ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ಶಿಕ್ಷಕ ಗುರುನಾಥ್ ಸೈದಾಪುರ

ಧಾರವಾಡ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕೊಡಮಾಡುವ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಲಘಟಗಿ ತಾಲ್ಲೂಕಿನ ದಾಸ್ತಿಕೋಪ್ಪ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ ದೈಹಿಕ ಶಿಕ್ಷಕ ಗುರುನಾಥ್ ಸೈದಾಪುರ ಆಯ್ಕೆಯಾಗಿದ್ದಾರೆ. ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಇಓ ಗಾಯತ್ರಿದೇವಿ ಸಜ್ಜನ್ ಸೇರಿದಂತೆ ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗುರುನಾಥ್ ಸೈದಾಪುರ ಅವರ ಶೈಕ್ಷಣಿಕ ಸೇವೆ…

Read More

ನೀಲಕಂಠಗೌಡ ಪಾಟೀಲ (39) ಎಂಬ ವ್ಯಕ್ತಿ ಕಾಣೆ:

ಗುಡಗೇರಿ: ಸವಣೂರು ತಾಲೂಕಿನ ಮಾದಾಪೂರ ಗ್ರಾಮದ ನಿವಾಸಿ ನೀಲಕಂಠಗೌಡ ಪಾಟೀಲ (39) ಎಂಬಾತ ನಾಪತ್ತೆಯಾಗಿದ್ದಾರೆ. ನೀಲಕಂಠಗೌಡ ಪಾಟೀಲ ಅವರು ಆಗಸ್ಟ್ 22 ರಂದು ತಮ್ಮ ಪತ್ನಿಯ ತವರೂರಾದ ಮತ್ತಿಗಟ್ಟ ಗ್ರಾಮಕ್ಕೆ ಹೋಗಿದ್ದರು. ಅಲ್ಲಿಂದ ಆಗಸ್ಟ್ 24 ರಂದು ಸಂಜೆ ತಮ್ಮ ಮನೆಗೆ ಹೊರಟಿದ್ದು, ಇದುವರೆಗೂ ಅವರು ಮನೆಗೆ ತಲುಪಿಲ್ಲ. ಕುಟುಂಬದವರು ಹಾಗೂ ಸಂಬಂಧಿಕರು ಎಲ್ಲಾ ಕಡೆ ಹುಡುಕಾಡಿದರೂ ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಂಬಂಧ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ವಿವರಗಳು ಇಂತಿವೆ:…

Read More

ಮುರಳಿ ಸಾವಜಿ ಹೋಟೆಲ್‌ ಮೇಲೆ ಅಬಕಾರಿ ದಾಳಿ, ಅಕ್ರಮ ಮದ್ಯ ವಶ: ಶಾಸಕರ ಕ್ಷೇತ್ರದಲ್ಲಿ ಕಳ್ಳ ದಂಧೆಗೆ ಆಕ್ರೋಶ

ನವಲಗುಂದ: ಪಟ್ಟಣದಲ್ಲಿರುವ ‘ಮುರಳಿ ಸಾವಜಿ ಹೋಟೆಲ್’ ಮತ್ತು ಅದರ ಮಾಲೀಕ ರಾಜು ದೊಂಗಡಿ ಅವರ ಮನೆಯ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ವಿವಿಧ ಬ್ರಾಂಡ್‌ಗಳ ಅಕ್ರಮ ಮದ್ಯ ಮತ್ತು ಬೀರ್ ವಶಪಡಿಸಿಕೊಂಡಿದ್ದಾರೆ. ಈ ಘಟನೆ ಶಾಸಕ ಎನ್.ಎಚ್. ಕೊನರಡ್ಡಿ ಅವರ ಕ್ಷೇತ್ರದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಾಳಿ ವೇಳೆ ಒಟ್ಟು ₹18,955 ಮೌಲ್ಯದ ಮದ್ಯ ಮತ್ತು ₹960 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ….

Read More

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳದಲ್ಲಿ ಪುಸ್ತಕ ಮಳಿಗೆಗಳಿಗೆ ಅರ್ಜಿ ಆಹ್ವಾನ

ಧಾರವಾಡ (ಕರ್ನಾಟಕ ವಾರ್ತೆ) ಸೆ.6: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2025 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ 22, 2025 ರಿಂದ ಅಕ್ಟೋಬರ 01, 2025 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025 ವನ್ನು ಮೈಸೂರು ಹಳೆ ಡಿ.ಸಿ. ಕಚೇರಿ ಎದುರುಗಡೆ ಸ್ಕೌಟ್ಸ ಮತ್ತು ಗೈಡ್ಸ್ ಮೈದಾನದಲ್ಲಿ ಏರ್ಪಡಿಸಲಾಗುವುದು. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು,…

Read More

ಛಾಯಾಗ್ರಾಹಕರು ಮತ್ತು ವಿಡಿಯೋಗ್ರಾಫರ್‌ಗಳಿಗೆ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ: ಸೆ 09 ರಿಂದ ಆರಂಭ

ಧಾರವಾಡ: ಜಿಲ್ಲೆಯ ಛಾಯಾಗ್ರಾಹಕರು ಮತ್ತು ವಿಡಿಯೋಗ್ರಾಫರ್‌ಗಳಿಗೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿಗಾಗಿ ಸೆಪ್ಟೆಂಬರ್ 9 ಮತ್ತು 10 ರಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಪಡೆಯಲು ಈ ಅವಕಾಶವನ್ನು ಬಳಸಿಕೊಳ್ಳುವಂತೆ ವಾರ್ತಾ ಮತ್ತು ಕಾರ್ಮಿಕ ಇಲಾಖೆಗಳು ಪ್ರಕಟಣೆ ಹೊರಡಿಸಿವೆ. ಈ ಕುರಿತು ಸೆ:05 ರಂದು ವಾರ್ತಾ ಇಲಾಖೆಯಲ್ಲಿ ನಡೆದ ಸಭೆಯಲ್ಲಿ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ತಾಲ್ಲೂಕುಗಳ ಛಾಯಾಗ್ರಾಹಕರ ಸಂಘಗಳ ಅಧ್ಯಕ್ಷರು ಭಾಗವಹಿಸಿದ್ದರು. ಅಭಿಯಾನದ ಅಡಿಯಲ್ಲಿ, ಸೆಪ್ಟೆಂಬರ್ 9…

Read More

ಸೆ:13 ರಂದು ಲೋಕ ಅದಾಲತ್ ಹಾಗೂ ಸಂಚಾರಿ ದಂಡ ರಿಯಾಯಿತಿ ಸದ್ಬಳಕೆಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ. ಎಸ್ ಭಾರತಿ ಕರೆ

ಧಾರವಾಡ: ಸೆಪ್ಟೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಕಕ್ಷಿದಾರರು ಮತ್ತು ನ್ಯಾಯವಾದಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ ಅವರು ತಿಳಿಸಿದ್ದಾರೆ. ಜೊತೆಗೆ, ಸಂಚಾರ ನಿಯಮ ಉಲ್ಲಂಘನೆಗಾಗಿ ವಿಧಿಸಲಾಗಿರುವ ದಂಡದ ಮೊತ್ತದಲ್ಲಿ ಶೇ. 50 ರಿಯಾಯಿತಿಯನ್ನು ಬಳಸಿಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ…

Read More

ಗಾಂಧಿಜೀ ನಡೆ-ನುಡಿಗಳಂತೆಯೇ ಬದುಕು ರೂಪಿಸಿಕೊಳ್ಳಿ: ಜಿ ಪಂ ಸಿಇಒ:ಭುವನೇಶ ಪಾಟೀಲ

ಧಾರವಾಡ: ಮಹಾತ್ಮ ಗಾಂಧೀಜಿಯವರು ತಮ್ಮ ಬದುಕಿನಲ್ಲಿ ನುಡಿದಂತೆ ನಡೆದು, ನಡೆದಂತೆ ನುಡಿದ ಆದರ್ಶ ವ್ಯಕ್ತಿತ್ವ. ಅವರ ಸ್ಮರಣೆಯ ಜೊತೆಗೆ, ಅವರ ಜೀವನ ಸಂದೇಶಗಳು ಮತ್ತು ಸಂಸ್ಕಾರಗಳನ್ನು ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ಬಾ ಪೂಜಿ ಪ್ರಬಂಧ ಸ್ಪರ್ಧೆ’ಯ ಜಿಲ್ಲಾ…

Read More

ಮುಸ್ಲಿಂ ಸಮಾಜದ ವತಿಯಿಂದ ಈದ್ ಮಿಲಾದ್ ಹಬ್ಬದ ಸಂಭ್ರಮ

ಕುಂದಗೋಳ: ಈದ್ ಮಿಲಾದ ಹಬ್ಬದ ನಿಮಿತ್ತ ಪಟ್ಟಣದ ಶಿವಾಜಿನಗರದ ಹೈದರವಲಿ ದರ್ಗಾ ಓಣಿಯಲ್ಲಿ ಶುಕ್ರವಾರ ಮುಸ್ಲಿಂ ಸಮುದಾಯದ ವತಿಯಿಂದ ಮಹಮ್ಮದ್ ಪೈಗಂಬರ್ ಹುಟ್ಟು ಹಬ್ಬದ ಪ್ರಯುಕ್ತ ಸಮಾಜದವರು ಸಿಹಿಹಂಚಿ ಸಂಭ್ರಮಿಸಿದರು. ಪಟ್ಟಣದಲ್ಲಿ ಜೂಲುಸ್ ಮೆರವಣಿಗೆಯನ್ನು ಭಕ್ತಿ ಭಾವದಿಂದ ಮೂಲಕ ಸ್ವಾಗತ ಕೊರಿದರು, ಈ ಸಂದರ್ಭದಲ್ಲಿ ಧರ್ಮಗುರು ಅಬೇದಲಿ ಮಂಕಾದರ, ಪ ಪಂ ಸದಸ್ಯ ವಾಗೀಶ ಗಂಗಾಯಿ, ದರ್ಗಾ ಕಮೀಟಿ ಅಧ್ಯಕ್ಷ ಎಂ ಎಂ ಮಂಕಾದರ, ಬಾಬಾ ಜಂಗ್ಲಿ, ಮಾಬು ಠಪಾಲ,ಮುನ್ನಾ ಜಾಗೀರದಾರ,ಸಲೀಂ ಜಾಗೀರದಾರ, ಅನ್ವರಲಿ ಮಂಕದರ, ರಸುಲ್…

Read More

ರೀಲ್ಸ್‌ ಬದಲು ರಿಯಲ್‌ ಆಗಿ ಜೀವನ ರೂಪಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಗ್ಯಾರಂಟಿ ಯೋಜನೆ ತಾ ಅಧ್ಯಕ್ಷ ಶಿವಾನಂದ ಬೆಂತೂರ ಕರೆ

ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿರುವ ಕೆ.ಎಲ್.ಇ. ಸಂಸ್ಥೆಯಲ್ಲಿ ನಡೆದ ಪ್ರಥಮ ವರ್ಷದ ಬಿ.ಕಾಂ. ವಿದ್ಯಾರ್ಥಿಗಳ ಸ್ವಾಗತ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕೂಲಿನಾಲಿ ಮಾಡಿ ಬದುಕು ಸಾಗಿಸಬಾರದು, ಬದಲಾಗಿ ಚೆನ್ನಾಗಿ ಓದಿ ಏನಾದರೂ ಸಾಧಿಸಬೇಕೆಂಬುದು ನಿಮ್ಮ ಹೆತ್ತವರ ಆಶಯವಾಗಿದೆ. ಅದನ್ನು ವಿದ್ಯಾರ್ಥಿಗಳು ಈಡೇರಿಸಬೇಕು” ಎಂದರು. ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಕೆ.ಎಲ್.ಇ. ಸಂಸ್ಥೆಯ ಕಾರ್ಯವನ್ನು ಅವರು ಶ್ಲಾಘಿಸಿದರು…

Read More

ಗರ್ಭಾವಸ್ಥೆಯಲ್ಲಿ ಮಹಿಳೆಯರು ಅನುಭವಿಸುವ ನೋವು ಪುನರ್ಜನ್ಮಕ್ಕೆ ಸಮ: ನ್ಯಾಯಾಧೀಶೆ ಶ್ರೀ ಮತಿ ಗಾಯತ್ರಿ

ಕುಂದಗೋಳ: ಗರ್ಭಿಣಿಯಾದಾಗ ಮಹಿಳೆಯರು ಅನುಭವಿಸುವ ನೋವು ಮತ್ತು ದೈಹಿಕ ಬದಲಾವಣೆಗಳು ನಿಜಕ್ಕೂ ಪುನರ್ಜನ್ಮಕ್ಕೆ ಸಮ ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಕುಂದಗೋಳ ಘಟಕದ ಸದಸ್ಯರಾದ ಶ್ರೀ ಮತಿ ಗಾಯತ್ರಿ ಅವರು ಹೇಳಿದರು. ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಸಿಡಿಪಿಓ ಕಚೇರಿಯಲ್ಲಿ ನಡೆದ ವಿಶ್ವ ಪೌಷ್ಟಿಕಾಂಶ ದಿನಾಚರಣೆಯ ಕಾರ್ಯಕ್ರಮದಲ್ಲಿಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಹೆಣ್ಣು ಮಕ್ಕಳಿಗೆ…

Read More