ಯುವ ಕಲಾವಿದ ಬಸವರಾಜ ತಳವಾರಗೆ ‘ಚಿತ್ತಾರ ಚೇತನ’ ಪ್ರಶಸ್ತಿ

ಧಾರವಾಡ: ಕಲಾವಿದ ಶ್ರೀ ಬಿ. ಮಾರುತಿ ದತ್ತಿ ಅಂಗವಾಗಿ ಕರ್ನಾಟಕ ವಿದ್ಯಾವರ್ಧಕ ಸಂಘವು, ‘ಚಿತ್ತಾರ ಚೇತನ’ ಪ್ರಶಸ್ತಿ ಪ್ರದಾನ ಹಾಗೂ ಮೂರು ದಿನಗಳ ಚಿತ್ರಕಲಾ ಪ್ರದರ್ಶನವನ್ನು ಸೆಪ್ಟೆಂಬರ್ ೧೩ರಂದು ಸಂಜೆ ೬ ಗಂಟೆಗೆ ಸಂಘದ ಚಿತ್ರಕಲಾ ಪ್ರದರ್ಶನ ಸಭಾಭವನದಲ್ಲಿ ಹಮ್ಮಿಕೊಂಡಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ವಿ.ವ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ವಹಿಸುವರು. ತುಮಕೂರಿನ ಹಿರಿಯ ಕಲಾವಿದಪ್ರಭು ಹರಸೂರು ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅತಿಥಿಗಳಾಗಿ ಧಾರವಾಡ ಆಕಾಶವಾಣಿ ನಿವೃತ್ತ ನಿರ್ದೇಶಕ ಸಿ. ಯು. ಬೆಳ್ಳಕ್ಕಿ ಹಾಗೂ ಮೈಸೂರಿನ ಹಿರಿಯ…

Read More

ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ; ಕೆಡಿಪಿ ಫೌಂಡೇಶನ್‌ನ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ: ಎಸ್ ಡಿ ಎಂ ಸಿ ಅಧ್ಯಕ್ಷ ರಾಜು ಪುಟ್ಟಣ್ಣನವರ

ಕುಂದಗೋಳ :ಸಂಶಿ: ಬೆಂಗಳೂರಿನ ಕೆಡಿಪಿ ಫೌಂಡೇಶನ್ ವಿದೇಶದಲ್ಲಿ ವ್ಯಾಸಂಗ ಮಾಡಿದರೂ ನಮ್ಮ ದೇಶದ ಶಾಲೆಗಳಿಗೆ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದು ಸಂಶಿ ಗ್ರಾಮದ ಕನ್ನಡ ಗಂಡುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಜು ಪುಟ್ಟಣ್ಣವರ ಅವರು ಹೇಳಿದರು. ಗ್ರಾಮದ ಕನ್ನಡ ಗಂಡುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕೆಜಿಎಸ್ ನಂ.1 ಶಾಲೆಯಲ್ಲಿ ಕೆಡಿಪಿ ಫೌಂಡೇಶನ್ ಬೆಂಗಳೂರು ಮತ್ತು ಪರೋಪಕಾರಿ.ಕಾಂ ಸಹಯೋಗದಲ್ಲಿ ಆಯೋಜಿಸಲಾದ ನೋಟ್‌ಬುಕ್‌ ಮತ್ತು ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ….

Read More

ಕುಂದಗೋಳ ತಹಶೀಲ್ದಾರ್ ಕಚೇರಿಯಲ್ಲಿ ಏಜೆಂಟರ ಹಾವಳಿ; ಅಧಿಕೃತ ದಸ್ತಾವೇಜು ಬರಹಗಾರರಿಂದ ದೂರು

ಕುಂದಗೋಳ: ಅಧಿಕೃತ ಪರವಾನಗಿ ಇಲ್ಲದ ಏಜೆಂಟರು ತಾಲೂಕಿನ ಉಪನೊಂದಣಿ ಕಚೇರಿಗಳಲ್ಲಿ ರೈತರನ್ನು ಮತ್ತು ಸಾರ್ವಜನಿಕರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಕುಂದಗೋಳ ತಾಲೂಕಾ ದಸ್ತಾವೇಜು ಬರಹಗಾರರ ಸಂಘದ ಸದಸ್ಯರು ತಹಶೀಲ್ದಾರ್‌ ರಾಜು ಮಾವರಕರವರಿಗೆ ಶುಕ್ರವಾರದಂದು ಮನವಿ ಸಲ್ಲಿಸಿದ್ದಾರೆ. ಅಧಿಕೃತ ದಸ್ತಾವೇಜು ಬರಹಗಾರರು ಸಲ್ಲಿಸಿದ ಮನವಿಯಲ್ಲಿ, ‘ಕಾವೇರಿ-2’ ಯೋಜನೆ ಜಾರಿಯಾದ ನಂತರ ಸಾರ್ವಜನಿಕರಿಗೆ ಅನುಕೂಲವಾಗಿದ್ದರೂ, ಕುಂದಗೋಳ ತಹಶೀಲ್ದಾರ್ ಕಚೇರಿಯಲ್ಲಿ ಕಿಯೋಸ್ಕ್ ಆಪರೇಟರ್ ಶರಣಪ್ಪ ಶಿವಜಾತಪ್ಪನವರ ಎಂಬ ವ್ಯಕ್ತಿ ಅನಧಿಕೃತವಾಗಿ ನೊಂದಣಿ ಸಂಬಂಧಿತ ಪತ್ರಗಳನ್ನು ತಯಾರಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ….

Read More

ಸಹಕಾರಿ ರಂಗದಲ್ಲಿ ಅನೇಕ ಉದ್ಯೋಗ ಅವಕಾಶ: ಎಂ.ಬಿ. ದಾನಪ್ಪಗೌಡರ

ಕುಂದಗೋಳ: ಸಹಕಾರಿ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಹಲವು ಉದ್ಯೋಗಾವಕಾಶಗಳಿವೆ ಎಂದು ಧಾರವಾಡ ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಬಿ. ದಾನಪ್ಪಗೌಡರ ಹೇಳಿದರು. ತಾಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಂಡಳಿ ನಿಯಮಿತ, ಬೆಂಗಳೂರು, ಧಾರವಾಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಕೆಎಲ್‌ಇ ಕಾಲೇಜಿನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕ್ಲಸ್ಟರ್ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಸಹಕಾರಿ ರಂಗ ಬೆಳೆದು ಬಂದ ಇತಿಹಾಸದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಮಹನಿಯರಾದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ನಿವೇಶನ ನೀಡುವಂತೆ ಒತ್ತಾಯ

ಕುಂದಗೋಳ: ಮಹರ್ಷಿ ವಾಲ್ಮೀಕಿ ಜಯಂತಿಯೊಳಗೆ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸಬೇಕು ಎಂದು ಸಮಾಜದ ಮುಖಂಡರು ತಹಶೀಲ್ದಾರ್‌ಗೆ ಮನವಿ‌ ಮಾಡಿಕೊಂಡರು. ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಸಮಾಜದ ಮುಖಂಡರು ಈ ಬೇಡಿಕೆಯನ್ನು ಮಂಡಿಸಿದರು. ಹಲವು ವರ್ಷಗಳಿಂದ ಸಮುದಾಯ ಭವನದ ಬೇಡಿಕೆ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಕ್ಟೋಬರ್ 7 ರಂದು ನಡೆಯುವ ಜಯಂತಿಯೊಳಗೆ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಜಯಂತಿ ದಿನದಂದು ಪ್ರತಿ ಅಂಗನವಾಡಿ ಹಾಗೂ…

Read More

ಗಿಗ್ ಕಾರ್ಮಿಕರ ಪಾಲಿಗೆ ಅಭಯದಾತ: ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕ ಇಲಾಖೆಯಲ್ಲಿ ಮಹತ್ವದ ಕ್ರಾಂತಿ ಮಾಡಲು ಹೊರಟಿದ್ದಾರೆ. ಶ್ರಮಿಕ ವರ್ಗದ ಕಾರ್ಮಿಕರ ಕಷ್ಟ-ಕಾರ್ಪಣ್ಯಗಳನ್ನು ನೀಗಿಸಲು ಹಾಗೂ ಅವರ ಕುಟುಂಬಗಳಿಗೆ ಭದ್ರತೆ ಒದಗಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅದರಲ್ಲೂ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿ ಮಾಡುವ ಮೂಲಕ ಒಂದು ಮಹತ್ವದ ಕಾರ್ಯ ಮಾಡಿದ್ದಾರೆ.ರಾಜ್ಯ ಕಾರ್ಮಿಕ ಇಲಾಖೆ ಜಾರಿಗೊಳಿಸಿದ ಮಹತ್ವದ ಯೋಜನೆಗಳಲ್ಲಿ ಗಿಗ್ ಕಾರ್ಮಿಕರ ವಿಮಾ ಯೋಜನೆಯೂ ಒಂದು. ಇಂದಿನ ದಿನಮಾನಗಳಲ್ಲಿ ಮನೆ, ಕಚೇರಿ,…

Read More

ಯುವ ಶಕ್ತಿಯ ಸದ್ಬಳಕೆ ದೇಶದ ಋಣ ತೀರಿಸಿದಂತೆ: ಹಿರಿಯ ವಿಜ್ಞಾನಿ ಡಾ. ಎಸ್ ಎಂ ಶಿವಪ್ರಸಾದ್

ಧಾರವಾಡ: ಯುವಜನತೆಯಲ್ಲಿ ಅಡಗಿರುವ ಅಪಾರ ಶಕ್ತಿಯನ್ನು ಸರಿಯಾಗಿ ಬಳಸಿಕೊಂಡು ಉನ್ನತ ಸಾಧನೆ ಮಾಡಿದರೆ ಅದು ತಂದೆ-ತಾಯಿ, ಗುರು, ಸಮಾಜ ಹಾಗೂ ದೇಶದ ಋಣ ತೀರಿಸಿದಂತೆ ಎಂದು ಧಾರವಾಡ ಐಐಟಿ ನಿರ್ದೇಶಕ ಹಾಗೂ ಹಿರಿಯ ವಿಜ್ಞಾನಿ ಡಾ. ಎಸ್.ಎಂ.ಶಿವಪ್ರಸಾದ್ ಹೇಳಿದರು. ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಭವನದಲ್ಲಿ ಮಂಗಳವಾರ ನಡೆದ ಯುವಜನ ಮತ್ತು ಕ್ರೀಡಾ ಮಂಟಪದ ಪ್ರಸಕ್ತ ತ್ರೈವಾರ್ಷಿಕ ಅವಧಿಯ ಕಾರ್ಯಚಟುವಟಿಕೆಗಳ ಉದ್ಘಾಟನೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವ ಮೂಲಕ ಚಾಲನೆ…

Read More

ಸಾರ್ವಜನಿಕರ ಸಹಕಾರದಿಂದ ಸಮಸ್ಯೆ ಪರಿಹಾರ ಸಾಧ್ಯ: ಜಿಲ್ಲಾಧಿಕಾರಿ ದಿವ್ಯಾ ಪ್ರಭು

ಧಾರವಾಡ: ಸಾರ್ವಜನಿಕರ ಸಹಕಾರ ಸಿಕ್ಕಿದಲ್ಲಿ ಯಾವುದೇ ಸಮಸ್ಯೆಯನ್ನಾದರೂ ಬಗೆಹರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶ್ರೀಮತಿ ದಿವ್ಯಾಪ್ರಭು ಅವರು ಅಭಿಪ್ರಾಯಪಟ್ಟರು. ನಗರದಲ್ಲಿ ಹುಬ್ಬಳ್ಳಿ ಧಾರವಾಡ ನಾಗರಿಕ ಪರಿಸರ ಸಮಿತಿ ಆಯೋಜಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಹಬ್ಬಗಳು, ಸಂಸ್ಕೃತಿ ಮತ್ತು ಸಂಪ್ರದಾಯಗಳು ಸಮಾಜದ ನಾಗರಿಕತೆಯ ಹೆಚ್ಚಳಕ್ಕೆ ಕಾರಣವಾಗುತ್ತವೆ. ಅವುಗಳ ಆಚರಣೆ ಮಾಡುವಾಗ ಪರಿಸರಕ್ಕೆ ಹಾನಿಯಾಗದಂತೆ ಎಲ್ಲರೂ ಕಾಳಜಿ ವಹಿಸಬೇಕು. ಸಾರ್ವಜನಿಕರ ಸಹಕಾರದಿಂದಲೇ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ಹಬ್ಬ ಆಚರಿಸಲು ಸಾಧ್ಯವಾಯಿತು. ಈ…

Read More

ಸಂಶಿ ಅರ್ಬನ್ ಕೋ ಆಪರೇಟಿವ್ ಸೊಸೈಟಿಯಿಂದ ಜಿಲ್ಲಾ ಸಹಕಾರಿ ಯೂನಿಯನ್‌ಗೆ ಶಿಕ್ಷಣ ನಿಧಿ ಚೆಕ್ ಹಸ್ತಾಂತರ

ಸಂಶಿ: ರೈತರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ ಆರ್ಥಿಕವಾಗಿ ಬೆಂಬಲ ನೀಡುತ್ತಿರುವ ಸಂಶಿ ಅರ್ಬನ್ ಕೋ ಆಪರೇಟಿವ್ ಸೊಸೈಟಿಯು ಸಹಕಾರಿ ಶಿಕ್ಷಣ ಕ್ಷೇತ್ರಕ್ಕೂ ನೆರವು ನೀಡಿದೆ. ಜಿಲ್ಲಾ ಸಹಕಾರಿ ಯೂನಿಯನ್‌ಗೆ ಶಿಕ್ಷಣ ನಿಧಿಯಾಗಿ 1,75,180 ರೂಪಾಯಿ ಮೊತ್ತದ ಚೆಕ್ ಹಸ್ತಾಂತರ ಮಾಡುವ ಮೂಲಕ ಸಂಘವು ತನ್ನ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದೆ. ಸಂಶಿ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎ.ಬಿ. ಉಪ್ಪಿನ್ ಅವರು, ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಾಹಕ…

Read More

ರೈತರ ಹೆಸರಿನ ಬ್ಯಾಂಕ್ ರೈತರಿಗೇ ನಿರ್ಲಕ್ಷ್ಯ ಮರಣ ಹೊಂದಿದವರ ಹೆಸರಿನಲ್ಲಿ ನೋಟೀಸ್, ಪಿಎಲ್‌ಡಿ ಬ್ಯಾಂಕ್ ಸಾಮಾನ್ಯ ಸಭೆ ಮುಗಿಯುತ್ತಿದ್ದಂತೆ ರೈತರ ಆಕ್ರೋಶ ಸಿಡಿತ

ಕುಂದಗೋಳ,: ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆ ಮುಗಿಯುತ್ತಿದ್ದಂತೆ ರೈತರ ಅಸಮಾಧಾನ ಮತ್ತು ಆಕ್ರೋಶದ ಅಖಾಡವಾಯಿತು. “ರೈತರ ಹೆಸರಿನಲ್ಲಿ ನಡೆಯುವ ಬ್ಯಾಂಕ್‌ನಲ್ಲಿ ರೈತರಿಗೆ ಮಾತ್ರವೇ ನಿರ್ಲಕ್ಷ್ಯ” ಎಂದು ಸಭೆಯ ಮುಗಿಯುತ್ತಿದ್ದಂತೆ ಅನೇಕ ರೈತರು ಧ್ವನಿ ಎತ್ತಿದರು. ಸಭೆಗೆ ಭಾಗವಹಿಸಿದ ಅನೇಕ ರೈತರು “ನಮಗೆ ಸಭೆಯ ಕುರಿತು ನೋಟಿಸ್ ಬಂದಿಲ್ಲ, ಬ್ಯಾಂಕಿನ ಸೌಲತ್ತುಗಳು ತಲುಪುತ್ತಿಲ್ಲ, ಸತ್ತವರ ಹೆಸರಿನ ಮೇಲೆಯೇ ನೋಟಿಸ್ ಕಳುಹಿಸಲಾಗಿದೆ, ರೈತರನ್ನು ಯಾವೊಬ್ಬರನ್ನೂ ಗೌರವಿಸುವುದಿಲ್ಲ. ಒಟ್ಟಾರೆ ರೈತರ ಹಿತದೃಷ್ಟಿ ಮರೆತು ಮನಬಂದಂತೆ ಆಡಳಿತ…

Read More