ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ: 20 ಮನೆಗಳಿಗೆ ಹಾನಿ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ

ಧಾರವಾಡ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಒಟ್ಟು 20 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಮಳೆಯಿಂದಾಗಿ ಧಾರವಾಡ ನಗರದಲ್ಲಿ 1, ಹುಬ್ಬಳ್ಳಿಯಲ್ಲಿ 16 ಮತ್ತು ಕುಂದಗೋಳದಲ್ಲಿ 3 ಮನೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಯಾವುದೇ ಮಾನವ ಅಥವಾ ಜಾನುವಾರುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಪ್ರಾಥಮಿಕ ಸಮೀಕ್ಷೆಯಿಂದ ತಿಳಿದುಬಂದಿದೆ. ಬೆಳೆ ಹಾನಿಯ ಕುರಿತಂತೆ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸುತ್ತಿದ್ದು, ವರದಿ ಸಿದ್ಧಪಡಿಸುತ್ತಿದ್ದಾರೆ….

Read More

ಯಲಿವಾಳ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣೆ

ಕುಂದಗೋಳ: ತಾಲ್ಲೂಕಿನ ಯಲಿವಾಳ ಗ್ರಾಮದಲ್ಲಿ ನಿವೃತ್ತ ಪ್ರೌಢಶಾಲಾ ಶಿಕ್ಷಕರಾದ ಎಲ್.ಕೆ. ಹಿರೇಗೌಡರ ಮತ್ತು ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಎಂ.ಕೆ. ಹಿರೇಗೌಡರ ಅವರು ಸ್ಥಾಪಿಸಿರುವ ಶಾಶ್ವತ ಶೈಕ್ಷಣಿಕ ನಿಧಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು. ಇತ್ತೀಚೆಗೆ ನಡೆದ ಸ್ವಾತಂತ್ರ್ಯ ದಿನಾಚರಣೆಯಂದು ಈ ಕಾರ್ಯಕ್ರಮ ಜರುಗಿತು. ಈ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಸಹನಾ ಸಿ. ಮುರುಗಣ್ಣವರ (ಪ್ರಥಮ ಸ್ಥಾನ, 97.06%), ಶ್ರೇಯಾ ಜೆ….

Read More

ದೇವರಾಜ ಅರಸು ಅವರು ಆಡಳಿತಗಾರರಿಗೆ ಸದಾ ಮಾದರಿ: ಸಂಶಿ ಗ್ರಾ ಪಂ ಅಧ್ಯಕ್ಷ ಗಿರೀಶಗೌಡ ಪಾಟೀಲ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪೂಜಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಗಿರೀಶಗೌಡ ಪಾಟೀಲ್ ಅವರು ಮಾತನಾಡಿ, “ಭೂ ಸುಧಾರಣೆ, ಮೀಸಲಾತಿ, ಮತ್ತು ಮಲಹೊರುವ ಪದ್ಧತಿಯ ನಿಷೇಧದಂತಹ ಮಹತ್ವದ ಯೋಜನೆಗಳಿಗಾಗಿ ರಾಜ್ಯದ ಜನತೆ ಯಾವ ಚಳುವಳಿ ಅಥವಾ ಹೋರಾಟಗಳನ್ನು ನಡೆಸಿರಲಿಲ್ಲ. ಇವುಗಳನ್ನೆಲ್ಲ ದೇವರಾಜ ಅರಸು ಅವರು ಜನ ಕೇಳದೆಯೇ,…

Read More

ಕುಂದಗೋಳ: ಬೆಳೆ ಹಾನಿಗೆ ಪರಿಹಾರ, ಬೆಳೆ ಸಾಲ ಮನ್ನಾಕ್ಕೆ ರೈತರ ಆಗ್ರಹ; ತಹಶೀಲ್ದಾರ ರಾಜು ಮಾವರಕರ ಗೇ ಮನವಿ,

ಕುಂದಗೋಳ: ತಾಲೂಕಿನಲ್ಲಿ ಸುರಿದ ಅತಿಯಾದ ಮಳೆಯ ಅತಿವೃಷ್ಟಿಯಿಂದ ಮುಂಗಾರು ಬೆಳೆ ಸಂಪೂರ್ಣ ಹಾನಿಯಾಗಿದ್ದು, ರೈತರಿಗೆ ಕೂಡಲೇ ಬೆಳೆ ಹಾನಿ ಪರಿಹಾರ ವಿತರಿಸಬೇಕು, ರಾಷ್ಟ್ರೀಕೃತ ಮತ್ತು ಸಹಕಾರಿ ಸಂಘಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಬೆಳೆ ವಿಮೆ ಮಂಜೂರು ಮಾಡಬೇಕೆಂದು ಆಗ್ರಹಿಸಿ ಕುಂದಗೋಳ ತಾಲೂಕಾ ಬೆಳೆ ರಕ್ಷಕ ರೈತರ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ನೇತೃತ್ವದಲ್ಲಿ ನೂರಾರು ರೈತರು ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಬುಧುವಾರದಂದು ಮನವಿ ಸಲ್ಲಿಸಿದರು. ಮನವಿ ಪತ್ರದಲ್ಲಿ,…

Read More

ಧಾರವಾಡ: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಸೇರಿದ ಫಾರ್ಮ್‌ಹೌಸ್‌ನಲ್ಲಿ ದರೋಡೆ, 15 ಜನರ ಬಂಧನ

ಧಾರವಾಡ: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸೇರಿದ ಧಾರವಾಡದ ಫಾರ್ಮ್‌ಹೌಸ್‌ನಲ್ಲಿ ದರೋಡೆ ನಡೆದಿದ್ದು, ಈ ಸಂಬಂಧ 15 ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಆಗಸ್ಟ್ 13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ತಾಲ್ಲೂಕಿನ ದಡ್ಡಿಕಮಲಾಪುರ ಗ್ರಾಮದ ಬಳಿ ಇರುವ ‘ಮಮತಾ’ ಎಂಬ ಫಾರ್ಮ್‌ಹೌಸ್‌ಗೆ ಆಗಸ್ಟ್ 13ರಂದು ರಾತ್ರಿ ಸುಮಾರು 8-10 ಜನರ ಗುಂಪೊಂದು ನುಗ್ಗಿದೆ. ಫಾರ್ಮ್‌ಹೌಸ್‌ನಲ್ಲಿ ಮಲಗಿದ್ದ ಕಣ್ಣಪ್ಪ ಜಡ್ಡಿ, ಹನುಮಂತ ಧನದಾವರ್, ಅಶೋಕ ಪೋತಲಿ ಮತ್ತು ಲಕ್ಷ್ಮಣ…

Read More

ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: 47 ಮನೆಗಳಿಗೆ ಭಾಗಶಃ ಹಾನಿ,

ಧಾರವಾಡ: ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 47 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಮಾನವ ಅಥವಾ ಜಾನುವಾರು ಪ್ರಾಣಹಾನಿಯಾಗಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮಳೆಯಿಂದ ಹಾನಿಗೊಳಗಾದ ಮನೆಗಳ ವಿವರಗಳು ಹೀಗಿವೆ: ಬೆಳೆ ನಷ್ಟದ ಸಮೀಕ್ಷೆ ಆರಂಭಪ್ರವಾಹ ಮತ್ತು ನಿರಂತರ ಮಳೆಯಿಂದಾಗಿ ಬೆಳೆಗಳಿಗೆ ಉಂಟಾದ ಹಾನಿಯ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಯ ಜಂಟಿ ಸಮೀಕ್ಷೆ ಪ್ರಕ್ರಿಯೆ ಆರಂಭವಾಗಿದೆ. ಬೆಳೆ ನಷ್ಟದ ನಿಖರ ಪ್ರಮಾಣವನ್ನು ಅಂದಾಜು…

Read More

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ: ಕುಂದಗೋಳದಿಂದಲೇ ಕಾಮಗಾರಿ ಆರಂಭಿಸಲು ಶಾಸಕ ಎಂ.ಆರ್. ಪಾಟೀಲ್ ಸದನದಲ್ಲಿ ಆಗ್ರಹ

ಧಾರವಾಡ/ಕುಂದಗೋಳ : ಪ್ರತಿ ವರ್ಷ ಪ್ರವಾಹದಿಂದ ರೈತರಿಗೆ ಅಪಾರ ನಷ್ಟ ಉಂಟುಮಾಡುತ್ತಿರುವ ಬೆಣ್ಣೆಹಳ್ಳದ ಉಪಹಳ್ಳಗಳ ಕಾಮಗಾರಿಯನ್ನು ನವಲಗುಂದ ತಾಲ್ಲೂಕಿನ ಬದಲಿಗೆ ಪ್ರವಾಹದ ಮೂಲವಾದ ಕುಂದಗೋಳ ತಾಲ್ಲೂಕಿನಿಂದಲೇ ಆರಂಭಿಸಬೇಕು ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಸದನದಲ್ಲಿ ಆಗ್ರಹಿಸಿದ್ದಾರೆ. ಬೆಣ್ಣೆಹಳ್ಳಕ್ಕೆ ಉಪಹಳ್ಳಗಳಾದ ಕಗ್ಗೋಡಿ, ಗೂಗಿ, ದೇಸಾಯಿ ಮತ್ತು ಮಾಸ್ತಿ ಹಳ್ಳಗಳಿಂದ ದೊಡ್ಡ ಪ್ರಮಾಣದ ಪ್ರವಾಹ ಉಂಟಾಗುತ್ತದೆ. ಇದು ಕುಂದಗೋಳ ತಾಲ್ಲೂಕಿನ 33 ಕಿ.ಮೀ. ವಿಸ್ತಾರ ಹೊಂದಿದ್ದು, 17 ಗ್ರಾಮಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕರು ಗಮನ ಸೆಳೆದರು….

Read More

ಧಾರವಾಡದಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ: ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ನಾಳೆಯು ಸಹ ರಜೆ ಘೋಷಣೆ

ಧಾರವಾಡ: ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ, ಆಗಸ್ಟ್ 20 ರಂದು, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು (ಇಂದು) ಆದೇಶ ಹೊರಡಿಸಿದ್ದಾರೆ. ಮಳೆಯಿಂದಾಗಿ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಈ ರಜಾದಿನವನ್ನು ಮುಂದಿನ ದಿನಗಳಲ್ಲಿ…

Read More

ಧಾರವಾಡ: ಮಳೆ ಹಾನಿ ನಿರ್ವಹಣೆಗೆ ಸಹಾಯವಾಣಿ ಆರಂಭಿಸಿದ ಜಿಲ್ಲಾಡಳಿತ

ಧಾರವಾಡ: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಬಹುದಾದ ಸಮಸ್ಯೆಗಳನ್ನು ನಿರ್ವಹಿಸಲು ಧಾರವಾಡ ಜಿಲ್ಲಾಡಳಿತವು ಸಹಾಯವಾಣಿ ಕೇಂದ್ರಗಳನ್ನು ತೆರೆದಿದೆ. ಮಳೆಯಿಂದ ತೊಂದರೆಗೊಳಗಾದವರು ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಜನರು ಈ ಸಹಾಯವಾಣಿಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ. ಸಹಾಯವಾಣಿ ಸಂಖ್ಯೆಗಳ ವಿವರ ಹೀಗಿದೆ: ಇದರ ಜೊತೆಗೆ, ಸಾರ್ವಜನಿಕರು ಮಳೆಯ ಹಾನಿಯ ಕುರಿತಾದ ಫೋಟೋಗಳು ಮತ್ತು ವೀಡಿಯೊಗಳನ್ನು 8277803778 ವಾಟ್ಸಾಪ್ ಸಂಖ್ಯೆಗೆ ಕಳುಹಿಸುವ ಮೂಲಕವೂ ಮಾಹಿತಿ ನೀಡಬಹುದು…

Read More

ಅತಿ ಮಳೆಯಿಂದ ಹೆಸರು ಬೆಳೆ ಹಾನಿ: ರೈತರಿಗೆ ಬೆಳೆವಿಮೆ ತುಂಬಿದ ಅರ್ಜಿ ಗಳನ್ನು ವೀಮಾ ಕಂಪನಿಯ ಪ್ರತಿನಿಧಿಗಳಿಗೆ ಸಲ್ಲಿಸಲು ಸೂಚನೆ

ಕುಂದಗೋಳ: ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದಾಗಿ ಕುಂದಗೋಳ ತಾಲ್ಲೂಕಿನಲ್ಲಿ ಪ್ರಮುಖ ಬೆಳೆಯಾದ ಹೆಸರು (Green Gram) ಹಾನಿಗೊಳಗಾಗಿದೆ. ಈ ಹಿನ್ನೆಲೆಯಲ್ಲಿ, ಹೆಸರು ಬೆಳೆಗೆ ಬೆಳೆ ವಿಮೆ ನೋಂದಾಯಿಸಿರುವ ರೈತರು, ಕೂಡಲೇ ವಿಮಾ ಕಂಪನಿ ಪ್ರತಿನಿಧಿಗಳಿಗೆ ತಮ್ಮ ಅರ್ಜಿಗಳನ್ನು ಹಾಗೂ ಬೆಳೆ ವಿಮೆ ತುಂಬಿದ ರಷಿದಿಯೊಂದಿಗೆ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕಿ ಭಾರತಿ ಮೆಣಸಿನಕಾಯಿ ಯವರು ತಿಳಿಸಿದ್ದಾರೆ. ರೈತರು ಹಾನಿಗೊಳಗಾದ ತಮ್ಮ ಬೆಳೆಗಳಿಗೆ ಪರಿಹಾರ ಪಡೆಯಲು ವಿಳಂಬ ಮಾಡದೆ ವಿಮಾ ಕಂಪನಿಯ ಪ್ರತಿನಿಧಿಗಳೊಂದಿಗೆ ಸಂಪರ್ಕ…

Read More