ಆಹಾರ ಭದ್ರತೆಗೆ ಬೀಜೋತ್ಪಾದನೆ ಅಗತ್ಯ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಭವ್ಯ ಕೃಷಿ ಮೇಳಕ್ಕೆ ಭಾನುವಾರ ರಾಜ್ಯಪಾಲ ಥಾವರಚಂದ್ ಗೆಲ್ಲೋಟ್ ಅವರು ಭೇಟಿ ನೀಡಿ ಮೇಳಕ್ಕೆ ಹೊಸ ಮೆರುಗು ತಂದರು. ಈ ಸಮಯದಲ್ಲಿ ಅವರು “ಉತ್ಕೃಷ್ಟ ಗುಣಮಟ್ಟದ ಬೀಜಗಳು ದೇಶದ ಆಹಾರ ಭದ್ರತೆಗೆ ಅತ್ಯಗತ್ಯ. ಅನ್ನದಾತರ ಶ್ರಮ ಮತ್ತು ಆಧುನಿಕ ತಂತ್ರಜ್ಞಾನಗಳು ಒಟ್ಟಾಗಿ ದೇಶವನ್ನು ಆಹಾರ ಸ್ವಾವಲಂಬನೆಯತ್ತ ಕೊಂಡೊಯ್ಯಲು ಸಹಕಾರಿ” ಎಂದು ಹೇಳಿದರು. ಬೀಜೋತ್ಪಾದನೆಗೆ ಹೆಚ್ಚಿನ ಒತ್ತು ಅಗತ್ಯ: ರಾಜ್ಯಪಾಲರ ಕರೆಬೀಜ ಮೇಳವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲರು, ಪ್ರಧಾನಿ ನರೇಂದ್ರ…

Read More

ಧಾರವಾಡ ಕೃಷಿ ಮೇಳದ ಮೊದಲ ದಿನವೇ 3.65 ಲಕ್ಷಗಳ ಜನಸಾಗರ:

ಧಾರವಾಡ,: ಕೃಷಿ ಕ್ಷೇತ್ರದ ತಾಜಾ ಆವಿಷ್ಕಾರಗಳು, ತಂತ್ರಜ್ಞಾನ, ಹೊಸ ತಳಿಯ ಬೀಜ ಹಾಗೂ ಯಂತ್ರೋಪಕರಣಗಳ ಪ್ರದರ್ಶನಕ್ಕೆ ಸಾಕ್ಷಿಯಾದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಆರಂಭವಾದ ನಾಲ್ಕು ದಿನಗಳ ಕೃಷಿ ಮೇಳದ ಮೊದಲ ದಿನವೇ ಜನಸಾಗರ ಉಕ್ಕಿಬಂದಿತು. ಬರೋಬ್ಬರಿ 3.65 ಲಕ್ಷ ಮಂದಿ ಭೇಟಿ ನೀಡಿ ಇತಿಹಾಸ ನಿರ್ಮಿಸಿದೆ. ಮಳೆಯ ಆತಂಕ, ಗಾಳಿ-ಚಳಿ ತುಂಬಿದ ವಾತಾವರಣವಿದ್ದರೂ ಸಹ ಜನರು ಉತ್ಸಾಹಭರಿತವಾಗಿ ಮೇಳದತ್ತ ಹರಿದು ಬಂದರು. ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಸಂಶೋಧಕರು, ವ್ಯಾಪಾರಿಗಳು, ಸಾಮಾನ್ಯ ನಾಗರಿಕರು ಎಂದು ಎಲ್ಲ…

Read More

ಲಾಠಿ ಪ್ರಹಾರ ಪ್ರಕರಣ: ನರೇಂದ್ರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ‌ಜೋಶಿ ರೋಷಾವೇಷ

ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಲಾಠಿ ಪ್ರಹಾರ ಘಟನೆಗೆ ಸಂಬಂಧಿಸಿದಂತೆ ಸ್ವತಃ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗ್ರಾಮಕ್ಕೆ ಭೇಟಿ ನೀಡಿದ್ದು, ಈ ಸಮಯದಲ್ಲಿ ಪೊಲೀಸರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ನರೇಂದ್ರ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದ ಹಿರಿಯರೊಂದಿಗೆ ಮಾತುಕತೆ ನಡೆಸುತ್ತಿದ್ದಾಗ, ಅಲ್ಲಿ ಹಾಜರಿದ್ದ ಸಾಮಾನ್ಯ ಉಡುಪಿನಲ್ಲಿದ್ದ (ಬೀನ್ ಡ್ರೆಸ್) ಓರ್ವ ಪೊಲೀಸ್ ಸಿಬ್ಬಂದಿ ಜೋಶಿ ಅವರ ಮಾತುಗಳನ್ನು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ. ಇದನ್ನು ಗಮನಿಸಿದ ಜೋಶಿ…

Read More

ಧಾರವಾಡ ಕೃಷಿ ಮೇಳದಲ್ಲಿ ದುರಂತ: ಮಿನಿ ಟ್ರ್ಯಾಕ್ಟರ್‌ಗೆ ಸಿಲುಕಿ ಯುವಕನ ದುರ್ಮರಣ; ₹5 ಲಕ್ಷ ಪರಿಹಾರ

ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ನಾಲ್ಕು ದಿನಗಳ ಕೃಷಿ ಮೇಳದಲ್ಲಿ ದುರಂತವೊಂದು ಸಂಭವಿಸಿದೆ. ಮೇಳದಲ್ಲಿ ಪ್ರದರ್ಶನಕ್ಕೆ ತಂದಿದ್ದ ಮಿನಿ ಟ್ರ್ಯಾಕ್ಟರ್‌ವೊಂದು ಕೆಳಗಿಳಿಸುವ ವೇಳೆ ಪಲ್ಟಿಯಾಗಿ, ತುಮಕೂರು ಮೂಲದ ಪರಶುರಾಮ ಆರ್. (32) ಎಂಬ ಯುವಕನ ಮೇಲೆ ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಯಾಂಟರ್ ವಾಹನದಿಂದ ಮಿನಿ ಟ್ರ್ಯಾಕ್ಟರ್‌ನ್ನು ಕೆಳಗಿಳಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ರಸ್ತೆಯ ಅವ್ಯವಸ್ಥೆಯೇ ದುರಂತಕ್ಕೆ ಕಾರಣ?ಕೃಷಿ ಮೇಳದ ಟ್ರ್ಯಾಕ್ಟರ್ ಪ್ರದರ್ಶನ…

Read More

ರಾಮನಕೊಪ್ಪದಲ್ಲಿ ನೂತನ ಶಾಲಾ ಕೊಠಡಿ ಉದ್ಘಾಟನೆ: ಶಿಕ್ಷಣದಿಂದ ಮಾತ್ರ ಸಮೃದ್ಧಿ ಸಾಧ್ಯ- ಶಾಸಕ ಎಂ.ಆರ್. ಪಾಟೀಲ್

ಕುಂದಗೋಳ: ಶಿಕ್ಷಣವು ಪ್ರತಿಯೊಬ್ಬರ ಜೀವನದ ಭದ್ರ ಬುನಾದಿಯಾಗಿದೆ. ಗ್ರಾಮದ ಮಕ್ಕಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಕುಂದಗೋಳ ಕ್ಷೇತ್ರದ ಶಾಸಕ ಎಂ.ಆರ್. ಪಾಟೀಲ್ ಹೇಳಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ವಿಶೇಷ ಅನುದಾನದಡಿ ತಾಲ್ಲೂಕಿನ ರಾಮನಕೊಪ್ಪ ಗ್ರಾಮದಲ್ಲಿ 27.80 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಮೂಲಸೌಕರ್ಯವು ಕಲಿಕಾ ವಾತಾವರಣವನ್ನು ಸುಧಾರಿಸುತ್ತದೆ. ಈ ಕೊಠಡಿಗಳು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು…

Read More

ಕುಂದಗೋಳ ಲೋಕ ಅದಾಲತ್: 13 ವರ್ಷದ ಆಸ್ತಿ ವಿವಾದ ಇತ್ಯರ್ಥ; ವಿಚ್ಛೇದನ ಪ್ರಕರಣಗಳಲ್ಲೂ ರಾಜೀ

ಕುಂದಗೋಳ: ನ್ಯಾಯಾಲಯಗಳಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹಲವು ಮಹತ್ವದ ಪ್ರಕರಣಗಳು ಇತ್ಯರ್ಥಗೊಂಡವು. ಇಲ್ಲಿ ನ್ಯಾಯಾಧೀಶರ ಮಾನವೀಯ ಸ್ಪರ್ಶ ಮತ್ತು ಮಾರ್ಗದರ್ಶನದಿಂದಾಗಿ, ಹದಿಮೂರು ವರ್ಷಗಳ ಹಳೆಯ ಆಸ್ತಿ ವಿವಾದವೊಂದು ಸುಖಾಂತ್ಯ ಕಂಡಿದ್ದು, ವಿಚ್ಛೇದನ ಕೋರಿದ್ದ ಮೂರು ದಂಪತಿಗಳು ಮತ್ತೆ ಒಂದಾದರು. ನ್ಯಾಯಾಂಗ ಇತಿಹಾಸದಲ್ಲಿ ಇದೊಂದು ಉತ್ತಮ ಬೆಳವಣಿಗೆಯಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ವಿಚ್ಛೇದನಕ್ಕಿದ್ದ ಮೂರು ಜೋಡಿಗಳು ಮತ್ತೆ ಒಂದಾದವುಹಿರಿಯ ಸಿವಿಲ್ ನ್ಯಾಯಾಧೀಶರಾದ ಅಬ್ದುಲ್ ಖಾದರ್ ಅವರ ಸಲಹೆಯ…

Read More

ಕುಂದಗೋಳ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಲ್‌ಇಯಿಂದ ಉಚಿತ ಫಿಸಿಯೋಥೆರಪಿ ಸೇವೆ

ಕುಂದಗೋಳ: ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಹುಬ್ಬಳ್ಳಿಯ ಗಬ್ಬೂರಿನ ಕೆಎಲ್‌ಇ ಫಿಸಿಯೋಥೆರಪಿ ಕಾಲೇಜು ವತಿಯಿಂದ ಬಡ ರೋಗಿಗಳ ಅನುಕೂಲಕ್ಕಾಗಿ ವಾರದಲ್ಲಿ ಮೂರು ದಿನ ಉಚಿತ ಫಿಸಿಯೋಥೆರಪಿ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ವಿಶ್ವ ಫಿಸಿಯೋಥೆರಪಿ ದಿನಾಚರಣೆ ಅಂಗವಾಗಿ ಈ ಶಿಬಿರಕ್ಕೆ ಚಾಲನೆ ನೀಡಲಾಯಿತು. ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕ್ರಪ್ಪ ಎಸ್. ತುಕ್ಕಣ್ಣವರ, ಬಡ ರೋಗಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಸೇವೆ ನೀಡಲು ಮುಂದಾಗಿರುವ ಕೆಎಲ್‌ಇ ಸಂಸ್ಥೆಯ ಗಬ್ಬೂರ…

Read More

ಡಾ. ಜೆ. ಎಂ. ನಾಗಯ್ಯ ಸಾಹಿತ್ಯ ಕುರಿತು ವಿಚಾರ ಸಂಕಿರಣ; ನಾಲ್ಕು ಗ್ರಂಥಗಳ ಲೋಕಾರ್ಪಣೆ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ, ಡಾ. ಜೆ. ಎಂ. ನಾಗಯ್ಯ ಟ್ರಸ್ಟ್ ಹಾಗೂ ಡಾ. ಬಸವರಾಜ ಮಲಶೆಟ್ಟಿ ಬಯಲಾಟ ಕಾಲೇಜು, ಹೂವಿನಹಡಗಲಿ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 14, 2025ರಂದು ಜೆ. ಎಂ. ನಾಗಯ್ಯನವರ ಸಾಹಿತ್ಯ ಕುರಿತು ವಿಚಾರ ಸಂಕಿರಣ’ ಮತ್ತು ಗ್ರಂಥಗಳ ಲೋಕಾರ್ಪಣೆ ಸಮಾರಂಭ’ವನ್ನು ಹಮ್ಮಿಕೊಳ್ಳಲಾಗಿದೆ. ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಬೆಳಿಗ್ಗೆ 10:30ಕ್ಕೆ ನಡೆಯುವ ಸಮಾರಂಭಕ್ಕೆ ಬಂಡಿವಾಡ ಗಿರೀಶ ಆಶ್ರಮದ ಶ್ರೀ ಸ.ಸ. ಡಾ. ಎ.ಸಿ. ವಾಲಿ ಮಹಾರಾಜರು ಸಾನ್ನಿಧ್ಯ ವಹಿಸುವರು….

Read More

ಸಂಗೀತ ಸಾಮ್ರಾಟ್ ಪಂಡಿತ್ ಸವಾಯಿ ಗಂಧರ್ವರ ಸಂಗೀತ ಮಹೋತ್ಸವ ಸೆ. 15 ಹಾಗೂ 16 ರಂದು: ಸಂಗೀತ ಗಾರ್ತಿ ಅಶ್ವಿನಿ ಭಿಡೆ ದೇಶಪಾಂಡೆ ಅವರಿಗೆ ರಾಷ್ಟ್ರೀಯ ಪುರಸ್ಕಾರ

ಕುಂದಗೋಳ: ಸಂಗೀತ ಸಾಮ್ರಾಟ್ ಪಂಡಿತ್ ಸವಾಯಿ ಗಂಧರ್ವರ 73ನೇ ಪುಣ್ಯತಿಥಿಯ ನಿಮಿತ್ತ ಕುಂದಗೋಳದಲ್ಲಿ ಎರಡು ದಿನಗಳ ಸಂಗೀತ ಮಹೋತ್ಸವವನ್ನು ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಿ. ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆಯ ಸಹಯೋಗದಲ್ಲಿ ಸೆಪ್ಟೆಂಬರ್ 15 ಮತ್ತು 16 ರಂದು ಈ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಮುಂಬಯಿಯ ಖ್ಯಾತ ಸಂಗೀತಗಾರ್ತಿ ಪದ್ಮಶ್ರೀ ಶ್ರೀಮತಿ ಅಶ್ವಿನಿ ಭಿಡೆ ದೇಶಪಾಂಡೆ ಅವರಿಗೆ ‘ಸವಾಯಿ ಗಂಧರ್ವರ ರಾಷ್ಟ್ರೀಯ ಸಂಗೀತ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಸೆಪ್ಟೆಂಬರ್ 15ರಂದು…

Read More

‘ಬಡತನದಲ್ಲಿ ಹುಟ್ಟಿ, ಸಾಮಾಜಿಕ ನ್ಯಾಯದ ಹರಿಕಾರರಾದ ಸಿದ್ಧಪ್ಪ ಕಂಬಳಿ’: ಡಾ. ಈರಣ್ಣ ಇಂಜಗನೇರಿ

ಧಾರವಾಡ: ಬಡತನದಲ್ಲಿ ಹುಟ್ಟಿ, ಸ್ವಂತ ಪ್ರಯತ್ನದಿಂದ ಉನ್ನತ ಸ್ಥಾನಕ್ಕೇರಿ ಸಮಾಜದ ಉದ್ಧಾರಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಸರ್. ಸಿದ್ಧಪ್ಪ ಕಂಬಳಿ ಅವರು ಮರೆಯಲಾಗದ ಮಹಾನುಭಾವರು ಎಂದು ಅಧ್ಯಾಪಕರಾದ ಡಾ. ಈರಣ್ಣ ಇಂಜಗನೇರಿ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು ಸರ್. ಸಿದ್ಧಪ್ಪ ಕಂಬಳಿ ಪ್ರತಿಷ್ಠಾನ ದತ್ತಿ ಅಂಗವಾಗಿ ಆಯೋಜಿಸಿದ್ದ ‘ಸರ್. ಸಿದ್ಧಪ್ಪ ಕಂಬಳಿ ಅವರ ಸಾಮಾಜಿಕ ನ್ಯಾಯ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಂಬಳಿ ಅವರು ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ ಅಸಾಮಾನ್ಯರಾಗಿ ಬೆಳೆದವರು. ಆಗಿನ ಮುಂಬೈ ಸರ್ಕಾರದಲ್ಲಿ…

Read More