ಸಾಲಬಾಧೆ ತಾಳಲಾರದೆ ತರ್ಲಘಟ್ಟ ಗ್ರಾಮದ ರೈತ ಆತ್ಮಹತ್ಯೆ

ಕುಂದಗೋಳ: ಅತಿಯಾದ ಮಳೆ ಮತ್ತು ಸಾಲಬಾಧೆ ತಾಳಲಾರದೆ ತಾಲೂಕಿನ ತರ್ಲಘಟ್ಟ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತರನ್ನು ರುದ್ರಗೌಡ ಹುತ್ತನಗೌಡ ರಾಮನಗೌಡ್ರ (50) ಎಂದು ಗುರುತಿಸಲಾಗಿದೆ. ಮೃತ ರೈತರು ತರ್ಲಘಟ್ಟ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಕೆರೆಗೆ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಈ ಗ್ರಾಮದಲ್ಲಿ ಜರುಗಿದೆ. ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಾಶರುದ್ರಗೌಡ ರಾಮನಗೌಡ್ರ (50) ಅವರು ಹೊಂದಿದ್ದು, ಈ ವರ್ಷ ಅತೀವೃಷ್ಟಿ ಮಳೆಯಿಂದಾಗಿ ಗೋವಿನ ಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು….

Read More

ಗುಡಿಸಾಗರ ಜನರ ಜೀವದ ಜೊತೆ ಚೆಲ್ಲಾಟಕ್ಕೆ ಬ್ರೇಕ್! ಕಲುಷಿತ ನೀರು ಪ್ರಕರಣ:ಎಚ್ಚತ್ತು ದೌಡಾಯಿಸಿದ ಜಿಲ್ಲಾಡಳಿತ?

ನವಲಗುಂದ: ನಿನ್ನೆ ರಾತ್ರಿ, ‘ಪಬ್ಲಿಕ್ ಸಮಾಚಾರ’ ವರದಿ ಪ್ರಕಟಿಸಿದ್ದ ಗುಡಿಸಾಗರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಮುಂಜಾನೆ ಗ್ರಾಮಕ್ಕೆ ಭೇಟಿ ನೀಡಿ, ಅಧಿಕಾರಿಗಳು ಪರಿಸ್ಥಿತಿಯ ಗಂಭೀರತೆಯನ್ನು ಪರಿಶೀಲಿಸಿದರು. ಪಬ್ಲಿಕ್ ಸಮಾಚಾರ’ ವರದಿಗೆ ಎಚ್ಚೆತ್ತ ಆಡಳಿತನಿನ್ನೆ ರಾತ್ರಿ “ಗುಡಿಸಾಗರ ಜನರ ಜೀವದ ಜೊತೆ ಚೆಲ್ಲಾಟ” ಎಂಬ ಶೀರ್ಷಿಕೆಯಡಿ ವರದಿ ಪ್ರಸಾರವಾದ ಬೆನ್ನಲ್ಲೇ, ಜಿಲ್ಲಾಡಳಿತ ಕೂಡಲೇ ಕಾರ್ಯಪ್ರವೃತ್ತವಾಯಿತು. ಮಂಗಳವಾರ ಸಂಜೆ ಗ್ರಾಮದಲ್ಲಿ 16ಕ್ಕೂ ಹೆಚ್ಚು ಜನ ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದು, ಅವರನ್ನು…

Read More

ಮಡಕಿಹೊನ್ನಳ್ಳಿ ಗ್ರಾಮದಲ್ಲಿ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಉಚಿತ ಶ್ರವಣ ದೋಷ ಚಿಕಿತ್ಸಾ ಶಿಬಿರ

ಕಲಘಟಗಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರ ನೇತೃತ್ವದಲ್ಲಿ, ತಾಲ್ಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ಮೊದಲ ಬಾರಿಗೆ “ಸಂತೋಷ ಲಾಡ್ ಫೌಂಡೇಶನ್” ವತಿಯಿಂದ “ಉಚಿತ ಶ್ರವಣ ದೋಷ ಚಿಕಿತ್ಸಾ ಶಿಬಿರ”ವನ್ನು ಆಯೋಜಿಸಲಾಗಿತ್ತು. “ಶ್ರೀನಿವಾಸ್ ಹೆಲ್ತ್ ಕೇರ್, ಬೆಂಗಳೂರು” ಸಹಯೋಗದೊಂದಿಗೆ ನಡೆದ ಈ ಶಿಬಿರವು ಸಾವಿರಾರು ಜನರಿಗೆ ಉಪಕಾರಿಯಾಯಿತು. ಕಲಘಟಗಿ ತಾಲೂಕಿನ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ, ಸಚಿವರ ಮಡಿಕೀಹೊನ್ನಳ್ಳಿ ಅಮೃತ ನಿವಾಸದಲ್ಲಿ ಈ ವಿಶೇಷ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ನೂರಾರು ಜನರು…

Read More

ಯಲಿವಾಳದ ಶಾಲೆಯಲ್ಲಿ ಪೋಕ್ಸೋ ಕಾಯ್ದೆ ಜಾಗೃತಿ ಕಾರ್ಯಕ್ರಮ

ಕುಂದಗೋಳ: ತಾಲ್ಲೂಕಿನ ಯಲಿವಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಾಗೂ ಕುಂದಗೋಳದ ಕರ್ಮಣಿ ಮಹಿಳಾ ಸಾಂತ್ವನ ಕೇಂದ್ರದ ಸಹಯೋಗದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರದಂದು ಪೋಕ್ಸೋ ಕಾಯ್ದೆ-2012 ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ, ಕರ್ಮಣಿ ಮಹಿಳಾ ಸಾಂತ್ವನ ಕೇಂದ್ರದ ನಿರ್ದೇಶಕರಾದ ಶ್ರೀ ಎನ್.ಬಿ. ಹೊಸಮನಿ ಅವರು ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಮಹತ್ವ, ಅದರ ಜಾರಿ ಮತ್ತು ನೀತಿ-ನಿಯಮಗಳ ಕುರಿತು ತಿಳುವಳಿಕೆ ನೀಡಿದರು. ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಸಹಾಯವಾಣಿಗಳ ಬಗ್ಗೆಯೂ ಅವರು ಮಾಹಿತಿ…

Read More

ಗುಡಿಸಾಗರ ಜನರ ಜೀವದ ಜೊತೆ ಚೆಲ್ಲಾಟ, ಕಲುಷಿತ ಕೆರೆ ನೀರು ಕುಡಿದು16 ಕ್ಕು ಹೆಚ್ಚು ಗ್ರಾಮಸ್ಥರು ಅಸ್ಥವ್ಯಸ್ತ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಕಲುಷಿತಗೊಂಡ ಕೆರೆ ನೀರು ಕುಡಿದು ಮಕ್ಕಳು, ವೃದ್ಧರು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಮಂಗಳವಾರ ಸಂಜೆ ನಡೆದ ಈ ಘಟನೆ, ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸ್ಥಳೀಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಬಡ ಮತ್ತು ಅಮಾಯಕ ಜನರ ಜೀವದೊಂದಿಗೆ ಚೆಲ್ಲಾಟವಾಡಿದ ಈ ಅಮಾನವೀಯ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ಬೇಜವಾಬ್ದಾರಿಯೇ ದುರಂತಕ್ಕೆ ಕಾರಣವಾಯೀತೆ:ಗುಡಿಸಾಗರ ಕೆರೆಯ ನೀರು ಕುಡಿಯಲು ಯೋಗ್ಯವಲ್ಲ…

Read More

ಮಹಿಳಾ ಸಬಲೀಕರಣಕ್ಕೆ ಸಾಕ್ಷರತೆಯೇ ಪ್ರಬಲ ಅಸ್ತ್ರ: ಡಾ. ಪ್ರಜ್ಞಾ ಮತ್ತಿಹಳ್ಳಿ

ಧಾರವಾಡ: ವ್ಯಕ್ತಿಯ ಜೀವನದಲ್ಲಿ ಶಿಕ್ಷಣವು ಒಂದು ಮಹಾನ್ ಶಕ್ತಿ. ಅದರಲ್ಲೂ ಮಹಿಳೆಯರು ಅಜ್ಞಾನ ಮತ್ತು ಶೋಷಣೆಯಿಂದ ಹೊರಬರಲು ಸಾಕ್ಷರತೆಯು ಒಂದು ಪರಿಣಾಮಕಾರಿ ಸಾಧನವಾಗಿದೆ ಎಂದು ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯಾವರ್ಧಕ ಸಂಘದ (ಕ.ವಿ.ವ.ಸಂ.) “ಶಿಕ್ಷಣ ಮಂಟಪ”ವು, ನಗರದ ಶ್ರೀ ಸತ್ಯಸಾಯಿ ಮಹಿಳಾ ಪದವಿ ಮಹಾವಿದ್ಯಾಲಯದ ಸಹಯೋಗದೊಂದಿಗೆ ವಿಶ್ವ ಸಾಕ್ಷರತಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ‘ಸಾಕ್ಷರತೆ ಮತ್ತು ಮಹಿಳಾ ಸಬಲೀಕರಣ’ ಕುರಿತ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ…

Read More

ನವಲಗುಂದದಲ್ಲಿ ಪುಣ್ಯಸ್ಮರಣೆ ಅಂಗವಾಗಿ ಉಚಿತ ನೇತ್ರ ತಪಾಸಣೆ ಶಿಬಿರ.

ನವಲಗುಂದ : ಪಟ್ಟಣದ ತಾಲ್ಲೂಕ ಸರ್ಕಾರಿ ಆಸ್ಪತ್ರೆಯಲ್ಲಿಮಾಜಿ ಶಾಸಕರು, ಹಿರಿಯ ಸಹಕಾರಿ ಧುರಿಣರಾದ ದಿ. ಶಂಕರಗೌಡರು ವಿ. ಪಾಟೀಲ, ದಿ. ಶ್ರೀಮತಿ ಲಕ್ಷ್ಮೀಬಾಯಿ ಶಂಕರಗೌಡರು ಪಾಟೀಲ ಮತ್ತು ದಿ. ದೇಸಾಯಿಗೌಡರ ಶಂಕರಗೌಡ ಪಾಟೀಲ ಅವರುಗಳ 34 ನೇ ಪುಣ್ಯಸ್ಮರಣೆಯ ಅಂಗವಾಗಿ ಹಮ್ಮಿಕೊಂಡದ್ದ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಕೆ ಸಿ ಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಬಾಪೂಗೌಡ ಡಿ ಪಾಟೀಲ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ‘ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ…

Read More

ಕುಂದಗೋಳದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪಿಸಿಯೋಥೆರಪಿ ಉಚಿತ ಶಿಬಿರ

ಕುಂದಗೋಳ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಲ್‌ಇ ಕಾಲೇಜ್ ಆಫ್ ಫಿಸಿಯೋಥೆರಪಿ ವತಿಯಿಂದ ಮೂರು ದಿನಗಳ ಉಚಿತ ಫಿಸಿಯೋಥೆರಪಿ ಶಿಬಿರಕ್ಕೆ ಚಾಲನೆ ನೀಡಲಾಗಿದೆ. ಫಿಸಿಯೋಥೆರಪಿ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನಾ ಘಟಕ-16 ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಮುಕ್ಕಣ್ಣವರ ಅವರು ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘಟನಾಕಾರರಾದ ಡಾ. ನವಮಿ ಮಹಾವೀರ, ಡಾ. ಆರತಿ ಪ್ರಯಾಗ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಸುಮಾ ಪಾಟೀಲ್ ಹಾಗೂ ಸಂಯೋಜನಾಧಿಕಾರಿ ಡಾ. ಶ್ರೀಮತಿ…

Read More

ತಂಬುರ ಗ್ರಾ ಪಂ: ಹಣ ದುರುಪಯೋಗ ಆರೋಪ, ಪಿಡಿಒ ಅಮಾನತ್ತು

ಕಲಘಟಗಿ: ಕರ್ತವ್ಯ ಲೋಪ ಹಾಗೂ ಹಣಕಾಸಿನ ದುರುಪಯೋಗದ ಗಂಭೀರ ಆರೋಪದ ಮೇಲೆ ಕಲಘಟಗಿ ತಾಲೂಕಿನ ತಂಬೂರು ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಏನಿದು ಪ್ರಕರಣ?ಪಿಡಿಒ ನಾಗರಾಜಕುಮಾರ ಅವರು, ತಂಬೂರು ಮತ್ತು ಮುಕ್ಕಲ ಗ್ರಾಮ ಪಂಚಾಯತ್‌ಗಳ ಎಸ್ಕೋ ಬ್ಯಾಂಕ್ ಖಾತೆಯಿಂದ ಖಾಸಗಿ ವ್ಯಕ್ತಿಗಳಿಗೆ ಹಣ ಪಾವತಿಸಿರುವುದು ಕಂಡುಬಂದಿದೆ. ಸರ್ಕಾರದ ನಿಯಮ ಮತ್ತು…

Read More

ಹುಬ್ಬಳ್ಳಿ: ಕ್ಷುಲ್ಲಕ ಜಗಳಕ್ಕೆ ನಾಲ್ವರ ಬಂಧನ.

ಹುಬ್ಬಳ್ಳಿ: ನಗರದ ಕೊಪ್ಪಿಕರ ರಸ್ತೆಯ ಮೇದಾರ ಓಣಿಯ ಬಳಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಹುಬ್ಬಳ್ಳಿ ಶಹರ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 6ರ ರಾತ್ರಿ ಈ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದವು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎನ್ನಲಾಗಿದೆ.ಕಾಲ್ತುಳಿತದಿಂದ ಶುರುವಾದ ಜಗಳ: ತನಿಖೆಯ ವೇಳೆ ಪೊಲೀಸರಿಗೆ ದೊರೆತ ಮಾಹಿತಿ ಪ್ರಕಾರ, ರಾತ್ರಿ ಕೊಪ್ಪಿಕರ ರಸ್ತೆ ಬಳಿ ಇದ್ದ ಯುವಕರ ತಂಡದ ನಡುವೆ ಸಣ್ಣ ಕಾಲ್ತುಳಿತವೊಂದು ಗಂಭೀರ ಸ್ವರೂಪ ಪಡೆದುಕೊಂಡಿದೆ. ವಾಗ್ವಾದ…

Read More