ಕುಂದಗೋಳದ ‘ಸಂಗೀತ ಕಾಶಿ’ಯಲ್ಲಿ ದಿ. ಸವಾಯಿ ಗಂಧರ್ವರ 73ನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಸಂಗೀತೋತ್ಸವದ ವೈಭವ
ಕುಂದಗೋಳ: ‘ಸಂಗೀತ ಕಾಶಿ’ ಎಂದೇ ಖ್ಯಾತಿ ಪಡೆದಿರುವ ಕುಂದಗೋಳದಲ್ಲಿ, ದಿ. ಸವಾಯಿ ಗಂಧರ್ವರ 73ನೇ ಪುಣ್ಯತಿಥಿಯ ನಿಮಿತ್ತ ಆಯೋಜಿಸಲಾದ ಅಹೋರಾತ್ರಿ ಸಂಗೀತ ಮಹೋತ್ಸವವು ವೈಭವಯುತವಾಗಿ ಆರಂಭಗೊಂಡಿತು. ಪಟ್ಟಣದ ದಿ:ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಿ. ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮಕ್ಕೆ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳು ಚಾಲನೆ ನೀಡಿ, ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸ್ವಾಮೀಜಿಗಳು ತಮ್ಮ ವಿಶಿಷ್ಟ…

