ಕಳಪೆ ಬೀಜ ಮಾರಿ ರೈತನಿಗೆ ವಂಚಿಸಿದ ಕಂಪನಿಗೆ ₹5.60 ಲಕ್ಷ ದಂಡ: ಗ್ರಾಹಕ ಆಯೋಗದಿಂದ ಅನ್ನದಾತನಿಗೆ ನ್ಯಾಯ!

ಧಾರವಾಡ: ಬೆವರು ಸುರಿಸಿ ಭೂಮಿ ತಾಯಿಯನ್ನು ನಂಬಿ ಬದುಕುವ ರೈತನ ನಂಬಿಕೆಗೆ ದ್ರೋಹ ಬಗೆದು, ಕಳಪೆ ಬೀಜ ಮಾರಾಟ ಮಾಡಿದ ತೆಲಂಗಾಣ ಮೂಲದ ಸತ್ಯಕಾಮ್ ದುಡಿಗಳ್ಳ ಸಂಸ್ಥೆ ಹಾಗೂ ಸ್ಥಳೀಯ ವಿತರಕರಿಗೆ ಧಾರವಾಡ ಜಿಲ್ಲಾ ಗ್ರಾಹಕ ಆಯೋಗವು ಸರಿಯಾದ ಪಾಠ ಕಲಿಸಿದೆ. ಈ ಕಂಪನಿಗಳ ಸೇವಾ ನ್ಯೂನ್ಯತೆಯನ್ನು ತೀವ್ರವಾಗಿ ಖಂಡಿಸಿರುವ ಆಯೋಗವು, ಸಂಕಷ್ಟಕ್ಕೀಡಾದ ರೈತನಿಗೆ ಒಟ್ಟು 5 ಲಕ್ಷ ರೂಪಾಯಿ ಬೆಳೆ ನಷ್ಟ ಪರಿಹಾರ, 50 ಸಾವಿರ ರೂಪಾಯಿ ಮಾನಸಿಕ ದಂಡ ಹಾಗೂ 10 ಸಾವಿರ ರೂಪಾಯಿ…

Read More

ಕುಂದಗೋಳ: ನಿಗದಿತ ಸಮಯಕ್ಕೆ ಅಹವಾಲು ಸ್ವೀಕರಿಸದ ಜಿಲ್ಲಾಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ; ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಕುಂದಗೋಳ: ಜಿಲ್ಲಾಧಿಕಾರಿಗಳೇ ಖುದ್ದಾಗಿ ಸಮಯ ನಿಗದಿಪಡಿಸಿ, ಸಾರ್ವಜನಿಕರ ಅಹವಾಲು ಆಲಿಸುವ ಸಭೆಗೆ ಗೈರುಹಾಜರಾದ ಘಟನೆ ಕುಂದಗೋಳದಲ್ಲಿ ಇಂದು ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಧಾರವಾಡ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರು ಇಂದು ಬೆಳಿಗ್ಗೆ 11:00 ಗಂಟೆಗೆ ಸಾರ್ವಜನಿಕ ಸಂಪರ್ಕ ಅಹವಾಲು ಸಭೆಯನ್ನು ನಿಗದಿಪಡಿಸಿದ್ದರು. ತಮ್ಮ ಸಮಸ್ಯೆಗಳನ್ನು ಹೊತ್ತು ದೂರದೂರುಗಳಿಂದ ಆಗಮಿಸಿದ್ದ ನೂರಾರು ರೈತರು ಹಾಗೂ ಸಾರ್ವಜನಿಕರು ನಿಗದಿತ ಸಮಯಕ್ಕೆ ತಹಶೀಲ್ದಾರ್ ಕಚೇರಿಗೆ ಹಾಜರಾಗಿದ್ದರು. ಆದರೆ, ಸಮಯ ಮೀರಿ ಗಂಟೆ ಕಳೆದರೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸದಿದ್ದರಿಂದ ಕಾದು ಕಾದು ಸುಸ್ತಾದ…

Read More

ಧಾರವಾಡದಲ್ಲಿ ಆಟೋ ಗ್ಯಾಸ್ ಅಭಾವ: ಕಿಲೋಮೀಟರ್‌ಗಟ್ಟಲೆ ಕ್ಯೂ ನಿಂತ ಚಾಲಕರು; ಬಂಕ್‌ಗಳ ಮುಂದೆ ಆಹಾಕಾರ!

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಆಟೋ ಎಲ್‌ಪಿಜಿ ಗ್ಯಾಸ್‌ಗೆ ತೀವ್ರ ಅಭಾವ ಸೃಷ್ಟಿಯಾಗಿದ್ದು, ಆಟೋ ರಿಕ್ಷಾ ಚಾಲಕರು ಗ್ಯಾಸ್‌ಗಾಗಿ ಹಗಲು-ರಾತ್ರಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಗರದ ಬಹುತೇಕ ಆಟೋ ಗ್ಯಾಸ್ ಬಂಕ್‌ಗಳು ಗ್ಯಾಸ್ ಪೂರೈಕೆಯಿಲ್ಲದೆ ಸಂಪೂರ್ಣವಾಗಿ ಬಂದ್ ಆಗಿರುವುದು ಚಾಲಕರ ಆತಂಕಕ್ಕೆ ಕಾರಣವಾಗಿದೆ. ​ನಗರದಾದ್ಯಂತ ಗ್ಯಾಸ್ ಸಿಗದ ಕಾರಣ ಚಾಲಕರು ರಾಯಾಪುರದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನತ್ತ ಮುಗಿಬಿದ್ದಿದ್ದಾರೆ. ಇಲ್ಲಿ ಮಾತ್ರ ಸದ್ಯಕ್ಕೆ ಗ್ಯಾಸ್ ಲಭ್ಯವಿದ್ದು, ಇಂಧನ ತುಂಬಿಸಿಕೊಳ್ಳಲು ಬೆಳಿಗ್ಗೆಯಿಂದಲೇ ಕಿಲೋಮೀಟರ್‌ಗಟ್ಟಲೆ ಉದ್ದದ ಸಾಲಿನಲ್ಲಿ ಆಟೋಗಳು ನಿಂತಿವೆ. ಒಂದು…

Read More

ಜಗತ್ತಿನಲ್ಲಿ ಶಾಂತಿ ನೆಲೆಸಲಿ: ಜಾತ್ರೆಯ ತೇರಿಗೆ ‘ಯುದ್ಧ ನಿಲ್ಲಲಿ’ ಎಂಬ ಸಂದೇಶದ ಬಾಳೆಹಣ್ಣು ಎಸೆದ ಯುವಕ

ಧಾರವಾಡ: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಭೀಕರ ಯುದ್ಧ ಸಂಘರ್ಷದಿಂದ ಜಗತ್ತಿನಾದ್ಯಂತ ಅಶಾಂತಿ ಮೂಡಿರುವ ಬೆನ್ನಲ್ಲೇ, ಧಾರವಾಡದ ಯುವಕನೊಬ್ಬ ಜಾಗತಿಕ ಶಾಂತಿಗಾಗಿ ದೇವರಿಗೆ ವಿಶಿಷ್ಟವಾಗಿ ಮೊರೆ ಹೋಗುವ ಮೂಲಕ ಗಮನ ಸೆಳೆದಿದ್ದಾನೆ. ​ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗುರುವಾರ ಸಂಭ್ರಮದಿಂದ ಜರುಗಿದ ಶ್ರೀ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಈ ಅಪರೂಪದ ಘಟನೆ ಸಂಭವಿಸಿದೆ. ಜಾತ್ರೆಯ ಪ್ರಮುಖ ಆಕರ್ಷಣೆಯಾದ ರಥೋತ್ಸವದ ವೇಳೆ ಭಕ್ತರು ಹಣ್ಣು-ಜವನ ಎಸೆಯುವುದು ವಾಡಿಕೆ. ಆದರೆ, ಈ ಯುವಕ ಮಾತ್ರ ಬಾಳೆಹಣ್ಣಿನ ಮೇಲೆ ‘ಯುದ್ಧ ನಿಲ್ಲಲಿ……

Read More

​ಕುಂದಗೋಳ: ನಾಳೆ ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ

ಕುಂದಗೋಳ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಏಪ್ರಿಲ್ 4 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್. ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ನಡೆಯಲಿದೆ. ​ತಾಲೂಕಿನ ರೈತ ಬಾಂಧವರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಈ ಸಭೆಯಲ್ಲಿ ಸಲ್ಲಿಸಬಹುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನೇರವಾಗಿ ಚರ್ಚಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಹಶೀಲ್ದಾರ್ ರಾಜು ಮಾವರಕರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Read More

ನನ್ನ ಗಣತಿ ದೇಶದ ಶಕ್ತಿ: ಸ್ವಯಂ ಗಣತಿಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ

ಧಾರವಾಡ: ದೇಶದ ಭವಿಷ್ಯದ ಯೋಜನೆಗಳು ಮತ್ತು ಅಭಿವೃದ್ಧಿಯ ದಿಕ್ಸೂಚಿಯಾಗಿರುವ 2027ರ ಜನಗಣತಿ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಡಿಜಿಟಲ್ ಇಂಡಿಯಾ ಅಭಿಯಾನದಡಿ ಲಭ್ಯವಿರುವ ‘ಸ್ವಯಂ ಗಣತಿ’ (Self-Enumeration) ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ಕರೆ ನೀಡಿದ್ದಾರೆ. ​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಗಣತಿಯು ಕೇವಲ ಅಂಕಿ-ಅಂಶಗಳ ಸಂಗ್ರಹವಲ್ಲ, ಇದು ಸುಭದ್ರ ಭಾರತದ ನಿರ್ಮಾಣಕ್ಕೆ ನಾಗರಿಕರು ನೀಡುವ…

Read More

ಖಾಲಿ ಚೀಲದ ಕೊರತೆ: ಕುಂದಗೋಳದಲ್ಲಿ ಕಡಲೆ ಖರೀದಿ ಕೇಂದ್ರಗಳ ಅವ್ಯವಸ್ಥೆ – ರೈತರ ಅನ್ನಕ್ಕೆ ಕಲ್ಲು ಹಾಕುತ್ತಿರುವ ಅಧಿಕಾರಿಗಳ ಉದಾಸೀನ!

ಕುಂದಗೋಳ: ರೈತರು ಬೆಳೆದ ಬೆಳೆಗೆ ಯೋಗ್ಯ ಬೆಲೆ ಸಿಗಲೆಂದು ಸರ್ಕಾರ ಆರಂಭಿಸಿರುವ ಬೆಂಬಲ ಬೆಲೆ ಖರೀದಿ ಕೇಂದ್ರಗಳು, ಇಂದು ಅಧಿಕಾರಿಗಳ ಮತ್ತು ವ್ಯವಸ್ಥೆಯ ದಾರಿದ್ರ್ಯಕ್ಕೆ ಸಾಕ್ಷಿಯಾಗಿವೆ. ಕುಂದಗೋಳ ತಾಲೂಕಿನಾದ್ಯಂತ ಚೀಲಗಳ ಕೊರತೆಯಿಂದ ಕಡಲೆ ಖರೀದಿ ಪ್ರಕ್ರಿಯೆ ಹಳ್ಳ ಹಿಡಿದಿದ್ದು, ಅನ್ನದಾತ ಬೀದಿಯಲ್ಲಿ ನಿಂತು ಕಣ್ಣೀರು ಹಾಕುವಂತಾಗಿದೆ. ಬಿಸಿಲಿನಲ್ಲಿ ಬೆಂದ ರೈತ – ಟ್ರ್ಯಾಕ್ಟರ್ ಬಾಡಿಗೆಗೆ ಕುತ್ತು!ತಾಲೂಕಿನ ಕುಂದಗೋಳ, ಯಲಿವಾಳ, ಸಂಶಿ ಹಾಗೂ ಯರಗುಪ್ಪಿ ಖರೀದಿ ಕೇಂದ್ರಗಳಿಗೆ ರೈತರು ಸಾಲ-ಸೋಲ ಮಾಡಿ ಟ್ರ್ಯಾಕ್ಟರ್‌ಗಳಲ್ಲಿ ಕಡಲೆ ಹೊತ್ತು ತರುತ್ತಿದ್ದಾರೆ. ಆದರೆ,…

Read More

​ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರ ಪರ ನಿಂತ ಸಚಿವ ಸಂತೋಷ ಲಾಡ್: ಬೇಡಿಕೆ ಈಡೇರಿಸುವ ಭರವಸೆ

ಧಾರವಾಡ: ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ, ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ​ಜನಸಂಖ್ಯೆ ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಸೇವೆಯಿಂದ ವಜಾಗೊಳಿಸುವ ಕ್ರಮವನ್ನು ಕೈಬಿಡಬೇಕು…

Read More

ಧಾರವಾಡ ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಸ್ವಯಂ ಜನಗಣತಿ ಕಾರ್ಯ ಆರಂಭ: ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ

ಧಾರವಾಡ: ಭಾರತದ 16ನೇ ಜನಗಣತಿಯ ಅಂಗವಾಗಿ ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ಸ್ವಯಂ ಗಣತಿ (Self Enumeration) ಕಾರ್ಯ ಜರುಗಲಿದ್ದು, ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಜನಗಣತಿಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪ್ರಧಾನ ಜನಗಣತಿ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮನವಿ ಮಾಡಿದ್ದಾರೆ. ​ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 2027ರ ಭಾರತ ಜನಗಣತಿಯ ಮೊದಲ ಹಂತವಾಗಿ ಈ ಕಾರ್ಯ ನಡೆಯುತ್ತಿದೆ….

Read More

ಧಾರವಾಡ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ ಆರ್ಭಟ: ರೈತರ ಹಿತರಕ್ಷಣೆಗೆ ನಿಂತ ಸಚಿವ ಸಂತೋಷ್ ಲಾಡ್; ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ನೀಡಲು ಕಟ್ಟುನಿಟ್ಟಿನ ಆದೇಶ

ಧಾರವಾಡ: ಮಾರ್ಚ್ ಮೂರನೇ ವಾರದಲ್ಲಿ ಕಲಘಟಗಿ ಹಾಗೂ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ಆಗಿರುವ ಅನಿರೀಕ್ಷಿತ ಆಲಿಕಲ್ಲು ಮಳೆಯಿಂದ ಉಂಟಾಗಿರುವ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಪರಿಹಾರ ನೀಡಲು ಸಂಬಂಧಿಸಿದ ಅಧಿಕಾರಿಗಳು ಶೀಘ್ರವಾಗಿ ಸಮೀಕ್ಷೆ ಪೂರ್ಣಗೊಳಿಸಿ, ವರದಿ ಸಲ್ಲಿಸಬೇಕು ಮತ್ತು ನಿಯಮಾನುಸಾರ ರೈತರಿಗೆ ಪರಿಹಾರ ನೀಡಲು ಕ್ರಮವಹಿಸಬೇಕೆಂದು ಕಾರ್ಮಿಕ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ…

Read More