ಶವವಿಟ್ಟು ಪ್ರತಿಭಟನೆಗೆ ಎಚ್ಚರಿಕೆ: ಸ್ಮಶಾನಕ್ಕೆ ರಸ್ತೆ ಇಲ್ಲ; ಗ್ರಾಮಸ್ಥರಿಗೆ ‘ದೇವರು ವರ ಕೊಟ್ಟರೂ, ಪೂಜಾರಿ ವರ ಕೊಡಲಿಲ್ಲ’ ಎಂಬಂತಾಗಿದೆ! ಸೋಟಕನಾಳ ಗ್ರಾಮಸ್ಥರ ಗೋಳು

ನವಲಗುಂದ :ತಾಲೂಕಿನ ಸೊಟಕನಾಳ ಗ್ರಾಮಸ್ಥರ ಗೋಳು. ಸರ್ಕಾರ ಸ್ಮಶಾನಕ್ಕೆ ಜಾಗ ನೀಡಿದರೂ, ಅಲ್ಲಿಗೆ ಹೋಗಲು ರಸ್ತೆ ಇಲ್ಲ. ಈ ವಿಷಯದ ಬಗ್ಗೆ ತಾಲ್ಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದರೆ, ಮುಂದಿನ ಬಾರಿ ಮೃತ ದೇಹವನ್ನು ಜಿಲ್ಲಾಧಿಕಾರಿ ಕಚೇರಿ ಮುಂದೆ ಇಟ್ಟು ಪ್ರತಿಭಟಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಶನಿವಾರ “ಪಬ್ಲಿಕ್ ಸಮಾಚಾರ” ವೆಬ್ ನ್ಯೂಸ್‌ನಲ್ಲಿ ಪ್ರಕಟವಾದ ವರದಿಯ ಮುಂದುವರೆದ ಭಾಗವಾಗಿ, ಗ್ರಾಮಸ್ಥರು ಸೋಮವಾರ ಸಭೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಶಾಸಕರ ವಿರುದ್ಧ ರೈತ ಮುಖಂಡ ವೀರನಗೌಡ…

Read More

ಅಣ್ಣಿಗೇರಿ ಪುರಸಭೆ ಸಭೆಯಲ್ಲಿ ಗದ್ದಲ, ಕಿತ್ತಾಟ: ಶಾಸಕರ ಸಮ್ಮುಖದಲ್ಲೇ ಭಿನ್ನಮತ ಸ್ಫೋಟ

ಅಣ್ಣಿಗೇರಿ: (ಧಾರವಾಡ) ಸ್ಥಳೀಯ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದ್ದ ಅಣ್ಣಿಗೇರಿ ಪುರಸಭೆಯ ವಿಶೇಷ ಸಾಮಾನ್ಯ ಸಭೆ, ಸೋಮವಾರ ಜನಪ್ರತಿನಿಧಿಗಳ ನಡುವಿನ ಭಿನ್ನಮತ ಮತ್ತು ಅಧಿಕಾರ ಹಂಚಿಕೆಯ ಕಿತ್ತಾಟದೊಂದಿಗೆ ಭಾರಿ ಗದ್ದಲಕ್ಕೆ ಕಾರಣವಾಯಿತು. ಶಾಸಕ ಎನ್.ಹೆಚ್.ಕೋನರಡ್ಡಿ ಅವರ ಸಮ್ಮುಖದಲ್ಲೇ ಕೆಲವು ಸದಸ್ಯರು ವಾಕ್ಸಮರ ನಡೆಸಿ ಸಭೆಯಿಂದ ಹೊರ ನಡೆದ ಪ್ರಸಂಗಗಳು ಜರುಗಿದವು. ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 12ಕ್ಕೂ ಹೆಚ್ಚು ವಿಷಯಗಳ ಬಗ್ಗೆ ಚರ್ಚೆ ನಡೆಸಿ ಅನುಮೋದನೆ ನೀಡಲಾಯಿತು. ಆದರೆ, ಸ್ಥಾಯಿ ಸಮಿತಿ…

Read More

ಹುಬ್ಬಳ್ಳಿ ಧಾರವಾಡ: ಬ್ರೇಕ್ ಫೇಲ್: ಬಿಆರ್‌ಟಿಎಸ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್, ಚಾಲಕ ಪಾರು

ಧಾರವಾಡ: ಬ್ರೇಕ್ ಫೇಲ್ ಆದ ಕಾರಣ ಕಸ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಒಂದು ಬಿಆರ್‌ಟಿಎಸ್ ರಸ್ತೆಯ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಘಟನೆ ಧಾರವಾಡದ ಜೆಎಸ್‌ಎಸ್ ಕಾಲೇಜು ಬಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್, ಜೆಎಸ್‌ಎಸ್ ಕಾಲೇಜು ಸಮೀಪ ಬರುತ್ತಿದ್ದಂತೆ ಏಕಾಏಕಿ ಬ್ರೇಕ್ ಫೇಲ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್, ಬಿಆರ್‌ಟಿಎಸ್ ಮಾರ್ಗಕ್ಕೆ ನುಗ್ಗಿ ರಸ್ತೆಯ ಬದಿಯಲ್ಲಿದ್ದ ಬ್ಯಾರಿಕೇಡ್‌ಗೆ ಅಪ್ಪಳಿಸಿದೆ.ಅಪಘಾತದ ರಭಸಕ್ಕೆ…

Read More

ಕಲಘಟಗಿಯಲ್ಲಿ ಅಹವಾಲು ಸ್ವೀಕಾರ; ಮಳೆ, ಪ್ರಾಣಿ ಹಾನಿ ಬೆಳೆ ಪರಿಹಾರಕ್ಕೆ ಕ್ರಮ: ಸಚಿವ ಸಂತೋಷ್ ಲಾಡ್

ಕಲಘಟಗಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ಸೋಮವಾರದಂದು ಕಲಘಟಗಿ ತಾಲೂಕಿನಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅಲೆಮಾರಿ ಸಮುದಾಯದವರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಅಲ್ಲದೆ, ಅತಿವೃಷ್ಟಿ ಹಾಗೂ ಕಾಡು ಪ್ರಾಣಿಗಳಿಂದ ಹಾನಿಗೊಳಗಾದ ರೈತರ ಬೆಳೆಗಳಿಗೆ ಶೀಘ್ರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲೆಮಾರಿಗಳಿಗೆ ಸೂರು ಭರವಸೆಕಲಘಟಗಿ ಪಟ್ಟಣ ಪಂಚಾಯಿತಿ ಕಟ್ಟಡ ಮತ್ತು ಗ್ರಂಥಾಲಯ ನಿರ್ಮಾಣಕ್ಕೆ ಮೀಸಲಾದ ಜಾಗದಲ್ಲಿ ಅನಧಿಕೃತವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದ ಅಲೆಮಾರಿ ಕುಟುಂಬಗಳನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು….

Read More

ಕೃಷಿ ಮೇಳ ಸಿದ್ಧತೆ ಪರಿಶೀಲಿಸಿದ ಸಚಿವ ಸಂತೋಷ ಲಾಡ್

ಧಾರವಾಡ: ಸೆಪ್ಟೆಂಬರ್ 13 ರಿಂದ 16 ರವರೆಗೆ ನಡೆಯಲಿರುವ ಧಾರವಾಡ ಕೃಷಿ ಮೇಳದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಂಗಳವಾರ ವೀಕ್ಷಿಸಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಮೇಳದ ಸಿದ್ಧತೆಗಳ ಬಗ್ಗೆ ಅವರು ವಿಶ್ವವಿದ್ಯಾಲಯದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಸ್ಟಾಲ್‌ಗಳ ಅಳವಡಿಕೆ, ಜಾನುವಾರು ಮತ್ತು ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮಳಿಗೆಗಳು, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮುಖ್ಯ ವೇದಿಕೆಯ ಸಿದ್ಧತೆಗಳ ಕುರಿತು ಸಚಿವರು ಪರಿಶೀಲನೆ ನಡೆಸಿ ಸೂಕ್ತ ಸಲಹೆಗಳನ್ನು ನೀಡಿದರು. ಕೃಷಿ ವಿಶ್ವವಿದ್ಯಾಲಯದ…

Read More

ಮಳೆಹಾನಿ: ಕುಂದಗೋಳದಲ್ಲಿ ಹೆಸರು, ಉದ್ದು,ಸೇರಿದಂತೆ ವಿವಿಧ ಬೆಳೆ ನಾಶ, ಪರಿಶೀಲನೆ ನಡೆಸಿದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಂಡ

ಕುಂದಗೋಳ: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಹೆಸರು ಮತ್ತು ಉದ್ದು ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯಮಟ್ಟದ ಅಧಿಕಾರಿಗಳ ತಂಡ ಸೋಮವಾರದಂದು ತಾಲ್ಲೂಕಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿತು. ಪ್ರಾಧಿಕಾರದ ಅಧಿಕಾರಿ ಮಂಜುಳಮ್ಮ ನೇತೃತ್ವದ ತಂಡವು ಕುಂದಗೋಳ, ಶಿರೂರ, ಬಸಾಪೂರ, ಹಿರೇನೇರ್ತಿ, ಮುಳ್ಳೋಳ್ಳಿ, ಯರಿನಾರಾಯಣಪುರ ಮತ್ತು ಬೆನಕನಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ…

Read More

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಅಧ್ಯಕ್ಷ ಶಿವಾನಂದ ಬೆಂತೂರ ಸೂಚನೆ; ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟದ ಬಗ್ಗೆ ಸದಸ್ಯರಿಂದ ಆರೋಪ

ಕುಂದಗೋಳ: ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಾನಂದ ಬೆಂತೂರ ಅವರು ನಿರ್ದೇಶನ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ತಮ್ಮ ವರದಿಗಳನ್ನು ಮಂಡಿಸಿದರು.  ನಂತರ ಸಭೆಯ ಅಧ್ಯಕ್ಷತೆ ವಹಿಸಿ ಅಧ್ಯಕ್ಷ ಶಿವಾನಂದ ಬೆಂತೂರ ಮಾತನಾಡಿ, ಅನ್ನ ಭಾಗ್ಯ ಯೋಜನೆಯಡಿ ಪಡಿತರ ವಿತರಿಸುವ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ದರ ಫಲಕ, ಸ್ವಚ್ಛತೆ ಮತ್ತು ನಿಗದಿತ ಸಮಯಕ್ಕೆ ಪಡಿತರ…

Read More

ಪಬ್ಲಿಕ್ ಸಮಾಚಾರದ ವರದಿ ಪರಿಣಾಮ: ಸಾರ್ವಜನಿಕರ ಆಕ್ರೋಶಕ್ಕೆ ಸ್ಪಂದಿಸಿದ ಸಂಶಿ ಪಂಚಾಯತಿ, ಗಣೇಶ ವಿಸರ್ಜನಾ ಸ್ಥಳಕ್ಕೆ ಹೊಸ ಕಳೆ

ಸಂಶಿ: (ಧಾರವಾಡ) ಗ್ರಾಮದ ಗಣಪತಿ ವಿಸರ್ಜನಾ ಸ್ಥಳದಲ್ಲಿ ಸೂಕ್ತ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ಗ್ರಾಮಸ್ಥರು ವ್ಯಕ್ತಪಡಿಸಿದ್ದ ಆಕ್ರೋಶಕ್ಕೆ ಸಂಶಿ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಪಂದಿಸಿದ್ದು, ವೆಬ್ ನ್ಯೂಸ್ ಚಾನೆಲ್‌ನಲ್ಲಿ ಬಿತ್ತರವಾಗಿದ್ದ ವರದಿಯ ಪರಿಣಾಮವಾಗಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. ರವಿವಾರದಂದು ‘ಪಬ್ಲಿಕ್ ಸಮಾಚಾರ’ (ವೆಬ್) ನ್ಯೂಸ್ ಚಾನೆಲ್‌ನಲ್ಲಿ ವರದಿ ಬಿತ್ತರಗೊಂಡ ನಂತರ ಎಚ್ಚೆತ್ತ ಗ್ರಾಮ ಪಂಚಾಯತಿ ಸಿಬ್ಬಂದಿ ಸೋಮವಾರಂದು ಗಣೇಶ ಮೂರ್ತಿ ವಿಸರ್ಜನೆ ಮಾಡುವ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ವಿಸರ್ಜನಾ ಸ್ಥಳದ…

Read More

ಗಣಪತಿ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಇಲ್ಲ: ಸಂಶಿ ಗ್ರಾಮಸ್ಥರಿಂದ ಪಂಚಾಯತಿ ವಿರುದ್ಧ ಆಕ್ರೋಶ

ಸಂಶಿ: (ಧಾರವಾಡ) ಗಣೇಶ ಹಬ್ಬದ ವಿಸರ್ಜನಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಸೂಕ್ತ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಿ, ತಾಲ್ಲೂಕಿನ ಸಂಶಿ ಗ್ರಾಮ ಪಂಚಾಯತಿ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಗಣಪತಿ ವಿಸರ್ಜನೆಗೆಂದು ಸಂಶಿ ಕೆರೆ ಬಳಿ ಬಂದಿದ್ದ ಭಕ್ತರು, ಪಂಚಾಯತಿಯ ನಿರ್ಲಕ್ಷ್ಯದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಘಟನೆಯ ಬಗ್ಗೆ ಮಾತನಾಡಿದ ಗ್ರಾಮಸ್ಥರೊಬ್ಬರು, “ಗಣಪತಿ ವಿಸರ್ಜನೆಗೆ ಬಂದಾಗ ಕೆರೆಗೆ ಹೋಗುವ ರಸ್ತೆಯಲ್ಲಿ ಸರಿಯಾದ ವ್ಯವಸ್ಥೆ ಮಾಡಿಲ್ಲ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಭಕ್ತರ…

Read More

ಮಳೆಹಾನಿ ಸಮೀಕ್ಷೆ ತ್ವರಿತವಾಗಿ ಪೂರ್ಣಗೊಳಿಸಿ: ಸರ್ಕಾರ ನಿಯಮಾನುಸಾರ ಪರಿಹಾರ ನೀಡಲಿದೆ: ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ತಾಕೀತು

ಧಾರವಾಡ: ಜಿಲ್ಲೆಯಲ್ಲಿ ಆಗಸ್ಟ್ ಮಾಹೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉಂಟಾಗಿರುವ ಬೆಳೆ ಹಾಗೂ ಮನೆ ಹಾನಿ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಭವನದಲ್ಲಿ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರವು ನಿಯಮಾನುಸಾರ ಪರಿಹಾರ ನೀಡಲಿದೆ. ಪರಿಹಾರ ಕಾರ್ಯಗಳಲ್ಲಿ…

Read More