ಬೆಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ ಲಾಡ್; “ಸಿಎಂ ಕಾಲಿಗೆ ಬಿದ್ದಾದರೂ ಪರಿಹಾರ ತರುತ್ತೇನೆ” – ರೈತರಿಗೆ ಭರವಸೆ
ಧಾರವಾಡ: ಇತ್ತೀಚೆಗೆ ಮುಕ್ತಾಯಗೊಂಡ ಮಳೆಗಾಲದ ಅಧಿವೇಶನದ ನಂತರ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರ ಬೆಳೆ ಹಾನಿಯನ್ನು ವೀಕ್ಷಿಸಿ ಅವರ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು. ಬೆಳೆಹಾನಿ ಪರಿಶೀಲನೆ:ನವಲಗುಂದ ತಾಲ್ಲೂಕಿನ ಶಲವಡಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಈರುಳ್ಳಿ ಮತ್ತು ಹೆಸರು ಬೆಳೆಗಳು ಸಂಪೂರ್ಣ ನಾಶವಾಗಿರುವುದನ್ನು ಗಮನಿಸಿದರು….

