, 23.74 ಲಕ್ಷ ಜನರು ಭೇಟಿ ನೀಡಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕೃಷಿಕರಿಗೆ ಪೂರಕ ಮಾಹಿತಿಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಂದ ಅಪಾರ ಸಂಖ್ಯೆಯ ರೈತರು ಮೇಳದಲ್ಲಿ ಭಾಗವಹಿಸಿದ್ದರು. ಕೃಷಿ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ಕುತೂಹಲದಿಂದ ಭೇಟಿ ನೀಡಿದ…

Read More

ಮಳಲಿ ಗ್ರಾಮ ಪಂಚಾಯತಿಗೆ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಅಧ್ಯಕ್ಷ

ಕುಂದಗೋಳ: ತಾಲ್ಲೂಕಿನ ಮಳಲಿ ಗ್ರಾಮ ಪಂಚಾಯತಿಗೆ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಬುದುವಾರದಂದು ಚುನಾವಣೆ ನಡೆಯಿತು. ಒಟ್ಟು 11 ಸದಸ್ಯ ಬಲ ಹೊಂದಿರುವ ಈ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಹಾಗೂ ಸುಮಿತ್ರಾಬಾಯಿ ಪ್ರಕಾಶ ಕದಂ ಎಂಬುವರು ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಅವರು 7 ಮತಗಳನ್ನು ಪಡೆದು ಜಯಶಾಲಿಯಾದರು, ಹಾಗೂ ಸುಮಿತ್ರಾಬಾಯಿ ಪ್ರಕಾಶ ಕದಂ ಅವರು 4 ಮತಗಳನ್ನು ಪಡೆದು ಪರಾಭವಗೊಂಡರು. ಇದರಿಂದ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ…

Read More

ಗಣೇಶ ವಿಸರ್ಜನೆ ಲಾಠಿ ಚಾರ್ಜ್: ಇಬ್ಬರು ಪೊಲೀಸ್ ಪೇದೆಗಳ ಅಮಾನತು

ಧಾರವಾಡ: ತಾಲ್ಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ನರೇಂದ್ರ ಗ್ರಾಮದಲ್ಲಿ ನಡೆದ ಘಟನೆ ರಾಜಕೀಯ ತಿರುವು ಪಡೆದುಕೊಂಡಿತ್ತು. ಸಿಪಿಐ ಕಮತಗಿ ಹಾಗೂ ಪೊಲೀಸ್ ಪೇದೆ ಸೈಯದ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು….

Read More

ಕುಂದಗೋಳದಲ್ಲಿ ಹಿಂದೀ ದಿನಾಚರಣೆ: ಉದ್ಯೋಗಾವಕಾಶಕ್ಕೆ ಹಿಂದಿ ಸಹಕಾರಿ! ಎಫ್ ಕೆ ಬಾಳಿಹಳ್ಳಿಮಠ

ಕುಂದಗೋಳ: ಹಿಂದೀ ಭಾಷೆಯನ್ನು ಕಲಿಯುವುದರಿಂದ ದೇಶ ಮತ್ತು ವಿದೇಶಗಳಲ್ಲಿ ಸುಲಭವಾಗಿ ಉದ್ಯೋಗ ಪಡೆಯಬಹುದು. ಕೇಂದ್ರ ಸರ್ಕಾರ ಮತ್ತು ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ವ್ಯವಹಾರ ನಡೆಸಲು ಹಿಂದೀ ಭಾಷೆ ಸಹಕಾರಿಯಾಗುತ್ತದೆ. ಆದ್ದರಿಂದ ಜ್ಞಾನಾರ್ಜನೆಗಾಗಿಯಾದರೂ ಹಿಂದಿ ಭಾಷೆ ಕಲಿಯುವುದು ಸೂಕ್ತ ಎಂದು ಗಾಂಧಿ ಹಿಂದೀ ವಿದ್ಯಾಪೀಠದ ಶ್ರೀ ಎಫ್.ಕೆ. ಬಾಳಿಹಳ್ಳಿಮಠ ಹೇಳಿದರು. ಪಟ್ಟಣದ ಗಾಂಧಿ ಹಿಂದೀ ವಿದ್ಯಾಪೀಠದ ಆವರಣದಲ್ಲಿ ಹಿಂದೀ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ…

Read More

ಬಮ್ಮಸಮುದ್ರದಲ್ಲಿ “ಕ್ಷೀರ ಸಂಜೀವಿನಿ” ಯೋಜನೆಗೆ ಚಾಲನೆ ಶಾಸಕ ಎಂ.ಆರ್. ಪಾಟೀಲ ಅವರಿಂದ ಹೈನುಗಾರಿಕೆಗೆ ಉತ್ತೇಜನ; ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ಶಾಸಕರು

ಹುಬ್ಬಳ್ಳಿ: ತಾಲ್ಲೂಕಿನ ಬಮ್ಮಸಮ್ಮುದ್ರ ಗ್ರಾಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್), ಧಾರವಾಡ, ಗದಗ, ಉತ್ತರಕನ್ನಡ ಜಿಲ್ಲಾ ಹಾಲು ಒಕ್ಕೂಟ ಹಾಗೂ ಬಮ್ಮಸಮುದ್ರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಯೋಗದಲ್ಲಿ “ಕ್ಷೀರ ಸಂಜೀವಿನಿ ಹಂತ-5” ಅರಿವು ಕಾರ್ಯಕ್ರಮಕ್ಕೆ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಶಾಸಕ ಎಂ.ಆರ್. ಪಾಟೀಲ ಅವರು ಗ್ರಾಮಸ್ಥರ ಪ್ರೀತಿಯ ಸ್ವಾಗತದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಹಾಲು ಸಂಗ್ರಹಣೆಯಲ್ಲಿ ಗಣನೀಯ ಸಾಧನೆಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ಬಮ್ಮಸಮುದ್ರ ಹಾಲು ಉತ್ಪಾದಕರ ಮಹಿಳಾ ಸಹಕಾರ…

Read More

ಸೆ-19 ರಂದು ಹುಬ್ಬಳ್ಳಿ ನೆಹರು ಮೈದಾನದಲ್ಲಿ ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ: ತಾಲೂಕು ಅಧ್ಯಕ್ಷ ಉಮೇಶ ಹೆಬಸೂರ

ಕುಂದಗೋಳ: ಸೆಪ್ಟೆಂಬರ್ 19ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ಹೆಬಸೂರ ಹೇಳಿದರು. ಪಟ್ಟಣದ ಕಲ್ಯಾಣಪುರ ಮಠದಲ್ಲಿ ಮಂಗಳವಾರ ಏಕತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ನಾಡಿನ ಪಂಚಪೀಠ ಶ್ರೀಗಳು, ವಿರಕ್ತ ಮಠಗಳ ಶ್ರೀಗಳು ಹಾಗೂ ಜಗದ್ಗುರುಗಳು ಈ ಸಮಾವೇಶದಲ್ಲಿ ಭಾಗವಹಿಸಿ ಸಮಾಜಕ್ಕೆ ಮಾರ್ಗದರ್ಶನ ನೀಡಲಿದ್ದಾರೆ. ಶಿರಹಟ್ಟಿಯ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ…

Read More

ಧಾರವಾಡ | ಸೈಬರ್ ವಂಚನೆ ಜಾಲಕ್ಕೆ ಸಿಲುಕದಿರಿ: ಪ್ರಸನ್ನ ಕುಲಕರ್ಣಿ

ಧಾರವಾಡ: ಮಾನವ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯಿಂದಾಗಿ ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೈಬರ್ ಜಗತ್ತನ್ನು ಋಣಾತ್ಮಕವಾಗಿ ಬಳಸುತ್ತಿರುವುದರಿಂದ ಅನೇಕರು ಆನ್‌ಲೈನ್ ವಂಚಕರ ಜಾಲಕ್ಕೆ ಬಲಿಯಾಗುತ್ತಿದ್ದಾರೆ ಎಂದು ಪ್ರಸನ್ನ ಕುಲಕರ್ಣಿ ತಿಳಿಸಿದ್ದಾರೆ. ನಗರದ ಅಂಜುಮನ್ ಕಾಲೇಜಿನಲ್ಲಿ ಆಯೋಜಿಸಿದ್ದ “ಆನ್‌ಲೈನ್ ವಂಚನೆ ಮತ್ತು ಆರ್ಥಿಕ ಸಾಕ್ಷರತೆ” ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾರೂ ಕೂಡ ಆನ್‌ಲೈನ್‌ನಲ್ಲಿ ತಮ್ಮ ಬ್ಯಾಂಕಿಂಗ್ ಖಾತೆಗಳ ಸಂಪೂರ್ಣ ವಿವರವನ್ನು ಹಂಚಿಕೊಳ್ಳಬಾರದು. “ಅತಿಯಾದರೆ ಅಮೃತವೂ ವಿಷ” ಎಂಬಂತೆ ಕೃತಕ ಬುದ್ಧಿಮತ್ತೆಯನ್ನು ಕೂಡ ಹಿತವಾಗಿ…

Read More