ಗಳಗಿಹುಲಕೊಪ್ಪ ಗ್ರಾ ಪಂ ಪಿಡಿಓ ಎ.ಹೆಚ್. ಮನಿಯಾರ್ ಅಮಾನತು: ಸರ್ಕಾರದ ಹಣ ಅಕ್ರಮ ವರ್ಗಾವಣೆ ಹಿನ್ನಲೆ ಕ್ರಮ:

ಕಲಘಟಗಿ: ತಾಲ್ಲೂಕಿನ ಗಳಗಿಹುಲಕೊಪ್ಪ ಗ್ರಾಮ ಪಂಚಾಯಿತಿಯ ಪಿಡಿಓ ಅಬ್ದುಲ್ ರಜಾಕ್ ಹೆಚ್ ಮನಿಯಾರ್, ಸರ್ಕಾರದ ಹಣವನ್ನು ಖಾಸಗಿ ವ್ಯಕ್ತಿಗಳ ಖಾತೆಗೆ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿದ್ದ ಈ ಅಧಿಕಾರಿಯನ್ನು ಜಿಲ್ಲಾಡಳಿತ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಆಗಸ್ಟ್ 31ರಂದು ಗಳಗಿಹುಲಕೊಪ್ಪ ಗ್ರಾಮದಲ್ಲಿನ ವಿದ್ಯುತ್ ಬಿಲ್ ಪಾವತಿಯಲ್ಲಿ ಹಗರಣ ನಡೆದಿರುವುದು ಬೆಳಕಿಗೆ ಬಂದಿತ್ತು. ಸರ್ಕಾರದಿಂದ ಬಂದ ಹಣವನ್ನು ದುರುಪಯೋಗಪಡಿಸಿಕೊಂಡು, ಅದನ್ನು ಖಾಸಗಿ ಖಾತೆಗಳಿಗೆ ವರ್ಗಾವಣೆ ಮಾಡಿರುವ ಕುರಿತು ದಾಖಲೆಗಳು ಲಭ್ಯವಾಗಿವೆ. ಈ ವಿಷಯ ಗಮನಕ್ಕೆ…

Read More

ರೈತರ ಅಹೋರಾತ್ರಿ ಧರಣಿ ಅಂತ್ಯ; ಜಿಲ್ಲಾಡಳಿತಕ್ಕೆ ಮನವಿ

ಧಾರವಾಡ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50,000 ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ಧಾರವಾಡ ಗ್ರಾಮೀಣ ಘಟಕದಿಂದ ಡಿಸಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿದ್ದ ಅಹೋರಾತ್ರಿ ಧರಣಿಯನ್ನು ಬುಧವಾರ ಅಂತ್ಯಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಧರಣಿಯ ಸಮಯದಲ್ಲಿ ಮಾತನಾಡಿದ ಹು-ಧಾ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಸಭಾನಾಯಕ ಈರೇಶ ಅಂಚಟಗೇರಿ, ಜಿಲ್ಲೆಯಲ್ಲಿ ರೈತರಿಗೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡಲು ಯಾರೂ ಇಲ್ಲ….

Read More

ನಿಧನ ವಾರ್ತೆ

ನಿಧನ ವಾರ್ತೆ:ಧಾರವಾಡ: ಅಣ್ಣಿಗೇರಿ ತಾಲ್ಲೂಕಿನ ಸಾಸ್ವಿಹಳ್ಳಿ ಗ್ರಾಮದ ವಿಠ್ಠಲ. ವಿ.ಸೂರ್ಯವಂಶಿ (56) ಬುಧುವಾರದು ನಿಧನರಾದರು. ಮೃತರಿಗೆ ಪತ್ನಿ ಹಾಗೂ ಇಬ್ಬರೂ ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

Read More

ನವಲಗುಂದ: ಹೆಸರು ಕಾಳು ಖರೀದಿ ಕೇಂದ್ರ ಆರಂಭಕ್ಕೆ ರೈತ ಮುಖಂಡರ ಆಗ್ರಹ

ನವಲಗುಂದ: ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಬೆಳೆ ಬೆಳೆದಿದ್ದ ರೈತರು, ಅತಿಯಾದ ಮಳೆಯಿಂದಾಗಿ ಬೆಳೆ ಹಾನಿಗೊಳಗಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿದಿರುವ ಬೆಳೆಯನ್ನೂ ಕಟಾವು ಮಾಡಿದ ರೈತರ ಹೆಸರನ್ನು ಖರೀದಿಸಲು ಸರ್ಕಾರ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ರೈತ ಮುಖಂಡ ಮಾಬುಸಾಬ್ ಯರಗುಪ್ಪಿ ಆಗ್ರಹಿಸಿದರು. ಈ ಕುರಿತು ತಹಶೀಲ್ದಾರ್ ಸುಧೀರ್ ಸಾಹುಕಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, “ಪ್ರಸ್ತುತ ಮಾರುಕಟ್ಟೆಯಲ್ಲಿ ಹೆಸರು ಕಾಳು ಪ್ರತಿ ಕ್ವಿಂಟಾಲ್‌ಗೆ ಕೇವಲ 3 ರಿಂದ 5…

Read More

ಹರಲಾಪೂರ: ಯೋಗಾಸನದಲ್ಲಿ ಕಂಚು, ಅನನ್ಯಗೆ ರಾಜ್ಯ ಸರ್ಕಾರದ ಗೌರವ

ಕುಂದಗೋಳ: ತಾಲ್ಲೂಕಿನ ಹರಲಾಪುರ ಗ್ರಾಮದ ಅನನ್ಯ ಸಾಂಬಯ್ಯ ಹಿರೇಮಠ ಅವರು ಉತ್ತರಾಖಂಡದಲ್ಲಿ ನಡೆದ 38ನೇ ರಾಷ್ಟ್ರಮಟ್ಟದ ಒಲಿಂಪಿಕ್ ಯೋಗಾಸನ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರವು ಕ್ರೀಡಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವನಿಕಾದಲ್ಲಿ ಸ್ಥಳದಲ್ಲಿ ಗೌರವಿಸಿದೆ. ಮುಖ್ಯಮಂತ್ರಿಗಳ ಅಭಿನಂದನಾ ಪತ್ರದೊಂದಿಗೆ ಎರಡು ಲಕ್ಷ ರೂಪಾಯಿ ನಗದನ್ನು ಅನನ್ಯ ಅವರಿಗೆ ನೀಡಿ ಸನ್ಮಾನಿಸಲಾಯಿತು.ಈ ಗೌರವವು ಅನನ್ಯ ಅವರ ಶ್ರಮಕ್ಕೆ ಸಿಕ್ಕ…

Read More

ಕುಂದಗೋಳ: ತಹಶಿಲ್ದಾರ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಸೆ:11 ರಂದು ಪೂರ್ವಭಾವಿ ಸಭೆ

ಕುಂದಗೋಳ: ತಾಲ್ಲೂಕಿನಲ್ಲಿ 2025-26ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಮಿತ್ತ ಪೂರ್ವಭಾವಿ ಸಭೆಯನ್ನು ಸೆಪ್ಟೆಂಬರ್ 11, ರಂದು ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 7, 2025 ರಂದು ನಡೆಯಲಿರುವ ಜಯಂತಿ ಆಚರಣೆಯ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ತಾಲ್ಲೂಕಿನ ಎಲ್ಲಾ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ಮುಖಂಡರುಗಳು ಈ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು…

Read More

ಗುಡೇನಕಟ್ಟಿ: ಶಾಂತ ಮನಸ್ಸಿನಿಂದ ಸುಖ ಜೀವನ – ಡಾ. ಎ.ಸಿ. ವಾಲಿ ಗುರೂಜಿ

ಕುಂದಗೋಳ: ದೇಹ ಮತ್ತು ಚಿಂತೆ ಮನುಷ್ಯನನ್ನು ಹಾಳು ಮಾಡುತ್ತದೆ. ದೇಹವನ್ನು ದಣಿಸಿದಾಗ ಜೀವನ ಸುಖವಾಗಿ ಇರುತ್ತದೆ ಎಂದು ಬಂಡಿವಾಡ ಗಿರೀಶ ಆಶ್ರಮದ ಎ.ಸಿ. ವಾಲಿ ಗುರೂಜಿ ಹೇಳಿದರು. ತಾಲೂಕಿನ ಗುಡೇನಕಟ್ಟಿ ಗ್ರಾಮದ ಏಕದಂತ ಯುವಕ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಗಣೇಶ ಪೂಜೆ ಮತ್ತು ನಿರಂತರ ವೀಣೆ ಸಾಧನ ಸಪ್ತಾಹ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.ನೀವೆಲ್ಲರೂ ಸೇರಿ ಇದೇ ರೀತಿ ಕಾರ್ಯಕ್ರಮವನ್ನು ಪ್ರತಿ ವರ್ಷ ಮಾಡುತ್ತಾ ಬಂದರೆ ನಿಮ್ಮ ಊರಿನ ವಿಘ್ನಗಳು ದೂರವಾಗುತ್ತವೆ. ವಿನಾಯಕನ ಆಶೀರ್ವಾದ ಸದಾ ನಿಮ್ಮ…

Read More

ಕುಂದಗೋಳ: ಅತಿವೃಷ್ಟಿ; ರೈತರು ಧೃತಿಗೆಡಬೇಡಿ, ಸರ್ಕಾರದಿಂದ ಸೂಕ್ತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್ ಅಭಯ

ಕುಂದಗೋಳ: ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಹೆಸರು, ಉದ್ದು ಸೇರಿದಂತೆ ಬಹುತೇಕ ಬೆಳೆಗಳು ಸಂಪೂರ್ಣ ನಾಶವಾಗಿವೆ. ಇದರಿಂದ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಭರವಸೆ ನೀಡಿದರು.ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅತಿವೃಷ್ಟಿಯಿಂದಾದ ಬೆಳೆಹಾನಿಯ ಕುರಿತು ಮಾಹಿತಿ ನೀಡಿದರು. “ಈ ಬಾರಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ರೈತರು ಸಕಾಲದಲ್ಲಿ ಬಿತ್ತನೆ ಮಾಡಿದ್ದರು. ಬೆಳೆಯೂ…

Read More

ನವಲಗುಂದದಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರ ಹಿತ ಕಾಯಲು ಬದ್ಧ-ಶಾಸಕ ಕೋನರಡ್ಡಿ

ನವಲಗುಂದ: ರಾಜಕೀಯ ಜೀವನದಲ್ಲಿ ನಾವು ಭವಿಷ್ಯ ಕಾಣಲು ಪತ್ರಕರ್ತರ ನಿಸ್ವಾರ್ಥ ಕೊಡುಗೆ ಅಪಾರವಾಗಿದ್ದು, ಅವರ ಹಿತ ಕಾಯಲು ನಾನು ಬದ್ಧ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು. ಪಟ್ಟಣದ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಹಾಗೂ ಪತ್ರಿಕಾ ವಿತರಕರ ಸಂಘ ಆಯೋಜಿಸಿದ್ದ ಪತ್ರಕರ್ತರ ಮತ್ತು ವಿತರಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಸರ್ಕಾರಿ ಮಟ್ಟದಲ್ಲಿ ಉತ್ತಮ ಆಡಳಿತ ನಿರ್ಮಾಣಕ್ಕೆ ದೊಡ್ಡ ಪಾತ್ರ ವಹಿಸುತ್ತದೆ. ಪತ್ರಕರ್ತರ ಸಾಮಾಜಿಕ ಸೇವೆಗೆ…

Read More

ಕುಂದಗೋಳದ ಶಕ್ತಿ ಕ್ಲಿನಿಕ್‌ನಲ್ಲಿ ಸೆ:4 ರಂದು ಉಚಿತ ಬಂಜೆತನ ತಪಾಸಣಾ ಶಿಬಿರ

ಕುಂದಗೋಳ: ಪಟ್ಟಣದ ರೇವಡಿಗಾರ ಕಾಂಪ್ಲೆಕ್ಸ್‌ನಲ್ಲಿರುವ ಶಕ್ತಿ ಕ್ಲಿನಿಕ್ ಹಾಗೂ ಸ್ಕ್ಯಾನಿಂಗ್ ಆವರಣದಲ್ಲಿ ಸೆಪ್ಟೆಂಬರ್ 4ರಂದು ಉಚಿತ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ನೋವಾ ಐವಿಎಫ್ ಫರ್ಟಿಲಿಟಿ ಸಹಯೋಗದೊಂದಿಗೆ ಈ ಶಿಬಿರವನ್ನು ನಡೆಸಲಾಗುತ್ತಿದೆ.ಅಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಬಂಜೆತನ ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಯರಿಗೆ ಉಚಿತ ತಪಾಸಣೆ ಮತ್ತು ಸಲಹೆ ನೀಡಲಾಗುತ್ತದೆ. ಬಂಜೆತನ ಎನ್ನುವದು ಒಂದು ಚಿಕಿತ್ಸೆ ಪಡೆಯಬಹುದಾದ ವೈದ್ಯಕೀಯ ಸ್ಥಿತಿ ಎಂದು ತಜ್ಞರು ತಿಳಿಸಿದ್ದಾರೆ. ಶಿಬಿರದಲ್ಲಿ ನುರಿತ ಫರ್ಟಿಲಿಟಿ ತಜ್ಞರು ಉಪಸ್ಥಿತರಿದ್ದು, ಉಚಿತ ಸಮಾಲೋಚನೆ, ನೋಂದಣಿ…

Read More