ಸಪ್ತಾಪುರ ಹಾಸ್ಟೆಲ್‌ಗೆ ಮೂಲ ಸೌಕರ್ಯ: ಎಐಡಿಎಸ್‌ಓ ಪ್ರತಿಭಟನೆ

ಧಾರವಾಡ,: ನಗರದ ಸಪ್ತಾಪುರದಲ್ಲಿರುವ ಪರಿಶಿಷ್ಟ ಪಂಗಡದ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರದಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, “ವಿದ್ಯಾಕಾಶಿ ಎಂದು ಹೆಸರು ಪಡೆದ ಧಾರವಾಡದಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ಆದರೆ, ಅವರಿಗೆ ವಸತಿ ಸೌಲಭ್ಯ ದೊರೆಯುತ್ತಿಲ್ಲ. ವಸತಿ ದೊರೆತರೂ ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ…

Read More

ಧಾರವಾಡದಲ್ಲಿ ಅತಿವೃಷ್ಟಿ: 93 ಸಾವಿರ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ; ತಕ್ಷಣ ಪರಿಹಾರ ಬಿಡುಗಡೆಗೆ ಸಿಎಂಗೆ ಸಚಿವ ಸಂತೋಷ ಲಾಡ್ ಮನವಿ

ಧಾರವಾಡ: ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಸೇರಿ ಸುಮಾರು 93,496.98 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಈ ಕುರಿತು ಜಂಟಿ ಸಮೀಕ್ಷೆ ಮಾಡಿ ಸಿದ್ಧಪಡಿಸಿದ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ದತ್ತಾಂಶಗಳನ್ನು ದಾಖಲಿಸಲು ವೆಬ್‌ಸೈಟ್ ತೆರೆಯಿಸಿ, ರೈತರಿಗೆ ತಕ್ಷಣ ಪರಿಹಾರ ಬಿಡುಗಡೆಗೆ ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮುಖ್ಯಮಂತ್ರಿಗಳನ್ನು ವಿನಂತಿಸಿದರು. ಸೋಮವಾರದಂದು ಮಧ್ಯಾಹ್ನ ಮುಖ್ಯಮಂತ್ರಿಗಳೊಂದಿಗೆ ಧಾರವಾಡ ಜಿಲ್ಲಾಡಳಿತವು ಭಾಗವಹಿಸಿದ್ದ…

Read More

ಸುಳ್ಳು ಜಾತಿ ಪ್ರಮಾಣಪತ್ರ ತನಿಖೆಗೆ ಆಗ್ರಹ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಚಂದ್ರಕಾತ ಕಾದ್ರೋಳ್ಳಿ ಬಣ)

ಕುಂದಗೋಳ: ತಾಲೂಕಿನ ಗುರುವಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರಗಳ ಮೂಲಕ ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ ಚಂದ್ರಕಾತ ಕಾದ್ರೋಳ್ಳಿ ಬಣ ತೀವ್ರ ಆಗ್ರಹ ವ್ಯಕ್ತಪಡಿಸಿದೆ. ಜಿಲ್ಲಾಧ್ಯಕ್ಷ ಬಸವರಾಜ ಲಗಮ್ಮನವರ,ಹಾಗೂ ತಾಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಕೋಟೆಪ್ಪ ತಳಗೇರಿ ಅವರ ನೇತೃತ್ವದಲ್ಲಿ ಕಾರ್ಯಕರ್ತರು ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ, ನಂತರ ಉಪ ತಹಶೀಲ್ದಾರ ರೇಣುಕಾ ದಾನಣ್ಣವರ ಅವರಿಗೆ ಮನವಿ…

Read More

ಶಿಕ್ಷಕರು ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಶಿಲ್ಪಿಗಳು: ಶಾಸಕ ಎಂ ಆರ್ ಪಾಟೀಲ

ಕುಂದಗೋಳ: ಶಿಕ್ಷಕರು ಕೇವಲ ಪಾಠ ಹೇಳುವ ಯಂತ್ರಗಳಲ್ಲ, ಬದಲಾಗಿ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಶಿಸ್ತು ಮತ್ತು ಗೌರವವನ್ನು ತುಂಬುವ ಶಿಲ್ಪಿಗಳು ಎಂದು ಶಾಸಕ ಎಂ.ಆರ್. ಪಾಟೀಲ್ ಹೇಳಿದರು. ಪಟ್ಟಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಗುರುಗಳ ಪಾತ್ರವನ್ನು ಸ್ಮರಿಸಿದರು. ಅವರು ಪಟ್ಟಣದಲ್ಲಿ ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಧಾರವಾಡ ಹಾಗೂ ಶಿಕ್ಷಕ ದಿನೋತ್ಸವ ಸಮೀತಿ ಕುಂದಗೋಳ ಇವರ ಸಂಯುಕ್ತ ಆಶ್ರಯದೊಂದಿಗೆ ಶ್ರೀ ಗುರುದೇವ ಪ್ರೌಡ ಶಾಲೆ ಆವರಣದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್…

Read More

ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಗುಡಗೇರಿ ಗ್ರಾ ಪಂ ಲಸಿಕೆ ಅಭಿಯಾನ ನಡೆಯಿತು.

ಕುಂದಗೋಳ: ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಮತ್ತು ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಇತ್ತೀಚೆಗೆ ತಾಲೂಕಿನ ಗುಡಗೇರಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಹುಬ್ಬಳ್ಳಿಯ ‘ಬ್ಲಿಂಗ್‌ಡೆ ಇನ್ನರ್ ವೀಲ್ ಕ್ಲಬ್’ ಮತ್ತು ‘ರೇಡಾನ್ ಕ್ಯಾನ್ಸರ್ ಫೌಂಡೇಶನ್’ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮದ ವಿವಿಧ ಶಾಲೆಗಳ 9 ರಿಂದ 14 ವರ್ಷದೊಳಗಿನ 68 ಬಾಲಕಿಯರಿಗೆ ಉಚಿತವಾಗಿ ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆ ನೀಡಲಾಯಿತು. ಈ ಲಸಿಕೆಯು ಆರಂಭಿಕ ಹಂತದಲ್ಲೇ ಸೋಂಕು…

Read More

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ಶಿಕ್ಷಕ ಗುರುನಾಥ್ ಸೈದಾಪುರ

ಧಾರವಾಡ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕೊಡಮಾಡುವ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಲಘಟಗಿ ತಾಲ್ಲೂಕಿನ ದಾಸ್ತಿಕೋಪ್ಪ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ ದೈಹಿಕ ಶಿಕ್ಷಕ ಗುರುನಾಥ್ ಸೈದಾಪುರ ಆಯ್ಕೆಯಾಗಿದ್ದಾರೆ. ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಇಓ ಗಾಯತ್ರಿದೇವಿ ಸಜ್ಜನ್ ಸೇರಿದಂತೆ ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗುರುನಾಥ್ ಸೈದಾಪುರ ಅವರ ಶೈಕ್ಷಣಿಕ ಸೇವೆ…

Read More

ನೀಲಕಂಠಗೌಡ ಪಾಟೀಲ (39) ಎಂಬ ವ್ಯಕ್ತಿ ಕಾಣೆ:

ಗುಡಗೇರಿ: ಸವಣೂರು ತಾಲೂಕಿನ ಮಾದಾಪೂರ ಗ್ರಾಮದ ನಿವಾಸಿ ನೀಲಕಂಠಗೌಡ ಪಾಟೀಲ (39) ಎಂಬಾತ ನಾಪತ್ತೆಯಾಗಿದ್ದಾರೆ. ನೀಲಕಂಠಗೌಡ ಪಾಟೀಲ ಅವರು ಆಗಸ್ಟ್ 22 ರಂದು ತಮ್ಮ ಪತ್ನಿಯ ತವರೂರಾದ ಮತ್ತಿಗಟ್ಟ ಗ್ರಾಮಕ್ಕೆ ಹೋಗಿದ್ದರು. ಅಲ್ಲಿಂದ ಆಗಸ್ಟ್ 24 ರಂದು ಸಂಜೆ ತಮ್ಮ ಮನೆಗೆ ಹೊರಟಿದ್ದು, ಇದುವರೆಗೂ ಅವರು ಮನೆಗೆ ತಲುಪಿಲ್ಲ. ಕುಟುಂಬದವರು ಹಾಗೂ ಸಂಬಂಧಿಕರು ಎಲ್ಲಾ ಕಡೆ ಹುಡುಕಾಡಿದರೂ ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಂಬಂಧ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ವಿವರಗಳು ಇಂತಿವೆ:…

Read More

ಮುರಳಿ ಸಾವಜಿ ಹೋಟೆಲ್‌ ಮೇಲೆ ಅಬಕಾರಿ ದಾಳಿ, ಅಕ್ರಮ ಮದ್ಯ ವಶ: ಶಾಸಕರ ಕ್ಷೇತ್ರದಲ್ಲಿ ಕಳ್ಳ ದಂಧೆಗೆ ಆಕ್ರೋಶ

ನವಲಗುಂದ: ಪಟ್ಟಣದಲ್ಲಿರುವ ‘ಮುರಳಿ ಸಾವಜಿ ಹೋಟೆಲ್’ ಮತ್ತು ಅದರ ಮಾಲೀಕ ರಾಜು ದೊಂಗಡಿ ಅವರ ಮನೆಯ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ವಿವಿಧ ಬ್ರಾಂಡ್‌ಗಳ ಅಕ್ರಮ ಮದ್ಯ ಮತ್ತು ಬೀರ್ ವಶಪಡಿಸಿಕೊಂಡಿದ್ದಾರೆ. ಈ ಘಟನೆ ಶಾಸಕ ಎನ್.ಎಚ್. ಕೊನರಡ್ಡಿ ಅವರ ಕ್ಷೇತ್ರದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಾಳಿ ವೇಳೆ ಒಟ್ಟು ₹18,955 ಮೌಲ್ಯದ ಮದ್ಯ ಮತ್ತು ₹960 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ….

Read More

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳದಲ್ಲಿ ಪುಸ್ತಕ ಮಳಿಗೆಗಳಿಗೆ ಅರ್ಜಿ ಆಹ್ವಾನ

ಧಾರವಾಡ (ಕರ್ನಾಟಕ ವಾರ್ತೆ) ಸೆ.6: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2025 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ 22, 2025 ರಿಂದ ಅಕ್ಟೋಬರ 01, 2025 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025 ವನ್ನು ಮೈಸೂರು ಹಳೆ ಡಿ.ಸಿ. ಕಚೇರಿ ಎದುರುಗಡೆ ಸ್ಕೌಟ್ಸ ಮತ್ತು ಗೈಡ್ಸ್ ಮೈದಾನದಲ್ಲಿ ಏರ್ಪಡಿಸಲಾಗುವುದು. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು,…

Read More

ಛಾಯಾಗ್ರಾಹಕರು ಮತ್ತು ವಿಡಿಯೋಗ್ರಾಫರ್‌ಗಳಿಗೆ ಕಾರ್ಮಿಕ ಕಾರ್ಡ್ ನೋಂದಣಿ ಅಭಿಯಾನ: ಸೆ 09 ರಿಂದ ಆರಂಭ

ಧಾರವಾಡ: ಜಿಲ್ಲೆಯ ಛಾಯಾಗ್ರಾಹಕರು ಮತ್ತು ವಿಡಿಯೋಗ್ರಾಫರ್‌ಗಳಿಗೆ ಅಸಂಘಟಿತ ಕಾರ್ಮಿಕ ಕಾರ್ಡ್ ನೋಂದಣಿಗಾಗಿ ಸೆಪ್ಟೆಂಬರ್ 9 ಮತ್ತು 10 ರಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಪಡೆಯಲು ಈ ಅವಕಾಶವನ್ನು ಬಳಸಿಕೊಳ್ಳುವಂತೆ ವಾರ್ತಾ ಮತ್ತು ಕಾರ್ಮಿಕ ಇಲಾಖೆಗಳು ಪ್ರಕಟಣೆ ಹೊರಡಿಸಿವೆ. ಈ ಕುರಿತು ಸೆ:05 ರಂದು ವಾರ್ತಾ ಇಲಾಖೆಯಲ್ಲಿ ನಡೆದ ಸಭೆಯಲ್ಲಿ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ತಾಲ್ಲೂಕುಗಳ ಛಾಯಾಗ್ರಾಹಕರ ಸಂಘಗಳ ಅಧ್ಯಕ್ಷರು ಭಾಗವಹಿಸಿದ್ದರು. ಅಭಿಯಾನದ ಅಡಿಯಲ್ಲಿ, ಸೆಪ್ಟೆಂಬರ್ 9…

Read More